ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3

November 23rd, 04:05 pm

ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ.

ಎಲ್ಲರಿಗೂ ನ್ಯಾಯಯುತ ಮತ್ತು ನ್ಯಾಯಯುತ ಭವಿಷ್ಯ ಕುರಿತ ಜಿ-20 ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 23rd, 04:02 pm

ಪ್ರಧಾನಮಂತ್ರಿ ಅವರು ಇಂದು ಎಲ್ಲರಿಗೂ ನ್ಯಾಯಯುತ ಮತ್ತು ನ್ಯಾಯಯುತ ಭವಿಷ್ಯ - ನಿರ್ಣಾಯಕ ಖನಿಜಗಳು; ಯೋಗ್ಯವಾದ ಕೆಲಸ; ಕೃತಕ ಬುದ್ಧಿಮತ್ತೆ. ನಿರ್ಣಾಯಕ ತಂತ್ರಜ್ಞಾನಗಳನ್ನು ಉತ್ತೇಜಿಸುವ ವಿಧಾನದಲ್ಲಿ ಮೂಲಭೂತ ಬದಲಾವಣೆಗೆ ಪ್ರಧಾನಮಂತ್ರಿ ಅವರು ಕರೆ ನೀಡಿದರು. ಅಂತಹ ತಂತ್ರಜ್ಞಾನ ಅಪ್ಲಿಕೇಶನ್‌ಗಳು ‘ಹಣಕಾಸು-ಕೇಂದ್ರಿತ’ಕ್ಕಿಂತ ‘ಮಾನವ ಕೇಂದ್ರಿತ’ ವಾಗಿರಬೇಕು, ‘ರಾಷ್ಟ್ರೀಯ’ ಕ್ಕಿಂತ ‘ಜಾಗತಿಕ’ ಮತ್ತು ‘ವಿಶೇಷ ಮಾದರಿಗಳ’ ಬದಲು ‘ಮುಕ್ತ ಮೂಲ’ವನ್ನು ಆಧರಿಸಿರಬೇಕು ಎಂದು ಅವರು ಹೇಳಿದರು. ಈ ದೃಷ್ಟಿಕೋನವನ್ನು ಭಾರತದ ತಂತ್ರಜ್ಞಾನ ಪರಿಸರ ವ್ಯವಸ್ಥೆಯೊಂದಿಗೆ ಸಂಯೋಜಿಸಲಾಗಿದೆ ಮತ್ತು ಅದು ಬಾಹ್ಯಾಕಾಶ ಅಪ್ಲಿಕೇಶನ್‌ಗಳು, ಕೃತಕ ಬುದ್ಧಿಮತ್ತೆ ಅಥವಾ ಡಿಜಿಟಲ್‌ ಪಾವತಿಗಳಲ್ಲಿಗಮನಾರ್ಹ ಪ್ರಯೋಜನಗಳಿಗೆ ಕಾರಣವಾಗಿದೆ ಎಂದು ಅವರು ವಿವರಿಸಿದರು.

ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ

October 14th, 01:15 pm

ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.

2025-26 ರಿಂದ 2030-31 ರವರೆಗೆ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತ ಅಭಿಯಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

October 01st, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಬೇಳೆಕಾಳುಗಳಲ್ಲಿ ಆತ್ಮನಿರ್ಭರ ಮಿಷನ್ಗೆ ಅನುಮೋದನೆ ನೀಡಿದೆ. ಇದು ದೇಶದಲ್ಲಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ತರ ಉಪಕ್ರಮವಾಗಿದ್ದು, ಇದರ ಉದ್ದೇಶ ಬೇಳೆಕಾಳುಗಳಲ್ಲಿ ಸ್ವಾವಲಂಬನೆ (ಆತ್ಮನಿರ್ಭರತ) ಸಾಧಿಸುವುದಾಗಿದೆ. ಈ ಮಿಷನ್ ಅನ್ನು 2025-26 ರಿಂದ 2030-31 ರವರೆಗಿನ ಆರು ವರ್ಷಗಳ ಅವಧಿಯಲ್ಲಿ, ರೂ. 11,440 ಕೋಟಿ ಆರ್ಥಿಕ ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

