ಮುಂಬೈನಲ್ಲಿ ನಡೆದ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

February 18th, 12:07 pm

ಇಂದು, ವಿಶ್ವದ ಎರಡು ಮಹಾನ್ ನಾವೀನ್ಯತೆ ಕೇಂದ್ರಗಳು ಒಟ್ಟಿಗೆ ಬರುತ್ತಿವೆ. ನಾವು ಭಾರತ ಮತ್ತು ಫ್ರಾನ್ಸ್ ಬಗ್ಗೆ ಮಾತನಾಡುವಾಗ, ನಮ್ಮ ಸಂಬಂಧವು ನಾವೀನ್ಯತೆ ಬಗ್ಗೆ ಮಾತ್ರವಲ್ಲ, ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಬಗ್ಗೆಯೂ ಆಗಿದೆ. ಈ ಮನೋಭಾವದಿಂದ, ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು 2026 ಅನ್ನು ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷವೆಂದು ಆಚರಿಸಲು ನಿರ್ಧರಿಸಿದ್ದೇವೆ. ಇದು ಕೇವಲ ಆಚರಣೆಯಲ್ಲ; ಇದು ನಮ್ಮ ಹಂಚಿಕೆಯ ಬದ್ಧತೆ - ನಾವೀನ್ಯತೆಗಾಗಿ ಬದ್ಧತೆ, ಮುನ್ನಡೆಸಲು ಬದ್ಧತೆ.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

September 04th, 05:35 pm

ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

September 04th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

February 16th, 04:15 pm

ಭಾರತ್‌ ಮಂಟಪ್‌ ಇಂದು 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಭಾರತ್‌ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

February 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್‌ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್‌ ಟೆಕ್ಸ್‌ 2025ಗೆ ಸ್ವಾಗತಿಸಿದರು ಮತ್ತು ಭಾರತ್‌ ಮಂಟಪ್‌ 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

Cabinet approves continuation of the Atal Innovation Mission

November 25th, 08:45 pm

The Union Cabinet chaired by PM Modi approved the continuation of its flagship initiative, the Atal Innovation Mission (AIM), under the aegis of NITI Aayog, with an enhanced scope of work and an allocated budget of Rs.2,750 crore for the period till March 31, 2028. AIM 2.0 is a step towards Viksit Bharat that aims to expand, strengthen and deepen India’s already vibrant innovation and entrepreneurship ecosystem.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

August 25th, 08:01 pm

ನಿಮ್ಮಂತಹ ಎಲ್ಲಾ ಅನ್ವೇಷಕರನ್ನು ಭೇಟಿಯಾಗುವುದು ಮತ್ತು ಅವರೊಂದಿಗೆ ಸಂವಹನ ನಡೆಸುವುದನ್ನು ನಾನು ನಿಜವಾಗಿಯೂ ಬಹಳವಾಗಿ ಆನಂದಿಸಿದೆ. ನೀವು ಮುಟ್ಟುವ ಹೊಸ ವಿಷಯಗಳು, ನಿಮ್ಮ ಆವಿಷ್ಕಾರ ಮತ್ತು ನೀವು ಮಾಡುವ ಕೆಲಸದಲ್ಲಿ ನೀವು ತೋರುವ ಆತ್ಮವಿಶ್ವಾಸವು ನನ್ನಂತಹ ಅನೇಕ ಜನರಿಗೆ ಹೊಸದನ್ನು ಮಾಡಲು ಸ್ಫೂರ್ತಿಯಾಗುತ್ತದೆ. ಒಂದು ರೀತಿಯಲ್ಲಿ, ನೀವು ಸ್ಫೂರ್ತಿಯ ಮೂಲವಾಗುತ್ತೀರಿ, ಪ್ರೇರಣೆಯೊದಗಿಸುತ್ತೀರಿ. ಆದ್ದರಿಂದ, ನಾನು ನಿಮ್ಮನ್ನು ನನ್ನ ಹೃದಯಾಂತರಾಳದಿಂದ ಅಭಿನಂದಿಸಲು ಬಯಸುತ್ತೇನೆ!

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ಪ್ರಧಾನಿ ಭಾಷಣ

August 25th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಿದರು.

India's bio-economy has grown 8 times in the last 8 years: PM Modi

June 09th, 11:01 am

PM Modi inaugurated the Biotech Startup Expo - 2022. Speaking on the occasion, the PM said that India's bio-economy has grown 8 times in the last 8 years. “We have grown from $10 billion to $80 billion. India is not too far from reaching the league of top-10 countries in Biotech's global ecosystem”, he said.

