India is not just progressing, India is moving to the Next: PM Modi

March 12th, 10:47 pm

In his address at the NXT Summit, PM Modi emphasized that just as the 1930 Dandi march unified the country in the pursuit of freedom, the current Viksit Bharat mission is the collective goal of 140 crore Indians. He highlighted the positive statements made by global leaders such as Mark Carney and Emmanuel Macron about India. Remarking on the ongoing discussions surrounding LPG, the PM called upon citizens to prioritize facts over misinformation.

PM Modi addresses the NXT Summit

March 12th, 08:30 pm

In his address at the NXT Summit, PM Modi emphasized that just as the 1930 Dandi march unified the country in the pursuit of freedom, the current Viksit Bharat mission is the collective goal of 140 crore Indians. He highlighted the positive statements made by global leaders such as Mark Carney and Emmanuel Macron about India. Remarking on the ongoing discussions surrounding LPG, the PM called upon citizens to prioritize facts over misinformation.

Prime Minister Narendra Modi to visit Keralam and Tamil Nadu

March 09th, 09:54 pm

PM Modi will visit Keralam and Tamil Nadu on 11th March 2026. In Ernakulam, Keralam, the PM will launch development projects worth ₹10,800 crore related to energy and connectivity. He will also inaugurate three redeveloped railway stations under the Amrit Bharat Station Scheme. Later, in Tiruchirappalli, Tamil Nadu, the PM will launch projects costing ₹5,650 crore covering energy, manufacturing, connectivity and railway services.

ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 29th, 01:30 pm

ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ 1010 ಕೋಟಿ ರೂಪಾಯಿ ಮೌಲ್ಯದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು

May 29th, 01:20 pm

ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ, ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಐತಿಹಾಸಿಕ ಭೂಮಿ ಅಲಿಪುರ್ದುವಾರ್ ನಿಂದ ಪಶ್ಚಿಮ ಬಂಗಾಳದ ಜನತೆಗೆ ಶುಭ ಕೋರಿದರು. ಅವರು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮಹತ್ವವನ್ನು ಬಿಂಬಿಸಿದರು, ಇದು ಅದರ ಗಡಿಗಳಿಂದ ಮಾತ್ರವಲ್ಲದೆ ಅದರ ಆಳವಾಗಿ ಬೇರೂರಿರುವ ಸಂಪ್ರದಾಯಗಳು ಮತ್ತು ಸಂಪರ್ಕಗಳಿಂದ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಒತ್ತಿ ಹೇಳಿದರು. ಅಲಿಪುರ್ದುವಾರ್ ಭೂತಾನ್ ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಮತ್ತೊಂದೆಡೆ ಅಸ್ಸಾಂ ಅದನ್ನು ಸ್ವಾಗತಿಸುತ್ತದೆ, ಜಲ್ಪೈಗುರಿಯ ನೈಸರ್ಗಿಕ ಸೌಂದರ್ಯ ಮತ್ತು ಕೂಚ್ ಬೆಹಾರ್ ನ ಹೆಮ್ಮೆ ಈ ಪ್ರದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ಪ್ರಧಾನಿ ಹೇಳಿದರು. ಬಂಗಾಳದ ಪರಂಪರೆ ಮತ್ತು ಏಕತೆಯಲ್ಲಿ ಅದರ ಪಾತ್ರವನ್ನು ಒತ್ತಿಹೇಳುತ್ತಾ, ಈ ಸಮೃದ್ಧ ಭೂಮಿಗೆ ಭೇಟಿ ನೀಡುವ ಸುಯೋಗವನ್ನು ಅವರು ವ್ಯಕ್ತಪಡಿಸಿದರು.

