ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವಾದ ‘ವನತಾರಾ’ ಪ್ರಧಾನಮಂತ್ರಿಗಳಿಂದ ಉದ್ಘಾಟನೆ
March 04th, 04:05 pm
ಗುಜರಾತ್ನ ಜಾಮ್ನಗರದಲ್ಲಿ ‘ವನತಾರಾ’ ವಿಶಿಷ್ಟ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಮತ್ತು ಪುನರ್ವಸತಿ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಶ್ರೀ ಅನಂತ್ ಅಂಬಾನಿ ಮತ್ತು ಅವರ ತಂಡದ ದಯಾಮಯ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, ಪರಿಸರ ಸುಸ್ಥಿರತೆ ಮತ್ತು ವನ್ಯಜೀವಿ ಕಲ್ಯಾಣವನ್ನು ಉತ್ತೇಜಿಸುವ ವನತಾರಾ ಉಪಕ್ರಮವು ಪ್ರಾಣಿಗಳಿಗೆ ಸುರಕ್ಷಿತ ಆಶ್ರಯವನ್ನು ಒದಗಿಸುತ್ತದೆ ಎಂದು ಬಣ್ಣಿಸಿದ್ದಾರೆ.