ಇಸ್ರೇಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

February 26th, 08:56 pm

ಭಾರತ ಮತ್ತು ಇಸ್ರೇಲ್ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ಎರಡೂ ದೇಶದ ಪ್ರಧಾನಮಂತ್ರಿಗಳು ವಿಸ್ತೃತ ಚರ್ಚೆಗಳನ್ನು ನಡೆಸಿದರು. ಎರಡೂ ದೇಶಗಳ ನಡುವಿನ ಬಲವಾದ ನಂಬಿಕೆ ಮತ್ತು ಸ್ನೇಹವನ್ನು ಪ್ರತಿಬಿಂಬಿಸುತ್ತಾ, ಇಬ್ಬರೂ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು. ಇದು ಪರಸ್ಪರ ಹಿತಾಸಕ್ತಿಗಳು ಹೆಚ್ಚುತ್ತಿರುವ ಒಮ್ಮುಖ ಮತ್ತು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನದ ಸಂಕೇತವಾಗಿದೆ.

ಮುಂಬೈನಲ್ಲಿ ನಡೆದ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

February 18th, 12:07 pm

ಇಂದು, ವಿಶ್ವದ ಎರಡು ಮಹಾನ್ ನಾವೀನ್ಯತೆ ಕೇಂದ್ರಗಳು ಒಟ್ಟಿಗೆ ಬರುತ್ತಿವೆ. ನಾವು ಭಾರತ ಮತ್ತು ಫ್ರಾನ್ಸ್ ಬಗ್ಗೆ ಮಾತನಾಡುವಾಗ, ನಮ್ಮ ಸಂಬಂಧವು ನಾವೀನ್ಯತೆ ಬಗ್ಗೆ ಮಾತ್ರವಲ್ಲ, ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಬಗ್ಗೆಯೂ ಆಗಿದೆ. ಈ ಮನೋಭಾವದಿಂದ, ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು 2026 ಅನ್ನು ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷವೆಂದು ಆಚರಿಸಲು ನಿರ್ಧರಿಸಿದ್ದೇವೆ. ಇದು ಕೇವಲ ಆಚರಣೆಯಲ್ಲ; ಇದು ನಮ್ಮ ಹಂಚಿಕೆಯ ಬದ್ಧತೆ - ನಾವೀನ್ಯತೆಗಾಗಿ ಬದ್ಧತೆ, ಮುನ್ನಡೆಸಲು ಬದ್ಧತೆ.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 17th, 04:00 pm

ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,

Cabinet approves Startup India Fund of Funds 2.0 to Mobilize Venture Capital for India’s Startup Ecosystem

February 14th, 01:11 pm

The Union Cabinet chaired by PM Modi, has approved the establishment of the Startup India Fund of Funds 2.0 with a total corpus of Rs. 10,000 crore. Aligned with the national vision of Viksit Bharat @ 2047, the Fund represents the Government’s continued commitment to empowering entrepreneurs, fostering innovation and unlocking the full potential of India’s startup ecosystem.

ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

January 12th, 01:35 pm

ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.

ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 24th, 10:35 am

ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

February 24th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.

ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

February 14th, 04:57 am

ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.

ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

January 19th, 11:30 am

In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.

ಜಿನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 09th, 06:38 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್, ದೇಶದ ವಿವಿಧೆಡೆಯಿಂದ ಇಲ್ಲಿಗೆ ಬಂದಿರುವ ಎಲ್ಲಾ ವಿಜ್ಞಾನಿಗಳೆ, ಇಲ್ಲಿರುವ ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಜೀನೋಮ್ಇಂಡಿಯಾ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ

January 09th, 05:53 pm

ಜೀನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು, ಭಾರತ ಇಂದು ಸಂಶೋಧನಾ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಜೀನೋಮ್ ಇಂಡಿಯಾ ಯೋಜನೆಗೆ 5 ವರ್ಷಗಳ ಹಿಂದೆ ಅನುಮೋದನೆ ನೀಡಲಾಗಿತ್ತು, ಕೋವಿಡ್ ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ ನಮ್ಮ ವಿಜ್ಞಾನಿಗಳು ಶ್ರದ್ಧೆಯಿಂದ ಕೆಲಸ ಮಾಡಿ ಯೋಜನೆಯನ್ನು ಪೂರ್ಣಗೊಳಿಸಿದ್ದಾರೆ. ಐಐಎಸ್ಸಿ, ಐಐಟಿಗಳು, ಸಿಎಸ್ಐಆರ್ ಮತ್ತು ಡಿಬಿಟಿ-ಬ್ರಿಕ್ ನಂತಹ 20ಕ್ಕೂ ಹೆಚ್ಚು ಹೆಸರಾಂತ ಸಂಶೋಧನಾ ಸಂಸ್ಥೆಗಳು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. 10,000 ಭಾರತೀಯರ ಜೀನೋಮ್ ಅನುಕ್ರಮಗಳನ್ನು ಒಳಗೊಂಡಿರುವ ದತ್ತಾಂಶವು ಈಗ ಭಾರತೀಯ ಜೈವಿಕ ದತ್ತಾಂಶ ಕೇಂದ್ರದಲ್ಲಿ ಲಭ್ಯವಿದೆ. ಈ ಯೋಜನೆಯು ಜೈವಿಕ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು.