ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

RJD and Congress are putting Bihar’s security and the future of its children at risk: PM Modi in Katihar, Bihar

November 03rd, 02:30 pm

In a massive public rally in Katihar, Bihar, PM Modi began with the clarion call, “Phir ek baar - NDA Sarkar, Phir ek baar - Susashan Sarkar.” He accused the RJD and Congress of risking Bihar’s security for votes and questioned whether benefits meant for the poor should be taken away by infiltrators. He remarked that under Nitish Ji’s leadership, NDA brought governance and growth, emphasizing that every single vote will play a role in building a Viksit Bihar.

Be it Congress or RJD, their love is only for infiltrators: PM Modi in Saharsa, Bihar

November 03rd, 02:15 pm

Amidst the ongoing election campaigning in Bihar, PM Modi's rally spree continued as he addressed a public meeting in Saharsa. He said that only two days are left for the first phase of voting in Bihar. Many young voters here will be voting for the first time. He urged all first-time voters in Bihar, “Do not let your first vote go to waste. The NDA is forming the government in Bihar and your vote should go to the alliance that is actually winning. Your vote should be for a Viksit Bihar.”

Massive public turnout as PM Modi campaigns in Saharsa and Katihar, Bihar

November 03rd, 02:00 pm

Amid the ongoing election campaign in Bihar, PM Modi continued his rally spree, addressing large public meetings in Saharsa and Katihar. He reminded people that only two days remain for the first phase of voting, noting that many young voters will be casting their vote for the first time. Urging them not to waste their first vote, he said, “The NDA is forming the government in Bihar. Your vote should go to the alliance that is actually winning - your vote should be for a Viksit Bihar.”

ಅಹಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-II, ಬಾಲಕಿಯರ ಹಾಸ್ಟೆಲ್ ನ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 24th, 10:39 pm

ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳೇ, ಗುಜರಾತ್ ಸರ್ಕಾರದ ಎಲ್ಲ ಸಚಿವರೇ, ಇಲ್ಲಿ ನೆರೆದಿರುವ ಎಲ್ಲ ಸಂಸತ್ ಸದಸ್ಯರೇ, ಎಲ್ಲ ಶಾಸಕರೇ, ಸರ್ದಾರ್ ಧಾಮದ ಅಧ್ಯಕ್ಷರಾದ ಶ್ರೀ ಗಗ್ಜಿ ಭಾಯಿ ಅವರೇ, ಟ್ರಸ್ಟಿ ವಿ.ಕೆ. ಪಟೇಲ್ ಅವರೇ, ದಿಲೀಪ್ ಭಾಯಿ ಅವರೇ, ಎಲ್ಲ ಗಣ್ಯರೇ, ಹಾಗೂ ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ, ವಿಶೇಷವಾಗಿ ನನ್ನ ಪ್ರೀತಿಯ ಹೆಣ್ಣು ಮಕ್ಕಳೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದ್ ನ ʻಸರ್ದಾರ್ ಧಾಮ್ʼ ಎರಡನೇ ಹಂತದ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

August 24th, 10:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-2ರ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸರ್ದಾರ್ ಧಾಮದ ಹೆಸರು ಅದರ ಕಾರ್ಯದಷ್ಟೇ ಪವಿತ್ರವಾಗಿದೆ ಎಂದು ಬಣ್ಣಿಸಿದರು. ಹೆಣ್ಣುಮಕ್ಕಳ ಸೇವೆ ಮತ್ತು ಶಿಕ್ಷಣಕ್ಕಾಗಿ ಮೀಸಲಾಗಿರುವ ವಸತಿಗೃಹದ ಉದ್ಘಾಟನೆಯ ಬಗ್ಗೆ ಒತ್ತಿ ಹೇಳಿದರು. ಈ ವಸತಿಗೃಹದಲ್ಲಿ ತಂಗುವ ಬಾಲಕಿಯರು ಆಕಾಂಕ್ಷೆಗಳು ಮತ್ತು ಕನಸುಗಳನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ಪೂರೈಸಲು ಹಲವಾರು ಅವಕಾಶಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಈ ಹೆಣ್ಣುಮಕ್ಕಳು ಒಮ್ಮೆ ಸ್ವಾವಲಂಬಿಗಳು ಮತ್ತು ಸಮರ್ಥರಾಗಿ ಬದಲಾದರೆ, ಅವರು ಸಹಜವಾಗಿಯೇ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕುಟುಂಬಗಳು ಸಹ ಸಬಲೀಕರಣಗೊಳ್ಳುತ್ತವೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಈ ವಸತಿಗೃಹದಲ್ಲಿ ಉಳಿಯಲು ಅವಕಾಶ ಪಡೆದ ಎಲ್ಲ ಹೆಣ್ಣುಮಕ್ಕಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಇಂದು, ನಾರಿ ಶಕ್ತಿ ವಿಕಸಿತ ಭಾರತದ ನಿರ್ಣಯದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಮತ್ತು ಕ್ಷೇತ್ರಗಳಲ್ಲಿ ಮಾದರಿಯಾಗಿದೆ: ಪ್ರಧಾನಮಂತ್ರಿ

