ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ

April 11th, 11:00 am

ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್‌; ಉಪ ಮುಖ್ಯಮಂತ್ರಿಗಳಾದ ಕೇಶವ್‌ ಪ್ರಸಾದ್‌ ಮೌರ್ಯ ಮತ್ತು ಬ್ರಜೇಶ್‌ ಪಾಠಕ್‌; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್‌ ಡೈರಿಯ ಅಧ್ಯಕ್ಷ ಶಂಕರ್‌ ಭಾಯ್‌ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

April 11th, 10:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.

ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 29th, 01:28 pm

ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 29th, 01:00 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 25th, 04:31 pm

ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

​​​​​​​ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ʻಪಂಡಿತ್‌ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿಗಳು

December 25th, 04:30 pm

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼದ 11 ಸಂಪುಟಗಳ ಸರಣಿಯ ಪೈಕಿ ಮೊದಲ ಸಂಪುಟವನ್ನು ಲೋಕಾರ್ಪಣೆ ಮಾಡಿದರು. ಶ್ರೀ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪುಷ್ಪ ನಮನವನ್ನೂ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಅವಿರತವಾಗಿ ಶ್ರಮಿಸಿದ ಶ್ರೇಷ್ಠ ವಿದ್ವಾಂಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿ ಮಾಳವೀಯ ಅವರನ್ನು ಸ್ಮರಿಸಲಾಗುತ್ತದೆ.

ಆಯುಷ್ಮಾನ್ ಭವ ಅಭಿಯಾನಕ್ಕೆ ದೊರಕಿದ ಉತ್ತಮ ಪ್ರತಿಕ್ರಿಯೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ

October 16th, 09:22 pm

ಆಯುಷ್ಮಾನ್ ಭವ ಅಭಿಯಾನದ ಅಡಿಯಲ್ಲಿ 80,000 ಕ್ಕೂ ಹೆಚ್ಚು ಜನರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದು ಅಂಗಾಂಗ ದಾನ ಅಭಿಯಾನದ ಯಶಸ್ಸನ್ನು ತೋರಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.