ಆಷಾಢ ಪೂರ್ಣಿಮಾ-ಧಮ್ಮ ಚಕ್ರ ದಿನದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಸಂದೇಶ
ಕೊರೊನಾ ಸಾಂಕ್ರಾಮಿಕ ಸೋಂಕಿನ ಕಾಲಘಟ್ಟದಲ್ಲಿ ಭಗವಾನ್ ಬುದ್ಧನ ಸಂದೇಶಗಳು ಪ್ರಸ್ತುತ: ಪ್ರಧಾನ ಮಂತ್ರಿ
ಬುದ್ಧನ ಹಾದಿಯಲ್ಲಿ ನಡೆದರೆ ಸಂಕಷ್ಟದ ಸವಾಲುಗಳನ್ನು ನಾವು ಹೇಗೆ ಎದುರಿಸಬಲ್ಲೆವು ಎಂಬುದನ್ನು ಭಾರತ ವಿಶ್ವಕ್ಕೆ ತೋರಿದೆ: ಪ್ರಧಾನ ಮಂತ್ರಿ
ದುರಂತದ ಸಮಯದಲ್ಲಿ ಬುದ್ಧನ ಬೋಧನೆಗಳ ಪ್ರಭಾವವನ್ನು ಇಡೀ ವಿಶ್ವವೇ ಅನುಭವಿಸಿದೆ: ಪ್ರಧಾನ ಮಂತ್ರಿ

ಇಡೀ ಜಗತ್ತಿಗೆ ಕೊರೊನಾ ಸಾಂಕ್ರಾಮಿಕ ಸೋಂಕು ಆವರಿಸಿರುವ ಈ ಕಾಲಘಟ್ಟದಲ್ಲಿ ಭಗವಾನ್ ಬುದ್ಧನ ಸಂದೇಶಗಳು ಇಂದಿಗೂ ಸಹ ಅತ್ಯಂತ ಪ್ರಸ್ತುತ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.

ಬುದ್ಧನ ಹಾದಿಯಲ್ಲಿ ನಡೆಯುವ ಮೂಲಕ ಭಾರತವು, ಎಂತಹ ಸಂಕಷ್ಟದ ಸವಾಲುಗಳನ್ನು ಹೇಗೆ ಎದುರಿಸಬಲ್ಲದು ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸಿದೆ. ಬುದ್ಧನ ಬೋಧನೆಗಳನ್ನು ಅನುಸರಿಸುವ ಮೂಲಕ ಇಡೀ ಜಗತ್ತೇ ಒಗ್ಗಟ್ಟಿನಲ್ಲಿ ಮುನ್ನಡೆಯುತ್ತಿದೆ. ಅಂತಾರಾಷ್ಟ್ರೀಯ ಬೌದ್ಧ ಒಕ್ಕೂಟವು ಆಯೋಜಿಸಿರುವ ‘ಪ್ರಾರ್ಥನೆಯೊಂದಿಗೆ ಕಾಳಜಿ’ ಉಪಕ್ರಮವು ಪ್ರಶಂಸನೀಯವಾಗಿದೆ ಎಂದು ಪ್ರಧಾನ ಮಂತ್ರಿ ಶ್ಲಾಘಿಸಿದ್ದಾರೆ.

ಆಷಾಢ ಪೂರ್ಣಿಮಾ ಧಮ್ಮ ಚಕ್ರ ದಿನದ ಕಾರ್ಯಕ್ರಮದ ಸುಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ನೀಡಿರುವ ಶುಭಾಶಯ ಸಂದೇಶದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.

ನಮ್ಮ ಮನಸ್ಸು, ಮಾತು ಮತ್ತು ಸಂಕಲ್ಪದ ನಡುವಿನ ಸಾಮರಸ್ಯ, ನಮ್ಮ ಕ್ರಿಯೆ ಮತ್ತು ಪ್ರಯತ್ನದ ನಡುವಿನ ಸಾಮರಸ್ಯವು ನೋವಿನಿಂದ ದೂರಾಗಿ ಸಂತೋಷದ ಕಡೆಗೆ ತೆರಳುವಂತೆ ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡುತ್ತದೆ. ಒಳ್ಳೆಯ ಸಮಯದಲ್ಲಿ ಸಾಮಾನ್ಯ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಇದು ನಮಗೆ ಪ್ರೇರಣೆ ನೀಡುತ್ತದೆ ಮತ್ತು ಕಷ್ಟದ ಸಮಯಗಳನ್ನು ಎದುರಿಸಲು ನಮಗೆ ಶಕ್ತಿ ನೀಡುತ್ತದೆ. ಈ ಸಾಮರಸ್ಯ ಸಾಧಿಸಲು ಭಗವಾನ್ ಬುದ್ಧ ನಮಗೆ 8 ಪಥದ ರಾಜಮಾರ್ಗ ತೋರಿದ್ದಾರೆ ಎಂದು ಪ್ರಧಾನಿ ಹೇಳಿದರು.

