ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ ಮೋದಿ

February 08th, 11:19 am

ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು 2024ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಹಮತ ವ್ಯಕ್ತಪಡಿಸಿದರು. ಪಾಲುದಾರಿಕೆ ಮತ್ತು ಜನರ ನಡುವಿನ ನಿಕಟ ಸಂಬಂಧದಲ್ಲಿ ನೆಲೆಯೂರಿರುವ ಭಾರತ-ಮಲೇಷ್ಯಾ ಹಳೆಯ ಬಾಂಧವ್ಯವನ್ನು ಅವರು ಸ್ಮರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಸಮುದ್ರ, ಶುದ್ಧ ಇಂಧನ, ಮೂಲಸೌಕರ್ಯ, ನವೋದ್ಯಮಗಳು, ಕೃಷಿ, ಶಿಕ್ಷಣ, ಆರೋಗ್ಯ, ಆಯುರ್ವೇದ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಂಪರ್ಕಗಳಂತಹ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ನಾಯಕರು ಪರಿಶೀಲಿಸಿದರು. ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಅವರು ಚರ್ಚಿಸಿದರು. 'ದ್ವಿಪಕ್ಷೀಯ ಡಿಜಿಟಲ್ ಮಂಡಳಿ' ಮೂಲಕ ಉಭಯ ದೇಶಗಳ ನಡುವಿನ ಡಿಜಿಟಲ್ ಸಹಕಾರದ ಸ್ಥಿರ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು. ಇದೇವೇಳೆ 'ಫಿನ್‌ಟೆಕ್‌' ಕ್ಷೇತ್ರದಲ್ಲಿ ಸಹಯೋಗವನ್ನು ಹೆಚ್ಚಿಸಲು 'ಯುಪಿಐ' ಮತ್ತು 'ಪೇ-ನೆಟ್' ನಡುವಿನ ಒಪ್ಪಂದವನ್ನು ಅವರು ಸ್ವಾಗತಿಸಿದರು.

ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 28th, 02:39 pm

ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.

ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 28th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.

ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಫಲಿತಾಂಶಗಳ ಪಟ್ಟಿ: ಫೆಡರಲ್‌ ರಿಪಬ್ಲಿಕ್‌ ಆಫ್‌ ಜರ್ಮನಿಯ ಚಾನ್ಸಲರ್‌ ಅವರ ಭಾರತ ಭೇಟಿ (ಜನವರಿ 12-13, 2026)

January 12th, 03:47 pm

ದ್ವಿಪಕ್ಷೀಯ ರಕ್ಷ ಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಉದ್ದೇಶದ ಜಂಟಿ ಘೋಷಣೆ

ಜರ್ಮನಿ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 12th, 12:49 pm

ಗುಜರಾತ್ ಭಾಷೆಯಲ್ಲಿ ನಾವು ‘ಆವಕಾರೋ ಮಿಠೋ ಆಪಜೆ ರೆ’ ಎಂದು ಹೇಳುತ್ತೇವೆ—ಅಂದರೆ ಆತ್ಮೀಯತೆ ಮತ್ತು ಸ್ನೇಹಭಾವದಿಂದ ಸ್ವಾಗತಿಸುವುದು. ಅದೇ ಭಾವನೆ ಮತ್ತು ಆತ್ಮದಿಂದ ಚಾನ್ಸಲರ್ ಮೆರ್ಜ್ ಅವರಿಗೆ ಭಾರತಕ್ಕೆ ಹಾರ್ದಿಕ ಸ್ವಾಗತವನ್ನು ಸಲ್ಲಿಸುತ್ತೇವೆ.

ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 19th, 08:11 pm

ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್‌ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

December 19th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

December 16th, 12:24 pm

ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.

ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ

December 16th, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.

ಡೆಹ್ರಾಡೂನ್‌ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 09th, 01:00 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!

ಡೆಹ್ರಾಡೂನ್‌ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 09th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.

ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

September 16th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ 2024ನೇ ಬ್ಯಾಚ್‌ನ ಐ.ಎಫ್‌.ಎಸ್ ಅಧಿಕಾರಿ ತರಬೇತಿದಾರರು

August 19th, 08:34 pm

ಭಾರತೀಯ ವಿದೇಶಾಂಗ ಸೇವೆ (ಐ.ಎಫ್‌.ಎಸ್)ಯ 2024ರ ಬ್ಯಾಚ್‌ ನ ಅಧಿಕಾರಿ ತರಬೇತಿದಾರರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅವರ 7, ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾದರು. 2024ರ ಈ ಬ್ಯಾಚ್‌ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ 33 ಐ.ಎಫ್‌.ಎಸ್ ಅಧಿಕಾರಿ ತರಬೇತಿದಾರರಿದ್ದಾರೆ.

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್‌ಡಮ್‌ ನ ಮಹಾರಾಜ ಚಾರ್ಲ್ಸ್ III ಅವರನ್ನು ಭೇಟಿಯಾದರು

July 24th, 11:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜರ ಬೇಸಿಗೆಯ ನಿವಾಸವಾದ ಸ್ಯಾಂಡ್ರಿಂಗ್‌ಹ್ಯಾಮ್ ಎಸ್ಟೇಟ್‌ ನಲ್ಲಿ ಮಹಾರಾಜ ಮೂರನೇ ಚಾರ್ಲ್ಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.