ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶ

August 23rd, 11:00 am

ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ವರ್ಷದ ಬಾಹ್ಯಾಕಾಶ ದಿನದ ವಿಷಯ 'ಆರ್ಯಭಟದಿಂದ ಗಗನಯಾನಕ್ಕೆ: ಪ್ರಾಚೀನ ಜ್ಞಾನದಿಂದ ಅನಂತ ಸಾಧ್ಯತೆಗಳಿಗೆ'. ಇದು ಭೂತಕಾಲದ ವಿಶ್ವಾಸ ಮತ್ತು ಭವಿಷ್ಯದ ಸಂಕಲ್ಪವನ್ನು ಸಾಕಾರಗೊಳಿಸುತ್ತದೆ. ಇಂದು ಇಷ್ಟು ಕಡಿಮೆ ಅವಧಿಯಲ್ಲಿ, ರಾಷ್ಟ್ರೀಯ ಬಾಹ್ಯಾಕಾಶ ದಿನವು ನಮ್ಮ ಯುವಕರಿಗೆ ಉತ್ಸಾಹ ಮತ್ತು ಸ್ಫೂರ್ತಿಯ ಸೆಲೆಯಾಗಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇದು ನಿಜಕ್ಕೂ ರಾಷ್ಟ್ರಕ್ಕೆ ಅಪಾರ ಹೆಮ್ಮೆ ತರುವ ವಿಷಯವಾಗಿದೆ. ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ಬಾಹ್ಯಾಕಾಶ ವಲಯದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ನಮ್ಮ ವಿಜ್ಞಾನಿಗಳಿಗೆ ಮತ್ತು ಎಲ್ಲಾ ಯುವಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇತ್ತೀಚೆಗೆ ಭಾರತವು 'ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಅಂತಾರಾಷ್ಟ್ರೀಯ ಒಲಿಂಪಿಯಾಡ್' ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ, ವಿಶ್ವಾದ್ಯಂತದ 60ಕ್ಕೂ ಹೆಚ್ಚು ದೇಶಗಳಿಂದ ಸುಮಾರು 300 ಯುವ ಪ್ರತಿನಿಧಿಗಳು ಭಾಗವಹಿಸಿದ್ದರು. ನಮ್ಮ ಭಾರತೀಯ ಯುವಕರು ಸಹ ಪದಕಗಳನ್ನು ಗೆದ್ದಿದ್ದಾರೆ. ಈ ಒಲಿಂಪಿಯಾಡ್ ಬಾಹ್ಯಾಕಾಶ ವಲಯದಲ್ಲಿ ಭಾರತದ ಉದಯೋನ್ಮುಖ ನಾಯಕತ್ವದ ಸಂಕೇತವಾಗಿದೆ.

