Crossing the milestone of 140 crore vaccine doses is every Indian’s achievement: PM
With self-awareness & self-discipline, we can guard ourselves from new corona variant: PM Modi
Mann Ki Baat: PM Modi pays tribute to Gen Bipin Rawat, his wife, Gp. Capt. Varun Singh & others who lost their lives in helicopter crash
Books not only impart knowledge but also enhance personality: PM Modi
World’s interest to know about Indian culture is growing: PM Modi
Everyone has an important role towards ‘Swachhata’, says PM Modi
Think big, dream big & work hard to make them come true: PM Modi

ನನ್ನ ಪ್ರಿಯ ದೇಶಬಾಂಧವರೆ, ನಮಸ್ಕಾರ. ಈಗ ನೀವು 2021 ರ ಬೀಳ್ಕೊಡುಗೆ ಮತ್ತು 2022 ರ ಸ್ವಾಗತಕ್ಕೆ ಸಿದ್ಧರಾಗಿರಬಹುದು. ಹೊಸ ವರ್ಷದಲ್ಲಿ ಪ್ರತಿ ವ್ಯಕ್ತಿ, ಪ್ರತಿ ಸಂಸ್ಥೆ ಮುಂಬರುವ ವರ್ಷದಲ್ಲಿ ಮತ್ತಷ್ಟು ಅಭಿವೃದ್ಧಿಯ ಮತ್ತು ಸುಧಾರಣೆಯ ಸಂಕಲ್ಪಗೈಯ್ಯುತ್ತಾರೆ. ಕಳೆದ 7 ವರ್ಷಗಳಲ್ಲಿ ನಮ್ಮ ಈ ಮನದ ಮಾತು ಕೂಡಾ ವ್ಯಕ್ತಿಗಳ, ಸಮಾಜದ ದೇಶದ ಒಳ್ಳೆತನವನ್ನು ಬೆಳಕಿಗೆ ತಂದು ಮತ್ತಷ್ಟು ಸಾಧಿಸುವ ಮತ್ತಷ್ಟು ಸುಧಾರಿಸುವ ಪ್ರೇರಣೆ ನೀಡುತ್ತಾ ಬಂದಿದೆ. ಈ 7 ವರ್ಷಗಳಲ್ಲಿ ಮನದ ಮಾತಿನಲ್ಲಿ ನಾನು ಸರ್ಕಾರದ ಸಾಧನೆಗಳ ಬಗ್ಗೆಯೂ ಚರ್ಚೆ ಮಾಡಬಹುದಿತ್ತು. ನಿಮಗೂ ಹಿತವೆನಿಸುತ್ತಿತ್ತು ನೀವೂ ಶ್ಲಾಘಿಸಬಹುದಿತ್ತು. ಮಾಧ್ಯಮದ ಥಳಕು ಬೆಳಕಿನ ಹೊರತಾಗಿ, ವೃತ್ತ ಪತ್ರಿಕೆಗಳ ಮುಖ್ಯಾಂಶಗಳ ಹೊರತಾಗಿಯೂ ಬಹಳಷ್ಟು ಉತ್ತಮ ಕೆಲಸಗಳನ್ನು ಮಾಡುತ್ತಿರುವ ಕೋಟಿ ಕೋಟಿ ಜನರಿದ್ದಾರೆ ಎಂಬುದು ದಶಕಗಳ ನನ್ನ ಅನುಭವವಾಗಿದೆ. ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ವರ್ತಮಾನವನ್ನು ವ್ಯಯಿಸುತ್ತಿದ್ದಾರೆ. ಮುಂಬರುವ ದೇಶದ ಪೀಳಿಗೆಗಾಗಿ ತಮ್ಮ ಪ್ರಯತ್ನಗಳಲ್ಲಿ ಇಂದು ತನುಮನದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥವರ ವಿಷಯಗಳು ಆಹ್ಲಾದವನ್ನು ನೀಡುತ್ತವೆ ಮತ್ತು ಪ್ರೇರಣೆ ಒದಗಿಸುತ್ತವೆ. ನನಗೆ ಮನದ ಮಾತು ಎಂದರೆ ಎಂದೆಂದಿಗೂ ಇಂತಹ ಜನರ ಪ್ರಯತ್ನಗಳಿಂದ ತುಂಬಿದ, ಅಲಂಕೃತವಾದ, ಅರಳಿದಂತಹ ಉದ್ಯಾನದಂತಿದೆ. ಮನದ ಮಾತಿನಲ್ಲಿ ಪ್ರತಿ ತಿಂಗಳು ನಾನು ಉದ್ಯಾನದ ಯಾವ ಹೂವಿನ ವಿಚಾರ ನಿಮ್ಮೊಂದಿಗೆ ಹಂಚಿಕೊಳ್ಳಲಿ ಎಂಬುದೇ ನನ್ನ ಪ್ರಯತ್ನವಾಗಿರುತ್ತದೆ.

ಬಹುರತ್ನ ವಸುಂಧರೆಯ ಪುಣ್ಯ ಕಾರ್ಯಗಳ ಅವಿರತ ಪ್ರವಾಹ ನಿರಂತರ ಹರಿಯುತ್ತಿರುತ್ತದೆ. ಮತ್ತು ಇಂದು ದೇಶವು 'ಅಮೃತ ಮಹೋತ್ಸವ'ವನ್ನು ಆಚರಿಸುತ್ತಿರುವಾಗ, ನಮ್ಮ ಜನಶಕ್ತಿ, ಜನ – ಜನಶಕ್ತಿಯಾಗಿದೆ ಮತ್ತು ಅದರ ಉಲ್ಲೇಖ ಮತ್ತು ಪ್ರಯತ್ನಗಳು ಹಾಗೂ ಅದರ ಪರಿಶ್ರಮ ಭಾರತದ ಹಾಗೂ  ಮಾನವತೆಯ ಉಜ್ವಲ ಭವಿಷ್ಯಕ್ಕಾಗಿ ಒಂದು ಬಗೆಯಲ್ಲಿ ಭರವಸೆಯನ್ನು ನೀಡುತ್ತದೆ.

ಸ್ನೇಹಿತರೇ, ಇದು ಜನಶಕ್ತಿ ಮತ್ತು ಎಲ್ಲರ ಪ್ರಯತ್ನದಿಂದಲೇ ಭಾರತವು 100 ವರ್ಷಗಳಲ್ಲಿ ಎದುರಾದ ಅತಿದೊಡ್ಡ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಾಯಿತು. ಪ್ರತಿ ಸಂಕಷ್ಟ ಸಮಯದಲ್ಲಿ ನಾವು ಕುಟುಂಬದಂತೆ ಒಬ್ಬರಿಗೊಬ್ಬರು ನೆರವಾಗಿದ್ದೇವೆ. ತಂತಮ್ಮ ಪ್ರದೇಶದಲ್ಲಿ ಅಥವಾ ನಗರದಲ್ಲಿ ಯಾರಿಗಾದರೂ ಸಹಾಯದ ಅವಶ್ಯಕತೆ ಇದ್ದಲ್ಲಿ ಸಾಧ್ಯವಾದುದಕ್ಕಿಂತ ಹೆಚ್ಚಿನದನ್ನು ಮಾಡಲು ಪ್ರಯತ್ನಿಸಿದ್ದೇವೆ. ಇಂದು ವಿಶ್ವದಲ್ಲಿರುವ ಲಸಿಕೆಯ ಅಂಕಿಅಂಶಗಳನ್ನು ನಾವು ಭಾರತದ ಅಂಕಿಅಂಶಗಳೊಂದಿಗೆ ಹೋಲಿಸಿದರೆ, ದೇಶವು ಅಭೂತಪೂರ್ವ ಕೆಲಸವನ್ನು ಮಾಡಿದೆ, ದೊಡ್ಡ ಗುರಿಯನ್ನು ಸಾಧಿಸಿದೆ. ಲಸಿಕೆಯ 140 ಕೋಟಿ ಡೋಸ್ ಗಳ ಮೈಲಿಗಲ್ಲಿನ ಸಾಧನೆ ಪ್ರತಿಯೊಬ್ಬ ಭಾರತೀಯರ ಪಾಲುದಾರಿಕೆಯಿಂದಾಗಿದೆ.  ಇದರಿಂದ ಪ್ರತಿಯೊಬ್ಬ ಭಾರತೀಯನೂ ವ್ಯವಸ್ಥೆಯ ಮೇಲಿಟ್ಟಿರುವ ಭರವಸೆಯನ್ನು, ವಿಜ್ಞಾನಿಗಳ ಮತ್ತು ವಿಜ್ಞಾನದ ಮೇಲಿಟ್ಟಿರುವ ಭರವಸೆಯನ್ನು ಸಾಬೀತುಪಡಿಸುತ್ತದೆ ಮತ್ತು ಸಮಾಜದೆಡೆ ತನ್ನ ಕರ್ತವ್ಯವನ್ನು ನಿಭಾಯಿಸುವ ಭಾರತೀಯರ ಇಚ್ಛಾಶಕ್ತಿಗೆ ಸಾಕ್ಷಿಯೂ ಆಗಿದೆ. ಆದರೆ ಸ್ನೇಹಿತರೆ, ಕೊರೊನಾದ ಹೊಸ ರೂಪಾಂತರಿ ಬಂದೆರಗಿದೆ ಎಂಬುದರ ಬಗ್ಗೆಯೂ ಗಮನಹರಿಸಬೇಕಿದೆ. ಈ ಜಾಗತಿಕ ಮಹಾಮಾರಿಯನ್ನು ಸದೆಬಡೆಯಲು ಒಬ್ಬ ನಾಗರಿಕನಂತೆ ನಮ್ಮ ಪ್ರಯತ್ನ ಬಹಳ ಮಹತ್ವಪೂರ್ಣವಾಗಿದೆ ಎಂಬುದು ಕಳೆದ 2 ವರ್ಷಗಳ ಅನುಭವವಾಗಿದೆ. ನಮ್ಮ ವಿಜ್ಞಾನಿಗಳು ಈ ಹೊಸ ರೂಪಾಂತರಿ ಒಮಿಕ್ರಾನ್ ನ ಅಧ್ಯಯನವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಪ್ರತಿ ದಿನ ಅವರಿಗೆ ಹೊಸ ಮಾಹಿತಿ ಲಭಿಸುತ್ತಿದೆ. ಅವರ ಸಲಹೆ ಮೇರೆಗೆ ಕೆಲಸ ಕಾರ್ಯ ನಡೆಯುತ್ತಿದೆ. ಹೀಗಿರುವಾಗ ಸ್ವಯಂ ಜಾಗರೂಕತೆ, ಸ್ವಂತ ನೀತಿ ನಿಯಮಗಳು ಕೊರೊನಾ ರೂಪಾಂತರಿ ವಿರುದ್ಧ ಹೋರಾಡಲು ದೇಶದ ಬಹುದೊಡ್ಡ ಶಕ್ತಿಯಾಗಿದೆ. ನಮ್ಮ ಸಾಮೂಹಿಕ ಶಕ್ತಿಯೇ ಕೊರೊನಾವನ್ನು ಸೋಲಿಸಲಿದೆ. ಇದೇ ಜವಾಬ್ದಾರಿಯೊಂದಿಗೆ ನಾವು 2022 ನ್ನು ಪ್ರವೇಶಿಸಬೇಕಿದೆ.