ಮೇ 29 ಮತ್ತು 30 ರಂದು ಪ್ರಧಾನಮಂತ್ರಿಗಳು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ

May 28th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

Government is running a special campaign for the development of tribal society: PM Modi in Bilaspur, Chhattisgarh

March 30th, 06:12 pm

PM Modi laid the foundation stone and inaugurated development projects worth over Rs 33,700 crore in Bilaspur, Chhattisgarh. He highlighted that three lakh poor families in Chhattisgarh are entering their new homes. He acknowledged the milestone achieved by women who, for the first time, have property registered in their names. The PM said that the Chhattisgarh Government is observing 2025 as Atal Nirman Varsh and reaffirmed the commitment, We built it, and we will nurture it.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

March 30th, 03:30 pm

ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮತ್ತು ಸುಸ್ಥಿರ ಜೀವನೋಪಾಯವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಛತ್ತೀಸಗಢದ ಬಿಲಾಸಪುರದಲ್ಲಿ 33,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಕಾಮಗಾರಿ ಆರಂಭ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಮಾತಾ ಮಹಾಮಾಯೆಯ ನಾಡು ಮತ್ತು ಮಾತಾ ಕೌಶಲ್ಯೆಯ ತವರು ಮನೆಯಾದ ಛತ್ತೀಸಗಢಕ್ಕೆ ಹೊಸ ವರ್ಷದ ಶುಭ ಆರಂಭ ಮತ್ತು ನವರಾತ್ರಿಯ ಮೊದಲ ದಿನವಾದ ಇಂದಿನ ಮಹತ್ವವನ್ನು ಅವರು ಒತ್ತಿ ಹೇಳಿದರು. ರಾಜ್ಯಕ್ಕೆ ಸ್ತ್ರೀ ದೈವತ್ವಕ್ಕೆ ಮೀಸಲಾದ ಈ ಒಂಬತ್ತು ದಿನಗಳ ವಿಶೇಷ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ನವರಾತ್ರಿಯ ಮೊದಲ ದಿನದಂದು ಛತ್ತೀಸಗಢದಲ್ಲಿರುವುದು ತಮಗೆ ದೊರೆತ ಗೌರವ ಎಂದು ಅವರು ಹೇಳಿದರು ಮತ್ತು ಇತ್ತೀಚೆಗೆ ಭಕ್ತ ಶಿರೋಮಣಿ ಮಾತಾ ಕರ್ಮ ಅವರ ಗೌರವಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆ ತಿಳಿಸಿದರು. ನವರಾತ್ರಿ ಉತ್ಸವವು ರಾಮನವಮಿಯ ಆಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಅವರು ಹೇಳಿದರು, ಇದು ಛತ್ತೀಸಗಢದಲ್ಲಿ ರಾಮನ ಮೇಲಿನ ಅನನ್ಯ ಭಕ್ತಿಯನ್ನು, ವಿಶೇಷವಾಗಿ ರಾಮನಾಮಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿರುವ ರಾಮನಾಮಿ ಸಮಾಜದ ಅಸಾಧಾರಣ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು. ಛತ್ತೀಸಗಢದ ಜನರನ್ನು ಭಗವಾನ್ ರಾಮನ ತಾಯಿಯ ಕುಟುಂಬ ಎಂದು ಕರೆಯುವ ಮೂಲಕ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ನ ಸ್ಥಿತಿ ಚಿಂತಾಜನಕವಾಗಿದೆ: ಸಬರಕಾಂತದಲ್ಲಿ ಪ್ರಧಾನಿ ಮೋದಿ

May 01st, 04:15 pm

ಗುಜರಾತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಸಬರಕಾಂತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.

ಪ್ರಧಾನಿ ಮೋದಿ ಅವರು ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

May 01st, 04:00 pm

ಗುಜರಾತ್‌ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.

My duty is to work for the empowerment of all, and all the people of Odisha are Modi ka Parivar: PM Modi

March 05th, 04:55 pm

On his visit to Odisha, PM Modi addressed a jubilant crowd in Jajpur and paid his tributes to former CM Biju Pattnaik on his birth anniversary. He said, The presence of innumerable people here is a testimony to 400+ seats for the N.D.A. in 2024. He added, The vision for 400+ seats for N.D.A. will enable India to become the 3rd largest economy on the back of strong decision-making & robust policy implementation.

PM Modi addresses a jubilant crowd at Jajpur, Odisha

March 05th, 04:00 pm

On his visit to Odisha, PM Modi addressed a jubilant crowd in Jajpur and paid his tributes to former CM Biju Pattnaik on his birth anniversary. He said, The presence of innumerable people here is a testimony to 400+ seats for the N.D.A. in 2024. He added, The vision for 400+ seats for N.D.A. will enable India to become the 3rd largest economy on the back of strong decision-making & robust policy implementation.