2025ನೇ ಸಾಲಿನ ʻರಾಷ್ಟ್ರೀಯ ಬಾಹ್ಯಾಕಾಶ ದಿನʼದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಬಾಹ್ಯಾಕಾಶ ದಿನ- 2025’ರ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, ಆರ್ಯಭಟದಿಂದ ಗಗನಯಾನದವರೆಗೆ ಎಂಬ ಈ ವರ್ಷದ ಧ್ಯೇಯವಾಕ್ಯವು ಭಾರತದ ಗತಕಾಲದ ವಿಶ್ವಾಸ ಮತ್ತು ಅದರ ಭವಿಷ್ಯದ ಸಂಕಲ್ಪ ಎರಡನ್ನೂ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಅತ್ಯಲ್ಪ ಕಾಲದಲ್ಲಿ, ʻರಾಷ್ಟ್ರೀಯ ಬಾಹ್ಯಾಕಾಶ ದಿನʼವು ಭಾರತದ ಯುವಕರಿಗೆ ಉತ್ಸಾಹ ಮತ್ತು ಆಕರ್ಷಣೆಯ ಸಂದರ್ಭವಾಗಿ ಮಾರ್ಪಟ್ಟಿದೆ, ಇದು ರಾಷ್ಟ್ರೀಯ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು. ವಿಜ್ಞಾನಿಗಳು ಮತ್ತು ಯುವಕರು ಸೇರಿದಂತೆ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ವ್ಯಕ್ತಿಗಳಿಗೆ ಅವರು ಶುಭಾಶಯಗಳನ್ನು ತಿಳಿಸಿದರು. ಭಾರತವು ಪ್ರಸ್ತುತ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಕುರಿತ ಅಂತಾರಾಷ್ಟ್ರೀಯ ಒಲಿಂಪಿಯಾಡ್ಗೆ ಆತಿಥ್ಯ ವಹಿಸುತ್ತಿದ್ದು, ಅರವತ್ತಕ್ಕೂ ಹೆಚ್ಚು ದೇಶಗಳ ಸುಮಾರು 300 ಯುವ ಸ್ಪರ್ಧಿಗಳು ಅದರಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ಈ ಸ್ಪರ್ಧೆಯಲ್ಲಿ ಅನೇಕ ಭಾರತೀಯ ಸ್ಪರ್ಧಿಗಳು ಪದಕಗಳನ್ನು ಗೆದ್ದಿರುವುದಕ್ಕೆ ಶ್ರೀ ಮೋದಿ ಸಂತಸ ವ್ಯಕ್ತಪಡಿಸಿದರು. ಈ ಒಲಿಂಪಿಯಾಡ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಉದಯೋನ್ಮುಖ ಜಾಗತಿಕ ನಾಯಕತ್ವದ ಸಂಕೇತವಾಗಿದೆ ಎಂದು ಅವರು ಹೇಳಿದರು. ಯುವಜನರಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಲು, ʻಭಾರತೀಯ ಬಾಹ್ಯಾಕಾಶ ಹ್ಯಾಕಥಾನ್ʼ ಮತ್ತು ʻರೊಬೊಟಿಕ್ಸ್ ಚಾಲೆಂಜ್ʼ ನಂತಹ ಉಪಕ್ರಮಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ʻಇಸ್ರೋʼ) ಪ್ರಾರಂಭಿಸಿದೆ ಎಂದು ಪ್ರಧಾನಮಂತ್ರಿ ಸಂತೋಷ ವ್ಯಕ್ತಪಡಿಸಿದರು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಜೇತರನ್ನು ಅವರು ಅಭಿನಂದಿಸಿದರು.

ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

August 19th, 09:43 am

ಹಾಗಾದರೆ, ಆಸನ ವ್ಯವಸ್ಥೆಗೆ ಸಂಬಂಧಿಸಿದಂತೆ, ಅದು ಹಾಗೆಯೇ ಉಳಿದಿದೆಯೇ?

ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

August 19th, 09:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಿನ್ನೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದರು. ಬಾಹ್ಯಾಕಾಶ ಪಯಣದ ಪರಿವರ್ತನಾತ್ಮಕ ಅನುಭವಗಳ ಬಗ್ಗೆ ಬೆಳಕು ಚೆಲ್ಲಿದ, ಪ್ರಧಾನಮಂತ್ರಿ ಅವರು, ಇಂತಹ ಮಹತ್ವದ ಪ್ರಯಾಣವನ್ನು ಕೈಗೊಂಡ ನಂತರ, ಒಬ್ಬರ ಬದಲಾವಣೆಯನ್ನು ಅನುಭವಿಸಬೇಕು ಎಂದು ಹೇಳಿದರು ಮತ್ತು ಗಗನಯಾತ್ರಿಗಳು ಈ ಪರಿವರ್ತನೆಯನ್ನು ಹೇಗೆ ಗ್ರಹಿಸುತ್ತಾರೆ ಮತ್ತು ಅನುಭವಿಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ಪ್ರಧಾನಮಂತ್ರಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಶುಭಾಂಶು ಶುಕ್ಲಾ, ಬಾಹ್ಯಾಕಾಶದಲ್ಲಿನ ಪರಿಸರವು ಅತ್ಯಂತ ವಿಭಿನ್ನವಾಗಿದೆ, ಗುರುತ್ವಾಕರ್ಷಣೆಯ ಅನುಪಸ್ಥಿತಿಯು ಪ್ರಮುಖ ಅಂಶವಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಅವರು ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಮಾತುಕತೆ ನಡೆಸಿದರು

August 18th, 08:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಉತ್ಕೃಷ್ಟ ಸಂವಾದ ನಡೆಸಿ, ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿ ಗುರುತಿಸಿದರು. ಅವರಿಬ್ಬರ ಭೇಟಿಯಲ್ಲಿ ಶ್ರೀ ಶುಕ್ಲಾ ಅವರ ಬಾಹ್ಯಾಕಾಶದಲ್ಲಿನ ಅನುಭವ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಪ್ರಗತಿ ಹಾಗೂ ದೇಶದ ಮಹತ್ವಾಕಾಂಕ್ಷಿ ಮಾನವಸಹಿತ ಬಾಹ್ಯಾಕಾಶ ಯೋಜನೆ-ಗಗನಯಾನ ಒಳಗೊಂಡಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

