Prime Minister pays tributes to former PM Chaudhary Charan Singh ji on his birth anniversary

December 23rd, 09:39 am

On the birth anniversary of Former PM Bharat Ratna Chaudhary Charan Singh, PM Modi lauded his dedication to the welfare of the deprived sections of society and farmers. The PM also remarked that the country can never forget his contributions to nation-building.

Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup

December 21st, 04:25 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam

December 21st, 12:00 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

India - Oman Joint Statement during the visit of Prime Minister of India, Shri Narendra Modi to Oman

December 18th, 05:28 pm

Prime Minister Narendra Modi visited Oman from 17–18 December 2025 at the invitation of Sultan Haitham bin Tarik, marking 70 years of diplomatic ties. The visit strengthened the India Oman strategic partnership with the signing of CEPA, key MoUs and adoption of a Joint Vision on Maritime Cooperation.

Prime Minister meets with His Majesty Sultan of Oman

December 18th, 05:22 pm

Prime Minister Narendra Modi held a bilateral meeting with His Majesty Sultan Haitham bin Tarik in Muscat. They welcomed signing of the Comprehensive Economic Partnership Agreement as a landmark development in bilateral ties.

List of Outcomes: Visit of Prime Minister to Oman

December 18th, 04:57 pm

India and Oman inked key agreements during the visit of Prime Minister Narendra Modi to deepen economic, cultural, and strategic ties. These include the Comprehensive Economic Partnership Agreement, MoUs in maritime heritage, agriculture, and higher education, cooperation on millet and agri-food innovation and a Joint Vision on maritime cooperation.

ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ

December 17th, 12:02 am

ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ

December 16th, 03:56 pm

ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.

ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

December 16th, 12:24 pm

ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.

ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ

December 16th, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.

2026ರ ಹಂಗಾಮಿನಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

December 12th, 04:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2026ರ ಹಂಗಾಮಿನಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ತೆಂಗು ಬೆಳೆಗಾರರಿಗೆ ಲಾಭದಾಯಕ ಬೆಲೆ ಒದಗಿಸುವ ಸಲುವಾಗಿ, ಸರ್ಕಾರವು 2018-19ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಆದೇಶಿತ (ಮ್ಯಾಂಡೇಟೆಡ್) ಬೆಳೆಗಳ ಎಂ.ಎಸ್.ಪಿ.ಯನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಹೆಚ್ಚಿನ ಮಟ್ಟದಲ್ಲಿ ನಿಗದಿಪಡಿಸುವುದಾಗಿ ಘೋಷಿಸಿತ್ತು. 2026ರ ಹಂಗಾಮಿನಲ್ಲಿ ನ್ಯಾಯಸಮ್ಮತ ಸರಾಸರಿ ಗುಣಮಟ್ಟದ ಸೀಳು ಕೊಬ್ಬರಿ ಪ್ರತಿ ಕ್ವಿಂಟಾಲ್‌ಗೆ 12,027 ರೂ. ಎಂ.ಎಸ್.ಪಿ. ಮತ್ತು ಉಂಡೆ (ಬಾಲ್) ಕೊಬ್ಬರಿಗೆ 12,500 ರೂ. ಎಂ.ಎಸ್.ಪಿ. ನಿಗದಿಪಡಿಸಲಾಗಿದೆ.

ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್‌ಗೆ ಪ್ರಧಾನಮಂತ್ರಿ ಭೇಟಿ

December 11th, 08:43 pm

ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ಡಿಸೆಂಬರ್ 15ರಿಂದ 16ರ ವರೆಗೆ ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಅವರು ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ, ಪ್ರಾದೇಶಿಕ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು ಗುರುತಿಸುವ ಈ ಭೇಟಿಯು, ಭಾರತ-ಜೋರ್ಡಾನ್ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಗಾಗಿ ಸಹಯೋಗದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಪ್ರಾದೇಶಿಕ ಶಾಂತಿ, ಸಮೃದ್ಧಿ, ಭದ್ರತೆ ಮತ್ತು ಸ್ಥಿರತೆ ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಅವಕಾಶ ಒದಗಿಸುತ್ತದೆ.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 27th, 11:01 am

ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ

November 27th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

November 22nd, 09:57 pm

ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.

ಜೋಹಾನ್ಸ್‌ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

November 22nd, 09:35 pm

ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.