ನನ್ನ ಪ್ರೀತಿಯ ದೇಶಬಾಂಧವರೆ ಮಹಾಭಾರತ ಯುದ್ಧದಲ್ಲಿ ಭಗವಂತ ಶ್ರೀ ಕೃಷ್ಣ ಅರ್ಜುನನಿಗೆ ಹೀಗೆ ಉಪದೇಶಿಸಿದ್ದ

‘ನಭಃ ಸ್ಪರ್ಷಂ ದೀಪ್ತಂ’ ಅಂದರೆ ಹೆಮ್ಮೆಯಿಂದ ಆಗಸದ ಸ್ಪರ್ಶ ಎಂದರ್ಥ. ಇದು ಭಾರತೀಯ ವಾಯುಪಡೆಯ ಧ್ಯೇಯವಾಕ್ಯವೂ ಆಗಿದೆ. ತಾಯಿ ಭಾರತಿಯ ಸೇವೆಯಲ್ಲಿ ತೊಡಗಿರುವ ಅನೇಕ ಜೀವಗಳು ಆಕಾಶದ ಈ ಉತ್ತುಂಗವನ್ನು ಪ್ರತಿದಿನ ಹೆಮ್ಮೆಯಿಂದ ತಲುಪುತ್ತಾರೆ. ನಮಗೆ ಬಹಳಷ್ಟು ಕಲಿಸುತ್ತಾರೆ. ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರದ್ದು ಇಂಥದೇ ಜೀವನವಾಗಿದೆ.  ಈ ತಿಂಗಳು ತಮಿಳು ನಾಡಿನಲ್ಲಿ ಅವಘಡಕ್ಕೆ ಒಳಗಾಗಿದ್ದ ಹೆಲಿಕಾಪ್ಟರ್ ಅನ್ನು ವರುಣ್ ಸಿಂಗ್ ಉಡಾಯಿಸುತ್ತಿದ್ದರು. ಈ ಅವಘಡದಲ್ಲಿ ನಾವು ದೇಶದ ಪ್ರಥಮ

ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯೂ ಸೇರಿದಂತೆ ಅನೇಕ ವೀರರನ್ನು ಕಳೆದುಕೊಂಡಿದ್ದೇವೆ. ವರುಣ್ ಸಿಂಗ್ ಹಲವಾರು ದಿನ ಮೃತ್ಯುವಿನೊಂದಿಗೆ ಧೈರ್ಯದಿಂದ ಹೋರಾಡಿದರು ಆದರೆ ಅವರೂ ನಮ್ಮನ್ನಗಲಿದರು. ವರುಣ್ ಆಸ್ಪತ್ರೆಯಲ್ಲಿದ್ದಾಗ, ಸಾಮಾಜಿಕ ಜಾಲತಾಣದಲ್ಲಿ ನೋಡಿದ ಸಂಗತಿಯೊಂದು ನನ್ನ ಹೃದಯವನ್ನು ಕಲಕಿತು. ಈ ವರ್ಷದ ಅಗಸ್ಟ್ ತಿಂಗಳಲ್ಲಿ ಅವರನ್ನು ಶೌರ್ಯ ಚಕ್ರದಿಂದ ಗೌರವಿಸಲಾಗಿತ್ತು. ಈ ಸನ್ಮಾನದ ನಂತರ ಅವರು ತಮ್ಮ ಶಾಲಾ ಪ್ರಾಂಶುಪಾಲರಿಗೆ ಒಂದು ಪತ್ರ ಬರೆದಿದ್ದರು. ಆ ಪತ್ರವನ್ನು ಓದಿ – ಯಶಸ್ಸಿನ ಶಿಖರಕ್ಕೇರಿದರೂ ಅವರು ತಮ್ಮ ಬೇರುಗಳನ್ನು ಮರೆತಿಲ್ಲ ಎಂದು ನನಗೆ ಅನ್ನಿಸಿತು. ಎರಡನೇಯದಾಗಿ ಅವರ ಬಳಿ ಸಂಭ್ರಮಾಚರಣೆಗೆ ಸಮಯವಿದ್ದರೂ ಅವರು ಮುಂಬರುವ ಪೀಳಿಗೆ ಬಗ್ಗೆ ಆಲೋಚಿಸಿದರು. ತಾವು ಓದಿದ ಶಾಲೆಯ ಮಕ್ಕಳ ಜೀವನವೂ ಸಂಭ್ರಮಾಚರಣೆಯಿಂದ ತುಂಬಲಿ ಎಂಬುದು ಅವರ ಆಲೋಚನೆಯಾಗಿತ್ತು. ತಮ್ಮ ಪತ್ರದಲ್ಲಿ ವರುಣ್ ಸಿಂಗ್ ತಮ್ಮ ಪರಾಕ್ರಮದ ಬಗ್ಗೆ ಹೆಮ್ಮೆಯಿಂದ ವರ್ಣಿಸಿರಲಿಲ್ಲ ಬದಲಾಗಿ ತಮ್ಮ ಅಸಫಲತೆಯ ಬಗ್ಗೆ ಮಾತನಾಡಿದರು. ತಮ್ಮ ದೌರ್ಬಲ್ಯಗಳನ್ನು ಹೇಗೆ ಶಕ್ತಿಯಾಗಿ ಪರಿವರ್ತಿಸಿಕೊಂಡರು ಎಂಬುದನ್ನು ವರ್ಣಿಸಿದ್ದರು. ಈ ಪತ್ರದಲ್ಲಿ ಅವರು ಹೀಗೆ ಬರೆದಿದ್ದರು.

“ಸಾಧಾರಣವಾಗಿದ್ದರೆ ತಪ್ಪೇನೂ ಇಲ್ಲ. ಶಾಲೆಯಲ್ಲಿ ಎಲ್ಲರೂ ಎಲ್ಲರೂ ಶಾಲೆಯಲ್ಲಿ ಉತ್ಕೃಷ್ಟ ಸಾಧನೆ ಮಾಡ ಬಲ್ಲವರಾಗಿರುವುದಿಲ್ಲ ಮತ್ತು ಎಲ್ಲರೂ 90 ರಷ್ಟು ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ನೀವು ಅಷ್ಟು ಅಂಕ ಗಳಿಸಿದರೆ ಅದು ಅದ್ಭುತ ಸಾಧನೆ ಮತ್ತು ಶ್ಲಾಘಿಸಲೇಬೇಕು. ಆದಾಗ್ಯೂ, ನೀವು ಸಾಧಿಸಲಾಗದಿದ್ದರೆ, ನೀವು ಸಾಧಾರಣ ಎಂದು ಭಾವಿಸಬೇಡಿ. ನೀವು ಶಾಲೆಯಲ್ಲಿ ಸಾಧಾರಣ ವಿದ್ಯಾರ್ಥಿಯಾಗಿರ ಬಹುದು ಆದರೆ ಜೀವನದಲ್ಲಿ ಬರಲಿರುವ ಸಾಧನೆಗಳಿಗೆ ಇದು ಅಳತೆಗೋಲಲ್ಲ. ನಿಮ್ಮ ಇಷ್ಟವಾದ ಕ್ಷೇತ್ರವನ್ನು ಅರಿತುಕೊಳ್ಳಿ; ಅದು ಕಲೆ, ಸಂಗೀತ, ಗ್ರಾಫಿಕ್ ವಿನ್ಯಾಸ, ಸಾಹಿತ್ಯ ಇತ್ಯಾದಿ ಆಗಿರಬಹುದು. ನೀವು ಏನೇ ಕೆಲಸ ಮಾಡಿದರೂ, ಸಮರ್ಪಿತರಾಗಿ, ನಿಮ್ಮ ಪ್ರಯತ್ನವನ್ನು ಮುಂದುವರಿಸಿ. ಎಂದಿಗೂ ನಿದ್ರೆಗೆ ಜಾರುವಾಗ ನಾನು ಹೆಚ್ಚಿನ ಪ್ರಯತ್ನಗಳನ್ನು ಮಾಡಬಹುದಿತ್ತು ಎಂಬ ನಕಾರಾತ್ಮಕ ಭಾವನೆಗಳು ಬೇಡ”

ಸ್ನೇಹಿತರೇ, ಸಾಧಾರಣದಿಂದ ಅಸಾಧಾರಣವಾಗಲು ಅವರು ನೀಡಿರುವ ಮಂತ್ರ ಕೂಡಾ ಅಷ್ಟೇ ಮಹತ್ವಪೂರ್ಣವಾಗಿದೆ. ಇದೇ ಪತ್ರದಲ್ಲಿ ವರುಣ್ ಸಿಂಗ್ ಅವರು ಹೀಗೆ ಬರೆದಿದ್ದಾರೆ. –

“ಎಂದಿಗೂ ಭರವಸೆ ಕಳೆದುಕೊಳ್ಳಬೇಡಿ. ನೀವು ಏನಾಗಬೇಕೆಂದು ಕೊಳ್ಳುತ್ತಿದ್ದೀರೋ ಅದರಲ್ಲಿ ನೀವು ಉತ್ತಮವಾಗಿರಲು ಸಾಧ್ಯವಿಲ್ಲ ಎಂದು ಎಂದಿಗೂ ಭಾವಿಸಬೇಡಿ. ಅದು ಸುಲಭವಾಗಿ ಬರುವುದಿಲ್ಲ, ಅದಕ್ಕೆ ಸಮಯದ ಮತ್ತು ಆರಾಮಗಳ ತ್ಯಾಗದ ಅಗತ್ಯವೂ ಇದೆ. ನಾನೊಬ್ಬ ಸಾಧಾರಣ ವ್ಯಕ್ತಿಯಾಗಿದ್ದೆ, ಈಗ ನಾನು ನನ್ನ ವೃತ್ತಿಯಲ್ಲಿ ಕಠಿಣ ಮೈಲಿಗಲ್ಲುಗಳನ್ನು ತಲುಪಿದ್ದೇನೆ. 12 ನೇ ತರಗತಿಯ ಅಂಕಗಳು ಜೀವನದಲ್ಲಿ ಸಾಧನೆ ಮಾಡಲು ನೀವು ಸಮರ್ಥರೋ ಅಲ್ಲವೋ ಎನ್ನುವುದನ್ನು ನಿರ್ಧರಿಸುತ್ತದೆ ಎಂದು ಭಾವಿಸಬೇಡಿ. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆಯಿಡಿ ಮತ್ತು ಆ ನಿಟ್ಟಿನಲ್ಲಿ ಕಾರ್ಯಪ್ರವ್ರತ್ತರಾಗಿ”

ತಾವು ಕೇವಲ ಒಬ್ಬ ವಿದ್ಯಾರ್ಥಿಗೆ ಪ್ರೇರಣೆ ನೀಡಿದರೂ ಸಾಕು ಅದು ಬಹಳವೇ ದೊಡ್ಡದೆಂದು ವರುಣ್ ಬರೆದಿದ್ದಾರೆ. ಆದರೆ, ನಾನು ಇಂದು ಹೇಳಲು ಬಯಸುತ್ತೇನೆ- ಇವರು ಇಡೀ ದೇಶಕ್ಕೇ ಪ್ರೇರಣೆ ನೀಡಿದ್ದಾರೆ ಎಂದು. ಅವರ ಪತ್ರ ಕೇವಲ ವಿದ್ಯಾರ್ಥಿಗಳೊಂದಿಗೆ ಮಾತನಾಡಬಹುದು, ಆದರೆ, ಅದು ನಮ್ಮ ಇಡೀ ಸಮಾಜಕ್ಕೆ ಸಂದೇಶ ನೀಡಿದೆ.

ಸ್ನೇಹಿತರೇ, ಪ್ರತಿ ವರ್ಷ ನಾನು ಇಂತಹದ್ದೇ ವಿಷಯಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪರ್ ಚರ್ಚಾ ಕಾರ್ಯಕ್ರಮ ಮಾಡುತ್ತೇನೆ. ಈ ವರ್ಷ ಕೂಡಾ ಪರೀಕ್ಷೆಗಳಿಗೆ ಮುನ್ನವೇ ನಾನು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಬೇಕೆಂದು ಯೋಜಿಸುತ್ತಿದ್ದೇನೆ. ಈ ಕಾರ್ಯಕ್ರಮಕ್ಕಾಗಿ ಎರಡು ದಿನಗಳ ನಂತರ ಅಂದರೆ ಡಿಸೆಂಬರ್ 28 ರಂದು MyGov.in ನಲ್ಲಿ ನೋಂದಣಿ ಆರಂಭವಾಗಲಿದೆ. ಈ ನೋಂದಣಿ ಡಿಸೆಂಬರ್ 28 ರಿಂದ ಜನವರಿ 20 ರವರೆಗೆ ನಡೆಯಲಿದೆ.  ಇದಕ್ಕಾಗಿ, 9 ರಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕಿಯರು, ಮತ್ತು ತಂದೆತಾಯಿಯರಿಗಾಗಿ ಆನ್ಲೈನ್ ಸ್ಪರ್ಧೆ ಕೂಡಾ ಆಯೋಜನೆಯಾಗಲಿದೆ.  ನೀವೆಲ್ಲರೂ ಇದರಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ನಾನು ಬಯಸುತ್ತೇನೆ. ನಿಮ್ಮನ್ನು ಭೇಟಿಯಾಗುವ ಅವಕಾಶ ದೊರೆಯುತ್ತದೆ. ನಾವೆಲ್ಲರೂ ಒಂದಾಗಿ ಸೇರಿ, ಪರೀಕ್ಷೆ, ವೃತ್ತಿ, ಸಫಲತೆ ಮತ್ತು ವಿದ್ಯಾರ್ಥಿ ಜೀವನದೊಂದಿಗೆ ಸೇರಿರುವ ಅನೇಕ ವಿಷಯಗಳ ಬಗ್ಗೆ ಮಾತನಾಡೋಣ.

ನನ್ನ ಪ್ರೀತಿಯ ದೇಶವಾಸಿಗಳೇ, ಮನ್ ಕಿ ಬಾತ್ ನಲ್ಲಿ ನಾನು ಈಗ ನಿಮಗೆ ಗಡಿಯಾಚೆಯಿಂದ, ಬಹಳ ದೂರದಿಂದ ಬಂದಿರುವಂತಹ ಒಂದು ವಿಷಯ ಕೇಳಿಸಲುಬಯಸುತ್ತೇನೆ. ಇದು ನಿಮ್ಮನ್ನು ಸಂತೋಷಗೊಳಿಸುತ್ತದೆ ಹಾಗೆಯೇ ಆಶ್ಚರ್ಯಚಕಿತರನ್ನಾಗಿಸುತ್ತದೆ ಕೂಡಾ.:

ಧ್ವನಿ#(VandeMatram)

ವಂದೇಮಾತರಂ . ವಂದೇಮಾತರಂ

ಸುಜಲಾಂ ಸುಫಲಾಂ ಮಲಯಜ ಶೀತಲಾಂ

ಸಸ್ಯ ಶ್ಯಾಮಲಾಂ ಮಾತರಂ. ವಂದೇ ಮಾತರಂ

ಶುಭ್ರ ಜ್ಯೋತ್ಸ್ನಾ ಫುಲಕಿತಯಾಮಿನೀಂ

ಫುಲ್ಲಕುಸುಮಿತ ದ್ರುಮದಲ ಶೋಭಿನೀಂ

ಸುಹಾಸಿನೀಂ ಸುಮಧುರ ಭಾಷಿಣೀಂ

ಸುಖದಾಂ ವರದಾಂ ಮಾತರಂ. ವಂದೇಮಾತರಂ

ವಂದೇಮಾತರಂ ವಂದೇಮಾತರಂ

ಇದನ್ನು ಕೇಳಿ ನಿಮಗೆ ಬಹಳ ಸಂತೋಷವಾಯಿತೆಂದು, ಹೆಮ್ಮೆಯೆನಿಸಿತೆಂದು ನನಗೆ ಪೂರ್ಣ ವಿಶ್ವಾಸವಿದೆ.  ವಂದೇಮಾತರಂ ನಲ್ಲಿ ಅಡಗಿರುವ ಭಾವಾರ್ಥ, ನಮಲ್ಲಿ ಹೆಮ್ಮೆ ಮತ್ತು ಉತ್ಸಾಹ ತುಂಬುತ್ತದೆ.