June 28th, 08:24 pm

ಇಂದು ನೀವು ನಿಮ್ಮ ಮಾತೃಭೂಮಿ ಭಾರತದ ಭೂಮಿಯಿಂದ ದೂರದಲ್ಲಿದ್ದೀರಿ, ಆದರೆ ನೀವು ಭಾರತೀಯರ ಹೃದಯಗಳಿಗೆ ಹತ್ತಿರವಾಗಿದ್ದೀರಿ. ನಿಮ್ಮ ಹೆಸರಿನಲ್ಲೇ ಶುಭವಿದೆ, ನಿಮ್ಮ ಪ್ರಯಾಣ ಹೊಸ ಯುಗದ ಆರಂಭವೂ ಆಗಿದೆ. ಈ ಸಮಯದಲ್ಲಿ ನಾವಿಬ್ಬರೂ ಮಾತನಾಡುತ್ತಿದ್ದೇವೆ, ಆದರೆ 140 ಕೋಟಿ ಭಾರತೀಯರ ಭಾವನೆಗಳು ನನ್ನೊಂದಿಗಿವೆ. ನನ್ನ ಧ್ವನಿಯು ಎಲ್ಲಾ ಭಾರತೀಯರ ಉತ್ಸಾಹ ಮತ್ತು ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಬಾಹ್ಯಾಕಾಶದಲ್ಲಿ ಭಾರತದ ಧ್ವಜ ಹಾರಿಸಿದ್ದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಾನು ಹೆಚ್ಚು ಸಮಯ ತೆಗೆದುಕೊಳ್ಳುತ್ತಿಲ್ಲ, ಆದ್ದರಿಂದ ಮೊದಲು ನನಗೆ ಹೇಳಿ, ಅಲ್ಲಿ ಎಲ್ಲವೂ ಸರಿಯಾಗಿದೆಯೇ? ನೀವು ಚೆನ್ನಾಗಿದ್ದೀರಾ?

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

June 28th, 08:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಶುಭಾಂಶು ಅವರು ಪ್ರಸ್ತುತ ಭಾರತದ ಮಾತೃಭೂಮಿಯಿಂದ ಅತಿ ದೂರದಲ್ಲಿದ್ದರೂ, ಅವರು ಸಮಸ್ತ ಭಾರತೀಯರ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದಾರೆ, ಎಂದು ಬಣ್ಣಿಸಿದರು. ಶುಭಾಂಶು ಎಂಬ ಹೆಸರೇ ಶುಭ ಸೂಚಕವಾಗಿದ್ದು, ಅವರ ಈ ಪಯಣವು ಒಂದು ನವಯುಗದ ಆರಂಭಕ್ಕೆ ಮುನ್ನುಡಿಯಾಗಿದೆ, ಎಂದು ಶ್ರೀ ಮೋದಿ ನುಡಿದರು. ಇದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಭಾಷಣೆಯಾಗಿದ್ದರೂ, ಇದರಲ್ಲಿ 140 ಕೋಟಿ ಭಾರತೀಯರ ಭಾವನೆಗಳು ಮತ್ತು ಉತ್ಸಾಹ ಅಡಗಿದೆ. ಶುಭಾಂಶು ಅವರೊಂದಿಗೆ ಮಾತನಾಡುತ್ತಿರುವ ಈ ಧ್ವನಿಯು, ಇಡೀ ರಾಷ್ಟ್ರದ ಸಾಮೂಹಿಕ ಹುಮ್ಮಸ್ಸು ಮತ್ತು ಹೆಮ್ಮೆಯನ್ನು ಹೊತ್ತಿದೆ, ಎಂದು ಅವರು ಹೇಳಿದರು. ಬಾಹ್ಯಾಕಾಶದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದ್ದಕ್ಕಾಗಿ ಶುಭಾಂಶು ಅವರಿಗೆ ಪ್ರಧಾನಿಯವರು ಹೃತ್ಪೂರ್ವಕ ಅಭಿನಂದನೆಗಳನ್ನು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದರು. ಕೊನೆಯಲ್ಲಿ, ಪ್ರಧಾನಿಯವರು ಶುಭಾಂಶು ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಬಾಹ್ಯಾಕಾಶ ನಿಲ್ದಾಣದಲ್ಲಿ ಎಲ್ಲವೂ ಸುಸೂತ್ರವಾಗಿದೆಯೇ ಎಂದು ಕೇಳಿದರು.

ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಉಡಾವಣೆ ಯಶಸ್ವಿ - ಪ್ರಧಾನಮಂತ್ರಿ ಸ್ವಾಗತ

June 25th, 01:30 pm

ಭಾರತ, ಹಂಗೇರಿ, ಪೋಲೆಂಡ್ ಮತ್ತು ಅಮೆರಿಕಾದ ಗಗನಯಾತ್ರಿಗಳನ್ನು ಹೊತ್ತ ಬಾಹ್ಯಾಕಾಶ ಯಾನದ ಯಶಸ್ವಿ ಉಡಾವಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಲಿರುವ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿರುವ ಗ್ರೂಪ್ ಕ್ಯಾಪ್ಟನ್ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.

ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

May 07th, 12:00 pm

ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,

ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 07th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.

'ಭಾರತದ ಮಗಳು' ಅವರನ್ನು ಸ್ವಾಗತಿಸುತ್ತಾ ಪ್ರಧಾನಿ ಮೋದಿ ಸುನೀತಾ ವಿಲಿಯಮ್ಸ್ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾರೆ.

March 19th, 12:27 pm

ಭೂಮಿಗೆ ಸುರಕ್ಷಿತವಾಗಿ ಮರಳುತ್ತಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹ ಕ್ರೂ-9 ಸದಸ್ಯರಿಗೆ ಪ್ರಧಾನಿ ಮೋದಿ ಆತ್ಮೀಯ ಸ್ವಾಗತ ಕೋರಿದರು. ಅವರ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸುತ್ತಾ, ಮತ್ತೆ ಸ್ವಾಗತ, ಕ್ರೂ-9! ಭೂಮಿಯು ನಿಮ್ಮನ್ನು ಕಳೆದುಕೊಂಡಿತು. ಅವರದು ಧೈರ್ಯ, ಧೈರ್ಯ ಮತ್ತು ಅಪರಿಮಿತ ಮಾನವ ಚೈತನ್ಯದ ಪರೀಕ್ಷೆಯಾಗಿದೆ. ಸುನೀತಾ ವಿಲಿಯಮ್ಸ್ ಮತ್ತು ಅವರ ಸಹ ಗಗನಯಾತ್ರಿಗಳು ಮತ್ತೊಮ್ಮೆ ಪರಿಶ್ರಮದ ಅರ್ಥವೇನೆಂದು ನಮಗೆ ತೋರಿಸಿದ್ದಾರೆ. ಅಜ್ಞಾತ ವಿಶಾಲತೆಯ ಮುಂದೆ ಅವರ ಅಚಲ ದೃಢನಿಶ್ಚಯವು ಲಕ್ಷಾಂತರ ಜನರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ.

ಕ್ರ್ಯೂ-9 (Crew-9) ಗಗನಯಾತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

March 19th, 11:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸೇರಿದಂತೆ ಕ್ರ್ಯೂ-9 ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಕ್ಕಾಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕ್ರ್ಯೂ-9 ಗಗನಯಾತ್ರಿಗಳ ಧೈರ್ಯ, ದೃಢಸಂಕಲ್ಪ ಮತ್ತು ಬಾಹ್ಯಾಕಾಶ ಅನ್ವೇಷಣೆಗೆ ನೀಡಿದ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

​​​​​​​ವಾರಾಣಸಿಯ ಬಿಎಚ್ ಯುನಲ್ಲಿ ನಡೆದ ಸನ್ಸದ್ ಸಂಸ್ಕೃತಿ ಪ್ರತಿಯೋಗಿತಾ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

