ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 10th, 01:30 pm

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಆಗಸ್ಟ್ 10 ರಂದು ಕರ್ನಾಟಕಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ

August 09th, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಅವರು ಹಸಿರು ನಿಶಾನೆ ತೋರಲಿದ್ದಾರೆ. ನಂತರ, ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ, ಆರ್ ವಿ ರಸ್ತೆ (ರಾಗಿಗುಡ್ಡ) ಯಿಂದ ಎಲೆಕ್ಟ್ರಾನಿಕ್ ಸಿಟಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.

ಭಾರತವು ಅನುಯಾಯಿಯಲ್ಲ, ಆದರೆ ಮೊದಲು ಚಲಿಸುವ ದೇಶ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

April 20th, 04:00 pm

ಭಾರತದ ಡಿಜಿಟಲ್ ಕ್ರಾಂತಿಯಲ್ಲಿ ಬೆಂಗಳೂರಿನ ಪಾತ್ರ ಮಹತ್ವದ್ದು: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

April 20th, 03:45 pm

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ರೋಮಾಂಚಕ ಗುಂಪನ್ನುದ್ದೇಶಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದರು ಮತ್ತು ಭವಿಷ್ಯದ ಯೋಜನೆಗಳನ್ನು ವಿವರಿಸಿದರು.

ಗೋವಾದಲ್ಲಿ ನಡೆದ 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿನ ಪ್ರಧಾನಮಂತ್ರಿ ಅವರ ಭಾಷಣ

October 26th, 10:59 pm

ಗೋವಾದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಪಿ.ಎಸ್. ಶ್ರೀಧರನ್ ಪಿಳ್ಳೈ ಜೀ, ಜನಪ್ರಿಯ ಮತ್ತು ಕ್ರಿಯಾತ್ಮಕ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೀ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ವೇದಿಕೆಯಲ್ಲಿ ಉಪಸ್ಥಿತರಿರುವ ಪ್ರತಿನಿಧಿಗಳು, ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ.ಉಷಾ ಜೀ, ಎಲ್ಲಾ ಆಟಗಾರರು, ಸಹಾಯಕ ಸಿಬ್ಬಂದಿ, ಇತರ ಅಧಿಕಾರಿಗಳು ಮತ್ತು ದೇಶದ ಮೂಲೆ ಮೂಲೆಯಲ್ಲಿರುವ ಯುವ ಸ್ನೇಹಿತರು, ಭಾರತೀಯ ಕ್ರೀಡಾ ಉತ್ಸವದ ಭವ್ಯ ಪ್ರಯಾಣವು ಈಗ ಗೋವಾವನ್ನು ತಲುಪಿದೆ. ಎಲ್ಲೆಡೆ ಬಣ್ಣಗಳು, ಅಲೆಗಳು ಮತ್ತು ಉತ್ಸಾಹವಿದೆ. ಗೋವಾದ ಗಾಳಿಯಲ್ಲಿ ಏನೋ ವಿಶೇಷವಿದೆ. 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕಾಗಿ ನಿಮ್ಮೆಲ್ಲರಿಗೂ ಶುಭಾಶಯಗಳು, ಅನೇಕ ಅಭಿನಂದನೆಗಳು.

ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

October 26th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದ ಮಡಗಾಂವ್ ನಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ

October 20th, 04:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ ಆರ್‌ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ

October 20th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ ಆರ್‌ ಟಿ ಎಸ್ ಕಾರಿಡಾರ್‌ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್‌ ಆರ್‌ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್‌ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 20ರಂದು ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿಎಸ್) ಗೆ ಚಾಲನೆ

October 18th, 04:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉತ್ತರ ಪ್ರದೇಶದ ಸಾಹಿಬಾಬಾದ್ ರಾಪಿಡ್ಎಕ್ಸ್ ನಿಲ್ದಾಣದಲ್ಲಿ ಅಕ್ಟೋಬರ್ 20 ರಂದು ಬೆಳಿಗ್ಗೆ 11:15 ಕ್ಕೆ ಉದ್ಘಾಟಿಸಲಿದ್ದಾರೆ. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ಆರ್‌ಟಿಎಸ್) ಆರಂಭದ ಅಂಗವಾಗಿ ಅವರು ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ರಾಪಿಡ್‌ಎಕ್ಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಅವರು ಸಾಹಿಬಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಅಲ್ಲಿ ಅವರು ದೇಶದಲ್ಲಿ ಆರ್‌ಆರ್‌ಟಿಎಸ್ ಅನ್ನು ಆರಂಭಿಸುತ್ತಿರುವ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಅವರು ಬೆಂಗಳೂರು ಮೆಟ್ರೋದ ಪೂರ್ವ ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.