ಸ್ನೇಹಿತರೇ, ಈ ಅತಿ ಸುಂದರ ಧ್ವನಿ ಎಲ್ಲಿಯದು ಮತ್ತು ಯಾವ ದೇಶದಿಂದ ಬಂದಿದೆಯೆಂದು ನೀವು ಖಂಡಿತಾ ಯೋಚಿಸುತ್ತಿರ ಬಹುದುಲ್ಲವೇ? ಈ ಪ್ರಶ್ನೆಗೆ ಉತ್ತರ ನಿಮ್ಮಲ್ಲಿ ಮತ್ತಷ್ಟು ಆಶ್ಚರ್ಯವನ್ನು ಹೆಚ್ಚಿಸುತ್ತದೆ. ವಂದೇಮಾತರಂ ಪ್ರಸ್ತುತ ಪಡಿಸುತ್ತಿರುವ ಇವರು ಗ್ರೀಸ್ ದೇಶದ ವಿದ್ಯಾರ್ಥಿಗಳಾಗಿದ್ದಾರೆ. ಅವರು ಅಲ್ಲಿಯ ಇಲಿಯಾದ ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.  ಇವರು ಸುಂದರವಾಗಿ ಮತ್ತು ಭಾವಪೂರ್ಣವಾಗಿ ಹಾಡಿರುವ ವಂದೇಮಾತರಂ ನಿಜಕ್ಕೂ ಅದ್ಭುತವಾಗಿದೆ ಮತ್ತು ಪ್ರಶಂಸಾರ್ಹವಾಗಿದೆ.  ಇಂತಹ ಪ್ರಯತ್ನಗಳು, ಎರಡು ದೇಶಗಳ ಜನರನ್ನು ಮತ್ತಷ್ಟು ಹತ್ತಿರಕ್ಕೆ ತರುತ್ತವೆ. ನಾನು ಗ್ರೀಸ್ ನ ಈ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಮತ್ತು ಅವರ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಾಡಲಾಗಿರುವ ಅವರ ಪ್ರಯತ್ನವನ್ನು ಶ್ಲಾಘಿಸುತ್ತೇನೆ.

ಸ್ನೇಹಿತರೇ, ಲಕ್ನೋದ ನಿವಾಸಿಯಾಗಿರುವ ನಿಲೇಶ್ ಅವರ ಒಂದು ಪೋಸ್ಟ್ ಕುರಿತು ಕೂಡಾ ಚರ್ಚಿಸಲು ಬಯಸುತ್ತೇನೆ. ನಿಲೇಶ್ ಅವರು ಲಕ್ನೋದಲ್ಲಿ ನಡೆದ ಒಂದು ವಿಶಿಷ್ಟ ಡ್ರೋನ್ ಪ್ರದರ್ಶನವನ್ನು ಬಹಳ ಪ್ರಶಂಸಿಸಿದ್ದಾರೆ. ಈ ಡ್ರೋನ್ ಪ್ರದರ್ಶನವನ್ನು ಲಕ್ನೋದ ರೆಸಿಡೆನ್ಸಿ ಪ್ರದೇಶದಲ್ಲಿ ಆಯೋಜಿಸಲಾಗಿತ್ತು. 1857 ಕ್ಕೂ ಮೊದಲಿನ ಸ್ವಾತಂತ್ರ್ಯ ಸಂಗ್ರಾಮದ ಸಾಕ್ಷಿಗಳು,  ರೆಸಿಡೆನ್ಸಿಯ ಗೋಡೆಗಳ ಮೇಲೆ ಇಂದಿಗೂ ಕಾಣಬರುತ್ತದೆ. ರೆಸಿಡೆನ್ಸಿಯಲ್ಲಿ ನಡೆದ ಡ್ರೋನ್ ಪ್ರದರ್ಶನದಲ್ಲಿ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ವಿವಿಧ ಆಯಾಮಗಳಿಗೆ ಜೀವ ತುಂಬಲಾಯಿತು.  ಚೌರಿ-ಚೌರಾ ಚಳವಳಿಯಿರಲಿ, ಕಾಕೋರಿಟ್ರೆನ್ ನ ಘಟನೆಯೇ ಇರಲಿ, ಅಥವಾ ನೇತಾಜಿ ಸುಭಾಷ್ ಅವರ ಅದಮ್ಯ ಸಾಹಸ ಮತ್ತು ಪರಾಕ್ರಮವೇ ಇರಲಿ, ಈ ಡ್ರೋನ್ ಪ್ರದರ್ಶನ ಎಲ್ಲರ ಮನಸೂರೆಗೊಂಡಿತು. ನೀವು ಕೂಡಾ ಇದೇ ರೀತಿ ನಿಮ್ಮ ನಗರಗಳಲ್ಲಿ, ಗ್ರಾಮಗಳಲ್ಲಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಂಬಂಧಿಸಿದ ವಿಶಿಷ್ಟ ಅಂಶಗಳನ್ನು ಜನರ ಮುಂದೆ ತರಬಹುದು.  ಇದರಲ್ಲಿ ತಂತ್ರಜ್ಞಾನದ ಸಹಾಯವನ್ನು ಹೆಚ್ಚಾಗಿ ಬಳಸಬಹುದು.  ಸ್ವಾತಂತ್ರ್ಯದ ಅಮೃತ ಮಹೋತ್ಸವ ನಮಗೆ ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಜೀವಂತವಾಗಿಸುವ ಅವಕಾಶ ನೀಡುತ್ತದೆ. ಅದನ್ನು ಅನುಭವಿಸುವ ಅವಕಾಶ ನೀಡುತ್ತದೆ. ಈ ದೇಶಕ್ಕಾಗಿ ಹೊಸ ಸಂಕಲ್ಪ ತೊಡುವ, ಏನನ್ನಾದರೂ ಸಾಧಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಒಂದು ಪ್ರೇರಕ ಹಬ್ಬ ಇದಾಗಿದೆ, ಪ್ರೇರಕ ಅವಕಾಶ ಇದಾಗಿದೆ. ಬನ್ನಿ, ಸ್ವಾತಂತ್ರ್ಯ ಹೋರಾಟದ ಮಹಾನ್ ವ್ಯಕ್ತಿಗಳಿಂದ ಸ್ಫೂರ್ತಿ ಪಡೆದುಕೊಳ್ಳುತ್ತಾ, ದೇಶಕ್ಕಾಗಿ ನಮ್ಮ ಪ್ರಯತ್ನಗಳನ್ನು ಮತ್ತಷ್ಟು ಬಲಗೊಳಿಸೋಣ.

ನನ್ನ ಪ್ರೀತಿಯ ದೇಶಾಸಿಗಳೇ, ನಮ್ಮ ದೇಶ ಅನೇಕ ಅಸಾಧಾರಣ ಪ್ರತಿಭೆಗಳಿಂದ ಸಮೃದ್ಧವಾಗಿದೆ ಅವರುಗಳ ಸೃಜನಶೀಲತೆಯು ಇತರರಿಗೂ ಕೂಡಾ ಏನನ್ನಾದರೂ ಮಾಡುವಂತೆ ಪ್ರೇರೇಪಿಸುತ್ತದೆ.  ಅಂತಹ ಓರ್ವ ವ್ಯಕ್ತಿ ತೆಲಂಗಾಣದ ಡಾಕ್ಟರ್ ಕುರೇಲಾ ವಿಠಲಾಚಾರ್ಯ ಅವರು. ಅವರಿಗೆ 84 ವರ್ಷ ವಯಸ್ಸು. ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವುದಕ್ಕೆ ವಯಸ್ಸು ಮುಖ್ಯವಲ್ಲ ಎಂಬ ಮಾತಿಗೆ ವಿಠಾಲಾಚಾರ್ಯ ಒಂದು ಉದಾಹರಣೆಯಾಗಿದ್ದಾರೆ.

ಸ್ನೇಹಿತರೇ, ವಿಠಲಾಚಾರ್ಯ ಅವರಿಗೆ ಬಾಲ್ಯದಿಂದಲೂ ಒಂದು ದೊಡ್ಡ ಗ್ರಂಥಾಲಯ ತೆರೆಯಬೇಕೆಂಬ ಇಚ್ಛೆಯಿತ್ತು. ಆಗ ದೇಶ ಗುಲಾಮಗಿರಿಯಲ್ಲಿತ್ತು. ಬಾಲ್ಯದ ಕನಸು ಕನಸಾಗಿಯೇ ಉಳಿದುಬಿಟ್ಟಂತಹ ಪರಿಸ್ಥಿತಿಗಳು ಆ ಸಮಯದಲ್ಲಿದ್ದವು. ಕಾಲಾಂತರದಲ್ಲಿ ವಿಠಲಾಚಾರ್ಯ ಅವರು ಲೆಕ್ಚರರ್ ಆದರು, ತೆಲುಗು ಭಾಷೆಯನ್ನು ಆಳವಾಗಿ ಅಧ್ಯಯನ ಮಾಡಿದರು, ಮತ್ತು ಅದರಲ್ಲಿ ಅನೇಕ ಕೃತಿಗಳನ್ನು ರಚಿಸಿದರು  6-7 ವರ್ಷಗಳ ಹಿಂದೆ ಅವರು ಪುನಃ  ತಮ್ಮ ಕನಸನ್ನು ಸಾಕಾರಗೊಳಿಸಲು ಆರಂಭಿಸಿದರು. ಅವರು ತಮ್ಮ ಸ್ವಂತ ಪುಸ್ತಕಗಳಿಂದ ಗ್ರಂಥಾಲಯ ಆರಂಭಿಸಿದರು. ತಮ್ಮ ಜೀವಮಾನದ ಗಳಿಕೆಯನ್ನು ಇದರಲ್ಲಿ ತೊಡಗಿಸಿದರು. ಕ್ರಮೇಣ ಜನರು ಇದರೊಂದಿಗೆ ಸೇರಲಾರಂಭಿಸಿದರು ಮತ್ತು ಕೊಡುಗೆ ನೀಡಲಾರಂಬಿಸಿದರು. ಯದಾದ್ರಿ-ಭುವನಗಿರಿ ಜಿಲ್ಲೆಯಲ್ಲಿ ರಮಣ್ಣಾ ಪೇಟ್ಮಂಡಲ್ ದಲ್ಲಿರುವ ಈ ಗ್ರಂಥಾಲಯದಲ್ಲಿ ಸುಮಾರು 2 ಲಕ್ಷ ಪುಸ್ತಕಗಳಿವೆ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ತಾವು ಎದುರಿಸಿದ ಕಷ್ಟಗಳನ್ನು ಬೇರಾರೂ ಎದುರಿಸಬಾರದೆಂದು ವಿಠಲಾಚಾರ್ಯ ಹೇಳುತ್ತಾರೆ.  ಇಂದು ಬಹಳಷ್ಟು ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ದೊರೆಯುತ್ತಿರುವುದನ್ನು ನೋಡಿ ಅವರಿಗೆ ಬಹಳ ಸತೋಷವಾಗುತ್ತದೆ.  ಅವರ ಈ ಪ್ರಯತ್ನಗಳಿಂದ ಪ್ರೇರಿತರಾಗಿ, ಹಲವಾರು ಇತರೆ ಗ್ರಾಮಗಳ ಜನರು ಕೂಡಾ ಗ್ರಂಥಾಲಯ ಪ್ರಾರಂಭಿಸುವುದರಲ್ಲಿ ತೊಡಗಿಕೊಂಡಿದ್ದಾರೆ.

