ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

March 13th, 03:00 pm

ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 13th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್‌ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.

ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಜನವರಿ 6 ರಂದು ಬಹು ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

January 05th, 06:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 6 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.