2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ

January 27th, 06:48 pm

ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.

ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ

January 27th, 06:15 pm

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್‌ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.

ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ

December 17th, 12:02 am

ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.

ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ

June 18th, 11:15 am

ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.

G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 18th, 11:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.

ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)

May 03rd, 01:00 pm

ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.

ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿಯ ಸಮಾರೋಪದಲ್ಲಿ ನೀಡಲಾದ ಜಂಟಿ ಹೇಳಿಕೆ

April 23rd, 12:44 pm

ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ಗೌರವಾನ್ವಿತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಆಹ್ವಾನದ ಮೇರೆಗೆ ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಏಪ್ರಿಲ್ 22 ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡಿದರು.

Today, India is not just a Nation of Dreams but also a Nation That Delivers: PM Modi in TV9 Summit

March 28th, 08:00 pm

PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು

March 28th, 06:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.

ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ

July 10th, 02:45 pm

ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.

2ನೇ ʻಜಾಗತಿಕ ದಕ್ಷಿಣದ ಧ್ವನಿʼ (ವಾಯ್ಸ್ ಆಫ್ ಗ್ಲೋಬಲ್ ಸೌತ್‌) ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ

November 17th, 04:03 pm

140 ಕೋಟಿ ಭಾರತೀಯರ ಪರವಾಗಿ, 2ನೇ ʻಜಾಗತಿಕ ದಕ್ಷಿಣದ ಧ್ವನಿʼ(ವಾಯ್ಸ್‌ ಆಫ್‌ ಗ್ಲೋಬಲ್‌ ಸೌತ್‌) ಶೃಂಗಸಭೆಯ ಉದ್ಘಾಟನಾ ಅಧಿವೇಶನಕ್ಕೆ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ʻಜಾಗತಿಕ ದಕ್ಷಿಣದ ಧ್ವನಿʼಯು 21ನೇ ಶತಮಾನದ ಬದಲಾಗುತ್ತಿರುವ ವಿಶ್ವದ ಅತ್ಯಂತ ವಿಶಿಷ್ಟ ವೇದಿಕೆಯಾಗಿದೆ. ಭೌಗೋಳಿಕವಾಗಿ, ಜಾಗತಿಕ ದಕ್ಷಿಣವು ಯಾವಾಗಲೂ ಅಸ್ತಿತ್ವದಲ್ಲಿದೆ. ಆದರೆ ಇದು ಮೊದಲ ಬಾರಿಗೆ ಈ ರೀತಿಯ ಧ್ವನಿಯನ್ನು ಪಡೆಯುತ್ತಿದೆ. ಮತ್ತು ಇದು ನಮ್ಮೆಲ್ಲರ ಜಂಟಿ ಪ್ರಯತ್ನದಿಂದ ಸಾಧ್ಯವಾಗಿದೆ. ನಾವು 100ಕ್ಕೂ ಹೆಚ್ಚು ವಿಭಿನ್ನ ದೇಶಗಳು, ಆದರೆ ನಾವು ಒಂದೇ ರೀತಿಯ ಆಸಕ್ತಿಗಳು ಮತ್ತು ಸಮಾನ ಆದ್ಯತೆಗಳನ್ನು ಹೊಂದಿದ್ದೇವೆ.