India-France Year of Innovation is our shared commitment to innovate and lead: PM Modi at the India-France Innovation Forum

February 18th, 12:07 pm

In his address at the India-France Innovation Forum in Mumbai, PM Modi said that he and President Macron have decided to celebrate 2026 as the India-France Year of Innovation. Highlighting the government’s achievements in innovation over the past decade, he urged industry leaders to join the Atal Innovation Mission. He called on everyone to join hands with India to build a future where technology serves humanity and progress is inclusive.

ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 26th, 01:30 pm

ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು

December 26th, 01:00 pm

ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 11th, 05:00 pm

ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 11th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.

3 ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ

September 26th, 05:15 pm

ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ದೇಶಕ್ಕೆ ಸಮರ್ಪಿಸಿದರು

September 26th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುಮಾರು 130 ಕೋಟಿ ರೂಪಾಯಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಸೂಪರ್ ಕಂಪ್ಯೂಟಿಂಗ್ ಮಿಷನ್ (NSM) ಅಡಿಯಲ್ಲಿ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಈ ಸೂಪರ್ ಕಂಪ್ಯೂಟರ್ ಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪ್ರಮುಖ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗುವಂತೆ ನಿಯೋಜಿಸಲಾಗಿದೆ. ಪ್ರಧಾನ ಮಂತ್ರಿಯವರು ಹವಾಮಾನ ಮತ್ತು ತಾಪಮಾನ ಸಂಶೋಧನೆಗಾಗಿ ವಿಶೇಷವಾಗಿ ರೂಪಿಸಲಾದ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (HPC) ವ್ಯವಸ್ಥೆಯನ್ನು ಕೂಡ ಉದ್ಘಾಟಿಸಿದರು.

ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್‌ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 19th, 10:31 am

ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!

ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ

June 19th, 10:30 am

ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.

ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭ ಉದ್ಘಾಟಿಸಿದ ಪ್ರಧಾನಮಂತ್ರಿ

March 20th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಸ್ಟಾರ್ಟ್ ಅಪ್ ಮಹಾಕುಂಭವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನು ಪಡೆದರು.

PM inaugurates Start-up Mahakumbh at Bharat Mandapam, New Delhi

March 20th, 10:36 am

PM Modi inaugurated the Start-up Mahakumbh at Bharat Mandapam, New Delhi. The startup revolution is being led by small cities and that too in a wide range of sectors including agriculture, textiles, medicine, transport, space, yoga and ayurveda.

ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 09th, 08:30 pm

ಗಯಾನಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಫಿಲಿಪ್ಸ್, ಶ್ರೀ ವಿನೀತ್ ಜೈನ್ ಜೀ, ಉದ್ಯಮದ ನಾಯಕರು, ಸಿಇಓಗಳು, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ,

ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

February 09th, 08:12 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್‌ನಲ್ಲಿಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ-2024 ಉದ್ದೇಶಿಸಿ ಭಾಷಣ ಮಾಡಿದರು.

ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 7ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 27th, 10:56 am

ಇಂಡಿಯಾ ಮೊಬೈಲ್ ಕಾಂಗ್ರೆಸ್ ನ ಏಳನೇ ಆವೃತ್ತಿಯಲ್ಲಿ ನಿಮ್ಮೊಂದಿಗೆ ಇರುವುದು ಸ್ವತಃ ಒಂದು ಆಹ್ಲಾದಕರ ಅನುಭವವಾಗಿದೆ. 21 ನೇ ಶತಮಾನದ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ, ಈ ಘಟನೆಯು ಲಕ್ಷಾಂತರ ಜನರ ಹಣೆಬರಹವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ನಾವು ಭವಿಷ್ಯದ ಬಗ್ಗೆ ಮಾತನಾಡುವ ಸಮಯವಿತ್ತು, ಅದು ಮುಂದಿನ ದಶಕ, ಅಥವಾ 20-30 ವರ್ಷಗಳ ನಂತರ, ಅಥವಾ ಮುಂದಿನ ಶತಮಾನ. ಆದರೆ ಇಂದು, ಪ್ರತಿದಿನ ತಂತ್ರಜ್ಞಾನದಲ್ಲಿ ತ್ವರಿತ ಬದಲಾವಣೆಗಳಿಂದಾಗಿ, ' ಭವಿಷ್ಯವು ಇಲ್ಲಿ ಮತ್ತು ಈಗ ಇದೆ ' ಎಂದು ನಾವು ಹೇಳುತ್ತೇವೆ. ಕೆಲವೇ ನಿಮಿಷಗಳ ಹಿಂದೆ, ನಾನು ಇಲ್ಲಿನ ಪ್ರದರ್ಶನದಲ್ಲಿ ಕೆಲವು ಮಳಿಗೆಗಳಿಗೆ ಭೇಟಿ ನೀಡಿದ್ದೆ. ಈ ಪ್ರದರ್ಶನದಲ್ಲಿ ನಾನು ಅದೇ ಭವಿಷ್ಯವನ್ನು ನೋಡಿದೆ. ಟೆಲಿಕಾಂ, ತಂತ್ರಜ್ಞಾನ, ಸಂಪರ್ಕ, 6 ಜಿ, ಎಐ(ಕೃತಕ ಬುದ್ದಿಮತ್ತೆ), ಸೈಬರ್ ಭದ್ರತೆ, ಅರೆವಾಹಕಗಳು, ಡ್ರೋನ್ ಗಳು, ಬಾಹ್ಯಾಕಾಶ ಕ್ಷೇತ್ರ, ಆಳ ಸಮುದ್ರ ಪರಿಶೋಧನೆ, ಹಸಿರು ತಂತ್ರಜ್ಞಾನ ಅಥವಾ ಇತರ ಕ್ಷೇತ್ರಗಳು ಆಗಿರಲಿ, ಮುಂಬರುವ ಸಮಯವು ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಮತ್ತು ಯುವ ಪೀಳಿಗೆಯು ದೇಶದ ಭವಿಷ್ಯವನ್ನು ಮುನ್ನಡೆಸುತ್ತಿದೆ, ನಮ್ಮ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ ಎಂಬುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ.

ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ(ಐಎಂಸಿ) 7ನೇ ಆವೃತ್ತಿಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿಗಳು

October 27th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ʻಭಾರತ್ ಮಂಟಪʼದಲ್ಲಿ ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ 7ನೇ ಆವೃತ್ತಿಗೆ (ಐಎಂಸಿ-2023) ಚಾಲನೆ ನೀಡಿದರು. ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದ್ದು, 2023ರ ಅಕ್ಟೋಬರ್ 27 ರಿಂದ 29 ರವರೆಗೆ 'ಗ್ಲೋಬಲ್ ಡಿಜಿಟಲ್ ಇನ್ನೋವೇಶನ್' ಎಂಬ ವಿಷಯಾಧಾರಿತವಾಗಿ ನಡೆಯಲಿದೆ. ʻಐಎಂಸಿ-2023ʼ ಪ್ರಮುಖ ಅತ್ಯಾಧುನಿಕ ತಂತ್ರಜ್ಞಾನಗಳ ಡೆವಲಪರ್, ತಯಾರಕ ಮತ್ತು ರಫ್ತುದಾರರಾಗಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಗೆ 100 '5ಜಿ ಯೂಸ್ ಕೇಸ್ ಲ್ಯಾಬ್'ಗಳನ್ನು (5ಜಿ ಬಳಕೆ ಪ್ರಯೋಗಾಲಯ) ಪ್ರದಾನ ಮಾಡಿದರು.

15 ನೇ ಬ್ರಿಕ್ಸ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 23rd, 03:30 pm

15ನೇ ಬ್ರಿಕ್ಸ್ ಶೃಂಗಸಭೆಯ ಅದ್ಧೂರಿ ಆಯೋಜನೆ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಮತ್ತೊಮ್ಮೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.

August 15th, 02:14 pm

1. ನನ್ನ ಪ್ರೀತಿಯ 140 ಕೋಟಿ ಕುಟುಂಬ ಸದಸ್ಯರೇ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಈಗ ಜನಸಂಖ್ಯೆ ಹಾಗೂ ನಂಬಿಕೆಯಲ್ಲೂ ನಾವು ನಂಬರ್ ಒನ್ ಎಂದು ಅನೇಕ ಜನರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಬೃಹತ್ ದೇಶ, 140 ಕೋಟಿ ದೇಶವಾಸಿಗಳು, ನನ್ನ ಸಹೋದರ ಸಹೋದರಿಯರು, ನನ್ನ ಕುಟುಂಬ ಸದಸ್ಯರು ಇಂದು ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದ್ದಾರೆ. ಭಾರತವನ್ನು ಪ್ರೀತಿಸುವ, ಭಾರತವನ್ನು ಗೌರವಿಸುವ, ಭಾರತದ ಬಗ್ಗೆ ಹೆಮ್ಮೆಪಡುವ ದೇಶ ಮತ್ತು ಜಗತ್ತಿನ ಕೋಟ್ಯಂತರ ಜನರಿಗೆ ನಾನು ಈ ಮಹಾನ್ ಪವಿತ್ರ ಸ್ವಾತಂತ್ರ್ಯದ ಹಬ್ಬದಂದು ಶುಭ ಹಾರೈಸುತ್ತೇನೆ.

India Celebrates 77th Independence Day

August 15th, 09:46 am

On the occasion of India's 77th year of Independence, PM Modi addressed the nation from the Red Fort. He highlighted India's rich historical and cultural significance and projected India's endeavour to march towards the AmritKaal. He also spoke on India's rise in world affairs and how India's economic resurgence has served as a pole of overall global stability and resilient supply chains. PM Modi elaborated on the robust reforms and initiatives that have been undertaken over the past 9 years to promote India's stature in the world.

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

August 15th, 07:00 am

ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಜನಸಂಖ್ಯೆಯ ವಿಚಾರದಲ್ಲೂ, ನಾವು ʻನಂಬರ್ ಒನ್ʼ ಎಂದು ನಂಬಲಾಗಿದೆ. ಅಂತಹ ದೊಡ್ಡ ರಾಷ್ಟ್ರವು ಇಂದು ತನ್ನ 140 ಕೋಟಿ ಸಹೋದರ ಸಹೋದರಿಯರು ಮತ್ತು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸುತ್ತಿದೆ. ಈ ಮಹತ್ವದ ಮತ್ತು ಪವಿತ್ರ ಸಂದರ್ಭದಲ್ಲಿ, ನಾನು ದೇಶದ ಪ್ರತಿಯೊಬ್ಬ ನಾಗರಿಕನಿಗೂ, ನಮ್ಮ ರಾಷ್ಟ್ರವಾದ ಭಾರತವನ್ನು ಪ್ರೀತಿಸುವ, ಗೌರವಿಸುವ ಮತ್ತು ಹೆಮ್ಮೆಪಡುವ ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

The India of today is moving forward in every direction that is necessary to become a tech leader: PM Modi

May 11th, 11:00 am

PM Modi inaugurated the programme marking National Technology Day 2023. PM Modi stated “The Tinker-preneurs of India will soon become leading entrepreneurs of the world” and that the India of today is moving forward in every direction that is necessary to become a tech leader.