India-Netherlands Joint Statement on the visit of Prime Minister of India to Netherlands

May 17th, 03:45 am

At the invitation of Netherlands PM Rob Jetten, PM Modi paid an official visit to the Netherlands. They held discussions and expressed their desire to further expand and deepen the multifaceted relationship between the two countries. Noting with satisfaction the progress achieved in recent years, they elevated bilateral ties to a 'Strategic Partnership' and welcomed the adoption of a Strategic Partnership Roadmap.

ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)

May 17th, 03:15 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.

ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಾದ್ಯಂತ 15 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 601 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ

April 18th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆ, ರೈಲ್ವೆ ಸಚಿವಾಲಯದ ಒಟ್ಟು 24,815 ಕೋಟಿ ರೂಪಾಯಿ (ಅಂದಾಜು) ವೆಚ್ಚದ 02 (ಎರಡು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಯೋಜನೆಗಳೆಂದರೆ :

ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು

March 22nd, 09:06 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 13th, 05:30 pm

ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು

March 13th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ 2047 – ಯುವ ಧ್ವನಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 11th, 10:35 am

ವಿಕಸಿತ ಭಾರತ'ದ ನಿರ್ಣಯಗಳಿಗೆ ಸಂಬಂಧಿಸಿದಂತೆ ಇಂದು ಬಹಳ ಮುಖ್ಯವಾದ ದಿನ. 'ವಿಕಸಿತ ಭಾರತ'ಕ್ಕೆ ಸಂಬಂಧಿಸಿದ ಈ ಕಾರ್ಯಾಗಾರವನ್ನು ಆಯೋಜಿಸಿದ್ದಕ್ಕಾಗಿ ನಾನು ಎಲ್ಲ ರಾಜ್ಯಪಾಲರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದೇಶದ ಯುವಕರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಎಲ್ಲ ಸಹೋದ್ಯೋಗಿಗಳನ್ನು ನೀವು ಒಂದೇ ವೇದಿಕೆಯಲ್ಲಿ ತಂದಿದ್ದೀರಿ. ಶಿಕ್ಷಣ ಸಂಸ್ಥೆಗಳ ಪಾತ್ರವು ವೈಯಕ್ತಿಕ ಅಭಿವೃದ್ಧಿಗೆ ಕಾರಣವಾಗುತ್ತದೆ, ಮತ್ತು ರಾಷ್ಟ್ರವನ್ನು ವೈಯಕ್ತಿಕ ಅಭಿವೃದ್ಧಿಯ ಮೂಲಕ ನಿರ್ಮಿಸಲಾಗುತ್ತದೆ. ಭಾರತವು ಪ್ರಸ್ತುತ ತನ್ನನ್ನು ತಾನು ಕಂಡುಕೊಳ್ಳುತ್ತಿರುವ ಯುಗದಲ್ಲಿ, ವೈಯಕ್ತಿಕ ಅಭಿವೃದ್ಧಿಯ ಅಭಿಯಾನವು ಅತ್ಯಂತ ನಿರ್ಣಾಯಕವಾಗಿದೆ. ಯುವ ಧ್ವನಿ ಕಾರ್ಯಾಗಾರದ ಯಶಸ್ಸಿಗೆ ನಾನು ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ.

'ವಿಕಸಿತ ಭಾರತ @2047: ವಾಯ್ಸ್ ಆಫ್ ಯೂತ್'ಗೆ ಚಾಲನೆ ನೀಡಿದ ಪ್ರಧಾನಿ

December 11th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ವಿಕಸಿತ ಭಾರತ@2047: ವಾಯ್ಸ್ ಆಫ್ ಯೂತ್'ಗೆ ಚಾಲನೆ ನೀಡಿದರು. ಈ ಉಪಕ್ರಮದ ಆರಂಭದ ಅಂಗವಾಗಿ ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾದ ಕಾರ್ಯಾಗಾರಗಳಲ್ಲಿ ಪ್ರಧಾನಿ ಮೋದಿ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕವರ್ಗದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 19th, 05:00 pm

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪಮುಖ್ಯಮಂತ್ರಿ ಭಾಯಿ ದೇವೇಂದ್ರ ಫಡ್ನವೀಸ್ ಜಿ, ಅಜಿತ್ ಪವಾರ್ ಜೀ, ಶ್ರೀ ಮಂಗಲ್ ಪ್ರಭಾತ್ ಲೋಧಾ ಜಿ, ಇಲ್ಲಿರುವ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಮಹಿಳೆಯರು ಮತ್ತು ಮಹನೀಯರೆ!

ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಪ್ರಧಾನ ಮಂತ್ರಿ ಚಾಲನೆ

October 19th, 04:30 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಚಾಲನೆ ನೀಡಿದರು. ಮಹಾರಾಷ್ಟ್ರದ 34 ಗ್ರಾಮಾಂತರ ಜಿಲ್ಲೆಗಳಲ್ಲಿ ಸ್ಥಾಪಿತವಾಗಿರುವ ಈ ಕೇಂದ್ರಗಳು ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ವಿವಿಧ ವಲಯಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತವೆ.

Vibrant Gujarat is not just an event of branding, but it is also an event of bonding: PM Modi

September 27th, 11:00 am

PM Modi addressed the programme marking 20 years celebration of the Vibrant Gujarat Global Summit at Science City in Ahmedabad. He remarked that the seeds sown twenty years ago have taken the form of a magnificent and perse Vibrant Gujarat. Reiterating that Vibrant Gujarat is not merely a branding exercise for the state but an occasion to strengthen the bonding, PM Modi emphasized that the summit is a symbol of a solid bond associated with him and the capabilities of 7 crore people of the state.

ʻವೈಬ್ರೆಂಟ್‌ ಗುಜರಾತ್ ಜಾಗತಿಕ ಶೃಂಗಸಭೆʼಯ 20ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಮಂತ್ರಿಗಳ ಭಾಷಣ

September 27th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್‌ನ ʻಸೈನ್ಸ್ ಸಿಟಿʼಯಲ್ಲಿ ನಡೆದ ʻವೈಬ್ರೆಂಟ್‌ ಗುಜರಾತ್ ಜಾಗತಿಕ ಶೃಂಗಸಭೆʼಯ 20ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್‌ ಗುಜರಾತ್ ಜಾಗತಿಕ ಶೃಂಗಸಭೆʼಯನ್ನು 20 ವರ್ಷಗಳ ಹಿಂದೆ 2003ರ ಸೆಪ್ಟೆಂಬರ್ 28ರಂದು ಅಂದಿನ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಪ್ರಾರಂಭಿಸಲಾಯಿತು. ಕಾಲಾನಂತರದಲ್ಲಿ, ಇದು ನಿಜವಾದ ಜಾಗತಿಕ ಕಾರ್ಯಕ್ರಮವಾಗಿ ರೂಪಾಂತರಗೊಂಡಿದ್ದು, ಭಾರತದ ಪ್ರಮುಖ ವ್ಯಾಪಾರ ಶೃಂಗಸಭೆಗಳಲ್ಲಿ ಒಂದಾಗಿದೆ.

ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್‌ ಭಾಷಣದ ವಿವರ

June 05th, 03:00 pm

ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್‌ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್‌ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್‌ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್‌ನಷ್ಟು ಪ್ಲಾಸ್ಟಿಕ್‌ ಪ್ಯಾಕೇಜಿಂಗ್‌ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್‌ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್‌ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ

June 05th, 02:29 pm

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.

18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 91 ʻಎಫ್ಎಂʼ ಟ್ರಾನ್ಸ್‌ಮಿಟರ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಅನುವಾದ

April 28th, 10:50 am

ʻಪದ್ಮ ಪ್ರಶಸ್ತಿʼಗಳನ್ನು ಪಡೆದ ಅನೇಕ ವ್ಯಕ್ತಿಗಳು ಇಂದಿನ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇದ್ದಾರೆ. ನಾನು ಅವರನ್ನು ಗೌರವಯುತವಾಗಿ ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ. ʻಆಲ್ ಇಂಡಿಯಾ ರೇಡಿಯೋʼದ ʻಎಫ್ಎಂʼ ಸೇವೆಯ ವಿಸ್ತರಣೆಯು ʻಆಲ್ ಇಂಡಿಯಾ ಎಫ್ಎಂʼ ಆಗುವತ್ತ ಒಂದು ದೊಡ್ಡ ಮತ್ತು ಪ್ರಮುಖ ಹೆಜ್ಜೆಯಾಗಿದೆ. ʻಆಲ್ ಇಂಡಿಯಾ ರೇಡಿಯೋʼದ 91 ʻಎಫ್ಎಂʼ ಟ್ರಾನ್ಸ್‌ಮಿಟರ್‌ಗಳ ಉದ್ಘಾಟನೆಯು ದೇಶದ 85 ಜಿಲ್ಲೆಗಳ ಎರಡು ಕೋಟಿ ಜನರಿಗೆ ಉಡುಗೊರೆ ಇದ್ದಂತೆ . ಒಂದು ರೀತಿಯಲ್ಲಿ, ಈ ಕಾರ್ಯಕ್ರಮವು ಭಾರತದ ವೈವಿಧ್ಯತೆ ಮತ್ತು ವಿಭಿನ್ನ ವರ್ಣಗಳ ನೋಟವನ್ನು ಸಹ ಹೊಂದಿದೆ. ʻಎಫ್‌ಎಂʼ ಸೇವೆಯ ವಿಸ್ತರಣೆಯಿಂದ ಪ್ರಯೋಜನ ಪಡೆಯಲಿರುವ 85 ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷೆಯ ಜಿಲ್ಲೆಗಳು ಮತ್ತು ಬ್ಲಾಕ್‌ಗಳು ಸಹ ಸೇರಿವೆ. ಈ ಸಾಧನೆಗಾಗಿ ನಾನು ʻಆಲ್ ಇಂಡಿಯಾ ರೇಡಿಯೋʼ ಅನ್ನು ಅಭಿನಂದಿಸುತ್ತೇನೆ. ಇದು ಈಶಾನ್ಯದ ನಮ್ಮ ಸಹೋದರ ಸಹೋದರಿಯರಿಗೆ ಮತ್ತು ನಮ್ಮ ಯುವ ಸ್ನೇಹಿತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಹೊಸ ಸೇವೆಗಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ.

ದೇಶದಲ್ಲಿ ಎಫ್‌ ಎಂ ರೇಡಿಯೋ ಪ್ರಸಾರವನ್ನು ಹೆಚ್ಚಿಸಲು 91 ಹೊಸ 100 ವ್ಯಾಟ್ ಎಫ್‌.ಎಂ ಟ್ರಾನ್ಸ್‌ಮಿಟರ್‌ಗಳನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು

April 28th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 91 ಹೊಸ 100 ವ್ಯಾಟ್ ರೇಡಿಯೋ ಟ್ರಾನ್ಸ್‌ಮಿಟರ್‌ಗಳನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಉದ್ಘಾಟನೆಯು ದೇಶದ ರೇಡಿಯೋ ಸಂಪರ್ಕವನ್ನು ಮತ್ತಷ್ಟು ಉತ್ತೇಜನ ನೀಡಲಿದೆ.

Congress continues to ignore the contributions of the great Sardar Patel: PM Modi in Sojitra

December 02nd, 12:25 pm

PM Modi called out the fallacies of the Congress for piding Gujarat based on caste and throwing the state into turmoil. The PM further added that the Congress continues to ignore the contributions of the great Sardar Patel till this date and targeted them for not paying their respects at the Statue of Unity.

The country is confident that no matter how big the challenges are, only BJP will find solutions: PM Modi in Patan

December 02nd, 12:20 pm

PM Modi reminisced about his memories in Patan and told people about his life when he used to reside in Kagda ki Khadki. He also spoke on the BJP becoming a symbol of trust in the country, PM Modi said, “The country is confident that no matter how big the challenges are, only the BJP will find solutions”. The PM iterated on the efforts of the BJP government in providing vaccines, fiscal support and subsidies to the people during the COVID period.

Congress spent most of its time in familyism, appeasement & scams: PM Modi in Ahmedabad

December 02nd, 12:16 pm

PM Modi iterated on Gujarat achieving many feats and leading the country on many fronts, PM Modi said, “Be it social infrastructure or physical infrastructure, the people of Gujarat have presented an excellent model to the country”.

Whatever the work, Congress sees its own interest first, and the interest of the country later: PM Modi in Kankrej

December 02nd, 12:01 pm

PM Modi continued his campaigning today for the upcoming elections in Gujarat. In his public meeting at Kankrej, PM Modi talked about the economic and religious importance of cows in Indian society. PM Modi said, “The economic power of India's dairy industry is more than the food grains produced in the country… Today every village is benefiting from the expansion of Banas Dairy”.