The fact sheet on India's growth is a success story of the Reform-Perform-Transform mantra: PM Modi in Rajkot

January 11th, 02:45 pm

PM Modi inaugurated the Vibrant Gujarat Regional Conference for the Kutch and Saurashtra region in Rajkot. Recalling the devastating earthquake in Kutch and drought in Saurashtra, the PM said these regions are now emerging as major drivers of Aatmanirbhar Bharat and India’s rise as a global manufacturing hub. He highlighted the achievements India has made over the past 11 years.

PM Narendra Modi inaugurates Vibrant Gujarat Regional Conference for Kutch and Saurashtra Region in Rajkot

January 11th, 02:30 pm

PM Modi inaugurated the Vibrant Gujarat Regional Conference for the Kutch and Saurashtra region in Rajkot. Recalling the devastating earthquake in Kutch and drought in Saurashtra, the PM said these regions are now emerging as major drivers of Aatmanirbhar Bharat and India’s rise as a global manufacturing hub. He highlighted the achievements India has made over the past 11 years.

ಭಾರತ-ಯುಕೆ ಜಂಟಿ ಹೇಳಿಕೆ

October 09th, 03:24 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಕಿಂಗ್ಡಮ್ನ ಗೌರವಾನ್ವಿತ ಪ್ರಧಾನಮಂತ್ರಿ, ಸರ್ ಕೀರ್ ಸ್ಟಾರ್ಮರ್, ಎಂಪಿ ಅವರು ಅಕ್ಟೋಬರ್ 08-09, 2025 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಸ್ಟಾರ್ಮರ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವು ಆಗಮಿಸಿದ್ದು, ಇದರಲ್ಲಿ ವ್ಯವಹಾರ ಮತ್ತು ವಾಣಿಜ್ಯ ಖಾತೆಯ ರಾಜ್ಯ ಕಾರ್ಯದರ್ಶಿ ಹಾಗೂ ಬೋರ್ಡ್ ಆಫ್ ಟ್ರೇಡ್ನ ಅಧ್ಯಕ್ಷರಾದ ಗೌರವಾನ್ವಿತ ಪೀಟರ್ ಕೈಲ್, ಸಂಸದರು, ಸ್ಕಾಟ್ಲೆಂಡ್ ನ ರಾಜ್ಯ ಕಾರ್ಯದರ್ಶಿ ಗೌರವಾನ್ವಿತ ಡೌಗ್ಲಾಸ್ ಅಲೆಕ್ಸಾಂಡರ್, ಸಂಸದರು, ಹೂಡಿಕೆ ಸಚಿವರಾದ ಶ್ರೀ ಜೇಸನ್ ಸ್ಟಾಕ್ ವುಡ್ ಹಾಗೂ 125 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉದ್ಯಮಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಸೇರಿದ್ದರು.

ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 15th, 04:30 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ

September 15th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್‌ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.

ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

August 29th, 03:59 pm

ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.

ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 04th, 09:30 pm

ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.

ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 09:00 pm

ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.

ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ

July 03rd, 03:45 pm

ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.

ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 03rd, 03:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.

ಜೂನ್ 2 ರಂದು ನವದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

June 01st, 08:01 pm

ವಿಶ್ವ ದರ್ಜೆಯ ವಾಯು ಸಾರಿಗೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಯಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 2 ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ

April 12th, 04:48 pm

ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:15 ರ ಸುಮಾರಿಗೆ ಅವರು ಹಿಸಾರ್ ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ ನಿಯೋಗದ ಸದಸ್ಯರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು

March 05th, 07:52 pm

17 ಸದಸ್ಯರನ್ನು ಒಳಗೊಂಡ ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ (JIBCC) ನಿಯೋಗವು ಅಧ್ಯಕ್ಷ ಶ್ರೀ ಟ್ಯಾಟ್ಸುವೊ ಯಸುನಾಗಾ ಅವರ ನೇತೃತ್ವದಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.

ಪ್ಯಾರೀಸ್‌ ನಲ್ಲಿ ಭಾರತ-ಫ್ರಾನ್ಸ್‌ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

February 12th, 12:45 am

ಇಲ್ಲಿ ಉಪಸ್ಥಿತರಿರುವ ಭಾರತ ಮತ್ತು ಫ್ರಾನ್ಸ್‌ ನ ಕೈಗಾರಿಕಾ ನಾಯಕರೇ,

ಈ ವಾರ ಭಾರತದ ಬಗ್ಗೆ ಜಗತ್ತು

February 10th, 06:40 pm

ಈ ವಾರ, ಭಾರತ ಮತ್ತು ಭಾರತೀಯರು ವಿಶ್ವ ವೇದಿಕೆಯಲ್ಲಿ ತಮ್ಮ ಗಮನಾರ್ಹ ಆರೋಹಣವನ್ನು ಮುಂದುವರೆಸಿದ್ದಾರೆ, ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬಲಪಡಿಸುತ್ತಿದ್ದಾರೆ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಆಚರಿಸುತ್ತಿದ್ದಾರೆ. ಆಗ್ನೇಯ ಏಷ್ಯಾದೊಂದಿಗೆ ಆಳವಾದ ಸಂಬಂಧಗಳನ್ನು ಬೆಳೆಸುವುದರಿಂದ ಹಿಡಿದು ಕೃತಕ ಬುದ್ಧಿಮತ್ತೆ ಮತ್ತು ವಾಯುಯಾನವನ್ನು ಮುನ್ನಡೆಸುವವರೆಗೆ, ಭಾರತದ ಪ್ರಗತಿಯು ಜಾಗತಿಕ ಪಾಲುದಾರರಿಗೆ ಪ್ರಮುಖ ಗಮನವಾಗಿದೆ. ಈ ವಾರದ ಕೆಲವು ಪ್ರಮುಖ ಮುಖ್ಯಾಂಶಗಳನ್ನು ಇಲ್ಲಿ ನೋಡೋಣ.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

