ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ
April 29th, 11:01 am
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
April 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 09th, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ವಾರಣಾಸಿಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ಅವರು 3,880 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.ಮಧ್ಯಪ್ರದೇಶದ ಝಬುವಾದಲ್ಲಿ ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 11th, 07:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬುವಾದಲ್ಲಿ ಸುಮಾರು 7300 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು. ಇಂದಿನ ಈ ಅಭಿವೃದ್ಧಿ ಯೋಜನೆಗಳು ಈ ಪ್ರದೇಶದಲ್ಲಿರುವ ಗಮನಾರ್ಹ ಸಂಖ್ಯೆಯ ಬುಡಕಟ್ಟು ಜನತೆಗೆ ಪ್ರಯೋಜನ ಒದಗಿಸುತ್ತವೆ, ನೀರು ಸರಬರಾಜು ಮತ್ತು ಕುಡಿಯುವ ನೀರು ಪೂರೈಕೆಯನ್ನು ಬಲಪಡಿಸುತ್ತವೆ. ಜೊತೆಗೆ, ಮಧ್ಯಪ್ರದೇಶದಲ್ಲಿ ರಸ್ತೆ, ರೈಲು, ವಿದ್ಯುತ್ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಉತ್ತೇಜನ ನೀಡುತ್ತವೆ. ಪ್ರಧಾನಮಂತ್ರಿಯವರು ʻವಿಶೇಷವಾಗಿ ಹಿಂದುಳಿದ ಬುಡಕಟ್ಟು ಜನಾಂಗʼದ ಸುಮಾರು 2 ಲಕ್ಷ ಮಹಿಳಾ ಫಲಾನುಭವಿಗಳಿಗೆ ʻಆಧಾರ್ ಅನುದಾನʼದ ಮಾಸಿಕ ಕಂತನ್ನು ವಿತರಿಸಿದರು, ʻಸ್ವಾಮಿತ್ವʼ ಯೋಜನೆಯ ಫಲಾನುಭವಿಗಳಿಗೆ 1.75 ಲಕ್ಷ ಹಕ್ಕುಪತ್ರಗಳನ್ನು ವಿತರಿಸಿದರು ಹಾಗೂ ʻಪ್ರಧಾನ ಮಂತ್ರಿ ಆದರ್ಶ ಗ್ರಾಮʼ ಯೋಜನೆಯಡಿ 559 ಗ್ರಾಮಗಳಿಗೆ 55.9 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದರು.2 ಕೋಟಿ ಲಕ್ಷಾಧಿಪತಿ ಮಹಿಳೆಯರನ್ನುಸೃಷ್ಟಿಸುವುದು ನಮ್ಮ ಗುರಿಯಾಗಿದೆ; ಡ್ರೋನ್ ಹಾರಾಟಕ್ಕೆ (ಡ್ರೋನ್ ಕಿ ಉಡಾನ್) ಮಹಿಳಾ ಸ್ವಸಹಾಯ ಗುಂಪುಗಳು ಶಕ್ತಿ ತುಂಬುತ್ತಿವೆ: ಪ್ರಧಾನಮಂತ್ರಿ
August 15th, 01:33 pm
“ಗ್ರಾಮಗಳಲ್ಲಿ ʼ2 ಕೋಟಿ ಲಕ್ಷಾಧಿಪತಿ ಮಹಿಳೆಯರನ್ನು(ಲಖ್ ಪತಿ ದೀದಿಯರನ್ನು)ʼ ಸೃಷ್ಟಿಸುವ ಗುರಿಯೊಂದಿಗೆ ಮಹಿಳಾ ಸ್ವಸಹಾಯ ಗುಂಪುಗಳೊಂದಿಗೆ (ಎಸ್.ಎಸ್.ಜಿ) ಕೇಂದ್ರ ಸರ್ಕಾರವು ಕೆಲಸ ಮಾಡುತ್ತಿದೆ” ಎಂದು 77 ನೇ ಸ್ವಾತಂತ್ರ್ಯ ದಿನದದಂದು ದೆಹಲಿಯ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಗುಜರಾತ್ನ ಭಾವನಗರದಲ್ಲಿ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ - 'ಪಾಪಾ ನಿ ಪರಿ' ಲಗ್ನೋತ್ಸವ 2022
November 06th, 05:32 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಭಾವನಗರದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು - 'ಪಾಪಾ ನಿ ಪರಿ' ಲಗ್ನೋತ್ಸವ 2022. ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಮಾರಂಭದಲ್ಲಿ ಮದುವೆಯಾದ ಎಲ್ಲಾ 552 ಹೆಣ್ಣು ಮಕ್ಕಳಿಗೆ ಆಶೀರ್ವಾದ ನೀಡುವ ಮೂಲಕ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಇದಲ್ಲದೆ, ಪ್ರಧಾನಿ ಮೋದಿ, ಒಬ್ಬರ ಜೀವನದಲ್ಲಿ ಒಬ್ಬ ತಂದೆಯನ್ನು ಹೊಂದುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್ನಲ್ಲಿರುವ ಬನಾಸ್ ಡೈರಿ ಸಂಕುಲ್ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಜಲಜೀವನ್ ಮಿಷನ್ ದೇಶದ ಅಭಿವೃದ್ಧಿಗೆ ಹೊಸ ವೇಗ ನೀಡುತ್ತಿದೆ: ಪ್ರಧಾನಮಂತ್ರಿ
