ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು
ಭಯೋತ್ಪಾದನೆಯ ಬಗ್ಗೆ ತಮ್ಮ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಉಭಯ ನಾಯಕರು ಪುನರುಚ್ಚರಿಸಿದರು
ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ದೀರ್ಘಕಾಲೀನ ಶಾಂತಿಯ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ಮೋದಿ ಪುನರುಚ್ಚರಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಯ ನಿರಂತರ ವೇಗದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಮತ್ತು ಪರಸ್ಪರ ಲಾಭಕ್ಕಾಗಿ ಈ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಉಭಯ ನಾಯಕರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದರು ಮತ್ತು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ಬಗ್ಗೆ ತಮ್ಮ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಪುನರುಚ್ಚರಿಸಿದರು.

ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆಯೂ ಅವರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಗಾಜಾ ಶಾಂತಿ ಯೋಜನೆಯ ಶೀಘ್ರ ಅನುಷ್ಠಾನ ಸೇರಿದಂತೆ ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ಬಾಳಿಕೆ ಬರುವ ಶಾಂತಿಯ ಪ್ರಯತ್ನಗಳಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ಮೋದಿ ಪುನರುಚ್ಚರಿಸಿದರು.

ಬಳಿಕ  ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India launches ORV Sagar Manthan, boosting ocean research fleet

Media Coverage

India launches ORV Sagar Manthan, boosting ocean research fleet
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಸೆಪ್ಟೆಂಬರ್ 2026
September 10, 2026

Beyond Metros, Beyond Borders: How India Is Rewriting Its Growth Story Under PM Modi