June 08th, 11:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿವೃದ್ಧಿ ಹೊಂದಿದ ಭಾರತದೆಡೆಗಿನ ಪಯಣದಲ್ಲಿ ಮಹಿಳೆಯರು ವಹಿಸಿದ ಪರಿವರ್ತನಾತ್ಮಕ ಪಾತ್ರವನ್ನು ಬಿಂಬಿಸಿದರು, ಕಳೆದ 11 ವರ್ಷಗಳಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಸರ್ಕಾರ ನೀಡಿರುವ ಗಮನವನ್ನು ಒತ್ತಿ ಹೇಳಿದರು.

ದಾವೂದಿ ಬೊಹ್ರಾ ಸಮುದಾಯದ ನಿಯೋಗದೊಂದಿಗೆ ಪ್ರಧಾನಮಂತ್ರಿ ಸಂವಾದ

April 17th, 08:05 pm

ಈ ನಿಯೋಗದಲ್ಲಿ ಉದ್ಯಮ ನಾಯಕರು, ವೃತ್ತಿಪರರು, ವೈದ್ಯರು, ಶಿಕ್ಷಣ ತಜ್ಞರು ಮತ್ತು ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು ಮತ್ತು ತಮ್ಮ ಸಮುದಾಯದ ಸದಸ್ಯರ ಆಸ್ತಿಗಳನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡ ಕಥೆಗಳನ್ನು ಹಂಚಿಕೊಂಡರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಇದು ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೇಡಿಕೆಯಾಗಿತ್ತು ಎಂದು ತಿಳಿಸಿದರು.

ಗುಜರಾತ್ ನ ನವಸಾರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

March 08th, 11:50 am

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ; ನವಸಾರಿಯ ಸಂಸತ್ ಸದಸ್ಯ ಮತ್ತು ನನ್ನ ಸಂಪುಟ ಸಹೋದ್ಯೋಗಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್; ಗೌರವಾನ್ವಿತ ಪಂಚಾಯತ್ ಸದಸ್ಯರು; ವೇದಿಕೆಯಲ್ಲಿ ಉಪಸ್ಥಿತರಿರುವ ಲಕ್ಷಾಧಿಪತಿ ದೀದಿ (ಲಖ್ಪತಿ ದೀದಿ)ಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಮತ್ತು ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ನೆರೆದಿರುವ ಎಲ್ಲರಿಗೂ, ವಿಶೇಷವಾಗಿ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳೇ - ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ನವಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

March 08th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ನವಸಾರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದಕ್ಕೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಈ ವಿಶೇಷ ದಿನದಂದು ನಾಡಿನ ಎಲ್ಲಾ ಮಹಿಳೆಯರಿಗೆ ಶುಭ ಹಾರೈಸಿದರು. ಮಹಾಕುಂಭದಲ್ಲಿ ಗಂಗಾಮಾತೆಯ ಆಶೀರ್ವಾದ ಪಡೆದಿದ್ದೆ, ಇಂದು ಮಾತೃಶಕ್ತಿಯ ಮಹಾಕುಂಭದಲ್ಲಿ ಆಶೀರ್ವಾದ ದೊರೆತಿದೆ ಎಂದು ಹೇಳಿದರು. ಪ್ರಧಾನಮಂತ್ರಿಯವರು ಇಂದು ಗುಜರಾತಿನಲ್ಲಿ ಜಿ-ಸಫಲ್ (ಜೀವನೋಪಾಯ ವೃದ್ಧಿಗಾಗಿ ಅಂತ್ಯೋದಯ ಕುಟುಂಬಗಳಿಗೆ ಗುಜರಾತ್ ಯೋಜನೆ) ಮತ್ತು ಜಿ-ಮೈತ್ರಿ (ಗ್ರಾಮೀಣ ಆದಾಯ ಪರಿವರ್ತನೆಗಾಗಿ ವ್ಯಕ್ತಿಗಳಿಗೆ ಗುಜರಾತ್ ಮಾರ್ಗದರ್ಶನ ಮತ್ತು ವೇಗವರ್ಧನೆ) ಎಂಬ ಎರಡು ಯೋಜನೆಗಳಿಗೆ ಚಾಲನೆ ನೀಡಿದರು. ವಿವಿಧ ಯೋಜನೆಗಳ ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಉಲ್ಲೇಖಿಸಿದ ಅವರು ಈ ಸಾಧನೆಗಾಗಿ ಪ್ರತಿಯೊಬ್ಬರನ್ನು ಅಭಿನಂದಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ

February 06th, 04:21 pm

ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!

ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 06th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಮಂತ್ರಿಗಳು ಚಾಲನೆ ನೀಡಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಆಂದೋಲನಕ್ಕೆ ದಶಕ ಪೂರೈಸಿದ ಸಂಭ್ರಮ

January 22nd, 10:04 am

ಬೇಟಿ ಬಚಾವೋ, ಬೇಟಿ ಪಡಾವೋ ಆಂದೋಲನ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಪರಿವರ್ತನಾತ್ಮಕ, ಜನಶಕ್ತಿಯ ಕೇಂದ್ರಿತ ಉಪಕ್ರಮವಾಗಿದೆ ಮತ್ತು ಸಮಾಜದ ಎಲ್ಲಾ ಸ್ತರ ಜನರಿಂದ ಪಾಲ್ಗೊಳ್ಳುವಿಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಬಣ್ಣಿಸಿದರು. ಬೇಟಿ ಬಚಾವೋ, ಬೇಟಿ ಪಡಾವೋ ಆಂದೋಲನವು ಲಿಂಗ ತಾರತಮ್ಯವನ್ನು ನಿವಾರಿಸುವಲ್ಲಿ ಮತ್ತು ಹೆಣ್ಣು ಮಕ್ಕಳ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಎತ್ತಿ ಹೇಳಿದರು. ಐತಿಹಾಸಿಕವಾಗಿ ಕಡಿಮೆ ಮಕ್ಕಳ ಲಿಂಗ ಅನುಪಾತಗಳನ್ನು ಹೊಂದಿರುವ ಜಿಲ್ಲೆಗಳು ಯೋಜನೆ ಅನುಷ್ಠಾನದ ನಂತರ ಗಮನಾರ್ಹ ಸುಧಾರಣೆ ಕಂಡಿರುವುದು ವರದಿಯಾಗಿದೆ ಹಾಗೂ ಈ ಆಂದೋಲನವನ್ನು ತಳಮಟ್ಟದಲ್ಲಿ ಕ್ರಿಯಾಶೀಲವಾಗಿ ಮುನ್ನಡೆಸಿದ ಎಲ್ಲ ಪಾಲುದಾರರನ್ನೂ ಶ್ರೀ ಮೋದಿ ಅವರು ಅಭಿನಂದಿಸಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

December 17th, 12:05 pm

ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!

ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.

“ಕಾಂಗ್ರೆಸ್ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಿತು, ಪ್ರಧಾನಿ ಮೋದಿ ಅದನ್ನು ಪುನರುಜ್ಜೀವನಗೊಳಿಸಿದರು”: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

December 10th, 05:30 pm

ಕಳೆದ ದಶಕದಲ್ಲಿ ಭಾರತದ ಸಾಕ್ಷರತೆ ಪ್ರಮಾಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಂದ್ರ ಶಿಕ್ಷಣ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಧರ್ಮೇಂದ್ರ ಪ್ರಧಾನ್ ಶ್ಲಾಘಿಸಿದ್ದಾರೆ. ಭಾರತದ ಗ್ರಾಮೀಣ ಸಾಕ್ಷರತೆಯ ಪ್ರಮಾಣವು 2023-24 ರಲ್ಲಿ 77.5% ಕ್ಕೆ ಗಣನೀಯವಾಗಿ ಹೆಚ್ಚಿದೆ, ಇದು ಮಹಿಳಾ ಸಾಕ್ಷರತೆಯ ಉಲ್ಬಣದಿಂದ ನಡೆಸಲ್ಪಟ್ಟಿದೆ.

ಹರಿಯಾಣದ ಪಾಣಿಪತ್‌ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

December 09th, 05:54 pm

ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್‌ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು

December 09th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್‌ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್‌ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.