ಬಯೋಟೆಕ್ ಸ್ಟಾರ್ಟಪ್ ಎಕ್ಸ್ ಪೋ-2022 ಉದ್ಘಾಟಿಸಿದ ಪ್ರಧಾನಮಂತ್ರಿ

June 09th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್ ಪೋ - 2022 ಅನ್ನು ಉದ್ಘಾಟಿಸಿದರು. ಅವರು ಜೈವಿಕ ತಂತ್ರಜ್ಞಾನ ಉತ್ಪನ್ನಗಳ ಇ-ಪೋರ್ಟಲ್ ಗೂ ಸಹ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್, ಶ್ರೀ ಧರ್ಮೇಂದ್ರ ಪ್ರಧಾನ್, ಡಾ ಜಿತೇಂದ್ರ ಸಿಂಗ್, ಬಯೋಟೆಕ್ ವಲಯದ ಪಾಲುದಾರರು, ತಜ್ಞರು, ಎಸ್‌ಎಂಇಗಳು, ಹೂಡಿಕೆದಾರರು ಈ ಉಪಸ್ಥಿತರಿದ್ದರು.

ಅಟಲ್ ನಾವೀನ್ಯತೆ ಅಭಿಯಾನದ ವಿಸ್ತರಣೆಗೆ ಸಂಪುಟದ ಅನುಮೋದನೆ

April 08th, 09:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಟಲ್ ನಾವೀನ್ಯತೆ ಅಭಿಯಾನ (ಎಐಎಂ) ಅನ್ನು ಮಾರ್ಚ್ 2023ರವರೆಗೆ ಮುಂದುವರಿಸಲು ತನ್ನ ಅನುಮೋದನೆ ನೀಡಿದೆ. ದೇಶದಲ್ಲಿ ನಾವೀನ್ಯತೆ ಸಂಸ್ಕೃತಿ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವ ಉದ್ದೇಶಿತ ಗುರಿಯ ಮೇಲೆ ಎಐಎಂ ಕೆಲಸ ಮಾಡುತ್ತದೆ. ಇದನ್ನು ಎಐಎಂ ತನ್ನ ವಿವಿಧ ಕಾರ್ಯಕ್ರಮಗಳ ಮೂಲಕ ಮಾಡಲಿದೆ.

Embrace challenges over comforts: PM Modi at IIT, Kanpur

December 28th, 11:02 am

Prime Minister Narendra Modi attended the 54th Convocation Ceremony of IIT Kanpur. The PM urged the students to become impatient for a self-reliant India. He said, Self-reliant India is the basic form of complete freedom, where we will not depend on anyone.

ಐಐಟಿ ಕಾನ್ಪುರ್ 54ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ ಮತ್ತು ಬ್ಲಾಕ್ ಚೈನ್ ಆಧರಿಸಿದ ಡಿಜಿಟಲ್ ಪದವಿಗಳ ಪ್ರದಾನಕ್ಕೆ ಚಾಲನೆ

December 28th, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ಕಾನ್ಪುರದ 54ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ಸಂಸ್ಥೆಯೇ ರೂಪಿಸಿರುವ ಬ್ಲಾಕ್ ಚೈನ್ ತಂತ್ರಜ್ಞಾನ ಆಧರಿಸಿದ ಡಿಜಿಟಲ್ ಪದವಿಗಳನ್ನು ವಿತರಿಸಿದರು.

ಸ್ವಚ್ಛ ಭಾರತ ಅಭಿಯಾನ ಮತ್ತು ಅಮೃತ್ ಅಭಿಯಾನದ ಪಯಣದಲ್ಲೂ ಒಂದು ಮಹೋದ್ದೇಶವಿದೆ, ಗೌರವವಿದೆ, ಘನತೆ ಇದೆ, ಒಂದು ದೇಶದ ಮಹತ್ವಾಕಾಂಕ್ಷೆ ಇದೆ ಮತ್ತು ಮಾತೃಭೂಮಿಯ ಬಗ್ಗೆ ಎಣೆಯಿಲ್ಲದ ಪ್ರೀತಿಯೂ ಇದೆ

