ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 09th, 11:15 am

ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.

Third India-Australia Annual Summit Joint Statement

July 09th, 10:58 am

At the invitation of Australian PM Anthony Albanese, PM Modi visited Australia from 8-10 July 2026 for the Third Australia-India Annual Summit in Melbourne. The two leaders reaffirmed their shared commitment to further consolidate and expand the India-Australia Comprehensive Strategic Partnership (CSP) and explore new areas of cooperation for the peace, prosperity and stability of the shared region.

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 07th, 11:21 am

2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.

ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

June 18th, 06:15 pm

ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್‌ನಿಂದ ಇಂದು ಪ್ಯಾರಿಸ್‌ನ ವಿವಾ ಟೆಕ್‌ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.

ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 18th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್‌ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.

ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಖಾಸಗಿ ಪಾಲುದಾರರನ್ನು ಒಳಗೊಂಡ ದೀರ್ಘಾವಧಿಯ ಪರವಾನಗಿಯ ಮೂಲಕ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆ ಮತ್ತು ಆಧುನೀಕರಣಕ್ಕೆ ಸಂಪುಟ ಅನುಮೋದನೆ

May 13th, 03:41 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ (ಸಿಒಡಿ) 30 ವರ್ಷಗಳವರೆಗೆ ರಿಯಾಯಿತಿ ಪಡೆಯುವ ಸಂಸ್ಥೆಯಾದ ಜಿಎಂಆರ್ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತಕ್ಕೆ (ಜಿ ಎನ್‌ ಐ ಎ ಎಲ್) ನಾಗ್ಪುರ ವಿಮಾನ ನಿಲ್ದಾಣದ ಪರವಾನಗಿ ನೀಡಲು ಎಂಐಎಲ್ ಗೆ ಅನುವು ಮಾಡಿಕೊಡುತ್ತದೆ.

ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಭಾರತ-ಕೊರಿಯಾ ಗಣರಾಜ್ಯ ಇಂಧನ ಸಂಪನ್ಮೂಲ ಭದ್ರತೆ ಕುರಿತು ಜಂಟಿ ಹೇಳಿಕೆ

April 20th, 10:56 pm

1. ಭಾರತ ಮತ್ತು ಕೊರಿಯಾ ಗಣರಾಜ್ಯಗಳು ಮುಕ್ತ, ಎಲ್ಲರನ್ನೂ ಒಳಗೊಂಡ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ಸಮಾನ ದೃಷ್ಟಿಕೋನವನ್ನು ಹೊಂದಿರುವ ವಿಶೇಷ ಕಾರ್ಯತಂತ್ರದ ಪಾಲುದಾರರು.

ಕೊರಿಯಾ ಗಣರಾಜ್ಯದ ರಾಷ್ಟ್ರಾಧ್ಯಕ್ಷರ ಭಾರತ ಭೇಟಿ: ಫಲಿತಾಂಶಗಳ ಪಟ್ಟಿ

April 20th, 03:57 pm

ಭಾರತ-ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರದ ದೃಷ್ಟಿಕೋನ

ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

March 13th, 03:00 pm

ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 13th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್‌ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.

ಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

March 02nd, 02:30 pm

ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ

March 02nd, 11:40 am

ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.

ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 26th, 03:30 pm

ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.

AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ಲ್ಯಾಂಡ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರೊಂದಿಗೆ ಪ್ರಧಾನಮಂತ್ರಿ ಅವರ ಭೇಟಿ

February 18th, 05:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 18, 2026 ರಂದು ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ಲ್ಯಾಂಡ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರನ್ನು ಭೇಟಿ ಮಾಡಿದರು.

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

February 13th, 06:55 pm

ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

February 13th, 06:30 pm

ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ

February 08th, 11:05 am

ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದ

ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

February 08th, 08:35 am

ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.