ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.

ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 16th, 11:30 am

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು

September 16th, 11:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.