ತ್ಯಾಗ ಮತ್ತು ಸಹಿಷ್ಣುತೆಯ ರಾಜಮಾರ್ಗದಲ್ಲಿ ಮುನ್ನಡೆದ ಬುದ್ಧ ನುಡಿದ ಪದಗಳು ಕೇವಲ ಮಾತುಗಳಾಗದೆ, ‘ಧಮ್ಮ’ದ ಸಂಪೂರ್ಣ ಚಕ್ರವೇ ಪ್ರಾರಂಭವಾಗುತ್ತ. ಅವನಿಂದ ಹರಿಯುವ ಜ್ಞಾನವು ವಿಶ್ವ ಕಲ್ಯಾಣಕ್ಕೆ ಸಮಾನಾರ್ಥಕವಾಗುತ್ತದೆ. ಈ ಕಾರಣಕ್ಕಾಗಿಯೇ ಭಗವಾನ್ ಬುದ್ಧ ಇಂದಿಗೂ ವಿಶ್ವಾದ್ಯಾಂತ ಅಪಾರ ಅನುಯಾಯಿಗಳನ್ನು ಹೊಂದಿದ್ದಾರೆ ಎಂದು ಪ್ರಧಾನಿ ಸ್ಮರಿಸಿದರು.

‘ಧಮ್ಮ ಪಾದ’ವನ್ನು ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ ಅವರು, ದ್ವೇಷವು ದ್ವೇಷವನ್ನು ತಣಿಸುವುದಿಲ್ಲ. ಬದಲಾಗಿ, ಪ್ರೀತಿ ಮತ್ತು ವಿಶಾಲ ಹೃದಯದಿಂದ ದ್ವೇಷವು ಶಾಂತವಾಗುತ್ತದೆ. ಸಾಂಕ್ರಾಮಿಕ ಸೋಂಕಿನ ದುರಂತದ ಕಾಲಘಟ್ಟದಲ್ಲಿ, ಪ್ರೀತಿ ಮತ್ತು ಸಾಮರಸ್ಯದ ಶಕ್ತಿಯನ್ನು ಇಡೀ ಜಗತ್ತು ಅನುಭವಿಸಿದೆ. ಬುದ್ಧನ ಈ ಜ್ಞಾನ, ಮಾನವೀಯತೆಯ ಈ ಅನುಭವವು ಸಮೃದ್ಧವಾಗುತ್ತಿದ್ದಂತೆ, ಜಗತ್ತು ಯಶಸ್ಸು ಮತ್ತು ಸಮೃದ್ಧಿಯ ಹೊಸ ಎತ್ತರಗಳನ್ನು ಮುಟ್ಟಲಿದೆ ಎಂದು ಪ್ರಧಾನ ಮಂತ್ರಿ ಅವರು ತಮ್ಮ ಸಂದೇಶವನ್ನು ಸಮಾಪನಗೊಳಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Housing sales rises 19% to 1.12L units in Q2, Southern cities lead momentum: PropEquity

Media Coverage

Housing sales rises 19% to 1.12L units in Q2, Southern cities lead momentum: PropEquity
NM on the go

Nm on the go

Always be the first to hear from the PM. Get the App Now!
...
Prime Minister pays homage to Bankim Chandra Chattopadhyay on His Jayanti
June 26, 2026

The Prime Minister, Shri Narendra Modi, today, paid tributes to the great Bankim Chandra Chattopadhyay on his Jayanti, remembering him as a towering literary luminary whose writings ignited the spirit of patriotism and cultural pride among generations of Indians.

Highlighting the significance of the year, Shri Modi noted that India is commemorating the 150th anniversary of Vande Mataram. He remarked that through Vande Mataram, Bankim Chandra Chattopadhyay gifted the Indian freedom movement and the nation one of its most enduring sources of inspiration.

The Prime Minister posted on X:

Tributes to the great Bankim Chandra Chattopadhyay on his Jayanti.

A towering literary luminary, his writings awakened a spirit of patriotism and cultural pride among generations of Indians. His rich literary work continues to illuminate minds and strengthen our collective resolve towards nation-building.

This is a time when we are marking the 150th anniversary of Vande Mataram. Through Vande Mataram, he gifted the freedom movement and our nation one of its most enduring inspirations.

মহান বঙ্কিম চন্দ্র চট্টোপাধ্যায়ের জয়ন্তীতে তাঁর প্রতি শ্রদ্ধাঞ্জলি।

এক সুবিশাল সাহিত্যিক আলোকবর্তিকা হিসেবে, তাঁর লেখা প্রজন্মান্তরের ভারতীয়দের মধ্যে দেশপ্রেম এবং সাংস্কৃতিক গৌরবের চেতনা জাগ্রত করেছিল। তাঁর সমৃদ্ধ সাহিত্যকর্ম মনকে উদ্ভাসিত করে চলেছে এবং জাতি গঠনের প্রতি আমাদের সম্মিলিত সংকল্পকে শক্তিশালী করছে।

এখন আমরা বন্দে মাতরমের ১৫০তম বার্ষিকী উদযাপন করছি। বন্দে মাতরমের মাধ্যমে, তিনি স্বাধীনতা আন্দোলন এবং আমাদের জাতিকে অন্যতম দীর্ঘস্থায়ী অনুপ্রেরণা উপহার দিয়েছিলেন।