ಸ್ನೇಹಿತರೆ ಪುಸ್ತಕಗಳು ಕೇವಲ ಜ್ಞಾನವನ್ನು ಹೆಚ್ಚಿಸುವುದಲ್ಲದೇ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ, ಜೀವನವನ್ನು ರೂಪಿಸುತ್ತದೆ. ಪುಸ್ತಕಗಳನ್ನು ಓದುವ ಹವ್ಯಾಸ ಅದ್ಭುತ ಸಂತಸವನ್ನು ಒದಗಿಸುತ್ತದೆ. ಈ ವರ್ಷದಲ್ಲಿ ಇಷ್ಟೊಂದು ಪುಸ್ತಕಗಳನ್ನು ಓದಿದೆ ಎಂದು  ಜನರು ಬಹಳ ಹೆಮ್ಮೆಯಿಂದ ಹೇಳುವುದನ್ನು ನಾನು ಕಂಡಿದ್ದೇನೆ. ಮತ್ತು ನನಗೆ ಈ ವರ್ಷ ಮತ್ತಷ್ಟು ಪುಸ್ತಕಗಳನ್ನು ಓದಬೇಕಿದೆ. ಇದು ಒಂದು ಒಳ್ಳೇ ಅಭ್ಯಾಸ. ಈ ಅಭ್ಯಾಸವನ್ನು ವೃದ್ಧಿಸಬೇಕು. ಈ ವರ್ಷ ನಿಮಗೆ ಇಷ್ಟವಾದ ಅಂಥ 5 ಪುಸ್ತಕಗಳ ಬಗ್ಗೆ ತಿಳಿಸಿ ಎಂದು ಮನದ ಮಾತಿನ ಮೂಲಕ ಶ್ರೋತೃಗಳನ್ನು ಆಗ್ರಹಿಸುತ್ತೇನೆ. ಹೀಗೆ ನೀವು 2022 ರಲ್ಲಿ ಇತರ ಓದುಗರಿಗೆ ಉತ್ತಮ ಪುಸ್ತಕಗಳನ್ನು ಆಯ್ದುಕೊಳ್ಳಲು ನೆರವಾಗಬಹುದು. ನಮ್ಮ ಸ್ಕ್ರೀನ್ ಟೈಂ ಹೆಚ್ಚುತ್ತಿರುವಂಥ ಈ ಸಮಯದಲ್ಲಿ ಪುಸ್ತಕ ವಾಚನ ಹೆಚ್ಚು ಪ್ರಚಲಿತಗೊಳ್ಳಲಿ ಎಂಬುದಕ್ಕೆ ಜೊತೆಗೂಡಿ ಪ್ರಯತ್ನ ಮಾಡಬೇಕು.

ನನ್ನ ಪ್ರಿಯ ದೇಶವಾಸಿಗಳೆ, ಇತ್ತೀಚೆಗೆ ಒಂದು ಆಸಕ್ತಿಕರ ಪ್ರಯತ್ನದತ್ತ ಹರಿಯಿತು. ಅದು ನಮ್ಮ ಪ್ರಾಚೀನ ಗ್ರಂಥಗಳು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಭಾರತದಲ್ಲಷ್ಟೇ ಅಲ್ಲ ವಿಶ್ವಾದ್ಯಂತ ಜನಪ್ರಿಯಗೊಳಿಸುವ ಪ್ರಯತ್ನವಾಗಿದೆ. ಪುಣೆಯಲ್ಲಿ ಭಂಡಾರ್ಕರ್ ಒರಿಯೆಂಟಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಎಂಬ ಕೇಂದ್ರವಿದೆ. ಈ ಸಂಸ್ಥೆ ವಿದೇಶಿಗರಿಗೆ ಮಹಾಭಾರತದ ಮಹತ್ವವನ್ನು ಪರಿಚಯಿಸಲು ಆನ್ ಲೈನ್ ಕೋರ್ಸ್ ಆರಂಭಿಸಿದೆ. ಕೋರ್ಸ್ ಈಗ ಮಾತ್ರ ಆರಂಭಿಸಿರಬಹುದು ಆದರೆ ಇದರ ವಿಷಯವಸ್ತುವನ್ನು ಸಿದ್ಧಪಡಿಸುವ ಕಾರ್ಯ ನೂರು ವರ್ಷಗಳ ಹಿಂದೆಯೇ ಆರಂಭಿಸಲಾಗಿತ್ತು ಎಂಬುದನ್ನು ಕೇಳಿ ನಿಮಗೆ ಬಹಳ ಆಶ್ಚರ್ಯವಾಗಬಹುದು. ಈ ಸಂಸ್ಥೆ ಇಂತಹ ಕೋರ್ಸ್ ಆರಂಭಿಸಿದಾಗ ಅದಕ್ಕೆ ಬಹಳ ಉತ್ತಮ ಪ್ರತಿಕ್ರಿಯೆ ದೊರೆಯಿತು. ನಮ್ಮ ಪರಂಪರೆಯ ವಿಭಿನ್ನ ಮಗ್ಗಲುಗಳನ್ನು ಹೇಗೆ ಆಧುನಿಕ ರೀತಿಯಲ್ಲಿ ಪ್ರಸ್ತುತಪಡಿಸಲಾಗುತ್ತಿದೆ ಎಂದು ಜನರಿಗೆ ತಿಳಿಯಲಿ ಎಂಬ ಉದ್ದೇಶದಿಂದ ಇಂಥ ಅದ್ಭುತ ಉಪಕ್ರಮದ ಚರ್ಚೆಯನ್ನು ಮಾಡುತ್ತಿದ್ದೇನೆ. ಸಪ್ತ ಸಮುದ್ರಗಳಾಚೆ ಇರುವ ಜನರಿಗೂ ಇದರ ಲಾಭ ದೊರೆಯುವಂತೆ ಮಾಡಲು ಆವಿಷ್ಕಾರಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಸ್ನೇಹಿತರೆ ಇಂದು ವಿಶ್ವಾದ್ಯಂತ ಭಾರತೀಯ ಸಂಸ್ಕೃತಿ ಬಗ್ಗೆ ಅರಿಯುವ ಆಸಕ್ತಿ ಹೆಚ್ಚುತ್ತಿದೆ. ಬೇರೆ ಬೇರೆ ದೇಶದ ಜನತೆ ಕೇವಲ ನಮ್ಮ ಸಂಸ್ಕೃತಿಯ ಬಗ್ಗೆ ಅರಿಯಲು ಉತ್ಸುಕರಾಗಿರುವುದಷ್ಟೆ ಅಲ್ಲ ಅದನ್ನು ಪಸರಿಸುವಲ್ಲಿಯೂ ಸಹಾಯ ಮಾಡುತ್ತಿದ್ದಾರೆ. ಸರ್ಬಿಯನ್ ಮೇಧಾವಿ ಡಾ. ಮೊಮಿರ್ ನಿಕಿಚ್ ಇಂಥ ಒಬ್ಬ ಸಾಧಕರಾಗಿದ್ದಾರೆ. ಇವರು ದ್ವಿಭಾಷೆಯ ಸಂಸ್ಕೃತ ಸರ್ಬಿಯನ್ ಶಬ್ದಕೋಶವನ್ನು ಸಿದ್ಧಪಡಿಸಿದ್ದಾರೆ. ಈ ಶಬ್ದಕೋಶದಲ್ಲಿ ಬಳಸಲಾದ 70 ಸಾವಿರಕ್ಕೂ ಹೆಚ್ಚು ಸಂಸ್ಕೃತ ಪದಗಳನ್ನು ಸರ್ಬಿಯನ್ ಭಾಷೆಯಲ್ಲಿ ಅನುವಾದಿಸಲಾಗಿದೆ. ಡಾ ನಿಕಿಚ್ ಅವರು 70 ರ ವಯೋಮಾನದಲ್ಲಿ ಸಂಸ್ಕೃತವನ್ನು ಕಲಿತಿದ್ದಾರೆ ಎಂದು ಕೇಳಿ ನಿಮಗೆ ಮತ್ತಷ್ಟು ಸಂತೋಷವಾಗಬಹುದು. ಮಹಾತ್ಮಾ ಗಾಂಧಿಯವರ ಲೇಖನಗಳನ್ನು ಓದಿ ಅವರಿಗೆ ಇದಕ್ಕೆ ಪ್ರೇರಣೆ ದೊರೆಯಿತು ಎಂದು ಅವರು ಹೇಳುತ್ತಾರೆ. ಮಂಗೋಲಿಯಾದ 93 ರ ವಯೋಮಾನದ ಪ್ರೊ.ಜೆ ಗೆಂದೆಧರಮ್ ಅವರದ್ದೂ ಇಂಥದೇ ಒಂದು ಉದಾಹರಣೆಯಾಗಿದೆ. ಕಳೆದ 4 ದಶಕಗಳಲ್ಲಿ ಅವರು ಸುಮಾರು 40 ಭಾರತೀಯ ಪ್ರಾಚೀನ ಗ್ರಂಥಗಳು, ಮಹಾಕಾವ್ಯಗಳು ಮತ್ತು ರಚನೆಗಳನ್ನು ಮಂಗೋಲಿಯಾ ಭಾಷೆಗೆ ಅನುವಾದಿಸಿದ್ದಾರೆ. ನಮ್ಮ ದೇಶದಲ್ಲೂ ಇಂಥ ಉತ್ಸಾಹದಿಂದ ಬಹಳಷ್ಟು ಜನರು ಕೆಲಸ ಮಾಡುತ್ತಿದ್ದಾರೆ. ನನಗೆ ಗೋವಾದ ಸಾಗರ್ ಮುಳೆ ಅವರ ಪ್ರಯತ್ನಗಳ ಬಗ್ಗೆ ತಿಳಿಯುವ ಅವಕಾಶ ದೊರೆಯಿತು. ಅವರು ನೂರಾರು ವರ್ಷಗಳಷ್ಟು ಹಳೆಯ ‘ಕಾವೀ’ ಚಿತ್ರಕಲೆಯನ್ನು ನಶಿಸಿಹೋಗದಂತೆ ಕಾಪಾಡುವಲ್ಲಿ ತೊಡಗಿಸಿಕೊಂಡಿದ್ದಾರೆ. ‘ಕಾವೀ’ ಚಿತ್ರಕಲೆ ಭಾರತದ ಪುರಾತನ ಇತಿಹಾಸವನ್ನು ತನ್ನಲ್ಲಿ ಹುದುಗಿಸಿಕೊಂಡಿದೆ. ಕಾವ್ ಎಂದರೆ ಕೆಂಪು ಮಣ್ಣು ಎಂದರ್ಥ. ಪುರಾತನ ಕಾಲದಲ್ಲಿ ಈ ಕಲೆಗಾಗಿ ಕೆಂಪು ಮಣ್ಣನ್ನು ಬಳಸಲಾಗುತ್ತಿತ್ತು. ಗೋವಾದಲ್ಲಿ ಪೋರ್ಚುಗೀಸ್ ಆಡಳಿತದಲ್ಲಿದ್ದಾಗ ಅಲ್ಲಿಂದ ಪಲಾಯನಗೈದಂತಹ ಜನರು ಬೇರೆ ರಾಜ್ಯಗಳ ಜನರಿಗೆ ಈ ಅದ್ಭುತ ಚಿತ್ರ ಕಲೆಯನ್ನು ಪರಿಚಯಿಸಿದರು. ಕಾಲಾ ನಂತರ ಈ ಅದ್ಭುತ ಕಲೆಗೆ ಅಳಿವಿನ ಅಂಚಿಗೆ ಸರಿಯುತ್ತಿತ್ತು. ಆದರೆ ಸಾಗರ್ ಮುಳೆಯವರು ಈ ಕಲೆಗೆ ಜೀವ ತುಂಬಿದ್ದಾರೆ. ಅವರ ಈ ಪ್ರಯತ್ನಕ್ಕೆ ಬಹಳಷ್ಟು ಮೆಚ್ಚುಗೆ ದೊರೆಯುತ್ತಿದೆ. ಸ್ನೇಹಿತರೆ, ಒಂದು ಪುಟ್ಟ ಪ್ರಯತ್ನ, ಒಂದು ಪುಟ್ಟ ಹೆಜ್ಜೆ ನಮ್ಮ ಸಮೃದ್ಧ ಕಲೆಗಳ ಸಂರಕ್ಷಣೆಯಲ್ಲಿ ಮಹತ್ವಪೂರ್ಣ ಪಾತ್ರ ವಹಿಸಬಹುದಾಗಿದೆ. ನಮ್ಮ ದೇಶದ ಜನ ನಿರ್ಧಾರ ಕೈಗೊಂಡರೆ ಸಾಕು ನಮ್ಮ ಪ್ರಾಚೀನ ಕಲೆಗಳನ್ನು ಉಳಿಸಿ ಬೆಳೆಸುವ ಮತ್ತು ಸಂರಕ್ಷಿಸುವ ಚೈತನ್ಯ ಜನಾಂದೋಲನದ ರೂಪ ಪಡೆಯಬಲ್ಲುದು. ನಾನು ಇಲ್ಲಿ ಕೆಲ ಪ್ರಯತ್ನಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ. ದೇಶಾದ್ಯಂತ ಇಂಥ ಅನೇಕ ಪ್ರಯತ್ನಗಳು ನಡೆಯುತ್ತಿವೆ.  ನೀವು ಅವುಗಳ ಮಾಹಿತಿಯನ್ನು ನಮೋ ಆಪ್ ಮೂಲಕ ನನಗೆ ಖಂಡಿತಾ ತಲುಪಿಸಿ.

