Prime Minister Narendra Modi to inaugurate Phase I of Noida International Airport in Uttar Pradesh
March 26th, 09:52 am
PM Modi will visit Uttar Pradesh on 28 March 2026 to inaugurate Phase I of Noida International Airport worth around ₹11,200 crore. The airport will initially have a passenger handling capacity of 12 MPPA, with scalability up to 70 MPPA upon full development. Designed as a sustainable and future-ready infrastructure project, the Noida airport’s architectural design blends cultural aesthetics with modern infrastructure.Cabinet approves Regional Connectivity Scheme – Modified UDAN with a total outlay of Rs.28,840 crore
March 25th, 04:16 pm
The Union Cabinet, chaired by PM Modi, has approved the launch and implementation of the Regional Connectivity Scheme – Modified UDAN for a period of ten years from FY 2026-27 to FY 2035-36, with a total outlay of Rs. 28,840 crore. In line with the Viksit Bharat 2047 vision, this initiative will enhance regional air connectivity, boost economic growth, trade and tourism and promote the indigenous aerospace sector.Cabinet approves Continuation of the Immigration, Visa, Foreigners Registration & Tracking (lVFRT) Scheme
March 25th, 04:12 pm
The Union Cabinet, chaired by PM Modi, has approved the continuation of the Immigration, Visa, Foreigners Registration & Tracking (IVFRT) Scheme beyond 31 March 2026 for a period of five years, with a budget outlay of Rs. 1,800 crore. The continuation of the project is a strategic transformation aligned with the Government of India's vision to promote international mobility. This will give a boost to the tourism, medical and business sectors.Cabinet approves major expansion of Civil Enclave at Srinagar International Airport
February 24th, 04:21 pm
The Cabinet Committee on Economic Affairs, chaired by PM Modi, has approved the development of the Civil Enclave at Srinagar International Airport at an estimated cost of Rs. 1,677 crore. The state-of-the-art new terminal will reflect a harmonious blend of modern design and the rich cultural heritage of Kashmir. The project is expected to significantly boost tourism and economic growth in the region.ಕಾಮನ್ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 15th, 11:00 am
ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!ಸಂವಿದಾನ ಸದನದ ಸೆಂಟ್ರಲ್ ಹಾಲ್ನಲ್ಲಿ ಕಾಮನ್ವೆಲ್ತ್ನ ಸ್ಪೀಕರ್ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್ನಲ್ಲಿ ನಡೆದ ಕಾಮನ್ವೆಲ್ತ್ನ ಸ್ಪೀಕರ್ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್ಕೋಟ್ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ನ ರಾಜ್ಕೋಟ್ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್ಕೋಟ್ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಭಾರತ-ಯುಕೆ ಜಂಟಿ ಹೇಳಿಕೆ
October 09th, 03:24 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಕಿಂಗ್ಡಮ್ನ ಗೌರವಾನ್ವಿತ ಪ್ರಧಾನಮಂತ್ರಿ, ಸರ್ ಕೀರ್ ಸ್ಟಾರ್ಮರ್, ಎಂಪಿ ಅವರು ಅಕ್ಟೋಬರ್ 08-09, 2025 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಸ್ಟಾರ್ಮರ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವು ಆಗಮಿಸಿದ್ದು, ಇದರಲ್ಲಿ ವ್ಯವಹಾರ ಮತ್ತು ವಾಣಿಜ್ಯ ಖಾತೆಯ ರಾಜ್ಯ ಕಾರ್ಯದರ್ಶಿ ಹಾಗೂ ಬೋರ್ಡ್ ಆಫ್ ಟ್ರೇಡ್ನ ಅಧ್ಯಕ್ಷರಾದ ಗೌರವಾನ್ವಿತ ಪೀಟರ್ ಕೈಲ್, ಸಂಸದರು, ಸ್ಕಾಟ್ಲೆಂಡ್ ನ ರಾಜ್ಯ ಕಾರ್ಯದರ್ಶಿ ಗೌರವಾನ್ವಿತ ಡೌಗ್ಲಾಸ್ ಅಲೆಕ್ಸಾಂಡರ್, ಸಂಸದರು, ಹೂಡಿಕೆ ಸಚಿವರಾದ ಶ್ರೀ ಜೇಸನ್ ಸ್ಟಾಕ್ ವುಡ್ ಹಾಗೂ 125 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉದ್ಯಮಿಗಳು, ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ಸೇರಿದ್ದರು.ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 15th, 04:30 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ
September 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.ಜಪಾನ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
August 29th, 03:59 pm
ಇಂದಿನ ನಮ್ಮ ಚರ್ಚೆಯು ಫಲಪ್ರದ ಮತ್ತು ನಿರ್ದಿಷ್ಟ ಉದ್ದೇಶಗಳನ್ನು ಒಳಗೊಂಡಿತ್ತು. ಎರಡು ಪ್ರಮುಖ ಆರ್ಥಿಕತೆಗಳು ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವಗಳಾಗಿ, ನಮ್ಮ ಪಾಲುದಾರಿಕೆಯು ನಮ್ಮ ಎರಡೂ ದೇಶಗಳಿಗೆ ಮಾತ್ರವಲ್ಲದೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೂ ಬಹಳ ಮುಖ್ಯವಾಗಿದೆ ಎಂಬುದನ್ನು ನಾವಿಬ್ಬರೂ ಒಪ್ಪುತ್ತೇವೆ.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 09:00 pm
ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 02nd, 05:34 pm
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
June 02nd, 05:00 pm
ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.ಜೂನ್ 2 ರಂದು ನವದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
June 01st, 08:01 pm
ವಿಶ್ವ ದರ್ಜೆಯ ವಾಯು ಸಾರಿಗೆ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಯಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 2 ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ
April 12th, 04:48 pm
ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:15 ರ ಸುಮಾರಿಗೆ ಅವರು ಹಿಸಾರ್ ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.