ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 08:20 am

ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.

Prime Minister addresses business leaders in New Zealand

July 11th, 08:16 am

PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.

ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಖಾಸಗಿ ಪಾಲುದಾರರನ್ನು ಒಳಗೊಂಡ ದೀರ್ಘಾವಧಿಯ ಪರವಾನಗಿಯ ಮೂಲಕ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆ ಮತ್ತು ಆಧುನೀಕರಣಕ್ಕೆ ಸಂಪುಟ ಅನುಮೋದನೆ

May 13th, 03:41 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಭೂಮಿಯನ್ನು ಎಂಐಎಲ್ (ಮಿಹಾನ್ ಇಂಡಿಯಾ ಲಿಮಿಟೆಡ್) ಗೆ ನೀಡಲಾಗಿರುವ ಗುತ್ತಿಗೆ ಅವಧಿಯನ್ನು 06.08.2039 ರ ನಂತರವೂ ವಿಸ್ತರಿಸಲು ಅನುಮೋದನೆ ನೀಡಿದೆ. ಇದು ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ (ಸಿಒಡಿ) 30 ವರ್ಷಗಳವರೆಗೆ ರಿಯಾಯಿತಿ ಪಡೆಯುವ ಸಂಸ್ಥೆಯಾದ ಜಿಎಂಆರ್ ನಾಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತಕ್ಕೆ (ಜಿ ಎನ್‌ ಐ ಎ ಎಲ್) ನಾಗ್ಪುರ ವಿಮಾನ ನಿಲ್ದಾಣದ ಪರವಾನಗಿ ನೀಡಲು ಎಂಐಎಲ್ ಗೆ ಅನುವು ಮಾಡಿಕೊಡುತ್ತದೆ.

ಟಿಎಂಸಿ ಸರ್ಕಾರವನ್ನು ಗೂಂಡಾಗಳು ನಡೆಸುತ್ತಾರೆ ಅಥವಾ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶದ ನಂತರವೇ ನಡೆಸುತ್ತಾರೆ: ಪಶ್ಚಿಮ ಬಂಗಾಳದ ಅರಂಬಾಗ್‌ನಲ್ಲಿ ಪ್ರಧಾನಿ ಮೋದಿ

April 26th, 01:50 pm

ಪಶ್ಚಿಮ ಬಂಗಾಳದ ಅರಂಬಾಗ್‌ನಲ್ಲಿ ವಿಜಯ್ ಸಂಕಲ್ಪ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 15 ವರ್ಷಗಳ ಬೆದರಿಕೆಯ ನಂತರ, ಬಂಗಾಳದ ಜನರು ಈಗ ಅನ್ಯಾಯವನ್ನು ಸೋಲಿಸಲು ದೃಢನಿಶ್ಚಯ ಮಾಡಿದ್ದಾರೆ ಎಂದು ಹೇಳಿದರು. ಟಿಎಂಸಿ ಸರ್ಕಾರ ನ್ಯಾಯಾಲಯದ ಹಸ್ತಕ್ಷೇಪದ ನಂತರವೇ ಕಾರ್ಯನಿರ್ವಹಿಸುತ್ತದೆ ಎಂದು ಅವರು ಗಮನಿಸಿದರು. ಭಯ, ಭ್ರಷ್ಟಾಚಾರ ಮತ್ತು ಸಿಂಡಿಕೇಟ್ ನಿಯಂತ್ರಣದಿಂದ ಮುಕ್ತವಾದ ಸರ್ಕಾರ ಮಾತ್ರ ಬಂಗಾಳದ ನಿಜವಾದ ಸಾಮರ್ಥ್ಯವನ್ನು ಅನ್ಲಾಕ್ ಮಾಡಬಹುದು ಎಂದು ಹೇಳುವ ಮೂಲಕ ಅವರು ಜನರನ್ನು ಬಿಜೆಪಿಗೆ ನಿರ್ಣಾಯಕವಾಗಿ ಮತ ಚಲಾಯಿಸುವಂತೆ ಒತ್ತಾಯಿಸುವ ಮೂಲಕ ತಮ್ಮ ಮಾತುಗಳನ್ನು ಮುಕ್ತಾಯಗೊಳಿಸಿದರು.

ಈ 15 ವರ್ಷಗಳ ಸಿಂಡಿಕೇಟ್ ಟಿಎಂಸಿ ರಾಜ್ ಅವಧಿ ಮೇ 4 ರಂದು ಮುಕ್ತಾಯಗೊಳ್ಳಲಿದೆ: ಪಶ್ಚಿಮ ಬಂಗಾಳದ ಬಂಗಾವ್‌ನಲ್ಲಿ ಪ್ರಧಾನಿ ಮೋದಿ

April 26th, 01:30 pm

ಪಶ್ಚಿಮ ಬಂಗಾಳದ ಬಂಗಾವ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿಯ ಭ್ರಷ್ಟಾಚಾರ, ಸಿಂಡಿಕೇಟ್ ರಾಜ್ ಮತ್ತು ಭಯ ರಾಜಕೀಯದ ವಿರುದ್ಧ ತೀಕ್ಷ್ಣ ಸಂದೇಶ ನೀಡಿದರು. ಟಿಎಂಸಿ ಆಡಳಿತದಲ್ಲಿ ನಾರಿ ಶಕ್ತಿ ಹೆಚ್ಚು ಪರಿಣಾಮ ಬೀರಿದೆ ಎಂದು ಹೇಳಿದ ಅವರು, ಮಹಿಳೆಯರು ಬದಲಾವಣೆಗೆ ನೇತೃತ್ವ ವಹಿಸಬೇಕೆಂದು ಕರೆ ನೀಡಿದರು. ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ, ಭದ್ರತೆ ಮತ್ತು ಸಮೃದ್ಧಿಗಾಗಿ ಬಿಜೆಪಿಯ ಮಾರ್ಗಸೂಚಿಯನ್ನು ಸಹ ಅವರು ವಿವರಿಸಿದರು ಮತ್ತು ಶ್ಯಾಮ ಪ್ರಸಾದ್ ಮುಖರ್ಜಿಯವರ ಪರಂಪರೆಯನ್ನು ನೆನಪಿಸಿಕೊಂಡರು.

