ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ
June 04th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 13th, 12:30 pm
ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
January 13th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.ಜನವರಿ 6 ರಂದು ಬಹು ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
January 05th, 06:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 6 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ
June 18th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.ಪ್ರಧಾನಿಯವರೊಂದಿಗೆ ಆಫ್ಘಾನಿಸ್ತಾನದ ಅಧ್ಯಕ್ಷ ಡಾ. ಮೊಹಮದ್ ಅಷರಫ್ ಘನಿ ಮಾತುಕತೆ, ಉರಿ ಭಯೋತ್ಪಾದಕ ದಾಳಿಗೆ ಖಂಡನೆ
September 20th, 04:37 pm
President Ashraf Ghani of Afghanistan spoke on telephone today with Prime Minister Shri Narendra Modi to condole the terror attack in Uri, Jammu & Kashmir. President Ghani strongly condemned the cross-border terror attack and conveyed Afghanistan’s solidarity and support with India against all actions to eliminate the threat of terrorism.ಉರಿಯಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರಧಾನಿ ಉಗ್ರ ಖಂಡನೆ
September 18th, 02:15 pm
Prime Minister Narendra Modi strongly condemned the terror attack in Uri, Jammu and Kashmir. The PM said, We strongly condemn the cowardly terror attack in Uri. : assure the nation that those behind this despicable attack will not go unpunished.