ಫಿಜಿ ಪ್ರಧಾನಮಂತ್ರಿ ಶ್ರೀ ಸಿಟಿವೆನಿ ರಬೂಕಾ ಅವರ ಭಾರತ ಭೇಟಿ: ದ್ವಿಪಕ್ಷೀಯ ಮಾತುಕತೆಯ ಫಲಿತಾಂಶಗಳ ಪಟ್ಟಿ

August 25th, 01:58 pm

ಫಿಜಿಯಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ವಿನ್ಯಾಸ, ನಿರ್ಮಾಣ, ಕಾರ್ಯಾರಂಭ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಫಿಜಿ ಗಣರಾಜ್ಯ ಸರ್ಕಾರಗಳ ನಡುವಿನ ತಿಳುವಳಿಕೆ ಒಪ್ಪಂದ.

ಭಾರತ-ಫಿಜಿ ಜಂಟಿ ಹೇಳಿಕೆ: ʻವೀಲೋಮನಿ ದೋಸ್ತಿʼಯ ಸ್ಫೂರ್ತಿಯೊಂದಿಗೆ ಪಾಲುದಾರಿಕೆ

August 25th, 01:52 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಜಿ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಸಿಟಿವೇನಿ ರಬೂಕಾ ಅವರು 2025ರ ಆಗಸ್ಟ್ 24 ರಿಂದ 26ರವರೆಗೆ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಸ್ತುತ ತಮ್ಮ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ರಬುಕಾ ಅವರು ತಮ್ಮ ಪತ್ನಿಯ ಸಂಗಡವಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ. ಫಿಜಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳ ಸಚಿವರಾದ ಗೌರವಾನ್ವಿತ ಶ್ರೀ ಆಂಟೋನಿಯೊ ಲಾಲಬಲಾವು ಮತ್ತು ಫಿಜಿ ಗಣರಾಜ್ಯದ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಅವರ ಜೊತೆಯಲ್ಲಿದೆ.

ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 09th, 08:14 pm

ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.

Prime Minister addresses the Namibian Parliament

July 09th, 08:00 pm

PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬೊಲಿವಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 07th, 09:19 pm

ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೊಲಿವಿಯಾ ಬಹುರಾಷ್ಟ್ರೀಯ ರಾಜ್ಯದ ಅಧ್ಯಕ್ಷ ಘನತೆವೆತ್ತ ಲೂಯಿಸ್ ಆರ್ಸ್ ಕ್ಯಾಟಕೋರಾ ಅವರನ್ನು ಭೇಟಿ ಮಾಡಿದರು.

ರಿಯೋ ಡಿ ಜನೈರೋ ಘೋಷಣೆ - ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ 'ಗ್ಲೋಬಲ್ ಸೌತ್' ಸಹಕಾರ ಬಲವರ್ಧನೆ

July 07th, 06:00 am

ಬ್ರಿಕ್ಸ್ ರಾಷ್ಟ್ರಗಳ ನಾಯಕರಾದ ನಾವು, ಹೆಚ್ಚು ಸಮಗ್ರ ಹಾಗೂ ಸುಸ್ಥಿರ ಆಡಳಿತಕ್ಕಾಗಿ ಗ್ಲೋಬಲ್ ಸೌತ್ ಸಹಕಾರವನ್ನು ಬಲಪಡಿಸುವುದು ಎಂಬ ಧ್ಯೇಯವಾಕ್ಯದ ಅಡಿಯಲ್ಲಿ, ಜುಲೈ 6 ರಿಂದ 7, 2025 ರವರೆಗೆ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಸಭೆ ಸೇರಿದ್ದೇವೆ.

ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರು ಕ್ಯೂಬಾದ ಅಧ್ಯಕ್ಷರನ್ನು ಭೇಟಿಯಾದರು

July 07th, 05:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕ್ಯೂಬಾದ ಅಧ್ಯಕ್ಷ ಘನತೆವೆತ್ತ ಮಿಗುಯೆಲ್ ಡಯಾಜ್-ಕ್ಯಾನೆಲ್ ಬೆರ್ಮುಡೆಜ್ ಅವರನ್ನು ಭೇಟಿ ಮಾಡಿದರು. 2023ರಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಕ್ಯೂಬಾ ವಿಶೇಷ ಆಹ್ವಾನಿತರಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಡಿಯಾಜ್-ಕ್ಯಾನೆಲ್ ಅವರನ್ನು ಭೇಟಿ ಮಾಡಿದ್ದರು.

ಟ್ರಿನಿಡಾಡ್ ಮತ್ತು ಟೊಬೆಗೊ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

July 04th, 11:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೋರ್ಟ್ ಆಫ್ ಸ್ಪೇನ್‌ನ ರೆಡ್ ಹೌಸ್‌ನಲ್ಲಿ ಟ್ರಿನಿಡಾಡ್ ಮತ್ತು ಟೊಬೆಗೊ ಗಣರಾಜ್ಯದ [ಟಿ&ಟಿ] ಪ್ರಧಾನಮಂತ್ರಿ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಜೊತೆ ಮಾತುಕತೆ ನಡೆಸಿದರು. ಇತ್ತೀಚಿನ ಚುನಾವಣೆಗಳಲ್ಲಿ ಜಯಗಳಿಸಿದ ನಂತರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿ ಶುಭ ಕೋರಿದರು. ಸಾಂಪ್ರದಾಯಿಕವಾಗಿ ಸ್ವಾಗತ ಕೋರಿದ್ದಕ್ಕಾಗಿ ಟ್ರಿನಿಡಾಡ್‌ ಪ್ರಧಾನಿಗೆ ಧನ್ಯವಾದ ಅರ್ಪಿಸಿದರು.

ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 04th, 09:30 pm

ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.

ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 09:00 pm

ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.

PM Modi conferred with highest national award, the ‘Order of the Republic of Trinidad & Tobago

July 04th, 08:20 pm

PM Modi was conferred Trinidad & Tobago’s highest national honour — The Order of the Republic of Trinidad & Tobago — at a special ceremony in Port of Spain. He dedicated the award to the 1.4 billion Indians and the historic bonds of friendship between the two nations, rooted in shared heritage. PM Modi also reaffirmed his commitment to strengthening bilateral ties.

ಘಾನಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 03rd, 01:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾದ ಅಧ್ಯಕ್ಷರಾದ, ಗೌರವಾನ್ವಿತ ಡಾ. ಜಾನ್ ಡ್ರಾಮಾನಿ ಮಹಾಮಾ ಅವರನ್ನು ಭೇಟಿ ಮಾಡಿದರು. ಜ್ಯೂಬಿಲಿ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಮಹಾಮಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಘಾನಾಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಡಿ ಇದಾಗಿದೆ.

ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತದೆ: ಪ್ರಧಾನಮಂತ್ರಿ

June 06th, 02:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಪ್ರತಿಮ ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದನ್ನು ಸಂಭ್ರಮಿಸಿದ್ದಾರೆ, ಇದು ಅಪಾರ ರಾಷ್ಟ್ರೀಯ ಹೆಮ್ಮೆಯ ಕ್ಷಣ ಮತ್ತು ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಭವಿಷ್ಯದ ಮೂಲಸೌಕರ್ಯಗಳನ್ನು ನಿರ್ಮಿಸುವ ಭಾರತದ ಬೆಳೆಯುತ್ತಿರುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.

ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)

May 03rd, 01:00 pm

ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.

ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 02:00 pm

ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

April 24th, 01:30 pm

ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.