ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

October 17th, 11:09 pm

ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು

October 17th, 08:00 pm

ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.

ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 09th, 02:51 pm

ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.

ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 09th, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ

September 26th, 11:30 am

ಇಂದು ನವರಾತ್ರಿಯ ಈ ಪವಿತ್ರ ದಿನಗಳಲ್ಲಿ, ಬಿಹಾರದ ಮಹಿಳಾ ಶಕ್ತಿಯೊಂದಿಗೆ ಸಂತೋಷದಿಂದ ಸೇರಲು ನನಗೆ ಅವಕಾಶ ಸಿಕ್ಕಿದೆ. ನಾನು ಇಲ್ಲಿ ಪರದೆಯನ್ನು ನೋಡುತ್ತಿದ್ದೆ, ಲಕ್ಷಾಂತರ ಮಹಿಳೆಯರು ಮತ್ತು ಸಹೋದರಿಯರು ಕಾಣುತ್ತಿದ್ದಾರೆ. ಈ ಪವಿತ್ರ ನವರಾತ್ರಿ ಹಬ್ಬದ ಸಮಯದಲ್ಲಿ ನಿಮ್ಮೆಲ್ಲರ ಆಶೀರ್ವಾದಗಳು ನಮಗೆಲ್ಲರಿಗೂ ದೊಡ್ಡ ಶಕ್ತಿಯಾಗಿದೆ. ನಾನು ಇಂದು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಇಂದಿನಿಂದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ನನಗೆ ತಿಳಿದುಬಂದಂತೆ, ಇಲ್ಲಿಯವರೆಗೆ 75 ಲಕ್ಷ ಸಹೋದರಿಯರು ಈ ಯೋಜನೆಗೆ ಸೇರಿದ್ದಾರೆ. ಈಗ ಈ 75 ಲಕ್ಷ ಸಹೋದರಿಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ಹಣವನ್ನು ಏಕಕಾಲದಲ್ಲಿ ಕಳುಹಿಸಲಾಗಿದೆ.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು

September 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿಯ ಶುಭಾಶಯ ಕೋರಿದರು. ಬಿಹಾರದ ಮಹಿಳೆಯರೊಂದಿಗೆ ಈ ಆಚರಣೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಇಂದು ಪ್ರಾರಂಭಿಸಲಾಗುತ್ತಿದೆ. 75 ಲಕ್ಷ ಮಹಿಳೆಯರು ಈಗಾಗಲೇ ಈ ಉಪಕ್ರಮಕ್ಕೆ ಸೇರಿದ್ದಾರೆ . ಈ 75 ಲಕ್ಷ ಮಹಿಳೆಯರಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ 10,000 ರೂ. ವರ್ಗಾಯಿಸಲಾಗಿದೆ ಎಂದು ಘೋಷಿಸಿದರು.

ಭಾರತ ಸಿಂಗಾಪುರ ಜಂಟಿ ಹೇಳಿಕೆ

September 04th, 08:04 pm

ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆ

ಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 04th, 12:45 pm

ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.

ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 29th, 11:20 am

ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.

ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 29th, 11:02 am

ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 02nd, 11:30 am

ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

August 02nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.

ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 18th, 11:50 am

ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.

ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

July 18th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.

2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆ (ಎಂ.ಐ.ಎಸ್.ಎಸ್.) ಅನ್ನು ಅಸ್ತಿತ್ವದಲ್ಲಿರುವ 1.5% ಬಡ್ಡಿ ಸಹಾಯ ಧನ (ಐ.ಎಸ್.)ದೊಂದಿಗೆ ಮುಂದುವರಿಸಲು ಸಚಿವ ಸಂಪುಟದ ಅನುಮೋದನೆ

May 28th, 03:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇಂದು 2025-26ನೇ ಹಣಕಾಸು ವರ್ಷಕ್ಕೆ ಮಾರ್ಪಡಿಸಿದ ಬಡ್ಡಿ ಸಹಾಯಧನ ಯೋಜನೆ (ಎಂ.ಐ.ಎಸ್.ಎಸ್.) ಅಡಿಯಲ್ಲಿ ಬಡ್ಡಿಸಹಾಯಧನ (ಐ.ಎಸ್.)ವನ್ನು ಮುಂದುವರಿಸಲು ಅನುಮೋದನೆ ನೀಡಿತು ಮತ್ತು ಅಗತ್ಯವಿರುವ ಸಹಾಯನಿಧಿ ವ್ಯವಸ್ಥೆಗಳನ್ನು ಅನುಮೋದಿಸಿತು.

ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 06th, 08:04 pm

ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.

ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 06th, 08:00 pm

ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.

ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 14th, 11:00 am

ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

April 14th, 10:16 am

ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ ನಿಯೋಗದ ಸದಸ್ಯರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು

March 05th, 07:52 pm

17 ಸದಸ್ಯರನ್ನು ಒಳಗೊಂಡ ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ (JIBCC) ನಿಯೋಗವು ಅಧ್ಯಕ್ಷ ಶ್ರೀ ಟ್ಯಾಟ್ಸುವೊ ಯಸುನಾಗಾ ಅವರ ನೇತೃತ್ವದಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.