ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಭೇಟಿಯ ಫಲಿತಾಂಶಗಳ ಪಟ್ಟಿ

July 09th, 12:34 pm

ಭದ್ರತೆಯ ಮೇಲಿನ ಅಸ್ತಿತ್ವದಲ್ಲಿರುವ ಜಂಟಿ ಘೋಷಣೆಯನ್ನು (2009) ನವೀಕರಿಸುತ್ತದೆ. ಇದು ಪಡೆಗಳ ಪರಸ್ಪರ ಕಾರ್ಯಾಚರಣೆ, ಸಾಮರ್ಥ್ಯ ನಿರ್ಮಾಣ, ಕಡಲ ವಲಯ, ರಕ್ಷಣಾ ಕೈಗಾರಿಕಾ ಸಹಯೋಗ, ಸೈಬರ್ ಭದ್ರತೆ ಮತ್ತು ತಂತ್ರಜ್ಞಾನ, ಭಯೋತ್ಪಾದನೆ ನಿಗ್ರಹ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಮತ್ತು UNCLOS, ಆಸಿಯಾನ್, ಪಿಐಎಫ್, ಐ ಒ ಆರ್‌ ಎ ಗಳಲ್ಲಿ ಏಕೀಕೃತ ವಿಧಾನವನ್ನು ಸಹಕಾರದ ಕ್ಷೇತ್ರಗಳಾಗಿ ಗುರುತಿಸುತ್ತದೆ.

ರಕ್ಷಣೆ ಮತ್ತು ಭದ್ರತಾ ಸಹಕಾರ ಕುರಿತು ಭಾರತ-ಆಸ್ಟ್ರೇಲಿಯಾ ಜಂಟಿ ಘೋಷಣೆ

July 09th, 10:55 am

ನಾವು, ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಗಳಾದ ನಾವು, ನಮ್ಮ ನಿರಂತರವಾಗಿ ಬೆಳೆಯುತ್ತಿರುವ ದ್ವಿಪಕ್ಷೀಯ ಬಾಂಧವ್ಯದಿಂದ ಒಗ್ಗೂಡಿದ್ದೇವೆ. ನಮ್ಮ ರಾಷ್ಟ್ರಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ದೃಢಸಂಕಲ್ಪ ಮಾಡಿದ್ದೇವೆ. ಮುಕ್ತ, ಶಾಂತಿಯುತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ಗಾಗಿರುವ ಸಾಮಾನ್ಯ ಮಹತ್ವಾಕಾಂಕ್ಷೆಯಿಂದ ಪ್ರೇರಿತರಾಗಿ, ಈ ಮೂಲಕ ರಕ್ಷಣೆ ಮತ್ತು ಭದ್ರತಾ ಸಹಕಾರದ ಜಂಟಿ ಘೋಷಣೆಗೆ ಬದ್ಧರಾಗಿದ್ದೇವೆ.

India-Indonesia Joint Statement on the State Visit by Prime Minister of India to Indonesia

July 07th, 05:15 pm

At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.

16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ

July 02nd, 10:22 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.

ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ

May 06th, 03:44 pm

ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

May 06th, 01:00 pm

ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.

ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 20th, 03:20 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು

December 20th, 03:10 pm

ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.

22ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣದ ಕನ್ನಡ ಅವತರಣಿಕೆ

October 26th, 02:20 pm

ಗೌರವಾನ್ವಿತ ಪ್ರಧಾನಮಂತ್ರಿ ಹಾಗು ನನ್ನ ಸ್ನೇಹಿತ ಅನ್ವರ್ ಇಬ್ರಾಹಿಂ,

ಕ್ವಾಲಾಲಂಪುರದಲ್ಲಿ ನಡೆದ 22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

October 26th, 02:06 pm

22ನೇ ಆಸಿಯಾನ್ ಭಾರತ ಶೃಂಗಸಭೆಯು ಅಕ್ಟೋಬರ್ 26, 2025 ರಂದು ನಡೆಯಿತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದರು. ಪ್ರಧಾನಮಂತ್ರಿ ಮತ್ತು ಆಸಿಯಾನ್ ನಾಯಕರು ಜಂಟಿಯಾಗಿ ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಹಾಗು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಪಕ್ರಮಗಳ ಕುರಿತು ಚರ್ಚೆ ನಡೆಸಿದರು. ಇದು ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ 12ನೇ ಬಾರಿಗೆ ಭಾಗವಹಿಸಿರುವುದಾಗಿದೆ.

22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಗವಹಿಸುವಿಕೆ

October 25th, 09:48 am

ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ಅಕ್ಟೋಬರ್ 26, 2025 ರಂದು ನಡೆಯಲಿರುವ 22ನೇ ಆಸಿಯಾನ್ - ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಲಿದ್ದಾರೆ. ನಮ್ಮ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನಕ್ಕೆ ಅನುಗುಣವಾಗಿ ಪ್ರಧಾನಿ ಮೋದಿ ಅವರು ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಆಸಿಯಾನ್ ನಾಯಕರೊಂದಿಗೆ ಜಂಟಿಯಾಗಿ ಪರಿಶೀಲಿಸಲಿದ್ದಾರೆ.

ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 29th, 11:20 am

ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.

ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 29th, 11:02 am

ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಭಾರತ-ಥೈಲ್ಯಾಂಡ್ ವ್ಯೂಹಾತ್ಮಕ ಪಾಲುದಾರಿಕೆ ಸ್ಥಾಪನೆ ಕುರಿತ ಜಂಟಿ ಘೋಷಣೆ

April 04th, 07:29 pm

2025ರ ಏಪ್ರಿಲ್ 03-04 ರ ಅವಧಿಯಲ್ಲಿ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಥೈಲ್ಯಾಂಡ್ ಗೆ ಅಧಿಕೃತ ಭೇಟಿ ನೀಡಿದರು ಮತ್ತು ಥೈಲ್ಯಾಂಡ್ ರಾಜಪ್ರಭುತ್ವದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ ಬ್ಯಾಂಕಾಕ್ ನಲ್ಲಿ ನಡೆದ 6 ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ಯಾಂಕಾಕ್ ನ ಸರ್ಕಾರಿ ಭವನದಲ್ಲಿ ಪ್ರಧಾನಮಂತ್ರಿ ಶಿನವಾತ್ರಾ ಅವರು ಔಪಚಾರಿಕ, ಸಾಂಪ್ರದಾಯಿಕ ಸ್ವಾಗತ ಕೋರಿದರು.

ಥಾಯ್ಲೆಂಡ್‌ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

April 03rd, 03:01 pm

ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಇಂಡೋನೇಷ್ಯಾದ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 06:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತು

ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.