ನವದೆಹಲಿಯಲ್ಲಿ ನಡೆದ 2ನೇ ಏಷ್ಯಾ ಪೆಸಿಫಿಕ್ ನಾಗರಿಕ ವಿಮಾನಯಾನ ಸಚಿವರ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 12th, 04:00 pm

ವಿವಿಧ ದೇಶಗಳಿಂದ ಆಗಮಿಸಿರುವ ಎಲ್ಲ ಗಣ್ಯರಿಗೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ 2 ದಿನಗಳಿಂದ ನಾಗರೀಕ ವಿಮಾನಯಾನ ವಲಯಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳನ್ನು ಚರ್ಚಿಸಿದ್ದೀರಿ. ನಮ್ಮ ಸಾಮೂಹಿಕ ಅಥವಾ ಸಂಘಟಿತ ಬದ್ಧತೆ ಮತ್ತು ಏಷ್ಯಾ ಪೆಸಿಫಿಕ್ ವಲಯದ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಾವು ಕೆಲವು ಪ್ರಕಾಶಮಾನವಾದ ಮನಸ್ಸುಗಳನ್ನು ಹೊಂದಿದ್ದೇವೆ ಎಂದು ನಾನು ನಂಬುತ್ತೇನೆ. ಈ ಸಂಸ್ಥೆಯು 80 ವರ್ಷಗಳನ್ನು ಪೂರೈಸಿದೆ. ನಮ್ಮ ಸಚಿವರಾದ ಶ್ರೀ ನಾಯ್ಡು ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ, 80,000 ಮರಗಳನ್ನು ನೆಡುವ ಪ್ರಮುಖ ಉಪಕ್ರಮವನ್ನು 'ಏಕ್ ಪೆಡ್ ಮಾ ಕೆ ನಾಮ್'(ಭೂತಾಯಿಗಾಗಿ ಒಂದು ಮರ) ಕೈಗೊಳ್ಳಲಾಗಿದೆ. ಆದಾಗ್ಯೂ, ನಾನು ಇನ್ನೊಂದು ವಿಷಯದತ್ತ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ. ನಮ್ಮ ದೇಶದಲ್ಲಿ, ಒಬ್ಬ ವ್ಯಕ್ತಿ 80 ವರ್ಷ ತಲುಪಿದಾಗ, ಅದನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತದೆ. ನಮ್ಮ ಪೂರ್ವಜರ ಪ್ರಕಾರ, 80ನೇ ವಯಸ್ಸು ತಲುಪುವುದು ಎಂದರೆ ಒಂದು ಸಾವಿರ ಹುಣ್ಣಿಮೆಗಳನ್ನು ನೋಡುವ ಅವಕಾಶ ಹೊಂದಿರುವುದು ಎಂಬರ್ಥ. ಒಂದರ್ಥದಲ್ಲಿ ನಮ್ಮ ಈ ವಲಯದ ಸಂಸ್ಥೆಯೂ ಒಂದು ಸಾವಿರ ಹುಣ್ಣಿಮೆಗಳನ್ನು ಕಣ್ತುಂಬಿಕೊಂಡು ಹತ್ತಿರದಿಂದ ನೋಡಿದ ಅನುಭವ ಪಡೆದಿದೆ. ಹೀಗಾಗಿ, ಭೂಮಿಯ ಮೇಲಿನ ಈ 80 ವರ್ಷಗಳ ಪ್ರಯಾಣವು ಸ್ಮರಣೀಯ, ಯಶಸ್ವಿ ಮತ್ತು ಶ್ಲಾಘನೀಯ ಪ್ರಯಾಣವಾಗಿದೆ.

ಲಾಕ್ಹೀಡ್ ಮಾರ್ಟಿನ್ ಸಂಸ್ಥೆಯ 'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ವರ್ಲ್ಡ್' ಬದ್ಧತೆಯನ್ನು ಶ್ಲಾಘಿಸಿದ ಪ್ರಧಾನ ಮಂತ್ರಿಗಳು

July 19th, 11:50 am

'ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದ ವರ್ಲ್ಡ್' ದೃಷ್ಟಿಕೋನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮೂಲದ ಅಂತರಿಕ್ಷಯಾನ ಮತ್ತು ರಕ್ಷಣಾ ತಂತ್ರಜ್ಞಾನಗಳ ಉತ್ಪಾದನಾ ಕಂಪೆನಿ ಲಾಕ್ಹೀಡ್ ಮಾರ್ಟಿನ್ ನ ಬದ್ಧತೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.