ನನ್ನ ಪ್ರಿಯ ದೇಶಬಾಂಧವರೆ ಅರುಣಾಚಲ ಪ್ರದೇಶದ ಜನತೆ ಒಂದು ವರ್ಷದಿಂದ ವಿಶಿಷ್ಟ ಆಂದೋಲನವನ್ನು ಕೈಗೊಂಡಿದ್ದಾರೆ. ಅದಕ್ಕೆ ‘ಅರುಣಾಚಲ ಪ್ರದೇಶ ಏರ್ ಗನ್ ಸರೆಂಡರ್ ಅಭಿಯಾನ್’ ಎಂದು ಹೆಸರಿಸಿದ್ದಾರೆ. ಈ ಆಂದೋಲನದಲ್ಲಿ ಜನರು ಸ್ವ ಇಚ್ಛೆಯಿಂದ ಒಪ್ಪಿಸುತ್ತಿದ್ದಾರೆ. ಏಕೆಂದು ಗೊತ್ತೆ? ಏಕೆಂದರೆ ಅರುಣಾಚಲ ಪ್ರದೇಶದಲ್ಲಿ ಪಕ್ಷಿಗಳ ವಿವೇಚನಾರಹಿತ ಬೇಟೆ ನಿಲ್ಲಿಸಬೇಕಾಗಿದೆ. ಅರುಣಾಚಲ ಪ್ರದೇಶ 500 ಕ್ಕೂ ಹೆಚ್ಚು ಪಕ್ಷಿ ಪ್ರಭೇದದ ತವರಾಗಿದೆ. ಇವುಗಳಲ್ಲಿ ಕೆಲವು ಸ್ಥಳೀಯ ಪ್ರಭೇದಗಳು ಎಷ್ಟು ವಿಶಿಷ್ಟವಾಗಿವೆ ಎಂದರೆ ವಿಶ್ವದಲ್ಲಿ ಬೇರೆ ಎಲ್ಲೂ ಇವು ಕಾಣಸಿಗುವುದಿಲ್ಲ. ಆದರೆ ಕ್ರಮೇಣ ಕಾಡಿನಲ್ಲೂ ಈಗ ಪಕ್ಷಿಗಳ ಸಂಖ್ಯೆ ಕ್ಷೀಣಿಸಲಾರಂಭಿಸಿದೆ. ಇದನ್ನು ತಡೆಗಟ್ಟಲೆಂದೇ ಈಗ ಏರ್ ಗನ್ ಸರೆಂಡರ್ ಆಂದೋಲನ ಜಾರಿಯಲ್ಲಿದೆ. ಕಳೆದ ಕೆಲವು ತಿಂಗಳಲ್ಲಿ ಬೆಟ್ಟ ಪ್ರದೇಶದಿಂದ ಬಯಲು ಪ್ರದೇಶಗಳವರೆಗೆ ಒಂದು ಸಮುದಾಯದಿಂದ ಮತ್ತೊಂದು ಸಮುದಾಯದವರೆಗೆ, ರಾಜ್ಯದಲ್ಲಿ ಎಲ್ಲೆಡೆ ಜನರು ಮುಕ್ತ ಹೃದಯದಿಂದ ಇದನ್ನು ಸ್ವಾಗತಿಸಿದ್ದಾರೆ.  ಅರುಣಾಚಲ ಪ್ರದೇಶದ ಜನತೆ ಸ್ವ ಇಚ್ಛೆಯಿಂದ 1600 ಕ್ಕೂ ಹೆಚ್ಚು ಏರ್ ಗನ್ ಗಳನ್ನು ಒಪ್ಪಿಸಿದ್ದಾರೆ. ಇದಕ್ಕಾಗಿ ನಾನು ಅರುಣಾಚಲ ಪ್ರದೇಶದ ಜನತೆಯನ್ನು ಶ್ಲಾಘಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ          

ನನ್ನ ಪ್ರೀತಿಯ ದೇಶವಾಸಿಗಳೇ, ನಿಮ್ಮೆಲ್ಲರಿಂದ 2022 ಕ್ಕೆ ಸಂಬಂಧಿಸಿದ ಹಲವಾರು ಸಂದೇಶಗಳು ಮತ್ತು ಸಲಹೆಗಳು ಬಂದಿವೆ. ಪ್ರತಿಬಾರಿಯಂತೆಯೇ ಒಂದು ವಿಷಯ ಹೆಚ್ಚಿನ ಜನರಿಂದ ಬಂದ ಸಂದೇಶಗಳಲ್ಲಿ ಇದೆ. ಅದೆಂದರೆ ಸ್ವಚ್ಛತೆ ಮತ್ತು ಸ್ವಚ್ಛಭಾರತ್ . ಸ್ವಚ್ಛತೆಯ ಈ ಸಂಕಲ್ಪ ಶಿಸ್ತು, ಜಾಗೃತಿ ಮತ್ತು ಸಮರ್ಪಣಾ ಭಾವದಿಂದ ಮಾತ್ರವೇ ಈಡೇರುತ್ತದೆ. ನಾವು ಎನ್ ಸಿ ಸಿ ಕೇಡೆಟ್ಸ್ (NCC Cadets)ಗಳಿಂದ ಆರಂಭಿಸಿದ ಪುನೀತ್ ಸಾಗರ್ ಅಭಿಯಾನದಲ್ಲಿ ಕೂಡಾ ಇದರ ಒಂದು ನೋಟವನ್ನು ಕಾಣಬಹುದು. 30 ಸಾವಿರಕ್ಕೂ ಅಧಿಕ ಎನ್ ಸಿಸಿ ಕೇಡೆಟ್ ಗಳು ಈ ಅಭಿಯಾನದಲ್ಲಿ ತೊಡಗಿಕೊಂಡಿದ್ದಾರೆ.  ಎನ್ ಸಿಸಿಯ ಈ ಕೆಡೇಟ್ ಗಳು ಸಮುದ್ರ ತೀರಗಳನ್ನು ಸ್ವಚ್ಛಗೊಳಿಸಿದರು, ಅಲ್ಲಿಂದ ಪ್ಲಾಸ್ಟಿಕ್ ತ್ಯಾಜ್ಯ ಆರಿಸಿ ಅವುಗಳನ್ನು ರಿಸೈಕ್ಲಿಂಗ್ ಗಾಗಿ ಸಂಗ್ರಹ ಮಾಡಿದರು.  ನಮ್ಮ ಬೀಚ್ ಗಳು, ನಮ್ಮ ಬೆಟ್ಟಗುಡ್ಡಗಳು ಸ್ವಚ್ಛವಾಗಿದ್ದರೆ ತಾನೇ ನಮಗೆ ಸುತ್ತಾಡಲು ಯೋಗ್ಯವಾಗಿರುತ್ತವೆ. ಅನೇಕರು ಎಲ್ಲಿಯಾದರೂ ಹೋಗಬೇಕೆಂದು ಜೀವಮಾನ ಪೂರ್ತಿ ಕನಸು ಕಾಣುತ್ತಿರುತ್ತಾರೆ, ಆದರೆ ಅಲ್ಲಿಗೆ ಹೋದಾಗ, ತಿಳಿದೋ ತಿಳಿಯದೆಯೋ ಅಲ್ಲಿ ತ್ಯಾಜ್ಯ ಹರಡಿ ಬರುತ್ತಾರೆ. ಯಾವ ಜಾಗ ನಮಗೆ ಇಷ್ಟೊಂದು ಸಂತೋಷ ನೀಡುತ್ತದೆಯೋ, ಅದನ್ನು ನಾವು ಕೊಳಕು ಮಾಡಬಾರದು ಎನ್ನುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಇರಬೇಕು.

ಸ್ನೇಹಿತರೇ, ನನಗೆ ಸಾಫ್ ವಾಟರ್ (saafwater) ಹೆಸರಿನ ಒಂದು ಸ್ಟಾರ್ಟ್ ಅಪ್ ನ ಬಗ್ಗೆ ತಿಳಿದು ಬಂತು. ಕೆಲವು ಯುವಕರು ಸೇರಿ ಇದನ್ನು ಆರಂಭಿಸಿದ್ದಾರೆ. ಇದು ಕೃತಕ ಬುದ್ಧಿಮತ್ತೆ ಮತ್ತು internet of things ನ ಸಹಾಯದಿಂದ ಜನರಿಗೆ ಅವರಿರುವ ಪ್ರದೇಶದಲ್ಲಿ ನೀರಿನ ಶುದ್ಧತೆ ಮತ್ತು ಗುಣಮಟ್ಟ ಸಂಬಂಧಿತ ಮಾಹಿತಿ ತಿಳಿಸುತ್ತದೆ. ಇದೊಂದು ಸ್ವಚ್ಛತೆಯ ಮತ್ತೊಂದು ರೀತಿಯ ಕ್ರಮವಾಗಿದೆ. ಜನರ ಸ್ವಚ್ಛ ಮತ್ತು ಆರೋಗ್ಯಪೂರ್ಣ ಭವಿಷ್ಯಕ್ಕಾಗಿ ಈ ಸ್ಟಾರ್ಟ್ ಅಪ್ ನ ಪ್ರಾಮುಖ್ಯತೆಯ ದೃಷ್ಟಿಯಿಂದ ಇದಕ್ಕೆ ಒಂದು ಜಾಗತಿಕ ಪ್ರಶಸ್ತಿ ಕೂಡಾ ದೊರೆತಿದೆ.

ಸ್ನೇಹಿತರೇ, ‘ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ’ ಈ ಪ್ರಯತ್ನದಲ್ಲಿ ಸಂಸ್ಥೆಗಳಿರಲಿ ಅಥವಾ ಸರ್ಕಾರವೇ ಇರಲಿ ಎಲ್ಲರದ್ದೂ ಮಹತ್ವಪೂರ್ಣ ಪಾತ್ರವಿದೆ.  ಈ ಮೊದಲು ಸರ್ಕಾರಿ ಕಚೇರಿಗಳಲ್ಲಿ ಹಳೆಯ ಕಡತಗಳು ಮತ್ತು ಕಾಗದಗಳ ಎಷ್ಟೊಂದು ರಾಶಿ ಇರುತ್ತಿತ್ತೆಂದು ನಿಮಗೆಲ್ಲರಿಗೂ ತಿಳಿದಿದೆ. ಸರ್ಕಾರ ಹಳೆಯ ವಿಧಾನಗಳನ್ನು ಬದಲಾಯಿಸಲು ಆರಂಭಿಸಿದಾಗಿನಂದ, ಈ ಕಡತಗಳು ಮತ್ತು ಕಾಗದಪತ್ರಗಳ ರಾಶಿ ಡಿಜಿಟೈಸ್ ಆಗಿ, ಕಂಪ್ಯೂಟರ್ ನ ಫೋಲ್ಡರ್ ಗಳಲ್ಲಿ ಸಂಗ್ರಹಗೊಳ್ಳುತ್ತಿವೆ. ಹಳೆಯ ಮತ್ತು ಬಾಕಿ ಉಳಿದಿರುವ ಸಾಮಗ್ರಿಗಳನ್ನು ವಿಲೇವಾರಿ ಮಾಡಲು ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ವಿಶೇಷ ಅಭಿಯಾನವನ್ನು ಕೂಡಾ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಕೆಲವು ಕುತೂಹಲಕಾರಿ ವಿಷಯಗಳು ಕೂಡಾ ನಡೆದಿವೆ. ಅಂಚೆ ಇಲಾಖೆಯಲ್ಲಿ ಈ ಅಭಿಯಾನ ನಡೆದಾಗ, ಅಲ್ಲಿನ ಜಂಕ್ ಯಾರ್ಡ್  ಸಂಪೂರ್ಣವಾಗಿ ಖಾಲಿಯಾಯಿತು. ಈಗ ಈ ಜಂಕ್ ಯಾರ್ಡ್ ಅನ್ನು ಕೋರ್ಟ್ ಯಾರ್ಡ್ ಮತ್ತು ಕೆಫೇಟೇರಿಯಾ ಆಗಿ ಪರಿವರ್ತಿಸಲಾಗಿದೆ. ಮತ್ತೊಂದು ಜಂಕ್ ಯಾರ್ಡ್ ಅನ್ನು ದ್ವಿಚಕ್ರ ವಾಹನಗಳಿಗಾಗಿ ನಿಲುಗಡೆ ತಾಣವನ್ನಾಗಿ ಮಾಡಲಾಗಿದೆ.  ಇದೇ ರೀತಿ ಪರಿಸರ ಸಚಿವಾಲಯವು ತನ್ನ ಖಾಲಿಯಾದ ಜಂಕ್ ಯಾರ್ಡ್ ಅನ್ನು ಕ್ಷೇಮ ಕೇಂದ್ರವನ್ನಾಗಿ ಪರಿವರ್ತಿಸಿದೆ. ನಗರ ವ್ಯವಹಾರಗಳ ಸಚಿವಾಲಯವು ಒಂದು ಸ್ವಚ್ಛ ಎಟಿಎಂ ಅನ್ನು ಕೂಡಾ ಸ್ಥಾಪಿಸಿದೆ. ಜನರು  ತ್ಯಾಜ್ಯ ನೀಡಿ ಬದಲಿಗೆ ನಗದು ತೆಗೆದುಕೊಂಡು ಹೋಗಲಿ ಎನ್ನುವುದು ಇದರ ಉದ್ದೇಶವಾಗಿದೆ. ನಾಗರೀಕ ವಿಮಾನ ಸಚಿವಾಲಯದ ವಿಭಾಗಗಳು, ಗಿಡಗಳಿಂದ ಉದುರುವ ಒಣ ಎಲೆಗಳನ್ನು ಮತ್ತು ಸಾವಯವ ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರಿಸಲು ಪ್ರಾರಂಭಿಸಿವೆ. ಈ ವಿಭಾಗವು ತ್ಯಾಜ್ಯ ಕಾಗದದಿಂದ ಸ್ಟೇಷನರಿ ತಯಾರಿಸುವ ಕೆಲಸ ಕೂಡಾ ಮಾಡುತ್ತಿದೆ.  ನಮ್ಮ ಸರ್ಕಾರದ ಇಲಾಖೆಗಳು ಕೂಡಾ ಸ್ವಚ್ಛತೆಯಂತಹ ವಿಷಯಗಳ ಮೇಲೆ ಇಷ್ಟೊಂದು ಇನ್ನೋವೇಟಿವ್ ಆಗಬಹುದಾಗಿದೆ. ಕೆಲವು ವರ್ಷಗಳ ಹಿಂದೆ ಯಾರಿಗೂ ಇಂತಹ ಭರವಸೆ ಕೂಡಾ ಇರುತ್ತಿರಲಿಲ್ಲ. ಆದರೆ ಈಗ ಇದು ವ್ಯವಸ್ಥೆಯ ಭಾಗವಾಗುತ್ತಾ ಬರುತ್ತಿದೆ.  ಇದೇ ಅಲ್ಲವೇ ದೇಶದ ಹೊಸ ಚಿಂತನೆ, ಇದರ ನೇತೃತ್ವವನ್ನು ದೇಶವಾಸಿಗಳೆಲ್ಲಾ ಒಟ್ಟಾಗಿ ಸೇರಿ ನಿರ್ವಹಿಸುತ್ತಿದ್ದಾರೆ.

