ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್ಗಢ, ಗುಜರಾತ್ ಮತ್ತು ಅಸ್ಸಾಂನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.
February 10th, 05:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2026ರ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಪಿಪಿಸಿ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್ಗಢ, ಗುಜರಾತ್ ಮತ್ತು ಅಸ್ಸಾಂನ ಪರೀಕ್ಷಾ ಯೋಧರೊಂದಿಗೆ ಪ್ರಧಾನಮಂತ್ರಿ ಅವರು ಅನೌಪಚಾರಿಕ ಸಂವಾದ ನಡೆಸಿದರು. ‘ಪರೀಕ್ಷಾ ಪೇ ಚರ್ಚಾ’ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿನಡೆಸಲಾಗಿದೆ ಎಂದು ಹೇಳಿದರು.'ಬಸ್ತಾರ್ ಪಂಡಂ' ಹಬ್ಬದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನರನ್ನು ಅಭಿನಂದಿಸಿದ ಪ್ರಧಾನಮಂತ್ರಿ
February 10th, 10:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ ಗಢದಲ್ಲಿ ಫೆಬ್ರವರಿ 7ರಿಂದ 9 ರವರೆಗೆ 'ಬಸ್ತಾರ್ ಪಂಡಂ' ಉತ್ಸವದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.ರಾಯ್ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್ಸ್ಪೆಕ್ಟರ್ ಜನರಲ್ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
November 30th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ.ಪ್ರಧಾನಮಂತ್ರಿ ನವೆಂಬರ್ 29-30 ರಂದು ರಾಯ್ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್ಸ್ಪೆಕ್ಟರ್ ಜನರಲ್ಗಳ 60 ನೇ ಸಮ್ಮೇಳನದಲ್ಲಿ ಭಾಗಿ
November 27th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 29-30ರಂದು ಛತ್ತೀಸ್ಗಢದ ರಾಯ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು/ಇನ್ಸ್ಪೆಕ್ಟರ್ ಜನರಲ್ಗಳ 60 ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಗುಜರಾತ್ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್ಭಾಯಿ ಪಟೇಲ್ ಮತ್ತು ಜಯರಾಮ್ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು
November 01st, 11:00 am
ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.ಛತ್ತೀಸ್ ಗಢದ ಸಂಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ
November 01st, 09:24 am
ಛತ್ತೀಸ್ ಗಢದ 25ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದ್ದಾರೆ.ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 31st, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿದ್ದಾರೆ.ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸಗಢದ 18 ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ (ಬಹುಮಾರ್ಗ) ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ
October 07th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ₹24,634 ಕೋಟಿ ಅಂದಾಜು ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಆ ಯೋಜನೆಗಳು ಹೀಗಿವೆ:ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ
June 06th, 09:19 pm
ಛತ್ತೀಸ್ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ಛತ್ತೀಸ್ಗಢದ ರಾಯ್ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
May 12th, 05:46 pm
ಛತ್ತೀಸ್ಗಢದ ರಾಯ್ಪುರದಲ್ಲಿ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ಆಂಧ್ರಪ್ರದೇಶ (ತಿರುಪತಿ), ಛತ್ತೀಸಗಢ (ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಜಮ್ಮು), ಕರ್ನಾಟಕ (ಧಾರವಾಡ) ಮತ್ತು ಕೇರಳ(ಪಾಲಕ್ಕಾಡ್)ಗಳಲ್ಲಿ ಸ್ಥಾಪಿಸಲಾದ ಐದು ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಸಂಪುಟದ ಅನುಮೋದನೆ
May 07th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಐದು ಹೊಸ ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ (ಹಂತ-‘ಬಿ’ನಿರ್ಮಾಣ) ಅನುಮೋದನೆ ನೀಡಿದೆ. ಈ ಐದು ಹೊಸ ಐಐಟಿಗಳನ್ನು ಆಂಧ್ರಪ್ರದೇಶ (ಐಐಟಿ ತಿರುಪತಿ), ಕೇರಳ (ಐಐಟಿ ಪಾಲಕ್ಕಾಡ್), ಛತ್ತೀಸಗಢ (ಐಐಟಿ ಭಿಲಾಯಿ), ಜಮ್ಮು ಮತ್ತು ಕಾಶ್ಮೀರ (ಐಐಟಿ ಜಮ್ಮು) ಮತ್ತು ಕರ್ನಾಟಕ (ಐಐಟಿ ಧಾರವಾಡ) ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿದೆ.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 08th, 08:30 pm
ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ
April 08th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಛತ್ತೀಸ್ಗಢದ ಮುಖ್ಯಮಂತ್ರಿ
March 18th, 03:33 pm
ಛತ್ತೀಸ್ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಜನವರಿ 18 ರಂದು ಪ್ರಧಾನಮಂತ್ರಿ ಅವರಿಂದ ಆಸ್ತಿ ಕಾರ್ಡ್ ಗಳ ವಿತರಣೆ
January 16th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18 ರಂದು ಮಧ್ಯಾಹ್ನ 12:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 230ಕ್ಕೂ ಹೆಚ್ಚು ಜಿಲ್ಲೆಗಳ 50000ಕ್ಕೂ ಹೆಚ್ಚು ಹಳ್ಳಿಗಳಲ್ಲಿನ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಲಿದ್ದಾರೆ.ಸ್ವಾಮಿತ್ವ ಯೋಜನೆಯಡಿ ಆಸ್ತಿ ಮಾಲೀಕರಿಗೆ 50 ಲಕ್ಷಕ್ಕೂ ಹೆಚ್ಚು ಪ್ರಾಪರ್ಟಿ ಕಾರ್ಡ್ ವಿತರಿಸಲಿರುವ ಪ್ರಧಾನಮಂತ್ರಿ
December 26th, 04:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ 46,000 ಕ್ಕೂ ಹೆಚ್ಚು ಗ್ರಾಮಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ (SVAMITVA) ಯೋಜನೆಯಡಿ 50 ಲಕ್ಷ ಪ್ರಾಪರ್ಟಿ ಕಾರ್ಡ್ಗಳನ್ನು ಡಿಸೆಂಬರ್ 27 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಲಿದ್ದಾರೆ.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.