April 09th, 09:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲ ಜೀವನ್ ಮಿಷನ್ ಇಂದು ದೇಶದ ಅಭಿವೃದ್ಧಿಗೆ ಹೊಸ ವೇಗವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಕಳೆದ 3 ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಕೋಟ್ಯಂತರ ಮನೆಗಳಿಗೆ ನೀರು ತಲುಪಿರುವುದು ಸಾರ್ವಜನಿಕರ ಆಶಯ ಮತ್ತು ಸಾರ್ವಜನಿಕ ಸಹಭಾಗಿತ್ವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಅವರು ಹೇಳಿದರು.Today our focus is not only on health, but equally on wellness: PM Modi
February 26th, 02:08 pm
PM Narendra Modi inaugurated the post Union Budget webinar of Ministry of Health and Family Welfare. The Prime Minister said, The Budget builds upon the efforts to reform and transform the healthcare sector that have been undertaken during the last seven years. We have adopted a holistic approach in our healthcare system. Today our focus is not only on health, but equally on wellness.”ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬಜೆಟ್ ನಂತರದ ವೆಬಿನಾರ್ ಉದ್ಘಾಟಿಸಿದ ಪ್ರಧಾನಿ
February 26th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಉದ್ದೇಶಿಸಿ ಮಾತನಾಡಿದ ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇದು ಐದನೇ ವೆಬಿನಾರ್ ಆಗಿದೆ. ಕೇಂದ್ರ ಸಚಿವರು, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಆರೋಗ್ಯ ವೃತ್ತಿಪರರು ಮತ್ತು ಅರೆ ವೈದ್ಯಕೀಯ, ನರ್ಸಿಂಗ್, ಆರೋಗ್ಯ ನಿರ್ವಹಣೆ, ತಂತ್ರಜ್ಞಾನ ಮತ್ತು ಸಂಶೋಧನೆಯ ವೃತ್ತಿಪರರು ಈ ಸಂದರ್ಭದಲ್ಲಿ ಹಾಜರಿದ್ದರು.ಪಂಜಾಬ್ನಲ್ಲಿ ಡಬಲ್ ಇಂಜಿನ್ ಸರ್ಕಾರವು ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ, ಮಾಫಿಯಾಗಳನ್ನು ಕೊನೆಗೊಳಿಸುತ್ತದೆ: ಪ್ರಧಾನಿ ಮೋದಿ
February 17th, 11:59 am
ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರಿಸಿದ ಪ್ರಧಾನಿ ಮೋದಿ ಅವರು ಪಂಜಾಬ್ನ ಫಜಿಲ್ಕಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಪಂಜಾಬ್ಗೆ ಪಂಜಾಬ್ನ ಅಭಿವೃದ್ಧಿಯಿಂದ ದೇಶಭಕ್ತಿಯಿಂದ ಸ್ಫೂರ್ತಿ ಪಡೆಯುವ ಸರ್ಕಾರದ ಅಗತ್ಯವಿದೆ. ಪಂಜಾಬ್ನ ಭದ್ರತೆ ಮತ್ತು ಅಭಿವೃದ್ಧಿಯ ಸಂಕಲ್ಪದೊಂದಿಗೆ ಬಿಜೆಪಿ ಸಮರ್ಪಣೆಯೊಂದಿಗೆ ನಿಮ್ಮ ಮುಂದೆ ಬಂದಿದೆ.ಪಂಜಾಬ್ನ ಫಾಜಿಲ್ಕಾದಲ್ಲಿ ವಿಶಾಲ ಜನಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
