ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಗುಜರಾತ್‌ನ ಗಾಂಧಿನಗರದಲ್ಲಿ ಜರುಗಿದ ವಲಸೆ ಪ್ರಭೇದಗಳ ಸಮಾವೇಶ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 13 ನೇ ಆಡಳಿತ ಮಂಡಳಿ (ಸಿಒಪಿ) ಯ ಉದ್ಘಾಟನ ಭಾಷಣ

February 17th, 01:37 pm

ಮಹಾತ್ಮ ಗಾಂಧಿಯವರ ಭೂಮಿಯಾದ ಗಾಂಧಿನಗರದಲ್ಲಿ ವಲಸೆ ಪ್ರಭೇದಗಳ ಸಮಾವೇಶದ 13 ನೇ ಆಡಳಿತ ಮಂಡಳಿಯ ಸಮ್ಮೇಳನಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ.

ಗಾಂಧಿನಗರದಲ್ಲಿ ವಲಸೆ ಪ್ರಭೇದದ ವನ್ಯ ಪ್ರಾಣಿಗಳ ಸಂರಕ್ಷಣೆ ಕುರಿತ ಸಮಾವೇಶದ 13 ನೇ ಆಡಳಿತ ಮಂಡಳಿ (ಸಿಒಪಿ)ಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು

February 17th, 12:09 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಾಂಧಿನಗರದಲ್ಲಿ ವಲಸೆ ಪ್ರಭೇದದ ವನ್ಯಜೀವಿಗಳ ಸಂರಕ್ಷಣೆ ಕುರಿತ ಸಮಾವೇಶದ 13 ನೇ ಆಡಳಿತ ಮಂಡಳಿ (ಸಿಒಪಿ)ಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.

ಪ್ರಧಾನಿ ಅಂತರರಾಷ್ಟ್ರೀಯ ವೆಸಕ್ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು

May 12th, 10:20 am

ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಂತಾರಾಷ್ಟ್ರೀಯ ವೆಸಕ್ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಬುದ್ಧನ ಬೋಧನೆಗಳು ಆಡಳಿತ, ಸಂಸ್ಕೃತಿ ಮತ್ತು ತತ್ವಶಾಸ್ತ್ರದಲ್ಲಿ ಹೇಗೆ ಆಳವಾದವು ಎಂಬುದನ್ನು ತೋರಿಸಿದೆ ಎಂದು ಹೇಳಿದರು . ನಮ್ಮ ಪ್ರದೇಶವು ಜಗತ್ತಿಗೆ ಬುದ್ಧನ ಅಮೂಲ್ಯ ಕೊಡುಗೆ ಮತ್ತು ಅವರ ಬೋಧನೆಗಳಿಂದ ಆಶೀರ್ವದಿಸಿದೆ ಎಂದು ಪ್ರಧಾನಿ ಹೇಳಿದರು .

ಪ್ರತಿ ವ್ಯಕ್ತಿಯೂ ಮುಖ್ಯ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

April 30th, 11:32 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು ದೇಶದಲ್ಲಿ ವಿಐಪಿ ಸಂಸ್ಕೃತಿಯು ಅಭಿವೃದ್ಧಿ ಹೊಂದಿರುವುದು ಕೆಂಪು ದೀಪಗಳ ಕಾರಣ ಎಂದು ಹೇಳಿದರು. , ನಾವು ಹೊಸ ಭಾರತವನ್ನು ಕುರಿತು ಮಾತನಾಡುವಾಗ, ವಿಐಪಿ ಬದಲಿಗೆ ಇಪಿಐ ಮುಖ್ಯವಾಗಿದೆ. ಇಪಿಐ ಎಂದರೆ ಎಂದರೆ ಪ್ರತಿಯೊಬ್ಬ ವ್ಯಕ್ತಿಯು ಮುಖ್ಯವಾದುದು. ಈ ರಜಾದಿನಗಳನ್ನು ಚೆನ್ನಾಗಿ ಬಳಸಿಕೊಳ್ಳಲು ಮತ್ತು ಹೊಸ ಅನುಭವಗಳನ್ನು ಕೈಗೊಳ್ಳಲು, ಹೊಸ ಕೌಶಲಗಳನ್ನು ಕಲಿಯಲು ಮತ್ತು ಹೊಸ ಸ್ಥಳಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಕರೆ ನೀಡಿದರು . ಬೇಸಿಗೆಯ , ಭೀಮ್ ಮತ್ತು ಭಾರತದ ಶ್ರೀಮಂತ ವೈವಿಧ್ಯತೆ ಬಗ್ಗೆ ಅವರು ಮಾತನಾಡಿದರು . .