
Today, India is emerging as a leading force in the Global Space-Aviation convergence: PM Modi at AGM of IATA
June 02nd, 05:34 pm
PM Modi addressed the International Air Transport Association's 81st Annual General Meeting and the plenary session of World Air Transport Summit. Emphasizing the success of the UDAN scheme, the PM stated that under this initiative, over 15 million passengers have benefitted from affordable air travel, enabling many citizens to fly for the first time. He urged international guests to familiarize themselves with the Digi Yatra app.
Prime Minister Shri Narendra Modi addresses IATA's 81st Annual General Meeting and plenary Session of World Air Transport Summit
June 02nd, 05:00 pm
PM Modi addressed the International Air Transport Association's 81st Annual General Meeting and the plenary session of World Air Transport Summit. Emphasizing the success of the UDAN scheme, the PM stated that under this initiative, over 15 million passengers have benefitted from affordable air travel, enabling many citizens to fly for the first time. He urged international guests to familiarize themselves with the Digi Yatra app.
ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ರಾಷ್ಟ್ರೀಯ ತಂತ್ರಜ್ಞಾನ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ
May 11th, 02:32 pm
ರಾಷ್ಟ್ರೀಯ ತಂತ್ರಜ್ಞಾನ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶುಭಾಶಯ ಕೋರಿದ್ದಾರೆ. ಶ್ರೀ ಮೋದಿ ಅವರು ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಮತ್ತು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ ಮತ್ತು 1998ರ ಪೋಖ್ರಾನ್ ಪರೀಕ್ಷೆಗಳನ್ನು ನೆನಪಿಸಿಕೊಂಡಿದ್ದಾರೆ. ವಿಜ್ಞಾನ ಮತ್ತು ಸಂಶೋಧನೆಯ ಮೂಲಕ ಭವಿಷ್ಯದ ಪೀಳಿಗೆಯನ್ನು ಸಬಲಗೊಳಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 03:45 pm
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
May 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ
April 29th, 11:01 am
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
April 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಏಪ್ರಿಲ್ 29ರಂದು ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
April 28th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 29ರಂದು ಬೆಳಗ್ಗೆ 11ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ರೋಜ್ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 02:00 pm
ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
April 24th, 01:30 pm
ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ
April 21st, 11:30 am
ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
April 21st, 11:00 am
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು
April 16th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.ನವಕಾರ್ ಮಹಾಮಂತ್ರ ದಿವಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 09th, 08:15 am
ಮನಸ್ಸು ಶಾಂತವಾಗಿದೆ, ಮನಸ್ಸು ಸ್ಥಿರವಾಗಿದೆ, ಶಾಂತಿಯೊಂದೇ ಅದ್ಭುತ ಅನುಭೂತಿ, ಮಾತಿಗೆ ಮೀರಿದ, ಆಲೋಚನೆಗೆ ಮೀರಿದ ನವಕಾರ್ ಮಹಾಮಂತ್ರವು ಇನ್ನೂ ಮನಸ್ಸಿನಲ್ಲಿ ಅನುರಣಿಸುತ್ತಿದೆ. ನಮೋ ಅರಿಹಂತನಾಮ್. ನಮೋ ಸಿದ್ಧಾನಾಮ್. ನಮೋ ಆರ್ಯನಾಮ್. ನಮೋ ಉವಜ್ಜಾಯನಾಮ್ । ನಮೋ ಲೋಯೇ ಸವ್ವಸಾಹೂನಾಮ್ । (ನಮೋ ಅರಿಹಂತಾನಂ॥ ನಮೋ ಸಿದ್ಧಾನಂ॥ ನಮೋ ಆಯಾರಿಯಾಣಂ॥ ನಮೋ ಉವಾಜ್ಞಾಯಾಣಂ ॥ ನಮೋ ಏಲ ॥ ಸವ್ವಸಾಹೂಣಂ॥) ಒಂದು ಧ್ವನಿ, ಒಂದು ಹರಿವು, ಒಂದು ಶಕ್ತಿ, ಯಾವುದೇ ಏರಿಳಿತವಿಲ್ಲ, ಇಳಿಕೆಗಳಿಲ್ಲ, ಕೇವಲ ಸ್ಥಿರತೆ, ಕೇವಲ ಸಮಚಿತ್ತತೆ. ಅಂತಹ ಒಂದು ಪ್ರಜ್ಞೆ, ಒಂದೇ ರೀತಿಯ ಲಯ, ಒಳಗೆ ಇದೇ ಬೆಳಕು. ನವಕಾರ್ ಮಹಾಮಂತ್ರದ ಈ ಆಧ್ಯಾತ್ಮಿಕ ಶಕ್ತಿಯನ್ನು ನಾನು ಇನ್ನೂ ನನ್ನೊಳಗೆ ಅನುಭವಿಸುತ್ತಿದ್ದೇನೆ. ಕೆಲವು ವರ್ಷಗಳ ಹಿಂದೆ, ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣಕ್ಕೆ ನಾನು ಸಾಕ್ಷಿಯಾಗಿದ್ದೆ, ಇಂದು ನನಗೆ ಅದೇ ಭಾವನೆ ಮತ್ತು ಅದೇ ಆಳವಿದೆ. ಈ ಬಾರಿ ಲಕ್ಷಾಂತರ ಪುಣ್ಯಾತ್ಮರು ಒಂದೇ ಪ್ರಜ್ಞೆಯೊಂದಿಗೆ ಸಂಪರ್ಕ ಹೊಂದಿದ್ದಾರೆ, ಒಟ್ಟಿಗೆ ಮಾತನಾಡುವ ಪದಗಳು, ಒಟ್ಟಿಗೆ ಶಕ್ತಿ ಜಾಗೃತಗೊಂಡಿವೆ, ಭಾರತ ಮತ್ತು ವಿದೇಶಗಳಲ್ಲಿ, ಇದು ನಿಜವಾಗಿಯೂ ಹಿಂದೆಂದೂ ಕಾಣದ ಅಪೂರ್ವ ಕ್ಷಣವಾಗಿದೆ.ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 09th, 07:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದರು ಮತ್ತು ಅದರಲ್ಲಿ ಭಾಗವಹಿಸಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವಕರ್ ಮಂತ್ರದ ಆಳವಾದ ಆಧ್ಯಾತ್ಮಿಕ ಅನುಭವವನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಮನಸ್ಸಿಗೆ ಶಾಂತಿ ಮತ್ತು ಸ್ಥಿರತೆಯನ್ನು ತರುವ ಸಾಮರ್ಥ್ಯವನ್ನು ಒತ್ತಿ ಹೇಳಿದರು. ಪದಗಳು ಮತ್ತು ಆಲೋಚನೆಗಳನ್ನು ಮೀರಿದ, ಮನಸ್ಸು ಮತ್ತು ಪ್ರಜ್ಞೆಯೊಳಗೆ ಆಳವಾಗಿ ಪ್ರತಿಧ್ವನಿಸುವ ಅಸಾಧಾರಣ ಶಾಂತಿಯ ಭಾವನೆಯ ಬಗ್ಗೆ ಅವರು ಮಾತನಾಡಿದರು. ನವಕರ್ ಮಂತ್ರದ ಮಹತ್ವವನ್ನು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು, ಅದರ ಪವಿತ್ರ ಶ್ಲೋಕಗಳನ್ನು ಪಠಿಸಿದರು ಮತ್ತು ಮಂತ್ರವನ್ನು ಶಕ್ತಿಯ ನಿರಂತರ ಹರಿವು, ಸ್ಥಿರತೆ, ಸಮಚಿತ್ತತೆ ಮತ್ತು ಪ್ರಜ್ಞೆ ಮತ್ತು ಆಂತರಿಕ ಬೆಳಕಿನ ಸಾಮರಸ್ಯದ ಲಯವನ್ನು ಸಾಕಾರಗೊಳಿಸುತ್ತದೆ ಎಂದು ವಿವರಿಸಿದರು. ತಮ್ಮ ವೈಯಕ್ತಿಕ ಅನುಭವದ ಬೆಳಕು ಚೆಲ್ಲುತ್ತಾ, ನವಕರ್ ಮಂತ್ರದ ಆಧ್ಯಾತ್ಮಿಕ ಶಕ್ತಿಯನ್ನು ತಮ್ಮೊಳಗೆ ಹೇಗೆ ಅನುಭವಿಸುತ್ತಿದ್ದಾರೆ ಎಂಬುದನ್ನು ಅವರು ಹಂಚಿಕೊಂಡರು. ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣ ಕಾರ್ಯಕ್ರಮವನ್ನು ವೀಕ್ಷಿಸಿದ ಅವರು, ಅದು ತನ್ನ ಮೇಲೆ ಗಾಢ ಪ್ರಭಾವ ಬೀರಿತು ಎಂದರು. ದೇಶ ಮತ್ತು ವಿದೇಶಗಳಾದ್ಯಂತ ಲಕ್ಷಾಂತರ ಸದ್ಗುಣಶೀಲ ಆತ್ಮಗಳು ಏಕೀಕೃತ ಪ್ರಜ್ಞೆಯಲ್ಲಿ ಒಟ್ಟಿಗೆ ಸೇರುವ ಅಪ್ರತಿಮ ಅನುಭವವನ್ನು ಪ್ರಧಾನಿ ಪ್ರಮುಖವಾಗಿ ಉಲ್ಲೇಖಿಸಿದರು. ಸಾಮೂಹಿಕ ಶಕ್ತಿ ಮತ್ತು ಮೇಳೈಸಿದ ಪದಗಳ ಬಗ್ಗೆ ಅವರು ಉಲ್ಲೇಖಿಸಿ, ಇದು ನಿಜವಾಗಿಯೂ ಅಸಾಧಾರಣ ಮತ್ತು ಅಭೂತಪೂರ್ವ ಎಂದು ವಿವರಿಸಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 08th, 08:30 pm
ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.