ನೀತಿ ಆಯೋಗದ ಪುನರ್ ರಚನೆಗೆ ಶುಭ ಕೋರಿದ ಪ್ರಧಾನಮಂತ್ರಿ

April 25th, 10:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೀತಿ ಆಯೋಗದ ಪುನರ್ ರಚನೆಗೆ ಶುಭ ಹಾರೈಸಿದ್ದಾರೆ. ನೀತಿ ಆಯೋಗವು ಭಾರತದ ನೀತಿ ನಿರೂಪಣೆಯ ವಾಸ್ತುಶಿಲ್ಪದಲ್ಲಿ ಪ್ರಮುಖ ಆಧಾರಸ್ತಂಭವಾಗಿ ಹೊರಹೊಮ್ಮಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ. ಪ್ರಮುಖ ಸುಧಾರಣೆಗಳಿಗೆ ಚಾಲನೆ ನೀಡಿದೆ ಮತ್ತು ನಾಗರಿಕರಿಗೆ 'ಸುಗಮ ಜೀವನ'ವನ್ನು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದರು. ಈ ಸಂಸ್ಥೆಯು ನಾವೀನ್ಯತೆ ಮತ್ತು ಕ್ಷೇತ್ರಗಳಾದ್ಯಂತ ದೀರ್ಘಕಾಲೀನ ಕಾರ್ಯತಂತ್ರದ ಚಿಂತನೆಗೆ ಕ್ರಿಯಾತ್ಮಕ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಅಶೋಕ್ ಕುಮಾರ್ ಲಹಿರಿ

April 25th, 10:43 pm

ಶ್ರೀ ಅಶೋಕ್ ಕುಮಾರ್ ಲಹಿರಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡ ಅಶೋಕ್ ಕುಮಾರ್ ಲಹಿರಿ ಅವರಿಗೆ ಪ್ರಧಾನಮಂತ್ರಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು. ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿ ಕ್ಷೇತ್ರಗಳಲ್ಲಿ ಶ್ರೀ ಲಹಿರಿ ಅವರ ಶ್ರೀಮಂತ ಅನುಭವವು ಭಾರತದ ಸುಧಾರಣಾ ಪಯಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಮತ್ತು ವಿಕಸಿತ ಭಾರತವಾಗುವ ರಾಷ್ಟ್ರದ ದೃಷ್ಟಿಕೋನಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.