ಪಶ್ಚಿಮ ಬಂಗಾಳದ ಬಂಗಾವ್ ಮತ್ತು ಅರಂಬಾಗ್‌ನಲ್ಲಿ ಪ್ರಧಾನಿ ಮೋದಿಯವರ ಪ್ರಭಾವಶಾಲಿ ರ್ಯಾಲಿಗಳು

April 26th, 01:24 pm

ಪ್ರಧಾನಿ ಮೋದಿ ಅವರು ಬಂಗಾವ್ ಮತ್ತು ಅರಂಬಾಗ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದರು, ಟಿಎಂಸಿಯ ಭ್ರಷ್ಟಾಚಾರ, ಸಿಂಡಿಕೇಟ್ ರಾಜ್ ಮತ್ತು ಭಯ ರಾಜಕೀಯದ ವಿರುದ್ಧ ತೀಕ್ಷ್ಣವಾದ ಸಂದೇಶವನ್ನು ನೀಡಿದರು ಮತ್ತು ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ, ಭದ್ರತೆ ಮತ್ತು ಸಮೃದ್ಧಿಗಾಗಿ ಬಿಜೆಪಿಯ ಮಾರ್ಗಸೂಚಿಯನ್ನು ಮಂಡಿಸಿದರು.

ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 02:15 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು

March 14th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.

ಹೈದರಾಬಾದ್ ‌ನಲ್ಲಿ ನಡೆದ ವಿಂಗ್ಸ್ ಇಂಡಿಯಾ-2026 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

January 28th, 06:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ವಿಶ್ವಾದ್ಯಂತದಿಂದ ಆಗಮಿಸಿರುವ ಗೌರವಾನ್ವಿತ ಸಚಿವರೆ, ಜಾಗತಿಕ ವಾಯುಯಾನ ಉದ್ಯಮದ ದಿಗ್ಗಜರೆ, ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳೆ, ಗೌರವಾನ್ವಿತ ಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್ ಇಂಡಿಯಾ 2026 ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 05:45 pm

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್ ಇಂಡಿಯಾ 2026 ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಉದ್ಯಮದ ಮುಖಂಡರು, ತಜ್ಞರು ಮತ್ತು ಹೂಡಿಕೆದಾರರನ್ನು ಸ್ವಾಗತಿಸಿದರು, ಮುಂದಿನ ವಾಯುಯಾನ ಉದ್ಯಮದ ಯುಗವು ಆಕಾಂಕ್ಷೆಗಳಿಂದ ತುಂಬಿದೆ ಮತ್ತು ಭಾರತವು ಪ್ರಮುಖ ಆಟಗಾರನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು. ವಿಮಾನ ತಯಾರಿಕೆ, ಪೈಲಟ್ ತರಬೇತಿ, ಸುಧಾರಿತ ವಾಯು ಚಲನಶೀಲತೆ ಮತ್ತು ವಿಮಾನ ಗುತ್ತಿಗೆಯಲ್ಲಿ ಭಾರತವು ಒದಗಿಸುವ ವಿಶಾಲ ಅವಕಾಶಗಳನ್ನು ಅವರು ಉಲ್ಲೇಖಿಸಿದರು, ಎಲ್ಲಾ ಪಾಲುದಾರರಿಗೆ ವಿಂಗ್ಸ್ ಇಂಡಿಯಾ ಶೃಂಗಸಭೆಯ ಮಹತ್ವವನ್ನು ಹೇಳಿದರು.

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 03:30 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ.ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಸುಕಾಂತ ಮಜುಂದಾರ್ ಜೀ, ಶಂತನು ಠಾಕೂರ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಸೌಮಿಕ್ ಭಟ್ಟಾಚಾರ್ಯ ಜೀ, ಸೌಮಿತ್ರಾ ಖಾನ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ, ಶಂಕುಸ್ಥಾಪನೆ ನೆರವೇರಿಸಿದ ಮತ್ತು ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 18th, 03:00 pm

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.

ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ಆಂಧ್ರಪ್ರದೇಶ (ತಿರುಪತಿ), ಛತ್ತೀಸಗಢ (ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಜಮ್ಮು), ಕರ್ನಾಟಕ (ಧಾರವಾಡ) ಮತ್ತು ಕೇರಳ(ಪಾಲಕ್ಕಾಡ್)ಗಳಲ್ಲಿ ಸ್ಥಾಪಿಸಲಾದ ಐದು ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಸಂಪುಟದ ಅನುಮೋದನೆ

May 07th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಐದು ಹೊಸ ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ (ಹಂತ-‘ಬಿ’ನಿರ್ಮಾಣ) ಅನುಮೋದನೆ ನೀಡಿದೆ. ಈ ಐದು ಹೊಸ ಐಐಟಿಗಳನ್ನು ಆಂಧ್ರಪ್ರದೇಶ (ಐಐಟಿ ತಿರುಪತಿ), ಕೇರಳ (ಐಐಟಿ ಪಾಲಕ್ಕಾಡ್), ಛತ್ತೀಸಗಢ (ಐಐಟಿ ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಐಐಟಿ ಜಮ್ಮು) ಮತ್ತು ಕರ್ನಾಟಕ (ಐಐಟಿ ಧಾರವಾಡ) ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿದೆ.

ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 26th, 11:23 am

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

April 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.