Cabinet approves Ahmedabad Metro Rail project Phase 2A (Koteshwar Road to Airport corridor)

June 10th, 01:59 pm

The Union Cabinet has approved Phase 2A of the Ahmedabad Metro Rail Project, a 6.032 Km with 05 stations connecting key urban areas to Ahmedabad Airport. The ₹2,169 crore project will expand the Ahmedabad-Gandhinagar metro network to 77.63 km, improve connectivity, reduce traffic congestion and emissions, boost economic activity, and generate employment during both construction and operations.

ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

June 04th, 06:41 pm

ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.

ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

June 04th, 06:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.

ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯನ್ನು ಒಳಗೊಂಡ ಒಂದು ಹೊಸ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 134 ಕಿಲೋಮೀಟರ್ ಗಳಷ್ಟು ಹೆಚ್ಚಿಸಲಿದೆ

May 13th, 03:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಅಹಮದಾಬಾದ್ (ಸರ್ಖೇಜ್) - ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು ಸುಮಾರು 20,667 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೇಯ ಮೊದಲ ಸೆಮಿ ಹೈ-ಸ್ಪೀಡ್ ಯೋಜನೆಯಾಗಿದ್ದು, ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಯೋಜಿಸಲಾಗಿದೆ.

ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಗುಜರಾತ್ ಮೆಟ್ರೋ ರೈಲು ನಿಗಮ ನಿಯಮಿತ (ಜಿ ಎಂ ಆರ್ ಸಿ)ಯ ಗಿಫ್ಟ್ ಸಿಟಿಯಿಂದ ಶಹಪುರದವರೆಗೆ ಹಾಲಿ ಇರುವ ಉತ್ತರ-ದಕ್ಷಿಣ ಕಾರಿಡಾರ್ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

February 24th, 03:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಗಿಫ್ಟ್ ಸಿಟಿಯಿಂದ ಶಹಪುರದವರೆಗಿನ 3.33 ಕಿಲೋಮೀಟರ್ ಉದ್ದದ ಮೂರು ಎತ್ತರದ ನಿಲ್ದಾಣಗಳನ್ನು ಒಳಗೊಂಡ ಹಾಲಿ ಇರುವ ಉತ್ತರ ದಕ್ಷಿಣ ಕಾರಿಡಾರ್ ಮೆಟ್ರೊ ರೈಲು ಸಂಪರ್ಕ ವಿಸ್ತರಣೆಗೆ ಇಂದು ಅನುಮೋದನೆ ನೀಡಿದೆ. ಇದು ಈ ಯೋಜನೆಯನ್ನು ಸುಮಾರು ನಾಲ್ಕು ವರ್ಷಗಳಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಭೇಟಿ ನೀಡಿದರು

January 12th, 02:42 pm

ಪ್ರಧಾನಿ ಮೋದಿ ಮತ್ತು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಅಹಮದಾಬಾದ್‌ನ ಸಬರಮತಿ ನದಿ ದಂಡೆಯಲ್ಲಿ ಆಯೋಜಿಸಲಾದ ವರ್ಣರಂಜಿತ ಮತ್ತು ರೋಮಾಂಚಕ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಭಾಗವಹಿಸಿದರು. ಪ್ರದರ್ಶನದಲ್ಲಿರುವ ಗಾಳಿಪಟಗಳು ಆಪರೇಷನ್ ಸಿಂಧೂರ್, ಹನುಮಾನ್, ತ್ರಿವರ್ಣ ಮತ್ತು ಇತರವುಗಳನ್ನು ಚಿತ್ರಿಸಿವೆ. ಚಾನ್ಸೆಲರ್ ಮೆರ್ಜ್ ಗಾಳಿಪಟ ಹಾರಿಸಲು ಪ್ರಯತ್ನಿಸಿದಾಗ ಪ್ರಧಾನಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

January 12th, 01:35 pm

ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.

ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 12th, 12:49 pm

ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.

ಜನವರಿ 12 ರಂದು ಪ್ರಧಾನಮಂತ್ರಿ ಅಹಮದಾಬಾದ್‌ನಲ್ಲಿ ಜರ್ಮನ್ ಚಾನ್ಸೆಲರ್ ಮೆರ್ಜ್ ಭೇಟಿ

January 09th, 12:05 pm

ಪ್ರಧಾನಮಂತ್ರಿ ಅವರು ಜನವರಿ 12 ರಂದು ಅಹಮದಾಬಾದ್‌ನಲ್ಲಿ ಜರ್ಮನಿಯ ಫೆಡರಲ್ ಚಾನ್ಸೆಲರ್ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಲಿದ್ದಾರೆ.

ಪ್ರಧಾನಮಂತ್ರಿ ಜನವರಿ 10-12 ರವರೆಗೆ ಗುಜರಾತ್‌ ಭೇಟಿ

January 09th, 12:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 10 ರಿಂದ 12 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ಅವರು ಜನವರಿ 10 ರಂದು ಸಂಜೆ ಸೋಮನಾಥಕ್ಕೆ ಆಗಮಿಸಲಿದ್ದಾರೆ ಮತ್ತು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಅವರು ಸೋಮನಾಥ ದೇವಾಲಯದಲ್ಲಿ ಡ್ರೋಣ್‌ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.

