ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಕೇಂದ್ರ ಮತ್ತು ಅಸ್ಸಾಂನ ಎನ್‌.ಡಿ.ಎ. ಸರ್ಕಾರಗಳು ಬೋಡೋ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ಬೋಡೋ ಸಮುದಾಯದ ಆಕಾಂಕ್ಷೆಗಳನ್ನು ಈಡೇರಿಸಲು ಅವಿರತವಾಗಿ ಶ್ರಮಿಸುತ್ತಿವೆ, ಈ ಕಾರ್ಯಗಳು ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯುತ್ತವೆ: ಪ್ರಧಾನಮಂತ್ರಿ

February 15th, 04:08 pm

ಫೆಬ್ರವರಿ 17, 2025 ರಂದು ಕೊಕ್ರಜಾರ್‌ ನಲ್ಲಿ ನಡೆಯಲಿರುವ ಐತಿಹಾಸಿಕ ಒಂದು ದಿನದ ವಿಶೇಷ ಅಸೆಂಬ್ಲಿ ಅಧಿವೇಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.