​​​​​​​ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ

December 18th, 02:16 pm

ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು

December 18th, 02:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

ಗುಜರಾತ್ ನ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 30th, 09:11 pm

ನನ್ನ ಖಖಾರಿಯಾ ಟಪ್ಪ ಹೇಗಿದ್ದಾರೆ? ಮೊದಲನೆಯದಾಗಿ, ನಿಮ್ಮ ನಡುವೆ ಇರಲು ಮತ್ತು ನನ್ನ ಶಾಲಾ ದಿನಗಳ ಪರಿಚಿತ ಮುಖಗಳನ್ನು ನೋಡುವ ಈ ಕ್ಷಣವನ್ನು ಹೊಂದಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಮತ್ತು ಗುಜರಾತ್ ಸರ್ಕಾರಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಮತ್ತು ನಾನು ನಿಮ್ಮ ಮನೆಗಳಿಗೆ ಕಾಲಿಟ್ಟಾಗ ಹಳೆಯ ನೆನಪುಗಳನ್ನು ಮರುಪರಿಶೀಲಿಸುವುದು ಅಪಾರ ಸಂತೋಷ ಮತ್ತು ತೃಪ್ತಿಯನ್ನು ತರುತ್ತದೆ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ಭೂಮಿ ಮತ್ತು ನನ್ನನ್ನು ರೂಪಿಸಿದ ಜನರ ಋಣವನ್ನು ಸ್ವೀಕರಿಸುವುದು ನನ್ನ ಹೃದಯವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ, ಈ ಋಣವನ್ನು ಒಪ್ಪಿಕೊಳ್ಳಲು ಇಂದು ನನಗೆ ಒಂದು ಸಂದರ್ಭವಾಗಿದೆ. ಇಂದು, ಅಂದರೆ ಅಕ್ಟೋಬರ್ 30 ಮತ್ತು ನಾಳೆ, ಅಕ್ಟೋಬರ್ 31, ಎರಡೂ ದಿನಗಳು ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳನ್ನು (ಬುಡಕಟ್ಟು ಸಮುದಾಯಗಳು) ಮುನ್ನಡೆಸಿದ ಮತ್ತು ಬ್ರಿಟಿಷರನ್ನು ಸೋಲಿಸಿದ ಗೋವಿಂದ್ ಗುರೂಜಿ ಅವರ ಪುಣ್ಯತಿಥಿ ಇಂದು. ನಾಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ.

ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 30th, 04:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು ರೈಲು, ರಸ್ತೆ, ಕುಡಿಯುವ ನೀರು ಮತ್ತು ನೀರಾವರಿಯಂತಹ ಬಹು ವಲಯಗಳನ್ನು ಒಳಗೊಂಡಿವೆ.

ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 29th, 07:46 pm

ನಿಮ್ಮೆಲ್ಲರಿಗೂ ಗಂಗಾ-ಪುಷ್ಕರಾಳು ಹಬ್ಬದ ಶುಭಾಶಯಗಳು! ನೀವೆಲ್ಲರೂ ಕಾಶಿಗೆ ಬಂದಿರುವುದರಿಂದ ಈ ಭೇಟಿಯಲ್ಲಿ ನೀವೆಲ್ಲರೂ ವೈಯಕ್ತಿಕವಾಗಿ ನನ್ನ ಅತಿಥಿಗಳು. ಅತಿಥಿಗಳು ದೇವರಿಗೆ ಸಮಾನ ಎಂದು ನಾವು ನಂಬುತ್ತೇವೆ. ಕೆಲವು ಕಾರ್ಯ ನಿಮಿತ್ತ ನಿಮ್ಮನ್ನು ಸ್ವಾಗತಿಸಲು ನಾನು ಅಲ್ಲಿ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ನಾನು ನಿಮ್ಮೆಲ್ಲರ ನಡುವೆ ಇರಬಹುದೆಂದು ಬಯಸುತ್ತೇನೆ. ಈ ಕಾರ್ಯಕ್ರಮಕ್ಕಾಗಿ ನಾನು ಕಾಶಿ-ತೆಲುಗು ಸಮಿತಿ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಜಿ.ವಿ.ಎಲ್. ನರಸಿಂಹರಾವ್ ಜಿ ಅವರನ್ನು ಅಭಿನಂದಿಸುತ್ತೇನೆ. ಕಾಶಿಯ ಘಟ್ಟಗಳಲ್ಲಿ ನಡೆಯುವ ಈ ಗಂಗಾ-ಪುಷ್ಕರಾಳು ಉತ್ಸವವು ಗಂಗಾ ಮತ್ತು ಗೋದಾವರಿ ಸಂಗಮದಂತೆ. ಇದು ಭಾರತದ ಪ್ರಾಚೀನ ನಾಗರಿಕತೆಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳ ಸಂಗಮದ ಆಚರಣೆಯಾಗಿದೆ. ಕೆಲವು ತಿಂಗಳ ಹಿಂದೆ ಕಾಶಿ-ತಮಿಳು ಸಂಗಮವನ್ನು ಇದೇ ಕಾಶಿ ಭೂಮಿಯಲ್ಲಿ ಆಯೋಜಿಸಿದ್ದು ನಿಮಗೆ ನೆನಪಿರಬಹುದು. ಕೆಲವೇ ದಿನಗಳ ಹಿಂದೆ ಸೌರಾಷ್ಟ್ರ-ತಮಿಳು ಸಂಗಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿತ್ತು. ಈ ‘ಆಜಾದಿ ಕಾ ಅಮೃತ ಕಾಲ್’ ದೇಶದ ವೈವಿಧ್ಯತೆ ಮತ್ತು ವಿವಿಧ ವಿಚಾರಧಾರೆಗಳ ಸಂಗಮ ಎಂದು ಆಗ ಹೇಳಿದ್ದೆ. ಈ ವೈವಿಧ್ಯಗಳ ಸಂಗಮದಿಂದ ರಾಷ್ಟ್ರೀಯತೆಯ ಅಮೃತವು ಹೊರಹೊಮ್ಮುತ್ತಿದೆ, ಇದು ಭಾರತವನ್ನು ಅನಂತ ಭವಿಷ್ಯದವರೆಗೆ ಜೀವಂತವಾಗಿರಿಸುತ್ತದೆ.

ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 29th, 07:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ಉತ್ತರ ಪ್ರದೇಶದ ಕಾಶಿಯಲ್ಲಿ ಕಾಶಿ ತೆಲುಗು ಸಂಗಮ ಉದ್ದೇಶಿಸಿ ಭಾಷಣ ಮಾಡಿದರು.

PM hails Cabinet Decision to revise domestic gas pricing guidelines

April 07th, 11:19 am

The Prime Minister has hailed the Cabinet Decision to protect the interest of consumers by reducing the impact of increase in international gas prices on gas prices in India.

ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಂಪುಟದ ಅನುಮೋದನೆ

February 15th, 03:49 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಮತ್ತು ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು, ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಪಂಚಾಯತ್‌ನಲ್ಲಿ ಕಾರ್ಯಸಾಧ್ಯವಾದ ಪಿಎಸಿಎಸ್, ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಡೈರಿ ಸಹಕಾರ ಸಂಘಗಳು ಮತ್ತು ಕರಾವಳಿಯ ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಹಾಗೂ ದೊಡ್ಡ ಜಲಮೂಲಗಳನ್ನು ಹೊಂದಿರುವ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ಮತ್ತು ಅಸ್ತಿತ್ವದಲ್ಲಿರುವ ಪಿಎಸಿಎಸ್/ಡೈರಿಯನ್ನು ಬಲಪಡಿಸಲು ಯೋಜನೆಯನ್ನು ರೂಪಿಸಿದೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವಿವಿಧ ಯೋಜನೆಗಳ ಸಮನ್ವಯದಲ್ಲಿ 'ಇಡೀ-ಸರ್ಕಾರದ' ವಿಧಾನವನ್ನು ಬಳಸಿಕೊಳ್ಳಲಿದೆ. ಆರಂಭದಲ್ಲಿ, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುವುದು. ಯೋಜನೆಯ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆಯನ್ನು ನಬಾರ್ಡ್, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್‌ ಡಿ ಡಿ ಬಿ) ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್‌ ಎಫ್‌ ಡಿ ಬಿ) ಸಿದ್ಧಪಡಿಸುತ್ತವೆ.