Prime Minister pays tributes to NTR Garu on his birth anniversary

May 28th, 09:56 am

The Prime Minister, Shri Narendra Modi, paid tributes to NTR Garu on his birth anniversary.

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

April 17th, 11:10 am

ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ಶ್ರೀ ಹರಿವಂಶ್ ಅವರಿಗೆ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಜ್ಯಸಭೆ ಉಪಸಭಾಪತಿಯಾಗಿ ಸತತ 3ನೇ ಬಾರಿಗೆ ಆಯ್ಕೆಯಾಗಿರುವುದು, ಈ ಸದನವು ನಿಮ್ಮ ಮೇಲೆ ಹೊಂದಿರುವ ಆಳವಾದ ನಂಬಿಕೆಗೆ ಸಾಕ್ಷಿಯಾಗಿದೆ. ಹಿಂದಿನ ಅವಧಿಯಲ್ಲಿ ನಿಮ್ಮ ಅನುಭವ ಮತ್ತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ನಿಮ್ಮ ಪ್ರಯತ್ನಗಳಿಂದ ಪಡೆದ ಪ್ರಯೋಜನಕ್ಕೆ ಸದನವು ಪರಿಣಾಮಕಾರಿಯಾಗಿ ತನ್ನ ಅನುಮೋದನೆಯ ಮುದ್ರೆ ಹೊತ್ತಿದೆ. ಇದು ಅನುಭವಕ್ಕೆ ಸಂದ ಗೌರವ, ಸ್ವಾಭಾವಿಕ ಕಾರ್ಯ ಶೈಲಿಗೆ ಸಂದ ಗೌರವ ಮತ್ತು ಆ ಸ್ವಾಭಾವಿಕ ಕಾರ್ಯ ಶೈಲಿಯ ಸ್ವೀಕಾರವೂ ಆಗಿದೆ. ಹರಿವಂಶ್ ಜಿ ಅವರ ನಾಯಕತ್ವದಲ್ಲಿ ಸದನದ ಶಕ್ತಿ ಹೆಚ್ಚು ಪರಿಣಾಮಕಾರಿಯಾಗುವುದನ್ನು ನಾವೆಲ್ಲರೂ ನೋಡಿದ್ದೇವೆ. ಅವರು ಸದನದ ಕಲಾಪಗಳನ್ನು ಕೇವಲ ನಡೆಸುವುದಿಲ್ಲ ಎಂದು ನಾನು ಹೇಳಬಲ್ಲೆ; ಅವರು ತಮ್ಮ ಹಿಂದಿನ ಜೀವನದ ಅನುಭವಗಳನ್ನು ಸದನವನ್ನು ಉತ್ಕೃಷ್ಟಗೊಳಿಸಲು ಅತ್ಯಂತ ನಿಖರವಾದ ರೀತಿಯಲ್ಲಿ ಬಳಸಿಕೊಳ್ಳುತ್ತಾರೆ. ಅವರ ಅನುಭವವು ಸದನದ ಸಂಪೂರ್ಣ ಕಲಾಪಗಳು, ನಡವಳಿಕೆ ಮತ್ತು ವಾತಾವರಣವನ್ನು ಹೆಚ್ಚು ಪ್ರಬುದ್ಧಗೊಳಿಸುತ್ತದೆ. ಉಪಸಭಾಪತಿಯ ಹೊಸ ಅವಧಿಯು ಅದೇ ಮನೋಭಾವ, ಸಮತೋಲನ ಮತ್ತು ಸಮರ್ಪಣೆಯೊಂದಿಗೆ ಮುಂದುವರಿಯುತ್ತದೆ. ನಮ್ಮ ಎಲ್ಲಾ ಪ್ರಯತ್ನಗಳ ಮೂಲಕ ಸದನದ ಘನತೆ ಹೊಸ ಎತ್ತರವನ್ನು ತಲುಪುತ್ತದೆ ಎಂಬ ವಿಶ್ವಾಸ ನನಗಿದೆ.

ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 17th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಐತಿಹಾಸಿಕ ಸತತ ಮೂರನೇ ಅವಧಿಗೆ ರಾಜ್ಯಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಶ್ರೀ ಹರಿವಂಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಐತಿಹಾಸಿಕ ಸಾಧನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಅವರು, ಇದು ಶ್ರೀ ಹರಿವಂಶ್ ಅವರ ಮೇಲಿನ ಸದನದ ಆಳವಾದ ನಂಬಿಕೆ ಮತ್ತು ಸಂಸ್ಥೆಗೆ ಅವರು ತಂದಿರುವ ಅಮೂಲ್ಯ ಅನುಭವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. “ಸತತ ಮೂರನೇ ಅವಧಿಗೆ ಆಯ್ಕೆಯಾಗಿರುವುದು ಅವರ ಅನುಭವ, ಎಲ್ಲರನ್ನೂ ಒಳಗೊಳ್ಳುವ ವಿಧಾನ ಮತ್ತು ಅವರ ಘನತೆಯ ಕಾರ್ಯ ಶೈಲಿಗೆ ಸದನದಿಂದ ಅನುಮೋದನೆಯ ಮುದ್ರೆಯಾಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 17th, 08:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಚಂದ್ರಶೇಖರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ

April 14th, 09:14 am

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಸಂಸತ್ ಭವನದಲ್ಲಿ ಮಹಾತ್ಮ ಫುಲೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 11th, 11:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾತ್ಮ ಫುಲೆ ಅವರ ಜನ್ಮ ದಿನಾಚರಣೆಯ ಅಂಗವಾಗಿ ಸಂಸತ್ ಭವನದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 05th, 09:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

April 01st, 10:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಅನುಪಮ ಕೊಡುಗೆಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ನಿಸ್ವಾರ್ಥ ಸೇವೆಗೆ ಪ್ರೇರೇಪಿಸುತ್ತಲೇ ಇರುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ನಮನ

March 23rd, 08:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಗ್ಗಜ ಸಮಾಜವಾದಿ ನಾಯಕ ಮತ್ತು ಚಿಂತಕರಾದ ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ವಾರ್ಷಿಕ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

March 05th, 11:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಒಡಿಶಾದ ಪ್ರಗತಿಯನ್ನು ಹೆಚ್ಚಿಸುವ ಬಗ್ಗೆ ಅವರ ಉತ್ಸಾಹವನ್ನು ಸ್ಮರಿಸಿಕೊಂಡರು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 24th, 09:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭವಾದ ಇಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರಧಾನಮಂತ್ರಿಯವರು ಅವರನ್ನು “ವರ್ಚಸ್ವಿ ನಾಯಕಿ ಮತ್ತು ಹೃದಯ ಹಾಗೂ ಮನಸ್ಸುಗಳಲ್ಲಿ ಶಾಶ್ವತ ಸ್ಥಾನ ಗಳಿಸಿದ ಅತ್ಯುತ್ತಮ ಆಡಳಿತಗಾರ್ತಿ” ಎಂದು ಸ್ಮರಿಸಿದರು.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 19th, 08:48 am

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ, ಕಾರ್ಯತಂತ್ರದ ಚಿಂತಕ ಮತ್ತು ಸ್ವರಾಜ್ಯದ ಪ್ರತಿಪಾದಕರಿಗೆ ಗೌರವ ನಮನ ಸಲ್ಲಿಸಿದರು.

