ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 01st, 03:30 pm

ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 01st, 03:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

NDA freed Bihar from Naxalism and Maoist terror — now you can live and vote fearlessly: PM Modi in Begusarai

October 24th, 12:09 pm

Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.

We’re connecting Bihar’s heritage with employment, creating new opportunities for youth: PM Modi in Samastipur

October 24th, 12:04 pm

Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”

PM Modi addresses enthusiastic crowds in Bihar’s Samastipur and Begusarai

October 24th, 12:00 pm

Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”

ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

September 16th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 21st, 07:06 am

ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

June 21st, 06:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 12:00 pm

ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು

April 24th, 11:50 am

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೊಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ

February 24th, 06:40 pm

ಅಸ್ಸಾಂ ರಾಜ್ಯಪಾಲ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾತ್ಮಕ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಡಾ. ಎಸ್. ಜೈಶಂಕರ್ ಮತ್ತು ಸರ್ಬಾನಂದ ಸೋನೊವಾಲ್, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆಯ ಸದಸ್ಯರು, ಎಲ್ಲಾ ಕಲಾವಿದ ಸ್ನೇಹಿತರು ಮತ್ತು ಅಸ್ಸಾಂನ ನನ್ನ ಸಹೋದರ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು

February 24th, 06:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಮೆಗಾ ಜುಮೋಯಿರ್ ಕಾರ್ಯಕ್ರಮವಾದ ಜುಮೋಯಿರ್ ಬಿನಂದಿನಿ 2025 ರಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಚೈತನ್ಯ, ಉತ್ಸಾಹ ಮತ್ತು ಉಲ್ಲಾಸದಿಂದ ತುಂಬಿದ ವಾತಾವರಣವಿತ್ತು ಎಂದು ಹೇಳಿದರು. ಝುಮೋಯಿರ್ ನ ಎಲ್ಲಾ ಕಲಾವಿದರು ಮಾಡಿದ ಅದ್ಭುತವಾದ ಸಿದ್ಧತೆಗಳು ಚಹಾ ತೋಟಗಳ ಪರಿಮಳ ಮತ್ತು ಸೌಂದರ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು. ಜನರು ಝುಮರ್ ಮತ್ತು ಚಹಾ ತೋಟ ಸಂಸ್ಕೃತಿಯೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವಂತೆಯೇ, ತಾವೂ ಕೂಡ ಇದೇ ರೀತಿಯ ಸಂಪರ್ಕವನ್ನು ಹೊಂದಿರುವುದಾಗಿ ಅವರು ಹೇಳಿದರು. ಇಂದು ಜುಮೋಯಿರ್ ನೃತ್ಯವನ್ನು ಪ್ರದರ್ಶಿಸುವ ಇಷ್ಟು ದೊಡ್ಡ ಸಂಖ್ಯೆಯ ಕಲಾವಿದರು ದಾಖಲೆಯನ್ನು ಸ್ಥಾಪಿಸುತ್ತಾರೆ ಎಂದು ಅವರು ಹೇಳಿದರು. 2023 ರಲ್ಲಿ 11,000 ಕಲಾವಿದರು ಬಿಹು ನೃತ್ಯ ಪ್ರದರ್ಶಿಸಿದ ದಾಖಲೆಯನ್ನು ಮಾಡಿದ ಸಂದರ್ಭದಲ್ಲಿ ತಮ್ಮ ಅಸ್ಸಾಂ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಅದು ತಮಗೆ ಮರೆಯಲಾಗದ ನೆನಪು ಎಂದು ಹೇಳಿದರು ಮತ್ತು ಇದೇ ರೀತಿಯ ರೋಮಾಂಚಕಾರಿ ಪ್ರದರ್ಶನವನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದರು. ಅದ್ಭುತ ಸಾಂಸ್ಕೃತಿಕ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಅಸ್ಸಾಂ ಸರ್ಕಾರ ಮತ್ತು ಅದರ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ಚಹಾ ಸಮುದಾಯ ಮತ್ತು ಬುಡಕಟ್ಟು ಜನರು ಆಚರಣೆಯಲ್ಲಿ ಭಾಗವಹಿಸುತ್ತಿರುವ ಇಂದು ಅಸ್ಸಾಂಗೆ ಹೆಮ್ಮೆಯ ದಿನವಾಗಿದೆ ಎಂದು ಅವರು ಹೇಳಿದರು. ಈ ವಿಶೇಷ ದಿನದಂದು ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 06:11 pm

ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು

February 23rd, 04:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

We launched the SVAMITVA Yojana to map houses and lands using drones, ensuring property ownership in villages: PM

January 18th, 06:04 pm

PM Modi distributed over 65 lakh property cards under the SVAMITVA Scheme to property owners across more than 50,000 villages in over 230 districts across 10 states and 2 Union Territories. Reflecting on the scheme's inception five years ago, he emphasised its mission to ensure rural residents receive their rightful property documents. He expressed that the government remains committed to realising Gram Swaraj at the grassroots level.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಸ್ವಾಮಿತ್ವ” ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು

January 18th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ ರಚನೆ) ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ವಿಡಿಯೊ ಸಮಾವೇಶ ಮೂಲಕ ವಿತರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, “ಸ್ವಾಮಿತ್ವ” ಯೋಜನೆಗೆ ಸಂಬಂಧಿಸಿದ ಅನುಭವಗಳನ್ನು ತಿಳಿದುಕೊಳ್ಳಲು ಅವರು ಐದು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.