Minister for Foreign Affairs of Australia Senator Penny Wong meets Prime Minister

May 26th, 08:19 pm

The Prime Minister, Shri Narendra Modi expressed happiness on meeting Senator Penny Wong, Minister for Foreign Affairs of Australia.

ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 15th, 02:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ - ಪ್ರಧಾನಮಂತ್ರಿ ಖಂಡನೆ

December 14th, 05:23 pm

ಯಹೂದಿಗಳ ಹಬ್ಬವಾದ ಹನುಕ್ಕಾದ ಮೊದಲ ದಿನವನ್ನು ಆಚರಿಸುತ್ತಿದ್ದ ಜನರನ್ನು ಗುರಿಯಾಗಿಸಿಕೊಂಡು ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹ ನಿಮಿತ್ತ ಅವರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ

November 29th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆತ್ಮೀಯ ಸ್ನೇಹಿತ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹಕ್ಕಾಗಿ ಅವರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Joint statement by the Government of India, the Government of Australia and the Government of Canada

November 22nd, 09:21 pm

India, Australia, and Canada have agreed to enter into a new trilateral partnership: the Australia-Canada-India Technology and Innovation (ACITI) Partnership. The three sides agreed to strengthen their ambition in cooperation on critical and emerging technologies. The Partnership will also examine the development and mass adoption of artificial intelligence to improve citizens' lives.

ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

November 21st, 10:43 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರು ಇಂದು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು. 2020ರಲ್ಲಿ ಸಂಬಂಧವನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಏರಿದ ನಂತರ ಕಳೆದ ಐದು ವರ್ಷಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಹಕಾರವನ್ನು ಗಾಢವಾಗಿಸುವ ಮತ್ತು ವೈವಿಧ್ಯಗೊಳಿಸಿದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು. ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ಅಲ್ಬನೀಸ್ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಾಯಕರು ಬದ್ಧರಾಗಿದ್ದಾರೆ.

ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

September 24th, 06:33 pm

'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 18th, 02:49 pm

ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿ ಮಾಡಿದರು.

ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 06th, 08:04 pm

ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.

ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 06th, 08:00 pm

ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.

ಐತಿಹಾಸಿಕ ಎರಡನೇ ಅವಧಿಗೆ ಆಯ್ಕೆಯಾದ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

May 06th, 02:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಆಸ್ಟ್ರೇಲಿಯಾದ 32ನೇ ಪ್ರಧಾನಮಂತ್ರಿಯಾಗಿ ಐತಿಹಾಸಿಕ ರೀತಿಯಲ್ಲಿ ಪುನರಾಯ್ಕೆಗೊಂಡುದಕ್ಕಾಗಿ ಅವರನ್ನು ಅಭಿನಂದಿಸಿದರು.

ಆಸ್ಟ್ರೇಲಿಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಶ್ರೀ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

May 03rd, 06:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶ್ರೀ ಅಂತೋನಿ ಅಲ್ಬನೀಸ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 08th, 08:30 pm

ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ

April 08th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.

ಆಸ್ಟ್ರೇಲಿಯಾದ ಮಾಜಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

March 01st, 02:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಮಂತ್ರಿ ಟೋನಿ ಅಬಾಟ್ ಅವರನ್ನು ಭೇಟಿಯಾದರು.

ಈ ವಾರ ಭಾರತದ ಬಗ್ಗೆ ವಿಶ್ವ

February 06th, 01:03 pm

ಈ ವಾರ, ಭಾರತವು ತನ್ನ ಜಾಗತಿಕ ಪಾಲುದಾರಿಕೆಗಳನ್ನು ಬಲಪಡಿಸುವಲ್ಲಿ, ತಾಂತ್ರಿಕ ಮತ್ತು ಬಾಹ್ಯಾಕಾಶ ಪರಿಶೋಧನೆಯನ್ನು ಮುನ್ನಡೆಸುವಲ್ಲಿ ಮತ್ತು ಜಾಗತಿಕ ಸಂರಕ್ಷಣೆ ಮತ್ತು ಆರೋಗ್ಯ ರಕ್ಷಣಾ ಪ್ರಯತ್ನಗಳಿಗೆ ಕೊಡುಗೆ ನೀಡುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಇಸ್ರೇಲ್ ಜೊತೆಗಿನ ಸಂಬಂಧಗಳನ್ನು ಗಾಢವಾಗಿಸುವುದರಿಂದ ಹಿಡಿದು ಹೊಸ ಉಪಗ್ರಹ ಕಾರ್ಯಕ್ರಮಗಳನ್ನು ಉಡಾವಣೆ ಮಾಡುವವರೆಗೆ ಮತ್ತು ವಿದೇಶಗಳಲ್ಲಿ ಭಾರತೀಯ ಪ್ರತಿಭೆಗಳ ಸಾಧನೆಗಳನ್ನು ಗುರುತಿಸುವವರೆಗೆ, ಭಾರತವು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ತನ್ನ ಬೆಳೆಯುತ್ತಿರುವ ಪಾತ್ರವನ್ನು ಪ್ರತಿಪಾದಿಸುತ್ತಲೇ ಇದೆ. ಯುರೋಪ್ ಭಾರತವನ್ನು ಭವಿಷ್ಯದ ಸಹಯೋಗಕ್ಕೆ ಪ್ರಮುಖ ಅವಕಾಶವೆಂದು ನೋಡುತ್ತದೆ. ಈ ವಾರದ ಕೆಲವು ಪ್ರಮುಖ ಮುಖ್ಯಾಂಶಗಳನ್ನು ಇಲ್ಲಿ ನೋಡೋಣ.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.

PM Modi expresses happiness over Australian PM’s meet with Indian and PM’s XI cricket teams

November 28th, 07:33 pm

Prime Minister Shri Narendra Modi expressed happiness over Australian Prime Minister Anthony Albanese’s meeting with Indian and PM’s XI cricket teams today. Shri Modi also lauded Indian Cricketers for their great start in the ongoing test match series in Australia.

ಎರಡನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆ

November 20th, 08:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಆಂಥೋನಿ ಅಲ್ಬನೀಸ್ ಅವರು ನವೆಂಬರ್ 19ರಂದು ರಿಯೋ ಡಿ ಜನೈರೊದಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ 2ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಿದರು. ಪ್ರಥಮ ವಾರ್ಷಿಕ ಶೃಂಗಸಭೆಯನ್ನು 2023ರ ಮಾರ್ಚ್ 10ರಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಅಲ್ಬನೀಸ್ ಅವರ ಭಾರತದ ಭೇಟಿಯ ಸಮಯದಲ್ಲಿ ನಡೆಸಲಾಗಿತ್ತು.