October 01st, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಟಲ್ ಅಭಿಯಾನ ಫಾರ್ ಪುನಶ್ಚೇತನ ಮತ್ತು ನಗರ ಪರಿವರ್ತನೆ 2.0ಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್, ಶ್ರೀ ಕೌಶಲ್ ಕಿಶೋರ್, ಶ್ರೀ ಬಿಶ್ವೇಶ್ವರ್ ತುಡು, ರಾಜ್ಯಗಳ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಮೇಯರುಗಳು ಮತ್ತು ಅಧ್ಯಕ್ಷರು ಹಾಗೂ ಪುರಸಭೆ, ಪಾಲಿಕೆಗಳ ಆಯುಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಮೃತ್ 2.0ಕ್ಕೆ ಪ್ರಧಾನಮಂತ್ರಿ ಚಾಲನೆ

October 01st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಟಲ್ ಅಭಿಯಾನ ಫಾರ್ ಪುನಶ್ಚೇತನ ಮತ್ತು ನಗರ ಪರಿವರ್ತನೆ 2.0ಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್, ಶ್ರೀ ಕೌಶಲ್ ಕಿಶೋರ್, ಶ್ರೀ ಬಿಶ್ವೇಶ್ವರ್ ತುಡು, ರಾಜ್ಯಗಳ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಮೇಯರುಗಳು ಮತ್ತು ಅಧ್ಯಕ್ಷರು ಹಾಗೂ ಪುರಸಭೆ, ಪಾಲಿಕೆಗಳ ಆಯುಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಅಕ್ಟೋಬರ್ 1ರಂದು ʻಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಮೃತ್ 2.0ʼಗೆ ಚಾಲನೆ ನೀಡಲಿರುವ ಪ್ರಧಾನಿ

September 30th, 01:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು `ಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಟಲ್ ನಗರ ಪುನರುಜ್ಜೀವ ಮತ್ತು ಪರಿವರ್ತನೆ ಯೋಜನೆ 2.0ʼಗೆ (ಅಮೃತ್‌ 2.0) 2021ರ ಅಕ್ಟೋಬರ್ 1ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಚಾಲನೆ ನೀಡಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ವರ್ತುಲ ಆರ್ಥಿಕತೆ ಹ್ಯಾಕಥಾನ್‌ನ (ಐ-ಎಸಿಇ) ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಷಣ

February 19th, 10:01 am

ನಮ್ಮ ಅನುಭೋಗದ ವಿಧಾನ ಮತ್ತು ಅದರಿಂದ ನಮ್ಮ ಪರಿಸರದ ಮೇಲಾಗುತ್ತಿರುವ ಪರಿಣಾಮವನ್ನು ಹೇಗೆ ಕಡಿಮೆ ಮಾಡಬಹುದೆಂಬ ಬಗ್ಗೆ ಅವಲೋಕನ ನಡೆಸಬೇಕಾದ ಅಗತ್ಯವಿದೆ ಎಂದು ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಹೇಳಿದರು. ಈ ನಿಟ್ಟಿನಲ್ಲಿ ನಮ್ಮ ಹಲವು ಸವಾಲುಗಳನ್ನು ಪರಿಹರಿಸುವಲ್ಲಿ ಆವರ್ತ ಆರ್ಥಿಕತೆಯು ಪ್ರಮುಖ ಹೆಜ್ಜೆಯಾಗಬಲ್ಲದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ-ಆಸ್ಟ್ರೇಲಿಯಾ ವರ್ತುಲ ಆರ್ಥಿಕ ಹ್ಯಾಕಥಾನ್‌ (ಐ-ಎಸಿಇ) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

February 19th, 10:00 am

ನಮ್ಮ ಅನುಭೋಗದ ವಿಧಾನ ಮತ್ತು ಅದರಿಂದ ನಮ್ಮ ಪರಿಸರದ ಮೇಲಾಗುತ್ತಿರುವ ಪರಿಣಾಮವನ್ನು ಹೇಗೆ ಕಡಿಮೆ ಮಾಡಬಹುದೆಂಬ ಬಗ್ಗೆ ಅವಲೋಕನ ನಡೆಸಬೇಕಾದ ಅಗತ್ಯವಿದೆ ಎಂದು ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಹೇಳಿದರು. ಈ ನಿಟ್ಟಿನಲ್ಲಿ ನಮ್ಮ ಹಲವು ಸವಾಲುಗಳನ್ನು ಪರಿಹರಿಸುವಲ್ಲಿ ಆವರ್ತ ಆರ್ಥಿಕತೆಯು ಪ್ರಮುಖ ಹೆಜ್ಜೆಯಾಗಬಲ್ಲದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

India has a rich legacy in science, technology and innovation: PM Modi

December 22nd, 04:31 pm

Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.

PM delivers inaugural address at IISF 2020

December 22nd, 04:27 pm

Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.