Share your ideas and suggestions for 'Mann Ki Baat' now!
December 05th, 07:31 am
Prime Minister Narendra Modi will share 'Mann Ki Baat' on Sunday, December 28th. If you have innovative ideas and suggestions, here is an opportunity to directly share it with the PM. Some of the suggestions would be referred by the Prime Minister during his address.“GenZ Takes the Cultural Chariot of KTS 4.0”—From Tamil Nadu to Kashi, Youth Turn the Journey Into a ‘Cultural Joy Ride’
November 30th, 06:56 pm
A strong wave of enthusiasm is sweeping across Gen Z as they gear up for the Kashi Tamil Sangamam 4.0, beginning on December 2. The event aims to deepen the ancient cultural and linguistic bond between Kashi and Tamil Nadu, while channeling the vibrant energy of today’s youth. Youngsters travelling on a special train shared their excitement about attending Kashi Tamil Sangamam 4.0, which this year carries the inspiring theme: “Learn Tamil – Tamil Karkalam.”'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.Tune in to hear Mann Ki Baat on 30th November 2025
November 29th, 09:04 am
Prime Minister, Shri Narendra Modi will share his thoughts on a number of themes and issues in Mann Ki Baat on Sunday at 11 AM. Tune in to hear 'Mann Ki Baat' live on Narendra Modi App.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ಪ್ರಧಾನಮಂತ್ರಿ ಅವರು ಎಲ್.ಎನ್.ಜೆ.ಪಿ ಆಸ್ಪತ್ರೆಯಲ್ಲಿ ಸ್ಫೋಟಕ್ಕೆ ತುತ್ತಾದ ಸಂತ್ರಸ್ತರನ್ನು ಭೇಟಿಯಾದರು
November 12th, 03:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ದೆಹಲಿಯಲ್ಲಿನ ಎಲ್.ಎನ್.ಜೆ.ಪಿ ಆಸ್ಪತ್ರೆಗೆ ತೆರಳಿ, ಇತ್ತೀಚೆಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಸಂತ್ರಸ್ತರು ಹಾಗೂ ಅವರ ಕುಟುಂಬದವರೊಂದಿಗೆ ಅವರು ಮಾತುಕತೆ ನಡೆಸಿದರು, ಅವರ ಚಿಕಿತ್ಸೆಯ ಕುರಿತು ವಿಚಾರಿಸಿದರು ಮತ್ತು ಅವರ ಶೀಘ್ರ ಹಾಗೂ ಸಂಪೂರ್ಣ ಚೇತರಿಕಗೆ ಹೃದಯಪೂರ್ವಕವಾಗಿ ಪ್ರಾರ್ಥಿಸಿದರು.ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 07th, 10:00 am
ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
November 07th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
November 05th, 09:44 am
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ನವೆಂಬರ್ 30ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ನವ ರಾಯ್ಪುರದಲ್ಲಿ ಛತ್ತೀಸ್ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 01:30 pm
ಛತ್ತೀಸ್ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಛತ್ತೀಸ್ಗಢದ ನವ ರಾಯ್ಪುರದಲ್ಲಿ ಛತ್ತೀಸ್ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 01st, 01:00 pm
ಛತ್ತೀಸ್ಗಢದ ನವ ರಾಯ್ಪುರದಲ್ಲಿ ಇಂದು ಛತ್ತೀಸ್ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು
November 01st, 11:00 am
ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.ಛಠ್ ಪೂಜೆಯ ಸಂಧ್ಯಾ ಅರ್ಘ್ಯ ಧಾರ್ಮಿಕ ಆಚರಣೆಗೆ ಶುಭ ಕೋರಿದ ಪ್ರಧಾನಮಂತ್ರಿ
October 27th, 02:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಧ್ಯಾ ಅರ್ಘ್ಯದ ಪವಿತ್ರ ಧಾರ್ಮಿಕ ಆಚರಣೆಗಾಗಿ ದೇಶಾದ್ಯಂತದ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.26ನೇ ಅಕ್ಟೋಬರ್ 2025 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
October 25th, 09:30 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.ಮುಂಬರುವ ಛಠ್ ಮಹಾ ಉತ್ಸವಕ್ಕೆ ಭಕ್ತಿಗೀತೆಗಳನ್ನು ಹಂಚಿಕೊಳ್ಳುವಂತೆ ನಾಗರಿಕರಿಗೆ ಪ್ರಧಾನಮಂತ್ರಿ ಆಹ್ವಾನ
October 24th, 10:39 am
ಛಠ್ ಹಬ್ಬದ ಆಚರಣೆಗೆ ದೇಶ ಸಜ್ಜಾಗುತ್ತಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛಠೀ ಮೈಯಾಗೆ ಸಮರ್ಪಿತವಾದ ಹಾಡುಗಳನ್ನು ಹಂಚಿಕೊಳ್ಳುವ ಮೂಲಕ ಭಕ್ತಿ ಮತ್ತು ಸಾಂಸ್ಕೃತಿಕ ಏಕತೆಯ ಚೈತನ್ಯದಲ್ಲಿ ಭಾಗಿಯಾಗುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಯೊಂದಿಗೆ ಛಠ್ ಉತ್ಸವದ ಗಾಢ ಸಂಬಂಧವನ್ನು ಹಾಗೂ ಬಿಹಾರ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಭರದ ಸಿದ್ಧತೆಗಳ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ವಿವರಿಸಿದ್ದಾರೆ.ಗುಜರಾತ್ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಮಂತ್ರಿ
October 22nd, 08:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.ದೀಪಾವಳಿ ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
October 20th, 09:50 am
ದೀಪಾವಳಿ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.