ಪ್ರಧಾನಮಂತ್ರಿ ನೆತನ್ಯಾಹು ಅವರಿಂದ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಮಂತ್ರಿಗಳಿಗೆ ಸಂಕ್ಷಿಪ್ತ ವಿವರ
ಯಾವುದೇ ವಿಧದ ಮತ್ತು ರೂಪದ ಭಯೋತ್ಪಾದನೆಗೆ ಅವಕಾಶವಿಲ್ಲ – ಪ್ರಧಾನಮಂತ್ರಿ
ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆ ಹಾಗೂ ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟುವ ತುರ್ತು ಅಗತ್ಯಕ್ಕೆ ಪ್ರಧಾನಮಂತ್ರಿ ಒತ್ತು
ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರುಸ್ಥಾಪನೆಗೆ ಭಾರತದ ಬೆಂಬಲ – ಪ್ರಧಾನಮಂತ್ರಿ ಮೋದಿ
ಭಾರತ – ಇಸ್ರೇಲ್ ತಾಂತ್ರಿಕ ಪಾಲುದಾರಿಕೆ ಬಲವರ್ಧನೆಗೆ ಕುರಿತು ಉಭಯ ನಾಯಕರ ಚರ್ಚೆ
ರೋಶ್ ಹಶಾನಾ ಅಂಗವಾಗಿ ಪ್ರಧಾನಿ ನೆತನ್ಯಾಹು ಮತ್ತು ವಿಶ್ವಾದ್ಯಂತ ಇರುವ ಯಹೂದಿಗಳಿಗೆ ಪ್ರಧಾನಮಂತ್ರಿ ಶುಭಾಶಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. 
ಪ್ರಧಾನಮಂತ್ರಿ ನೆತನ್ಯಾಹು ಅವರು ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. 

ಯಾವುದೇ ವಿಧದ ಮತ್ತು ಯಾವುದೇ ರೂಪದಲ್ಲಿರುವ ಭಯೋತ್ಪಾದನೆಗೆ ಅವಕಾಶವಿಲ್ಲ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಪ್ರಾದೇಶಿಕ ಉಲ್ಬಣ ನಿಯಂತ್ರಣ ಮತ್ತು ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಗೆ ಕಾರ್ಯನಿರ್ವಹಿಸುವ ತುರ್ತು ಅಗತ್ಯದ ಬಗ್ಗೆ ಒತ್ತಿ ಹೇಳಿದ್ದಾರೆ. 

ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರುಸ್ಥಾಪನೆಗೆ ಬೆಂಬಲ ನೀಡಲು ಭಾರತ ಸಿದ್ಧವಿದೆ ಎಂಬ ಸಂದೇಶವನ್ನು ಪ್ರಧಾನಮಂತ್ರಿಗಳು ರವಾನಿಸಿದ್ದಾರೆ. 

ಭಾರತ – ಇಸ್ರೇಲ್ ತಾಂತ್ರಿಕ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವ ವಿವಿಧ ದ್ವಿಪಕ್ಷೀಯ ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. 

ರೋಶ್ ಹಶನಾ ಪ್ರಯುಕ್ತ ಪ್ರಧಾನಮಂತ್ರಿ ನೆತನ್ಯಾಹು ಮತ್ತು ಪ್ರಪಂಚದಾದ್ಯಂತ ಇರುವ ಯಹೂದಿಗಳಿಗೆ ಪ್ರಧಾನಮಂತ್ರಿ ಶುಭ ಕೋರಿದ್ದಾರೆ.
ಉಭಯ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India unveils 20 major maritime reforms to cut logistics costs and boost global trade presence

Media Coverage

India unveils 20 major maritime reforms to cut logistics costs and boost global trade presence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಎಪ್ರಿಲ್ 2026
April 09, 2026

Self-Reliant India Rising: Record Investments, 3rd in Renewables & Affordable Skies Under PM Modi