February 17th, 11:54 am
ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರಿಸಿದ ಪ್ರಧಾನಿ ಮೋದಿ ಅವರು ಪಂಜಾಬ್ನ ಫಜಿಲ್ಕಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಪಂಜಾಬ್ಗೆ ಪಂಜಾಬ್ನ ಅಭಿವೃದ್ಧಿಯಿಂದ ದೇಶಭಕ್ತಿಯಿಂದ ಸ್ಫೂರ್ತಿ ಪಡೆಯುವ ಸರ್ಕಾರದ ಅಗತ್ಯವಿದೆ. ಪಂಜಾಬ್ನ ಭದ್ರತೆ ಮತ್ತು ಅಭಿವೃದ್ಧಿಯ ಸಂಕಲ್ಪದೊಂದಿಗೆ ಬಿಜೆಪಿ ಸಮರ್ಪಣೆಯೊಂದಿಗೆ ನಿಮ್ಮ ಮುಂದೆ ಬಂದಿದೆ.2022-23ರ ಕೇಂದ್ರ ಬಜೆಟ್ ಮೇಲೆ ಪ್ರಧಾನ ಮಂತ್ರಿ ಅವರ ಭಾಷಣ
February 01st, 02:23 pm
ಈ ಬಜೆಟ್, 100 ವರ್ಷಗಳಲ್ಲೇ ಭಯಾನಕವಾದಂತಹ ವಿಕೋಪದ ನಡುವೆಯೂ ಅಭಿವೃದ್ಧಿಯ ಬಗ್ಗೆ ಹೊಸ ವಿಶ್ವಾಸವನ್ನು ಮೂಡಿಸಿದೆ. ಆರ್ಥಿಕತೆಯನ್ನು ಬಲಗೊಳಿಸುವುದರ ಜೊತೆಗೆ ಈ ಬಜೆಟ್ ಜನಸಾಮಾನ್ಯರಿಗೆ ಅನೇಕ ಹೊಸ ಅವಕಾಶಗಳನ್ನು ರೂಪಿಸಲಿದೆ. ಮೂಲಸೌಕರ್ಯಗಳು, ಹೂಡಿಕೆ, ಬೆಳವಣಿಗೆ ಮತ್ತು ಉದ್ಯೋಗಗಳಿಗೆ ಪೂರ್ಣ ಹೊಸ ಸಾಧ್ಯತೆಗಳನ್ನು ಈ ಬಜೆಟ್ ಒಳಗೊಂಡಿದೆ. ಹೊಸ ವಲಯವನ್ನು ತೆರೆಯಲಾಗಿದೆ ಮತ್ತು ಅದು ಹಸಿರು ಉದ್ಯೋಗಗಳದ್ದು. ಈ ಬಜೆಟ್ ತಕ್ಷಣದ ಆವಶ್ಯಕತೆಗಳಿಗೆ ಗಮನ ಹರಿಸಿದೆ ಮತ್ತು ದೇಶದ ಯುವಜನತೆಯ ಭವ್ಯ ಭವಿತವ್ಯವನ್ನು ಖಾತ್ರಿಗೊಳಿಸಿದೆ.‘ಜನಸ್ನೇಹಿ ಮತ್ತು ಪ್ರಗತಿಪರ ಬಜೆಟ್‘ಗಾಗಿ ಹಣಕಾಸು ಸಚಿವರು ಮತ್ತು ಅವರ ತಂಡವನ್ನು ಅಭಿನಂದಿಸಿದ ಪ್ರಧಾನಿ
February 01st, 02:22 pm
ಶತಮಾನಕ್ಕೊಮ್ಮೆ ಸಂಭವಿಸುವ ವಿಪತ್ತಿನ ನಡುವೆಯೇ ಈ ವರ್ಷದ ಬಜೆಟ್ ಅಭಿವೃದ್ಧಿಯ ಹೊಸ ವಿಶ್ವಾಸವನ್ನು ಮೂಡಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಈ ಬಜೆಟ್ ಆರ್ಥಿಕತೆಗೆ ಶಕ್ತಿ ತುಂಬುವ ಜೊತೆಗೆ ಸಾಮಾನ್ಯ ಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ”ಎಂದು ಅವರು ಹೇಳಿದರು.ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ
June 18th, 09:45 am
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್ ಕೋರ್ಸ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ
June 18th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.ಕೋವಿಡ್ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ
May 15th, 02:42 pm
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೋವಿಡ್, ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಆರೈಕೆ ಮೂಲಸೌಕರ್ಯ, ಲಸಿಕೆ ಮಾರ್ಗಸೂಚಿಯ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳು ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. ಪ್ರಧಾನಮಂತ್ರಿಯವರು ಸ್ಥಳೀಯ ಕಂಟೈನ್ಮೆಂಟ್ ಕಾರ್ಯತಂತ್ರಗಳು ಅದರಲ್ಲೂ ಜಿಲ್ಲೆಗಳಲ್ಲಿ ಟಿಪಿಆರ್ ಹೆಚ್ಚಿರುವ ರಾಜ್ಯಗಳಲ್ಲಿ ಈ ಹೊತ್ತಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು.