ಅಹಮದಾಬಾದ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯೋಗಾಸನ ವಿಶ್ವ ಚಾಂಪಿಯನ್ ಶಿಪ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

June 04th, 06:41 pm

ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗಿದೆ. ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಇಂದು ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ವಿವಿಧ ದೇಶಗಳ ಎಲ್ಲಾ ಕ್ರೀಡಾಪಟುಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅವರಿಗೆ ನನ್ನ ಶುಭ ಹಾರೈಕೆಗಳನ್ನು ತಿಳಿಸುತ್ತೇನೆ. ಯುನೆಸ್ಕೋ ವಿಶ್ವ ಪರಂಪರೆಯ ನಗರವಾದ ಅಹಮದಾಬಾದ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಇಡೀ ರಾಷ್ಟ್ರಕ್ಕೆ ಹೆಮ್ಮೆಯ ವಿಷಯವಾಗಿದೆ. ಇನ್ನು ಕೆಲವೇ ದಿನಗಳಲ್ಲಿ, ಜೂನ್ 21 ರಂದು ‘ವಿಶ್ವ ಯೋಗ ದಿನ’ವನ್ನು ಸಹ ಆಚರಿಸಲಾಗುವುದು. ಅಂದು ವಿವಿಧ ದೇಶಗಳಲ್ಲಿ ಯೋಗಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು, ಮುಖ್ಯ ಕಾರ್ಯಕ್ರಮವು ಭಾರತದ ಮತ್ತೊಂದು ಐತಿಹಾಸಿಕ ನಗರವಾದ ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ, ವಿಶ್ವ ಯೋಗ ದಿನಕ್ಕೂ ಮೊದಲು ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಬಂದಿರುವುದು, ಆರೋಗ್ಯ ಮತ್ತು ಯೋಗಕ್ಷೇಮದ ಡಬಲ್ ಡೋಸ್ ಅನ್ನು ತಂದಿದೆ.

ಗುಜರಾತ್ ನ ಅಹಮದಾಬಾದ್ ನಲ್ಲಿ, ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

June 04th, 06:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನಿಂದ ವಿಡಿಯೋ ಸಂದೇಶದ ಮೂಲಕ ಪ್ರಥಮ ವಿಶ್ವ ಯೋಗಾಸನ ಚಾಂಪಿಯನ್ ಶಿಪ್ ಅನ್ನು ಉದ್ಘಾಟಿಸಿದರು, ಇದು ಜಾಗತಿಕ ಕ್ರೀಡಾ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇಂದು, ಅಹಮದಾಬಾದ್ ನ ಮಣ್ಣಿನಿಂದ ವಿಶ್ವದ ಕ್ರೀಡಾ ಪರಂಪರೆಗೆ ಒಂದು ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.

"ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳ ಈಡೇರಿಕೆ" ಎಂಬ ವಿಷಯದ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾರ್ಚ್ 9 ರಂದು ಪ್ರಧಾನಮಂತ್ರಿ ಅವರ ಭಾಷಣ

March 08th, 04:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 9 ರಂದು ಬೆಳಗ್ಗೆ 10:15 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ (ಎಲ್ಲರೊಂದಿಗೆ ಎಲ್ಲರ ಅಭಿವೃದ್ಧಿ) - ಜನರ ಆಕಾಂಕ್ಷೆಗಳ ಈಡೇರಿಕೆ ಎಂಬ ವಿಷಯದ ಕುರಿತಾದ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ

September 24th, 06:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ-ಮಾರಿಷಸ್‌ ಜಂಟಿ ಘೋಷಣೆ; ವಿಶೇಷ ಆರ್ಥಿಕ ಪ್ಯಾಕೇಜ್

September 11th, 01:53 pm

ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಸನ್ಮಾನ್ಯ ಡಾ. ನವೀನ್‌ಚಂದ್ರ ರಾಮಗೂಲಂ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ಇಬ್ಬರೂ ಪ್ರಧಾನಮಂತ್ರಿ ಇಂದು ವಾರಣಾಸಿಯಲ್ಲಿ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ ವಿಷಯಗಳ ಕುರಿತು ತುಂಬಾ ಫಲಪ್ರದ ಸಮಾಲೋಚನೆಗಳನ್ನು ನಡೆಸಿದರು. ಮಾರಿಷಸ್ ಸರ್ಕಾರ ಸಲ್ಲಿಸಿದ ಮನವಿ ಆಧರಿಸಿ ಭಾರತ ಮತ್ತು ಮಾರಿಷಸ್ ಜಂಟಿಯಾಗಿ ಕಾರ್ಯಗತಗೊಳಿಸಲು ಈ ಕೆಳಗಿನ ಯೋಜನೆಗಳನ್ನು ತಾತ್ವಿಕವಾಗಿ ಒಪ್ಪಿಕೊಂಡಿವೆ.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 21st, 07:06 am

ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

June 21st, 06:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 01st, 11:00 am

ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.

ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 01st, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಆಯುಷ್ ವಲಯದ ಪರಿಶೀಲನೆಗಾಗಿ ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

February 27th, 08:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 7 ಲೋಕ ಕಲ್ಯಾಣ ಮಾರ್ಗದಲ್ಲಿ ಆಯುಷ್ ವಲಯದ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದರು. ಸಮಗ್ರ ಯೋಗಕ್ಷೇಮ ಮತ್ತು ಆರೋಗ್ಯ ರಕ್ಷಣೆ, ಸಾಂಪ್ರದಾಯಿಕ ಜ್ಞಾನದ ಸಂರಕ್ಷಣೆ ಮತ್ತು ರಾಷ್ಟ್ರದ ಸ್ವಾಸ್ಥ್ಯ ಪರಿಸರ ವ್ಯವಸ್ಥೆಗೆ ಅದರ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು.

ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 24th, 10:35 am

ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

February 24th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.

ಫಲಿತಾಂಶಗಳ ಪಟ್ಟಿ: ಇಂಡೋನೇಷ್ಯಾ ಅಧ್ಯಕ್ಷರ ಭಾರತ ಭೇಟಿ (ಜನವರಿ 23-26, 2025)

January 25th, 08:54 pm

ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ನಡುವೆ ಆರೋಗ್ಯ ಸಹಕಾರಕ್ಕಾಗಿ ತಿಳಿವಳಿಕಾ ಒಡಂಬಡಿಕೆ.

ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 05th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು.

ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 29th, 01:28 pm

ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 29th, 01:00 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಭಾರತ ಮತ್ತು ಅದರ ಸರ್ಕಾರವು ದುರ್ಬಲವಾಗಿರಬೇಕೆಂದು ಅನೇಕ ಜನರು ಬಯಸುತ್ತಾರೆ ಇದರಿಂದ ಅವರು ಅದರ ಲಾಭವನ್ನು ಪಡೆಯಬಹುದು: ಬಳ್ಳಾರಿಯಲ್ಲಿ ಪ್ರಧಾನಿ

April 28th, 02:28 pm

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಜನರು ತಮ್ಮ ನೆಚ್ಚಿನ ನಾಯಕನ ಮಾತು ಕೇಳಲು ಉತ್ಸಾಹ ತೋರಿದರು. ಪ್ರಧಾನಿ ಮೋದಿಯವರು, “ಇಂದು, ಭಾರತವು ವೇಗವಾಗಿ ಮುನ್ನಡೆಯುತ್ತಿರುವಾಗ, ಕೆಲವು ದೇಶಗಳು ಮತ್ತು ಸಂಸ್ಥೆಗಳು ಅದರಿಂದ ಅಸಮಾಧಾನಗೊಂಡಿವೆ. ದುರ್ಬಲ ಭಾರತ, ದುರ್ಬಲ ಸರ್ಕಾರ, ಅವರ ಹಿತಾಸಕ್ತಿಗಳಿಗೆ ಸರಿಹೊಂದುತ್ತದೆ. ಅಂತಹ ಸಂದರ್ಭಗಳಲ್ಲಿ, ಈ ಘಟಕಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಕುಶಲತೆಯಿಂದ ಬಳಸುತ್ತವೆ. ಕಾಂಗ್ರೆಸ್ ಕೂಡ ಅತಿರೇಕದ ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಹೊಂದಿತು, ಆದ್ದರಿಂದ ಅವರು ಸುಮ್ಮನಿದ್ದರು. ಆದರೆ, ದೃಢನಿಶ್ಚಯದ ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಹೀಗಾಗಿ ಅಂತಹ ಶಕ್ತಿಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ನಾನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ತಿಳಿಸಲು ಬಯಸುತ್ತೇನೆ, ಅವರ ಪ್ರಯತ್ನಗಳನ್ನು ಲೆಕ್ಕಿಸದೆಯೇ ... ಭಾರತವು ಪ್ರಗತಿಯನ್ನು ಮುಂದುವರೆಸುತ್ತದೆ ಮತ್ತು ಕರ್ನಾಟಕವೂ ಸಹ ಮುಂದುವರಿಯುತ್ತದೆ.