ನನ್ನ ಪ್ರೀತಿಯ ದೇಶವಾಸಿಗಳೇ, ‘ಮನದ ಮಾತಿನಲ್ಲಿ ’ ನಾವು ಈ ಬಾರಿಯೂ ಅನೇಕ ವಿಷಯಗಳ ಬಗ್ಗೆ ಮಾತನಾಡಿದೆವು. ಪ್ರತಿಬಾರಿಯಂತೆ, ಒಂದು ತಿಂಗಳ ನಂತರ ನಾವು ಪುನಃ ಭೇಟಿಯಾಗೋಣ. ಆದರೆ ಅದು 2022 ರಲ್ಲಿ.  ಪ್ರತಿಯೊಂದು ಹೊಸ ಆರಂಭವೂ ನಮ್ಮ ಸಾಮರ್ಥ್ಯವನ್ನು ಗುರುತಿಸುವ ಒಂದು ಅವಕಾಶವನ್ನು ಹೊತ್ತು ತರುತ್ತದೆ.  ಯಾವ ಗುರಿಗಳನ್ನು ನಾವು ಮೊದಲು ಕಲ್ಪನೆ ಕೂಡಾ ಮಾಡಿರಲಿಲ್ಲವೋ, ದೇಶ ಇಂದು ಅವುಗಳಿಗಾಗಿ ಪ್ರಯತ್ನ ಮಾಡುತ್ತಿದೆ. ನಮ್ಮಲ್ಲಿ ಹೀಗೆ ಹೇಳಲಾಗುತ್ತದೆ–

ಕ್ಷಣಶಃ ಕಣಶಶ್ಚೈವ, ವಿದ್ಯಾಮ್ ಅರ್ಥಂ ಚ ಸಾಧಯೇತ್,

ಕ್ಷಣೇ ನಷ್ಟೇ ಕುತೋ ವಿದ್ಯಾ, ಕಣೆ ನಷ್ಟೇ ಕುತೋ ಧನಮ್

(क्षणश: कणशश्चैव, विद्याम् अर्थं च साधयेत् |

क्षणे नष्टे कुतो विद्या, कणे नष्टे कुतो धनम् ||)

ಅಂದರೆ, ನಾವು ಜ್ಞಾನಾರ್ಜನೆ ಮಾಡಬೇಕಾದರೆ, ಏನಾದರೂ ಹೊಸದನ್ನು ಕಲಿಯಬೇಕಾದರೆ, ಮಾಡಬೇಕಾದರೆ, ನಾವು ಪ್ರತಿಯೊಂದು ಕ್ಷಣವನ್ನೂ ಉಪಯೋಗಿಸಿಕೊಳ್ಳಬೇಕು. ಮತ್ತು ನಮಗೆ ಧನಾರ್ಜನೆ ಮಾಡಬೇಕಾದರೆ, ಅಂದರೆ ಉನ್ನತಿ, ಪ್ರಗತಿ ಸಾಧಿಸಬೇಕಾದರೆ, ಪ್ರತಿಯೊಂದು ಕಣದ ಅಂದರೆ ಪ್ರತಿಯೊಂದು ಸಂಪನ್ಮೂಲದ, ಸೂಕ್ತ ಬಳಕೆ ಮಾಡಬೇಕು. ಏಕೆಂದರೆ ಕ್ಷಣ ನಷ್ಟವಾಗುವುದರಿಂದ  ವಿದ್ಯೆ ಹಾಗೂ ಜ್ಞಾನ ಹೊರಟುಹೋಗುತ್ತದೆ ಮತ್ತು ಕಣ ನಷ್ಟವಾಗುವುದರಿಂದ, ಧನ ಮತ್ತು ಪ್ರಗತಿಯ ರಸ್ತೆ ಮುಚ್ಚಿಹೋಗುತ್ತದೆ.  ಈ ಮಾತು ದೇಶವಾಸಿಗಳೆಲ್ಲರಿಗೂ ಪ್ರೇರಣೆಯಾಗಿದೆ.  ನಾವು ಬಹಳಷ್ಟನ್ನು ಕಲಿಯಬೇಕು, ಹೊಸ ಹೊಸ ಆವಿಷ್ಕಾರಗಳನ್ನು ಮಾಡಬೇಕು, ಹೊಸ ಹೊಸ ಗುರಿಗಳನ್ನು ಸಾಧಿಸಬೇಕು, ಆದ್ದರಿಂದ ನಾವು ಒಂದು ಕ್ಷಣವನ್ನು ಕೂಡಾ ನಷ್ಟ ಮಾಡಿಕೊಳ್ಳಬಾರದು. ನಾವು ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು, ಆದ್ದರಿಂದ, ನಾವು ನಮ್ಮ ಸಂಪನ್ಮೂಲಗಳನ್ನು ಪೂರ್ತಿಯಾಗಿ ಉಪಯೋಗಿಸಿಕೊಳ್ಳಬೇಕು. ಇದು ಒಂದು ರೀತಿಯಲ್ಲಿ ಸ್ವಾವಲಂಬಿ ಭಾರತದ ಮಂತ್ರ ಕೂಡಾ ಆಗಿದೆ, ಏಕೆಂದರೆ,  ನಾವೆಲ್ಲರೂ ನಮ್ಮ ಸಂಪನ್ಮೂಲಗಳನ್ನು ಸರಿಯಾಗಿ ಬಳಕೆ ಮಾಡಿದಾಗ, ಅವುಗಳನ್ನು ವ್ಯರ್ಥವಾಗಲು ಬಿಡದೇ ಇದ್ದಾಗ, ನಾವು ನಮ್ಮ ಸ್ಥಳೀಯ ಸಾಮರ್ಥ್ಯವನ್ನು ಗುರುತಿಸುತ್ತೇವೆ, ಆಗ ದೇಶ ಸ್ವಾವಲಂಬಿಯಾಗುತ್ತದೆ.  ಆದ್ದರಿಂದ, ಉತ್ತಮವಾಗಿ ಯೋಚಿಸೋಣ, ದೊಡ್ಡ ಕನಸುಗಳನ್ನು ಕಾಣೋಣ, ಮತ್ತು ಅವುಗಳನ್ನು ಸಾಕಾರಗೊಳಿಸುವುದಕ್ಕಾಗಿ ಶ್ರಮಿಸೋಣ ಎನ್ನುವ ಸಂಕಲ್ಪವನ್ನು ಪುನರುಚ್ಚರಿಸೋಣ ಬನ್ನಿ.  ಮತ್ತು ನಮ್ಮ ಕನಸುಗಳನ್ನು ಕೇವಲ ನಮಗೆ ಮಾತ್ರ ಸೀಮಿತವಾಗಿರುವುದಿಲ್ಲ. ನಮ್ಮ ಕನಸುಗಳು ಸಮಾಜ ಮತ್ತು ದೇಶದ ಅಬಿವೃದ್ಧಿಗೆ ಸಂಬಂಧಿಸಿದ್ದಾಗಿರಬೇಕು, ನಮ್ಮ ಪ್ರಗತಿಯಿಂದ ದೇಶದ ಪ್ರಗತಿಯ ಮಾರ್ಗ ತೆರೆಯಬೇಕು ಮತ್ತು ಇದಕ್ಕಾಗಿ, ನಾವು ಒಂದು ಕ್ಷಣವನ್ನೂ, ಒಂದು ಕಣವನ್ನೂ ವ್ಯರ್ಥವಾಗುವುದಕ್ಕೆ ಬಿಡದಂತೆ ಇಂದಿನಿಂದಲೇ ಶ್ರಮಿಸೋಣ. ಇದೇ ಸಂಕಲ್ಪದೊಂದಿಗೆ, ಮುಂಬರುವ ವರ್ಷದಲ್ಲಿ ದೇಶ ಮುಂದೆ ಸಾಗುತ್ತದೆ, ಮತ್ತು 2022, ಒಂದು ನವ ಭಾರತ ನಿರ್ಮಾಣದ ಸುವರ್ಣ ಪುಟವಾಗಲಿದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಇದೇ ವಿಶ್ವಾಸದೊಂದಿಗೆ  ನಿಮ್ಮೆಲ್ಲರಿಗೂ ಹೊಸ ವರ್ಷ 2022 ಕ್ಕಾಗಿ ಅನೇಕ ಶುಭಾಶಯಗಳು. ಅನೇಕಾನೇಕ ಧನ್ಯವಾದ.

 

 

 

 

 

 

 

 

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Will walk shoulder to shoulder': PM Modi pushes 'Make in India, Partner with India' at Russia-India forum

Media Coverage

'Will walk shoulder to shoulder': PM Modi pushes 'Make in India, Partner with India' at Russia-India forum
NM on the go

Nm on the go

Always be the first to hear from the PM. Get the App Now!
...
Text of PM’s address at the Hindustan Times Leadership Summit
December 06, 2025
India is brimming with confidence: PM
In a world of slowdown, mistrust and fragmentation, India brings growth, trust and acts as a bridge-builder: PM
Today, India is becoming the key growth engine of the global economy: PM
India's Nari Shakti is doing wonders, Our daughters are excelling in every field today: PM
Our pace is constant, Our direction is consistent, Our intent is always Nation First: PM
Every sector today is shedding the old colonial mindset and aiming for new achievements with pride: PM

आप सभी को नमस्कार।

यहां हिंदुस्तान टाइम्स समिट में देश-विदेश से अनेक गणमान्य अतिथि उपस्थित हैं। मैं आयोजकों और जितने साथियों ने अपने विचार रखें, आप सभी का अभिनंदन करता हूं। अभी शोभना जी ने दो बातें बताई, जिसको मैंने नोटिस किया, एक तो उन्होंने कहा कि मोदी जी पिछली बार आए थे, तो ये सुझाव दिया था। इस देश में मीडिया हाउस को काम बताने की हिम्मत कोई नहीं कर सकता। लेकिन मैंने की थी, और मेरे लिए खुशी की बात है कि शोभना जी और उनकी टीम ने बड़े चाव से इस काम को किया। और देश को, जब मैं अभी प्रदर्शनी देखके आया, मैं सबसे आग्रह करूंगा कि इसको जरूर देखिए। इन फोटोग्राफर साथियों ने इस, पल को ऐसे पकड़ा है कि पल को अमर बना दिया है। दूसरी बात उन्होंने कही और वो भी जरा मैं शब्दों को जैसे मैं समझ रहा हूं, उन्होंने कहा कि आप आगे भी, एक तो ये कह सकती थी, कि आप आगे भी देश की सेवा करते रहिए, लेकिन हिंदुस्तान टाइम्स ये कहे, आप आगे भी ऐसे ही सेवा करते रहिए, मैं इसके लिए भी विशेष रूप से आभार व्यक्त करता हूं।

साथियों,

इस बार समिट की थीम है- Transforming Tomorrow. मैं समझता हूं जिस हिंदुस्तान अखबार का 101 साल का इतिहास है, जिस अखबार पर महात्मा गांधी जी, मदन मोहन मालवीय जी, घनश्यामदास बिड़ला जी, ऐसे अनगिनत महापुरूषों का आशीर्वाद रहा, वो अखबार जब Transforming Tomorrow की चर्चा करता है, तो देश को ये भरोसा मिलता है कि भारत में हो रहा परिवर्तन केवल संभावनाओं की बात नहीं है, बल्कि ये बदलते हुए जीवन, बदलती हुई सोच और बदलती हुई दिशा की सच्ची गाथा है।