February 23rd, 11:00 am

ಕುಟುಂಬದ ಎಲ್ಲ ಸದಸ್ಯರಿಗೆ ನನ್ನ ಶುಭಾಶಯಗಳು, ಎಲ್ಲ ವಿದ್ವಾಂಸರ ನಡುವೆ ವಿಶೇಷವಾಗಿ ಯುವ ವಿದ್ವಾಂಸರ ನಡುವೆ ಮಹಾಮಾನದ ಈ ಪವಿತ್ರ ಸಂದರ್ಭದಲ್ಲಿ ಜ್ಞಾನದ ನದಿಯಲ್ಲಿ ಮಿಂದೇಳುತ್ತಿರುವಂತಹ ಅನುಭವ ನನಗಾಗುತ್ತಿದೆ. ಒಂದು ಕಾಲದಲ್ಲಿ ವಿದ್ವತ್ತಿಗೆ ಹೆಸರಾದ ಕಾಶಿಯನ್ನು ನಮ್ಮ ಆಧುನಿಕ ಯುವಜನತೆ ಅದರೊಂದಿಗೆ ಬೆಸೆದುಕೊಂಡಿರುವ ಅಸ್ಮಿತೆಯನ್ನು ಮತ್ತಷ್ಟು ಬಲವರ್ಧನೆಗೊಳಿಸುವ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ. ಇದು ಹೃದಯಕ್ಕೆ ತೃಪ್ತಿ ತರುವುದಷ್ಟೇ ಅಲ್ಲದೆ, ಹೆಮ್ಮೆಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಅಮೃತಕಾಲದ ಸಮಯದಲ್ಲಿ ದೇಶದ ಭವಿಷ್ಯವನ್ನು ಮತ್ತಷ್ಟು ಎತ್ತರಕ್ಕೆ ನಮ್ಮ ಯುವಜನತೆ ಕೊಂಡೊಯ್ಯಲಿದ್ದಾರೆ ಎಂಬ ನಂಬಿಕೆ ಪುನಃ ಖಚಿತವಾಗಿದೆ ಮತ್ತು ಕಾಶಿ ಜ್ಞಾನದ ರಾಜಧಾನಿಯಾಗಿದೆ. ಇಂದು ಕಾಶಿಯ ಸಾಮರ್ಥ್ಯವನ್ನು ಮತ್ತೊಮ್ಮೆ ನಿರೂಪಿಸಲಾಗುತ್ತಿದೆ. ಇದು ಇಡೀ ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ ಮತ್ತು ನನಗೆ ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತ, ಕಾಶಿ ಸಂಸದ್ ಗ್ಯಾನ್ ಪ್ರತಿಯೋಗಿತ ಮತ್ತು ಕಾಶಿ ಸಂಸದ್ ಫೋಟೋಗ್ರಫಿ ಪ್ರತಿಯೋಗಿತ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸುವ ಅವಕಾಶ ನನಗೆ ದೊರೆತಿದೆ. ಎಲ್ಲ ವಿಜೇತರಿಗೆ ಅವರ ಪರಿಶ್ರಮಕ್ಕೆ, ಅವರ ಪ್ರತಿಭೆಗೆ ನಾನು ಅಭಿನಂದನೆಗಳನ್ನು ಹೇಳಲು ಬಯಸುತ್ತೇನೆ. ಜತೆಗೆ ಅವರ ಕುಟುಂಬದವರೂ ಹಾಗೂ ಅವರ ಮಾರ್ಗದರ್ಶಿಗಳನ್ನೂ ಸಹ ನಾನು ಅಭಿನಂದಿಸುತ್ತೇನೆ. ಸಾಧನೆಗೆ ಕೆಲವೇ ಮೆಟ್ಟಿಲುಗಳು ಹಿಂದುಳಿದಿರುವಂತಹವರು, 4ನೇ ಸ್ಥಾನ ತಲುಪಿದಂತವರನ್ನೂ ಸಹ ನಾನು ಅಭಿನಂದಿಸುತ್ತೇನೆ. ಜ್ಞಾನ ಪರಂಪರೆಯ ಕಾಶಿಯಲ್ಲಿ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದೇ ಒಂದು ಹೆಮ್ಮೆಯ ವಿಷಯವಾಗಿದೆ. ಇಲ್ಲಿ ಯಾರೊಬ್ಬರೂ ಸೋತಿಲ್ಲ ಅಥವಾ ಹಿಂದೆ ಬಿದ್ದಿಲ್ಲ, ಈ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನೀವು ಸಾಕಷ್ಟು ಕಲಿತಿದ್ದೀರಿ ಮತ್ತು ಹಲವು ಹೆಜ್ಜೆಗಳನ್ನು ಮುಂದಿಟ್ಟಿದ್ದೀರಿ. ಆದ್ದರಿಂದ ಈ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಕೂಡ ಅಭಿನಂದನೆಗಳಿಗೆ ಅರ್ಹರಾಗಿದ್ದೀರಿ.

ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸ್ವತಂತ್ರ ಸಭಾಗರ್ ನಲ್ಲಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು

February 23rd, 10:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸ್ವತಂತ್ರ ಸಭಾಗರ್ ನಲ್ಲಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದರು. ಅವರು ಕಾಶಿ ಸಂಸದ್ ಪ್ರತಿಯೋಗಿತಾ ಕಿರುಪುಸ್ತಕ ಮತ್ತು ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಿದರು . ಪ್ರಧಾನಮಂತ್ರಿಯವರು ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾ, ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಮತ್ತು ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು ಮತ್ತು ವಾರಣಾಸಿಯ ಸಂಸ್ಕೃತ ವಿದ್ಯಾರ್ಥಿಗಳಿಗೆ ಪುಸ್ತಕಗಳು, ಸಮವಸ್ತ್ರ, ಸಂಗೀತ ಉಪಕರಣಗಳು ಮತ್ತು ಮೆರಿಟ್ ವಿದ್ಯಾರ್ಥಿವೇತನವನ್ನು ವಿತರಿಸಿದರು. ಅವರು ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಗ್ಯಾಲರಿಗೆ ಭೇಟಿ ನೀಡಿದರು ಮತ್ತು ಸನ್ವರ್ತಿ ಕಾಶಿ ವಿಷಯದ ಕುರಿತು ತಮ್ಮ ತಮ್ಮ ಸ್ವೀಕರಿಸಲ್ಪಟ್ಟ ಛಾಯಾಚಿತ್ರಗಳ ಜೊತೆ ಇದ್ದ ಭಾಗವಹಿಸುವವರೊಂದಿಗೆ ಮಾತನಾಡಿದರು.

​​​​​​​ಫ್ರೆಂಚ್ ಗಗನಯಾತ್ರಿಯ ಭಾರತ ಭೇಟಿ: ಪ್ರಧಾನಿ ಮೋದಿ ಸಂತಸ

October 15th, 05:33 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫ್ರೆಂಚ್ ಗಗನಯಾತ್ರಿ ಥಾಮಸ್ ಪೆಸ್ಕ್ವೆಟ್ ಅವರ ಭಾರತ ಭೇಟಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

"ರಷ್ಯಾ ಅಧ್ಯಕ್ಷರ ಜತೆ ಜಂಟಿ ಪತ್ರಿಕಾ ಸಭೆಯಲ್ಲಿ ಪ್ರಧಾನ ಮಂತ್ರಿಯ ಹೇಳಿಕೆ "

October 05th, 02:45 pm

ಅಧ್ಯಕ್ಷ ಪುಟಿನ್ ಜತೆ ಜಂಟಿ ಪತ್ರಿಕಾ ಸಭೆಯಲ್ಲಿ ಮಾತನಾಡುತ್ತಾ, ಪ್ರಧಾನಿ ರಷ್ಯಾ ಜೊತೆಗಿನ ತನ್ನ ಪಾಲುದಾರಿಕೆಗೆ ಭಾರತ ಅತ್ಯುನ್ನತ ಆದ್ಯತೆ ನೀಡಿದೆ ಎಂದು ಹೇಳಿದರು. ಉಭಯ ದೇಶಗಳು ಭಯೋತ್ಪಾದನೆ, ಹವಾಮಾನ ಬದಲಾವಣೆ, ಎಸ್ .ಸಿ.ಓ. , ಬ್ರಿಕ್ಸ್ , ಜಿ 20 ಆಸಿಯಾನ್ , ಮತ್ತು ಭಯೋತ್ಪಾದನೆಯನ್ನು ಎದುರಿಸಲು ಸಹಕಾರವನ್ನು ಬಲಪಡಿಸಲು ಒಪ್ಪಿಕೊಂಡಿವೆ. ಮುಂದಿನ ದಿನಗಳಲ್ಲಿ, ಎರಡೂ ರಾಷ್ಟ್ರಗಳು ವ್ಯಾಪಾರ ಮತ್ತು ಹೂಡಿಕೆಯ ಕೊಂಡಿಗಳನ್ನು ಹೆಚ್ಚಿಸುತ್ತದೆ ಮತ್ತು ಸಮುದ್ರದಿಂದ ಬಾಹ್ಯಾಕಾಶಕ್ಕೆ ಸಹಕಾರವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.

PM Modi salutes the valour of soldiers at Arlington Cemetery

June 07th, 02:41 am