ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 14th, 04:36 pm

ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್‌, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.

2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 14th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 20th, 11:00 pm

ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.

ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ

May 20th, 10:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಪ್ರಧಾನಮಂತ್ರಿಗಳಿಂದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿಯೊಂದಿಗೆ ಸಭೆ

May 19th, 06:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ಓಸ್ಲೋದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸನ್ ಅವರನ್ನು ಭೇಟಿ ಮಾಡಿದರು.

ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು

May 18th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 17th, 11:43 pm

ಸ್ವಲ್ಪ ಸಮಯದ ಹಿಂದೆ, ನನಗೆ ಸ್ವೀಡನ್‌ನ ಅತ್ಯುನ್ನತ ಗೌರವವಾದ ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್ ನೀಡಲಾಯಿತು. ಈ ಗೌರವ ನನಗೆ ಮಾತ್ರವಲ್ಲ, ಇದು 1.4 ಶತಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಭಾರತ - ಸ್ವೀಡನ್ ಸಂಬಂಧಗಳನ್ನು ಶ್ರೀಮಂತಗೊಳಿಸಿದ ಮತ್ತು ಅವರಿಗೆ ಬಲವಾದ ಅಡಿಪಾಯ ಹಾಕಿದ ಸ್ವೀಡನ್‌ನಲ್ಲಿರುವ ನಮ್ಮ ಎಲ್ಲಾ ಸ್ನೇಹಿತರಿಗೆ ಸಂದ ಗೌರವ ಇದಾಗಿದೆ.

ಗುಜರಾತ್‌ನ ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರ ವಿಶೇಷ ಭಾಷಣ

May 10th, 09:35 pm

ಗುಜರಾತ್‌ನ ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಗುಜರಾತ್‌ನ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತಾ, ರಾಜ್ಯವು ಉಪ್ಪು ಉತ್ಪಾದನೆಗೆ ಮಾತ್ರ ಹೆಸರುವಾಸಿಯಾಗಿದ್ದ ರಾಜ್ಯದಿಂದ ಸೆಮಿಕಂಡಕ್ಟರ್‌ಗಳು, ಮೆಟ್ರೋ ಕೋಚ್‌ಗಳು, ರೈಲ್ವೆ ಎಂಜಿನ್‌ಗಳು, ನವೀಕರಿಸಬಹುದಾದ ಇಂಧನ ಮತ್ತು ಉದಯೋನ್ಮುಖ ವಿಮಾನ ಉತ್ಪಾದನೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ರಾಜ್ಯದ ನಿರಂತರ ಬೆಳವಣಿಗೆ ಮತ್ತು ಪ್ರಗತಿಗೆ ಗುಜರಾತ್ ಜನರು ಮತ್ತು ಬಿಜೆಪಿ ಕಾರ್ಯಕರ್ತರಿಗೆ ಅವರು ಮನ್ನಣೆ ನೀಡಿದರು.

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ

May 05th, 07:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:

ಸುಸ್ಥಿರತೆ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ - ಕೊರಿಯಾ ಜಂಟಿ ಹೇಳಿಕೆ

April 20th, 10:55 pm

ಇನ್ನು ಮುಂದೆ ಎರಡೂ ಕಡೆಯವರು ಎಂದು ಕರೆಯಲ್ಪಡುವ ಭಾರತ ಮತ್ತು ಕೊರಿಯಾ ದೇಶಗಳು ಹವಾಮಾನ ಬದಲಾವಣೆ, ಸಮುದ್ರ ಮತ್ತು ಉತ್ತರ ಧ್ರುವ ಸುತ್ತಲಿನ ದೊಡ್ಡ ಮತ್ತು ಅತ್ಯಂತ ಶೀತ ಪ್ರದೇಶ(ಆರ್ಕ್ಟಿಕ್)ದ ಸುಧಾರಣೆ ವಿಷಯಗಳಲ್ಲಿ ಪ್ರಾಯೋಗಿಕ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ದ್ವಿಪಕ್ಷೀಯ ಸಹಕಾರ ಬಲಪಡಿಸಲು ಒಪ್ಪಿಕೊಂಡಿವೆ.

ಕೊರಿಯಾ ಗಣರಾಜ್ಯದ ರಾಷ್ಟ್ರಾಧ್ಯಕ್ಷರ ಭಾರತ ಭೇಟಿ: ಫಲಿತಾಂಶಗಳ ಪಟ್ಟಿ

April 20th, 03:57 pm

ಭಾರತ-ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರದ ದೃಷ್ಟಿಕೋನ

Today, BJP stands for good governance and last-mile delivery: PM Modi

April 06th, 12:30 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

PM Modi addresses Party Karyakartas on BJP Sthapana Diwas

April 06th, 12:00 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್‌ ಎಫ್‌ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ

March 25th, 05:35 pm

ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್‌ ಡಿ ಸಿ) ಅನುಮೋದಿಸಿದೆ. ಇದು ಯು ಎನ್‌ ಎಫ್‌ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.

ಫಿನ್‌ಲೆಂಡ್‌ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್‌ ಜಂಟಿ ಹೇಳಿಕೆ

March 05th, 08:03 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್‌ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್‌ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.

ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್‌ ಅಧ್ಯಕ್ಷರ ಭೇಟಿ

March 05th, 04:36 pm

ಫಿನ್ಲೆಂಡ್‌ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ

February 21st, 12:30 pm

ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.