साथियों,

आज हमारे संविधान के मुख्य शिल्पी, डॉक्टर बाबा साहेब आंबेडकर जी का महापरिनिर्वाण दिवस भी है। मैं सभी भारतीयों की तरफ से उन्हें श्रद्धांजलि अर्पित करता हूं।

Friends,

आज हम उस मुकाम पर खड़े हैं, जब 21वीं सदी का एक चौथाई हिस्सा बीत चुका है। इन 25 सालों में दुनिया ने कई उतार-चढ़ाव देखे हैं। फाइनेंशियल क्राइसिस देखी हैं, ग्लोबल पेंडेमिक देखी हैं, टेक्नोलॉजी से जुड़े डिसरप्शन्स देखे हैं, हमने बिखरती हुई दुनिया भी देखी है, Wars भी देख रहे हैं। ये सारी स्थितियां किसी न किसी रूप में दुनिया को चैलेंज कर रही हैं। आज दुनिया अनिश्चितताओं से भरी हुई है। लेकिन अनिश्चितताओं से भरे इस दौर में हमारा भारत एक अलग ही लीग में दिख रहा है, भारत आत्मविश्वास से भरा हुआ है। जब दुनिया में slowdown की बात होती है, तब भारत growth की कहानी लिखता है। जब दुनिया में trust का crisis दिखता है, तब भारत trust का pillar बन रहा है। जब दुनिया fragmentation की तरफ जा रही है, तब भारत bridge-builder बन रहा है।

साथियों,

अभी कुछ दिन पहले भारत में Quarter-2 के जीडीपी फिगर्स आए हैं। Eight परसेंट से ज्यादा की ग्रोथ रेट हमारी प्रगति की नई गति का प्रतिबिंब है।

साथियों,

ये एक सिर्फ नंबर नहीं है, ये strong macro-economic signal है। ये संदेश है कि भारत आज ग्लोबल इकोनॉमी का ग्रोथ ड्राइवर बन रहा है। और हमारे ये आंकड़े तब हैं, जब ग्लोबल ग्रोथ 3 प्रतिशत के आसपास है। G-7 की इकोनमीज औसतन डेढ़ परसेंट के आसपास हैं, 1.5 परसेंट। इन परिस्थितियों में भारत high growth और low inflation का मॉडल बना हुआ है। एक समय था, जब हमारे देश में खास करके इकोनॉमिस्ट high Inflation को लेकर चिंता जताते थे। आज वही Inflation Low होने की बात करते हैं।

साथियों,

भारत की ये उपलब्धियां सामान्य बात नहीं है। ये सिर्फ आंकड़ों की बात नहीं है, ये एक फंडामेंटल चेंज है, जो बीते दशक में भारत लेकर आया है। ये फंडामेंटल चेंज रज़ीलियन्स का है, ये चेंज समस्याओं के समाधान की प्रवृत्ति का है, ये चेंज आशंकाओं के बादलों को हटाकर, आकांक्षाओं के विस्तार का है, और इसी वजह से आज का भारत खुद भी ट्रांसफॉर्म हो रहा है, और आने वाले कल को भी ट्रांसफॉर्म कर रहा है।

साथियों,

आज जब हम यहां transforming tomorrow की चर्चा कर रहे हैं, हमें ये भी समझना होगा कि ट्रांसफॉर्मेशन का जो विश्वास पैदा हुआ है, उसका आधार वर्तमान में हो रहे कार्यों की, आज हो रहे कार्यों की एक मजबूत नींव है। आज के Reform और आज की Performance, हमारे कल के Transformation का रास्ता बना रहे हैं। मैं आपको एक उदाहरण दूंगा कि हम किस सोच के साथ काम कर रहे हैं।

साथियों,

आप भी जानते हैं कि भारत के सामर्थ्य का एक बड़ा हिस्सा एक लंबे समय तक untapped रहा है। जब देश के इस untapped potential को ज्यादा से ज्यादा अवसर मिलेंगे, जब वो पूरी ऊर्जा के साथ, बिना किसी रुकावट के देश के विकास में भागीदार बनेंगे, तो देश का कायाकल्प होना तय है। आप सोचिए, हमारा पूर्वी भारत, हमारा नॉर्थ ईस्ट, हमारे गांव, हमारे टीयर टू और टीय़र थ्री सिटीज, हमारे देश की नारीशक्ति, भारत की इनोवेटिव यूथ पावर, भारत की सामुद्रिक शक्ति, ब्लू इकोनॉमी, भारत का स्पेस सेक्टर, कितना कुछ है, जिसके फुल पोटेंशियल का इस्तेमाल पहले के दशकों में हो ही नहीं पाया। अब आज भारत इन Untapped पोटेंशियल को Tap करने के विजन के साथ आगे बढ़ रहा है। आज पूर्वी भारत में आधुनिक इंफ्रास्ट्रक्चर, कनेक्टिविटी और इंडस्ट्री पर अभूतपूर्व निवेश हो रहा है। आज हमारे गांव, हमारे छोटे शहर भी आधुनिक सुविधाओं से लैस हो रहे हैं। हमारे छोटे शहर, Startups और MSMEs के नए केंद्र बन रहे हैं। हमारे गाँवों में किसान FPO बनाकर सीधे market से जुड़ें, और कुछ तो FPO’s ग्लोबल मार्केट से जुड़ रहे हैं।

साथियों,

भारत की नारीशक्ति तो आज कमाल कर रही हैं। हमारी बेटियां आज हर फील्ड में छा रही हैं। ये ट्रांसफॉर्मेशन अब सिर्फ महिला सशक्तिकरण तक सीमित नहीं है, ये समाज की सोच और सामर्थ्य, दोनों को transform कर रहा है।

साथियों,

जब नए अवसर बनते हैं, जब रुकावटें हटती हैं, तो आसमान में उड़ने के लिए नए पंख भी लग जाते हैं। इसका एक उदाहरण भारत का स्पेस सेक्टर भी है। पहले स्पेस सेक्टर सरकारी नियंत्रण में ही था। लेकिन हमने स्पेस सेक्टर में रिफॉर्म किया, उसे प्राइवेट सेक्टर के लिए Open किया, और इसके नतीजे आज देश देख रहा है। अभी 10-11 दिन पहले मैंने हैदराबाद में Skyroot के Infinity Campus का उद्घाटन किया है। Skyroot भारत की प्राइवेट स्पेस कंपनी है। ये कंपनी हर महीने एक रॉकेट बनाने की क्षमता पर काम कर रही है। ये कंपनी, flight-ready विक्रम-वन बना रही है। सरकार ने प्लेटफॉर्म दिया, और भारत का नौजवान उस पर नया भविष्य बना रहा है, और यही तो असली ट्रांसफॉर्मेशन है।

साथियों,

भारत में आए एक और बदलाव की चर्चा मैं यहां करना ज़रूरी समझता हूं। एक समय था, जब भारत में रिफॉर्म्स, रिएक्शनरी होते थे। यानि बड़े निर्णयों के पीछे या तो कोई राजनीतिक स्वार्थ होता था या फिर किसी क्राइसिस को मैनेज करना होता था। लेकिन आज नेशनल गोल्स को देखते हुए रिफॉर्म्स होते हैं, टारगेट तय है। आप देखिए, देश के हर सेक्टर में कुछ ना कुछ बेहतर हो रहा है, हमारी गति Constant है, हमारी Direction Consistent है, और हमारा intent, Nation First का है। 2025 का तो ये पूरा साल ऐसे ही रिफॉर्म्स का साल रहा है। सबसे बड़ा रिफॉर्म नेक्स्ट जेनरेशन जीएसटी का था। और इन रिफॉर्म्स का असर क्या हुआ, वो सारे देश ने देखा है। इसी साल डायरेक्ट टैक्स सिस्टम में भी बहुत बड़ा रिफॉर्म हुआ है। 12 लाख रुपए तक की इनकम पर ज़ीरो टैक्स, ये एक ऐसा कदम रहा, जिसके बारे में एक दशक पहले तक सोचना भी असंभव था।

साथियों,

Reform के इसी सिलसिले को आगे बढ़ाते हुए, अभी तीन-चार दिन पहले ही Small Company की डेफिनीशन में बदलाव किया गया है। इससे हजारों कंपनियाँ अब आसान नियमों, तेज़ प्रक्रियाओं और बेहतर सुविधाओं के दायरे में आ गई हैं। हमने करीब 200 प्रोडक्ट कैटगरीज़ को mandatory क्वालिटी कंट्रोल ऑर्डर से बाहर भी कर दिया गया है।

साथियों,

आज के भारत की ये यात्रा, सिर्फ विकास की नहीं है। ये सोच में बदलाव की भी यात्रा है, ये मनोवैज्ञानिक पुनर्जागरण, साइकोलॉजिकल रेनसां की भी यात्रा है। आप भी जानते हैं, कोई भी देश बिना आत्मविश्वास के आगे नहीं बढ़ सकता। दुर्भाग्य से लंबी गुलामी ने भारत के इसी आत्मविश्वास को हिला दिया था। और इसकी वजह थी, गुलामी की मानसिकता। गुलामी की ये मानसिकता, विकसित भारत के लक्ष्य की प्राप्ति में एक बहुत बड़ी रुकावट है। और इसलिए, आज का भारत गुलामी की मानसिकता से मुक्ति पाने के लिए काम कर रहा है।

साथियों,

अंग्रेज़ों को अच्छी तरह से पता था कि भारत पर लंबे समय तक राज करना है, तो उन्हें भारतीयों से उनके आत्मविश्वास को छीनना होगा, भारतीयों में हीन भावना का संचार करना होगा। और उस दौर में अंग्रेजों ने यही किया भी। इसलिए, भारतीय पारिवारिक संरचना को दकियानूसी बताया गया, भारतीय पोशाक को Unprofessional करार दिया गया, भारतीय त्योहार-संस्कृति को Irrational कहा गया, योग-आयुर्वेद को Unscientific बता दिया गया, भारतीय अविष्कारों का उपहास उड़ाया गया और ये बातें कई-कई दशकों तक लगातार दोहराई गई, पीढ़ी दर पीढ़ी ये चलता गया, वही पढ़ा, वही पढ़ाया गया। और ऐसे ही भारतीयों का आत्मविश्वास चकनाचूर हो गया।

साथियों,

गुलामी की इस मानसिकता का कितना व्यापक असर हुआ है, मैं इसके कुछ उदाहरण आपको देना चाहता हूं। आज भारत, दुनिया की सबसे तेज़ी से ग्रो करने वाली मेजर इकॉनॉमी है, कोई भारत को ग्लोबल ग्रोथ इंजन बताता है, कोई, Global powerhouse कहता है, एक से बढ़कर एक बातें आज हो रही हैं।

लेकिन साथियों,

आज भारत की जो तेज़ ग्रोथ हो रही है, क्या कहीं पर आपने पढ़ा? क्या कहीं पर आपने सुना? इसको कोई, हिंदू रेट ऑफ ग्रोथ कहता है क्या? दुनिया की तेज इकॉनमी, तेज ग्रोथ, कोई कहता है क्या? हिंदू रेट ऑफ ग्रोथ कब कहा गया? जब भारत, दो-तीन परसेंट की ग्रोथ के लिए तरस गया था। आपको क्या लगता है, किसी देश की इकोनॉमिक ग्रोथ को उसमें रहने वाले लोगों की आस्था से जोड़ना, उनकी पहचान से जोड़ना, क्या ये अनायास ही हुआ होगा क्या? जी नहीं, ये गुलामी की मानसिकता का प्रतिबिंब था। एक पूरे समाज, एक पूरी परंपरा को, अन-प्रोडक्टिविटी का, गरीबी का पर्याय बना दिया गया। यानी ये सिद्ध करने का प्रयास किया गया कि, भारत की धीमी विकास दर का कारण, हमारी हिंदू सभ्यता और हिंदू संस्कृति है। और हद देखिए, आज जो तथाकथित बुद्धिजीवी हर चीज में, हर बात में सांप्रदायिकता खोजते रहते हैं, उनको हिंदू रेट ऑफ ग्रोथ में सांप्रदायिकता नज़र नहीं आई। ये टर्म, उनके दौर में किताबों का, रिसर्च पेपर्स का हिस्सा बना दिया गया।

साथियों,

गुलामी की मानसिकता ने भारत में मैन्युफेक्चरिंग इकोसिस्टम को कैसे तबाह कर दिया, और हम इसको कैसे रिवाइव कर रहे हैं, मैं इसके भी कुछ उदाहरण दूंगा। भारत गुलामी के कालखंड में भी अस्त्र-शस्त्र का एक बड़ा निर्माता था। हमारे यहां ऑर्डिनेंस फैक्ट्रीज़ का एक सशक्त नेटवर्क था। भारत से हथियार निर्यात होते थे। विश्व युद्धों में भी भारत में बने हथियारों का बोल-बाला था। लेकिन आज़ादी के बाद, हमारा डिफेंस मैन्युफेक्चरिंग इकोसिस्टम तबाह कर दिया गया। गुलामी की मानसिकता ऐसी हावी हुई कि सरकार में बैठे लोग भारत में बने हथियारों को कमजोर आंकने लगे, और इस मानसिकता ने भारत को दुनिया के सबसे बड़े डिफेंस importers के रूप में से एक बना दिया।

