PM visits Somnath Temple, terms the 75th anniversary of its rebuilding a milestone in Bharat's civilisational journey

May 11th, 12:28 pm

While speaking at the Somnath Amrut Mahotsav in Somnath Temple, PM Modi described the 75th anniversary of the rebuilt temple as a landmark moment in Bharat’s civilisational journey. He said the devotion, energy and spiritual atmosphere surrounding Somnath reflected the enduring strength of India’s cultural and spiritual heritage across generations.

Somnath Amrut Mahotsav is a grand festival of inspiration for India for the next thousand years: PM Modi in Prabhas Patan, Gujarat

May 11th, 10:20 am

Addressing the Somnath Amrut Mahotsav at Somnath Temple, PM Modi described the 75th anniversary of the temple’s reconstruction as a milestone in Bharat’s civilisational journey and a symbol of India’s enduring spiritual consciousness. He said Somnath reflects the nation’s resilience, cultural continuity and unwavering faith, while also highlighting the importance of preserving heritage alongside development and modern progress.

PM Modi participates in Somnath Amrut Mahotsav, marking 75 years since the inauguration of the restored Somnath Temple, Gujarat

May 11th, 10:15 am

Addressing the Somnath Amrut Mahotsav at Somnath Temple, PM Modi described the 75th anniversary of the temple’s reconstruction as a milestone in Bharat’s civilisational journey and a symbol of India’s enduring spiritual consciousness. He said Somnath reflects the nation’s resilience, cultural continuity and unwavering faith, while also highlighting the importance of preserving heritage alongside development and modern progress.

ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 28th, 12:15 pm

ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.

ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 28th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.

The greatest pride of my life is that I am a karyakarta of the Bharatiya Janata Party: PM Modi at BJP HQ

January 20th, 11:16 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

PM Modi addresses BJP karyakartas at felicitation of New Party President

January 20th, 11:15 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 25th, 06:16 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ

December 25th, 05:23 pm

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.

‘ಸದೈವ ಅಟಲ್ ‘ನಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 25th, 11:21 am

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟಲ್ ಅವರ ಸ್ಮಾರಕ ಸ್ಥಳ ‘ಸದೈವ ಅಟಲ್’ ನಲ್ಲಿ ಗೌರವ ಸಲ್ಲಿಸಿದರು. ಅಟಲ್ ಅವರ ಜೀವನವು ಸಾರ್ವಜನಿಕ ಸೇವೆ ಮತ್ತು ರಾಷ್ಟ್ರೀಯ ಸೇವೆಗೆ ಮೀಸಲಾಗಿತ್ತು ಮತ್ತು ಅವರು ಸದಾ ದೇಶದ ಜನರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಗೌರವಾನ್ವಿತ ಅಟಲ್ ಜಿಯವರ ಜೀವನದಿಂದ ಸ್ಫೂರ್ತಿ ಪಡೆಯಲು ತಿಳಿಸುವ​​​​​​​ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

December 25th, 08:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅಟಲ್ ಅವರ ಜನ್ಮದಿನವಾದ ಇಂದು ಅವರ ಜೀವನದಿಂದ ಸ್ಫೂರ್ತಿ ಪಡೆಯಲು ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ -

ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 25th, 08:43 am

ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟಲ್ ಜಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಅಟಲ್ ಜಿ ಅವರು ತಮ್ಮ ಇಡೀ ಜೀವನವನ್ನು ಉತ್ತಮ ಆಡಳಿತ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟಿದ್ದರು’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ”ಅವರು ಕೇವಲ ನಿರರ್ಗಳ ವಾಗ್ಮಿಯಾಗಿ ಮಾತ್ರವಲ್ಲದೆ ಉತ್ಸಾಹಭರಿತ ಕವಿಯಾಗಿಯೂ ಸದಾ ಸ್ಮರಣೀಯರು. ಅವರ ವ್ಯಕ್ತಿತ್ವ, ಕೃತಿಗಳು ಮತ್ತು ನಾಯಕತ್ವವು ದೇಶದ ಸರ್ವತೋಮುಖ ಪ್ರಗತಿಗೆ ಮಾರ್ಗದರ್ಶಿ ಪಥವಾಗಿ ಕಾರ್ಯನಿರ್ವಹಿಸುತ್ತದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ಡಿಸೆಂಬರ್ 25 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

December 24th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮ ದಿನಾಚರಣೆಯ ಪ್ರಯುಕ್ತ 2025ರ ಡಿಸೆಂಬರ್ 25 ರಂದು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಪ್ರಧಾನಮಂತ್ರಿ ಅವರು ʻರಾಷ್ಟ್ರ ಪ್ರೇರಣಾ ಸ್ಥಳʼವನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 20th, 03:20 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು

December 20th, 03:10 pm

ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.

ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ಡೆಹ್ರಾಡೂನ್‌ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 09th, 01:00 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!

ಡೆಹ್ರಾಡೂನ್‌ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 09th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.

ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 01st, 01:30 pm

ಛತ್ತೀಸ್‌ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್‌ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್‌ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್‌ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್‌ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.