ಶ್ರೇಷ್ಠ ಸಮಾಜ ಸುಧಾರಕ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 15th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೇಷ್ಠ ಸಮಾಜ ಸುಧಾರಕ ಶ್ರೀ ಸಂತ್ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಸತ್ಯ, ಅಹಿಂಸೆ ಮತ್ತು ಉನ್ನತ ನೈತಿಕ ಮೌಲ್ಯಗಳ ಸಂದೇಶವನ್ನು ಹರಡುವ ಮೂಲಕ ಅವರು ಸಮಾಜದಲ್ಲಿ ಹೊಸ ಪ್ರಜ್ಞೆಯನ್ನು ತುಂಬಿದರು. ಅವರ ಸ್ಫೂರ್ತಿದಾಯಕ ಜೀವನವು ದೇಶದ ಜನರಿಗೆ ಎಂದೆಂದಿಗೂ ಮಾರ್ಗದರ್ಶನ ನೀಡುತ್ತಲೇ ಇರುತ್ತದೆ, ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 01st, 09:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ರವಿದಾಸ್ ಮಹಾರಾಜ್ ಅವರ ಚಿಂತನೆಗಳಲ್ಲಿ ನ್ಯಾಯ ಮತ್ತು ಕರುಣೆಯ ಅತ್ಯುನ್ನತವಾಗಿದ್ದು, ಅದುವೇ ನಮ್ಮ ಸಾರ್ವಜನಿಕ ಕಲ್ಯಾಣ ಯೋಜನೆಗಳ ಅತ್ಯಂತ ಮೂಲಾಧಾರವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. “ಅವರು ಪ್ರಜ್ವಲಿಸಿದ ಸಾಮಾಜಿಕ ಸೌಹಾರ್ದತೆ ಮತ್ತು ಸದುದ್ದೇಶದ ದೀಪವು ದೇಶದ ಜನರ ಹಾದಿಯನ್ನು ಸದಾ ಪ್ರಕಾಶಮಾನಗೊಳಿಸುತ್ತಲೇ ಇರುತ್ತದೆ,” ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಂತ ಗುರು ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಫೆಬ್ರವರಿ 1ರಂದು ಪಂಜಾಬ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

January 31st, 10:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 1ರಂದು ಪಂಜಾಬ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:45ರ ಸುಮಾರಿಗೆ ಪ್ರಧಾನಮಂತ್ರಿ ಅವರು ಆದಂಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ವಿಮಾನ ನಿಲ್ದಾಣದ ಹೊಸ ಹೆಸರನ್ನು 'ಶ್ರೀ ಗುರು ರವಿದಾಸ್ ಮಹಾರಾಜ್ ಜಿ ವಿಮಾನ ನಿಲ್ದಾಣ, ಆದಂಪುರ' ಎಂದು ಅನಾವರಣಗೊಳಿಸಲಿದ್ದಾರೆ. ಪಂಜಾಬ್ ನ ಲುಧಿಯಾನದ ಹಲ್ವಾರಾ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ.

ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದ್ದಾರೆ

January 28th, 09:35 am

ಪಂಜಾಬ್ ಕೇಸರಿ ಎಂದು ಪ್ರೀತಿಯಿಂದ ಕರೆಯಲ್ಪಡುವ ಲಾಲಾ ಲಜಪತ್ ರಾಯ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಭಾರತಾಂಬೆಯನ್ನು ಗುಲಾಮಗಿರಿಯ ಸರಪಳಿಯಿಂದ ಮುಕ್ತಗೊಳಿಸಲು ಅವರು ತಮ್ಮಲ್ಲಿದ್ದ ಎಲ್ಲವನ್ನೂ ಅರ್ಪಿಸಿದರು ಎಂದು ಮೋದಿ ಹೇಯವರು ಸ್ಮರಿಸಿಕೊಂಡಿದ್ದಾರೆ.

ಭಾರತ ರತ್ನ ಶ್ರೀ ಕರ್ಪೂರಿ ಠಾಕೂರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 24th, 08:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕರ್ಪೂರಿ ಠಾಕೂರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ʻಪರಾಕ್ರಮ್ ದಿವಸ್ʼ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 23rd, 08:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ನೇತಾಜಿ ಅವರ ಅದಮ್ಯ ಧೈರ್ಯ, ಅಚಲ ಸಂಕಲ್ಪ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಸಾಟಿಯಿಲ್ಲದ ಕೊಡುಗೆಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ನೇತಾಜಿ ಅವರ ನಿರ್ಭೀತ ನಾಯಕತ್ವ ಮತ್ತು ಆಳವಾದ ದೇಶಭಕ್ತಿಯು ಬಲಿಷ್ಠ ಭಾರತವನ್ನು ನಿರ್ಮಿಸಲು ಮುಂದಿನ ತಲೆಮಾರುಗಳಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು.

The greatest pride of my life is that I am a karyakarta of the Bharatiya Janata Party: PM Modi at BJP HQ

January 20th, 11:16 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”