ಮೊದಲ ಮತದಾನದಿಂದ ಸ್ಟಾರ್ಟ್ಅಪ್ ಇಂಡಿಯಾದವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಭಾರತದ ಯುವಕರನ್ನು ಆಚರಿಸುತ್ತಾರೆ.

January 25th, 11:30 am

ಈ ವರ್ಷದ ರಾಷ್ಟ್ರೀಯ ಮತದಾರರ ದಿನದಂದು ನಡೆದ ಮೊದಲ ಮನ್ ಕಿ ಬಾತ್‌ನಲ್ಲಿ, ಪ್ರಧಾನಿ ಮೋದಿ ಮತದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಶ್ಲಾಘಿಸಿದರು. ಅವರು ಸ್ಟಾರ್ಟ್‌ಅಪ್‌ಗಳು, ನೀರಿನ ಸಂರಕ್ಷಣೆ, ಗುಣಮಟ್ಟ, ಸಂಸ್ಕೃತಿ ಮತ್ತು ಹಬ್ಬಗಳು ಮತ್ತು ಸ್ವಚ್ಛತೆಯಂತಹ ಪ್ರಮುಖ ವಿಷಯಗಳನ್ನು ಸಹ ಸ್ಪರ್ಶಿಸಿದರು. ಮುಂದಿನ ತಿಂಗಳು ನಡೆಯಲಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಪ್ರಧಾನಿ ಎತ್ತಿ ತೋರಿಸಿದರು, ಅಲ್ಲಿ ಪ್ರಪಂಚದಾದ್ಯಂತದ ತಜ್ಞರು ಭಾಗವಹಿಸುತ್ತಾರೆ.

ಗುಜರಾತ್‌ನಲ್ಲಿ ಆಯೋಜಿಸಿದ್ದ ಸೋಮನಾಥ್ ಸ್ವಾಭಿಮಾನ್ ಪರ್ವ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

January 11th, 12:00 pm

ಗುಜರಾತ್‌ನ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಶಕ್ತಿಶಾಲಿ ಉಪಮುಖ್ಯಮಂತ್ರಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರಾದ ಜಿತುಭಾಯಿ ವಾಘಾನಿ, ಅರ್ಜುನ್‌ಭಾಯಿ ಮೋಧ್ವಾಡಿಯಾ, ಡಾ. ಪ್ರದ್ಯುಮ್ನ ವಾಜ, ಕೌಶಿಕ್‌ಭಾಯಿ ವೆಕಾರಿಯಾ, ಸಂಸತ್ ಸದಸ್ಯ ರಾಜೇಶ್‌ಭಾಯಿ, ಇಲ್ಲಿರುವ ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ. ಇಂದು ದೇಶದ ವಿವಿಧೆಡೆಯಿಂದ ಲಕ್ಷಾಂತರ ಜನರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಿಗೂ ಸಹ ನಾನು ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ - ಸೋಮನಾಥನಿಗೆ ವಿಜಯವಾಗಲಿ.

ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 11th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಸಮಯ ಅಸಾಧಾರಣವಾದುದು, ಈ ವಾತಾವರಣ ಅಸಾಧಾರಣವಾದುದು ಮತ್ತು ಈ ಆಚರಣೆಯೂ ಅಸಾಧಾರಣವಾದುದು ಎಂದು ಅವರು ಬಣ್ಣಿಸಿದರು. ಒಂದು ಕಡೆ ಸಾಕ್ಷಾತ್ ಮಹಾದೇವನಿದ್ದರೆ, ಮತ್ತೊಂದೆಡೆ ಸಮುದ್ರದ ಬೃಹತ್ ಅಲೆಗಳು, ಸೂರ್ಯನ ಕಿರಣಗಳು, ಮಂತ್ರಘೋಷಗಳ ಅನುರಣನ ಮತ್ತು ಭಕ್ತಿಯ ಉಲ್ಬಣವಿದೆ ಎಂದು ಅವರು ವಿವರಿಸಿದರು. ಈ ದೈವಿಕ ಪರಿಸರದಲ್ಲಿ ಸೋಮನಾಥನ ಭಕ್ತರ ಉಪಸ್ಥಿತಿಯು ಈ ಸಂದರ್ಭವನ್ನು ಮತ್ತಷ್ಟು ಭವ್ಯ ಹಾಗೂ ಪವಿತ್ರವಾಗಿಸಿದೆ ಎಂದು ಅವರು ತಿಳಿಸಿದರು. ಸೋಮನಾಥ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾಗಿ, ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ತಮ್ಮ ಮಹಾನ್ ಸೌಭಾಗ್ಯ ಎಂದು ಶ್ರೀ ಮೋದಿ ಹಂಚಿಕೊಂಡರು. ಕಳೆದ 72 ಗಂಟೆಗಳಿಂದ ನಿರಂತರವಾಗಿ ನಡೆಯುತ್ತಿರುವ ಓಂಕಾರ ಜಪ ಮತ್ತು ಮಂತ್ರಘೋಷಗಳ ಪಠಣವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾವಿರ ಡ್ರೋನ್‌ ಗಳು ಮತ್ತು ವೇದ ಪಾಠಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸೋಮನಾಥದ ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಪ್ರಸ್ತುತಪಡಿಸಿದ್ದನ್ನು ಅವರು ಉಲ್ಲೇಖಿಸಿದರು. ಅಲ್ಲದೆ, ಇಂದು 108 ಕುದುರೆಗಳನ್ನೊಳಗೊಂಡ 'ಶೌರ್ಯ ಯಾತ್ರೆ' ದೇವಾಲಯವನ್ನು ತಲುಪಿದೆ ಎಂದು ತಿಳಿಸಿದರು. ಮಂತ್ರಗಳು ಮತ್ತು ಭಜನೆಗಳ ಈ ಮನಮೋಹಕ ಪ್ರಸ್ತುತಿಯು ಪದಗಳಿಗೆ ನಿಲುಕದ್ದು, ಈ ಅನುಭವವನ್ನು ಕಾಲ ಮಾತ್ರವೇ ಸೆರೆಹಿಡಿಯಲು ಸಾಧ್ಯ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಸಂಭ್ರಮವು ಕೇವಲ ಒಂದು ಉತ್ಸವವಲ್ಲ; ಇದು ಸ್ವಾಭಿಮಾನ, ಗೌರವ, ಘನತೆ, ಜ್ಞಾನ, ಭವ್ಯತೆ, ಪರಂಪರೆ, ಆಧ್ಯಾತ್ಮಿಕತೆ, ಸಾಕ್ಷಾತ್ಕಾರ, ಆನಂದ ಮತ್ತು ಆತ್ಮೀಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಎಲ್ಲಕ್ಕಿಂತ ಮಿಗಿಲಾಗಿ, ಈ ಕಾರ್ಯಕ್ರಮವು ಭಗವಾನ್ ಮಹಾದೇವನ ಆಶೀರ್ವಾದವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶುಭ ಹಾರೈಕೆ

December 31st, 01:51 pm

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಭಕ್ತರಿಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 25th, 06:16 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ

December 25th, 05:23 pm

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 10:20 am

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಂತ ಪೂಜ್ಯ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಮಹಂತ್ ನೃತ್ಯ ಗೋಪಾಲ್ ದಾಸ್ ಜಿ, ಇಲ್ಲಿಗೆ ಆಗಮಿಸಿರುವ ದೇಶದ ಕೋಟ್ಯಂತರ ಭಕ್ತಾದಿಗಳೆ, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಇಡೀ ಜಗತ್ತು, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು

November 25th, 10:13 am

ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಮತ್ತೊಂದು ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇಂದು ಇಡೀ ಭಾರತ ಮತ್ತು ಇಡೀ ಜಗತ್ತು ಭಗವಾನ್ ಶ್ರೀ ರಾಮನ ಚೈತನ್ಯದಿಂದ ತುಂಬಿದೆ ಎಂದು ಶ್ರೀ ಮೋದಿ ತಿಳಿಸಿದರು, ಪ್ರತಿಯೊಬ್ಬ ರಾಮ ಭಕ್ತನ ಹೃದಯದಲ್ಲಿ ಅನನ್ಯ ತೃಪ್ತಿ, ಅಪರಿಮಿತ ಕೃತಜ್ಞತೆ ಮತ್ತು ಅಪಾರವಾದ ಅಲೌಕಿಕ ಸಂತೋಷವಿದೆ ಎಂದು ಎತ್ತಿ ತೋರಿಸಿದರು. ಶತಮಾನಗಳಷ್ಟು ಹಳೆಯದಾದ ಗಾಯಗಳು ವಾಸಿಯಾಗುತ್ತಿವೆ, ಶತಮಾನಗಳ ನೋವು ಕೊನೆಗೊಳ್ಳುತ್ತಿದೆ ಮತ್ತು ಶತಮಾನಗಳ ಸಂಕಲ್ಪ ಇಂದು ಈಡೇರುತ್ತಿದೆ ಎಂದು ಅವರು ಹೇಳಿದರು. ಇದು 500 ವರ್ಷಗಳ ಕಾಲ ಬೆಂಕಿ ಹೊತ್ತಿಕೊಂಡ ಯಜ್ಞದ ಪರಾಕಾಷ್ಠೆಯನ್ನು ಸೂಚಿಸುತ್ತದೆ ಎಂದು ಅವರು ಘೋಷಿಸಿದರು, ನಂಬಿಕೆಯಲ್ಲಿ ಎಂದಿಗೂ ಅಲುಗಾಡದ, ಒಂದು ಕ್ಷಣವೂ ನಂಬಿಕೆಯಲ್ಲಿ ಮುರಿಯದ ಯಜ್ಞ. ಇಂದು ಭಗವಾನ್ ಶ್ರೀ ರಾಮನ ಗರ್ಭಗುಡಿಯ ಅನಂತ ಶಕ್ತಿ ಮತ್ತು ಶ್ರೀ ರಾಮನ ಕುಟುಂಬದ ದೈವಿಕ ವೈಭವವನ್ನು ಈ ಧರ್ಮ ಧ್ವಜದ ರೂಪದಲ್ಲಿ ಅತ್ಯಂತ ದೈವಿಕ ಮತ್ತು ಭವ್ಯವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು.

ನವೆಂಬರ್ 25 ರಂದು ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ನೀಡಲಿರುವ ಪ್ರಧಾನಮಂತ್ರಿ

November 24th, 12:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25, 2025 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಹಾಗೂ, ಈ ಮೂಲಕ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಭೂಚೌಕಟ್ಟಿನ ಅತ್ಯಂತ ಮಹತ್ವಪೂರ್ಣ ಸಂದರ್ಭವನ್ನು ಕೂಡಾ ಗುರುತಿಸಲಿದ್ದಾರೆ.

ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 08th, 08:39 am

ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್‌ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!

ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 08th, 08:15 am

ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.

Congress kept misleading ex-servicemen with false promises of One Rank One Pension: PM Modi in Aurangabad, Bihar

November 07th, 01:49 pm

Continuing his high-voltage election campaign, PM Modi today addressed a massive public meeting in Aurangabad. He said that Bihar has created history in the very first phase of voting. The PM noted that yesterday’s polling has recorded the highest turnout ever in Bihar, with nearly 65% of voters participating. He remarked that this clearly shows that the people of Bihar themselves have taken the lead in ensuring the return of the NDA government.

PM Modi campaigns in Bihar’s Aurangabad and Bhabua

November 07th, 01:45 pm

Continuing his high-voltage election campaign, PM Modi today addressed two massive public meetings in Aurangabad and Bhabua. He said that Bihar has created history in the very first phase of voting. The PM noted that yesterday’s polling recorded the highest turnout ever in the state, with nearly 65% voter participation. He remarked that this clearly shows that the people of Bihar have themselves taken the lead in ensuring the return of the NDA government.

RJD forced Congress to surrender its CM claim at gunpoint: PM Modi in Bhagalpur, Bihar

November 06th, 12:01 pm

In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.