साथियों,

गुलामी की मानसिकता ने शिप बिल्डिंग इंडस्ट्री के साथ भी यही किया। भारत सदियों तक शिप बिल्डिंग का एक बड़ा सेंटर था। यहां तक कि 5-6 दशक पहले तक, यानी 50-60 साल पहले, भारत का फोर्टी परसेंट ट्रेड, भारतीय जहाजों पर होता था। लेकिन गुलामी की मानसिकता ने विदेशी जहाज़ों को प्राथमिकता देनी शुरु की। नतीजा सबके सामने है, जो देश कभी समुद्री ताकत था, वो अपने Ninety five परसेंट व्यापार के लिए विदेशी जहाज़ों पर निर्भर हो गया है। और इस वजह से आज भारत हर साल करीब 75 बिलियन डॉलर, यानी लगभग 6 लाख करोड़ रुपए विदेशी शिपिंग कंपनियों को दे रहा है।

साथियों,

शिप बिल्डिंग हो, डिफेंस मैन्यूफैक्चरिंग हो, आज हर सेक्टर में गुलामी की मानसिकता को पीछे छोड़कर नए गौरव को हासिल करने का प्रयास किया जा रहा है।

साथियों,

गुलामी की मानसिकता ने एक बहुत बड़ा नुकसान, भारत में गवर्नेंस की अप्रोच को भी किया है। लंबे समय तक सरकारी सिस्टम का अपने नागरिकों पर अविश्वास रहा। आपको याद होगा, पहले अपने ही डॉक्यूमेंट्स को किसी सरकारी अधिकारी से अटेस्ट कराना पड़ता था। जब तक वो ठप्पा नहीं मारता है, सब झूठ माना जाता था। आपका परिश्रम किया हुआ सर्टिफिकेट। हमने ये अविश्वास का भाव तोड़ा और सेल्फ एटेस्टेशन को ही पर्याप्त माना। मेरे देश का नागरिक कहता है कि भई ये मैं कह रहा हूं, मैं उस पर भरोसा करता हूं।

साथियों,

हमारे देश में ऐसे-ऐसे प्रावधान चल रहे थे, जहां ज़रा-जरा सी गलतियों को भी गंभीर अपराध माना जाता था। हम जन-विश्वास कानून लेकर आए, और ऐसे सैकड़ों प्रावधानों को डी-क्रिमिनलाइज किया है।

साथियों,

पहले बैंक से हजार रुपए का भी लोन लेना होता था, तो बैंक गारंटी मांगता था, क्योंकि अविश्वास बहुत अधिक था। हमने मुद्रा योजना से अविश्वास के इस कुचक्र को तोड़ा। इसके तहत अभी तक 37 lakh crore, 37 लाख करोड़ रुपए की गारंटी फ्री लोन हम दे चुके हैं देशवासियों को। इस पैसे से, उन परिवारों के नौजवानों को भी आंत्रप्रन्योर बनने का विश्वास मिला है। आज रेहड़ी-पटरी वालों को भी, ठेले वाले को भी बिना गारंटी बैंक से पैसा दिया जा रहा है।

साथियों,

हमारे देश में हमेशा से ये माना गया कि सरकार को अगर कुछ दे दिया, तो फिर वहां तो वन वे ट्रैफिक है, एक बार दिया तो दिया, फिर वापस नहीं आता है, गया, गया, यही सबका अनुभव है। लेकिन जब सरकार और जनता के बीच विश्वास मजबूत होता है, तो काम कैसे होता है? अगर कल अच्छी करनी है ना, तो मन आज अच्छा करना पड़ता है। अगर मन अच्छा है तो कल भी अच्छा होता है। और इसलिए हम एक और अभियान लेकर आए, आपको सुनकर के ताज्जुब होगा और अभी अखबारों में उसकी, अखबारों वालों की नजर नहीं गई है उस पर, मुझे पता नहीं जाएगी की नहीं जाएगी, आज के बाद हो सकता है चली जाए।

आपको ये जानकर हैरानी होगी कि आज देश के बैंकों में, हमारे ही देश के नागरिकों का 78 thousand crore रुपया, 78 हजार करोड़ रुपए Unclaimed पड़ा है बैंको में, पता नहीं कौन है, किसका है, कहां है। इस पैसे को कोई पूछने वाला नहीं है। इसी तरह इन्श्योरेंश कंपनियों के पास करीब 14 हजार करोड़ रुपए पड़े हैं। म्यूचुअल फंड कंपनियों के पास करीब 3 हजार करोड़ रुपए पड़े हैं। 9 हजार करोड़ रुपए डिविडेंड का पड़ा है। और ये सब Unclaimed पड़ा हुआ है, कोई मालिक नहीं उसका। ये पैसा, गरीब और मध्यम वर्गीय परिवारों का है, और इसलिए, जिसके हैं वो तो भूल चुका है। हमारी सरकार अब उनको ढूंढ रही है देशभर में, अरे भई बताओ, तुम्हारा तो पैसा नहीं था, तुम्हारे मां बाप का तो नहीं था, कोई छोड़कर तो नहीं चला गया, हम जा रहे हैं। हमारी सरकार उसके हकदार तक पहुंचने में जुटी है। और इसके लिए सरकार ने स्पेशल कैंप लगाना शुरू किया है, लोगों को समझा रहे हैं, कि भई देखिए कोई है तो अता पता। आपके पैसे कहीं हैं क्या, गए हैं क्या? अब तक करीब 500 districts में हम ऐसे कैंप लगाकर हजारों करोड़ रुपए असली हकदारों को दे चुके हैं जी। पैसे पड़े थे, कोई पूछने वाला नहीं था, लेकिन ये मोदी है, ढूंढ रहा है, अरे यार तेरा है ले जा।

साथियों,

ये सिर्फ asset की वापसी का मामला नहीं है, ये विश्वास का मामला है। ये जनता के विश्वास को निरंतर हासिल करने की प्रतिबद्धता है और जनता का विश्वास, यही हमारी सबसे बड़ी पूंजी है। अगर गुलामी की मानसिकता होती तो सरकारी मानसी साहबी होता और ऐसे अभियान कभी नहीं चलते हैं।

साथियों,

हमें अपने देश को पूरी तरह से, हर क्षेत्र में गुलामी की मानसिकता से पूर्ण रूप से मुक्त करना है। अभी कुछ दिन पहले मैंने देश से एक अपील की है। मैं आने वाले 10 साल का एक टाइम-फ्रेम लेकर, देशवासियों को मेरे साथ, मेरी बातों को ये कुछ करने के लिए प्यार से आग्रह कर रहा हूं, हाथ जोड़कर विनती कर रहा हूं। 140 करोड़ देशवसियों की मदद के बिना ये मैं कर नहीं पाऊंगा, और इसलिए मैं देशवासियों से बार-बार हाथ जोड़कर कह रहा हूं, और 10 साल के इस टाइम फ्रैम में मैं क्या मांग रहा हूं? मैकाले की जिस नीति ने भारत में मानसिक गुलामी के बीज बोए थे, उसको 2035 में 200 साल पूरे हो रहे हैं, Two hundred year हो रहे हैं। यानी 10 साल बाकी हैं। और इसलिए, इन्हीं दस वर्षों में हम सभी को मिलकर के, अपने देश को गुलामी की मानसिकता से मुक्त करके रहना चाहिए।

साथियों,

मैं अक्सर कहता हूं, हम लीक पकड़कर चलने वाले लोग नहीं हैं। बेहतर कल के लिए, हमें अपनी लकीर बड़ी करनी ही होगी। हमें देश की भविष्य की आवश्यकताओं को समझते हुए, वर्तमान में उसके हल तलाशने होंगे। आजकल आप देखते हैं कि मैं मेक इन इंडिया और आत्मनिर्भर भारत अभियान पर लगातार चर्चा करता हूं। शोभना जी ने भी अपने भाषण में उसका उल्लेख किया। अगर ऐसे अभियान 4-5 दशक पहले शुरू हो गए होते, तो आज भारत की तस्वीर कुछ और होती। लेकिन तब जो सरकारें थीं उनकी प्राथमिकताएं कुछ और थीं। आपको वो सेमीकंडक्टर वाला किस्सा भी पता ही है, करीब 50-60 साल पहले, 5-6 दशक पहले एक कंपनी, भारत में सेमीकंडक्टर प्लांट लगाने के लिए आई थी, लेकिन यहां उसको तवज्जो नहीं दी गई, और देश सेमीकंडक्टर मैन्युफैक्चरिंग में इतना पिछड़ गया।

साथियों,

यही हाल एनर्जी सेक्टर की भी है। आज भारत हर साल करीब-करीब 125 लाख करोड़ रुपए के पेट्रोल-डीजल-गैस का इंपोर्ट करता है, 125 लाख करोड़ रुपया। हमारे देश में सूर्य भगवान की इतनी बड़ी कृपा है, लेकिन फिर भी 2014 तक भारत में सोलर एनर्जी जनरेशन कपैसिटी सिर्फ 3 गीगावॉट थी, 3 गीगावॉट थी। 2014 तक की मैं बात कर रहा हूं, जब तक की आपने मुझे यहां लाकर के बिठाया नहीं। 3 गीगावॉट, पिछले 10 वर्षों में अब ये बढ़कर 130 गीगावॉट के आसपास पहुंच चुकी है। और इसमें भी भारत ने twenty two गीगावॉट कैपेसिटी, सिर्फ और सिर्फ rooftop solar से ही जोड़ी है। 22 गीगावाट एनर्जी रूफटॉप सोलर से।

साथियों,

पीएम सूर्य घर मुफ्त बिजली योजना ने, एनर्जी सिक्योरिटी के इस अभियान में देश के लोगों को सीधी भागीदारी करने का मौका दे दिया है। मैं काशी का सांसद हूं, प्रधानमंत्री के नाते जो काम है, लेकिन सांसद के नाते भी कुछ काम करने होते हैं। मैं जरा काशी के सांसद के नाते आपको कुछ बताना चाहता हूं। और आपके हिंदी अखबार की तो ताकत है, तो उसको तो जरूर काम आएगा। काशी में 26 हजार से ज्यादा घरों में पीएम सूर्य घर मुफ्त बिजली योजना के सोलर प्लांट लगे हैं। इससे हर रोज, डेली तीन लाख यूनिट से अधिक बिजली पैदा हो रही है, और लोगों के करीब पांच करोड़ रुपए हर महीने बच रहे हैं। यानी साल भर के साठ करोड़ रुपये।

साथियों,

इतनी सोलर पावर बनने से, हर साल करीब नब्बे हज़ार, ninety thousand मीट्रिक टन कार्बन एमिशन कम हो रहा है। इतने कार्बन एमिशन को खपाने के लिए, हमें चालीस लाख से ज्यादा पेड़ लगाने पड़ते। और मैं फिर कहूंगा, ये जो मैंने आंकडे दिए हैं ना, ये सिर्फ काशी के हैं, बनारस के हैं, मैं देश की बात नहीं बता रहा हूं आपको। आप कल्पना कर सकते हैं कि, पीएम सूर्य घर मुफ्त बिजली योजना, ये देश को कितना बड़ा फायदा हो रहा है। आज की एक योजना, भविष्य को Transform करने की कितनी ताकत रखती है, ये उसका Example है।

वैसे साथियों,

अभी आपने मोबाइल मैन्यूफैक्चरिंग के भी आंकड़े देखे होंगे। 2014 से पहले तक हम अपनी ज़रूरत के 75 परसेंट मोबाइल फोन इंपोर्ट करते थे, 75 परसेंट। और अब, भारत का मोबाइल फोन इंपोर्ट लगभग ज़ीरो हो गया है। अब हम बहुत बड़े मोबाइल फोन एक्सपोर्टर बन रहे हैं। 2014 के बाद हमने एक reform किया, देश ने Perform किया और उसके Transformative नतीजे आज दुनिया देख रही है।

साथियों,

Transforming tomorrow की ये यात्रा, ऐसी ही अनेक योजनाओं, अनेक नीतियों, अनेक निर्णयों, जनआकांक्षाओं और जनभागीदारी की यात्रा है। ये निरंतरता की यात्रा है। ये सिर्फ एक समिट की चर्चा तक सीमित नहीं है, भारत के लिए तो ये राष्ट्रीय संकल्प है। इस संकल्प में सबका साथ जरूरी है, सबका प्रयास जरूरी है। सामूहिक प्रयास हमें परिवर्तन की इस ऊंचाई को छूने के लिए अवसर देंगे ही देंगे।

साथियों,

एक बार फिर, मैं शोभना जी का, हिन्दुस्तान टाइम्स का बहुत आभारी हूं, कि आपने मुझे अवसर दिया आपके बीच आने का और जो बातें कभी-कभी बताई उसको आपने किया और मैं तो मानता हूं शायद देश के फोटोग्राफरों के लिए एक नई ताकत बनेगा ये। इसी प्रकार से अनेक नए कार्यक्रम भी आप आगे के लिए सोच सकते हैं। मेरी मदद लगे तो जरूर मुझे बताना, आईडिया देने का मैं कोई रॉयल्टी नहीं लेता हूं। मुफ्त का कारोबार है और मारवाड़ी परिवार है, तो मौका छोड़ेगा ही नहीं। बहुत-बहुत धन्यवाद आप सबका, नमस्कार।