ಸೃಜನಶೀಲತೆ, ಸುಸ್ಥಿರತೆ ಮತ್ತು ಸಮುದಾಯ ಮನೋಭಾವಗಳ ಆಚರಣೆಯಾಗಿದೆ ಎಂದು ಅಹಮದಾಬಾದ್ ಪುಷ್ಪ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

January 02nd, 03:45 pm

ಸೃಜನಶೀಲತೆ, ಸುಸ್ಥಿರತೆ ಮತ್ತು ಸಮುದಾಯದ ಭಾಗವಹಿಸುವಿಕೆಯನ್ನು ಒಟ್ಟುಗೂಡಿಸುವಲ್ಲಿ ಅಹಮದಾಬಾದ್ ಪುಷ್ಪ ಪ್ರದರ್ಶನದ ಗಮನಾರ್ಹ ಪಾತ್ರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಕಾರ್ಯಕ್ರಮವು ನಗರದ ವೈವಿದ್ಯಮಯ ಚೈತನ್ಯ ಮತ್ತು ಪ್ರಕೃತಿಯ ಮೇಲಿನ ನಿರಂತರ ಪ್ರೀತಿಯನ್ನು ಸುಂದರವಾಗಿ ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.

Today, Sansad Khel Mahotsav has truly become a people’s movement: PM Modi

December 25th, 05:30 pm

PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.

Our country is full of talent in every village and town: PM Modi

December 25th, 11:10 am

PM Modi interacted with young sportspersons from across the country during the Sansad Khel Mahotsav, listening to their journeys, aspirations and experiences. Encouraging them to balance sports with education, he lauded their discipline, dedication and confidence. The PM reaffirmed the government’s commitment to nurturing grassroots sporting talent and building a strong sporting ecosystem in India.

PM Modi addressed the Sansad Khel Mahotsav via video conferencing

December 25th, 11:09 am

PM Modi addressed the Sansad Khel Mahotsav via video conferencing and interacted with young athletes from across the country. Calling the initiative a people’s movement, he said the scale of participation reflects the growing sporting culture in India.

ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಅಹಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-II, ಬಾಲಕಿಯರ ಹಾಸ್ಟೆಲ್ ನ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 24th, 10:39 pm

ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳೇ, ಗುಜರಾತ್ ಸರ್ಕಾರದ ಎಲ್ಲ ಸಚಿವರೇ, ಇಲ್ಲಿ ನೆರೆದಿರುವ ಎಲ್ಲ ಸಂಸತ್ ಸದಸ್ಯರೇ, ಎಲ್ಲ ಶಾಸಕರೇ, ಸರ್ದಾರ್ ಧಾಮದ ಅಧ್ಯಕ್ಷರಾದ ಶ್ರೀ ಗಗ್ಜಿ ಭಾಯಿ ಅವರೇ, ಟ್ರಸ್ಟಿ ವಿ.ಕೆ. ಪಟೇಲ್ ಅವರೇ, ದಿಲೀಪ್ ಭಾಯಿ ಅವರೇ, ಎಲ್ಲ ಗಣ್ಯರೇ, ಹಾಗೂ ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ, ವಿಶೇಷವಾಗಿ ನನ್ನ ಪ್ರೀತಿಯ ಹೆಣ್ಣು ಮಕ್ಕಳೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದ್ ನ ʻಸರ್ದಾರ್ ಧಾಮ್ʼ ಎರಡನೇ ಹಂತದ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

August 24th, 10:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-2ರ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸರ್ದಾರ್ ಧಾಮದ ಹೆಸರು ಅದರ ಕಾರ್ಯದಷ್ಟೇ ಪವಿತ್ರವಾಗಿದೆ ಎಂದು ಬಣ್ಣಿಸಿದರು. ಹೆಣ್ಣುಮಕ್ಕಳ ಸೇವೆ ಮತ್ತು ಶಿಕ್ಷಣಕ್ಕಾಗಿ ಮೀಸಲಾಗಿರುವ ವಸತಿಗೃಹದ ಉದ್ಘಾಟನೆಯ ಬಗ್ಗೆ ಒತ್ತಿ ಹೇಳಿದರು. ಈ ವಸತಿಗೃಹದಲ್ಲಿ ತಂಗುವ ಬಾಲಕಿಯರು ಆಕಾಂಕ್ಷೆಗಳು ಮತ್ತು ಕನಸುಗಳನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ಪೂರೈಸಲು ಹಲವಾರು ಅವಕಾಶಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಈ ಹೆಣ್ಣುಮಕ್ಕಳು ಒಮ್ಮೆ ಸ್ವಾವಲಂಬಿಗಳು ಮತ್ತು ಸಮರ್ಥರಾಗಿ ಬದಲಾದರೆ, ಅವರು ಸಹಜವಾಗಿಯೇ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕುಟುಂಬಗಳು ಸಹ ಸಬಲೀಕರಣಗೊಳ್ಳುತ್ತವೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಈ ವಸತಿಗೃಹದಲ್ಲಿ ಉಳಿಯಲು ಅವಕಾಶ ಪಡೆದ ಎಲ್ಲ ಹೆಣ್ಣುಮಕ್ಕಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಆಗಸ್ಟ್ 25–26 ರಂದು ಗುಜರಾತ್ ಗೆ ಪ್ರಧಾನಮಂತ್ರಿ ಅವರ ಭೇಟಿ

August 24th, 01:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25 - 26 ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 25 ರಂದು ಸಂಜೆ 6 ಗಂಟೆಗೆ ಅಹಮದಾಬಾದ್ ನ ಖೋಡಲ್ಧಾಮ್ ಮೈದಾನದಲ್ಲಿ ಅವರು 5,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.