ಪ್ರಧಾನಮಂತ್ರಿ ಅವರು ಶ್ರೀಲಂಕಾದ ಅಧ್ಯಕ್ಷರು ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ

February 05th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೊಲಂಬೊದ ಪವಿತ್ರ ಗಂಗಾರಾಮಯ ದೇವಸ್ಥಾನದಲ್ಲಿ ಪವಿತ್ರ ದೇವನಿಮೋರಿ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ್ದಕ್ಕಾಗಿ ಶ್ರೀಲಂಕಾದ ಅಧ್ಯಕ್ಷರಾದ ಶ್ರೀ ಅನುರ ಕುಮಾರ ದಿಸ್ಸಾನಾಯಕೆ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಶ್ರೀಲಂಕಾದ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

April 05th, 10:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೊದಲ್ಲಿ ಶ್ರೀಲಂಕಾದ ವಿರೋಧ ಪಕ್ಷದ ನಾಯಕರಾದ ಶ್ರೀ ಸಜಿತ್ ಪ್ರೇಮದಾಸ ಅವರನ್ನು ಭೇಟಿಯಾದರು.

ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕದಲ್ಲಿ ಪ್ರಧಾನಮಂತ್ರಿ ಗೌರವ ನಮನ

April 05th, 08:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೋ ಸಮೀಪದ ಶ್ರೀ ಜಯವರ್ಧನಪುರ ಕೋಟೆಯಲ್ಲಿರುವ 'ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕ'ಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಕೊಲಂಬೊದಲ್ಲಿ ಐಪಿಕೆಎಫ್ ಸ್ಮಾರಕಕ್ಕೆ ಪ್ರಧಾನಮಂತ್ರಿ ಭೇಟಿ

April 05th, 07:44 pm

ಕೊಲಂಬೊದಲ್ಲಿರುವ ಐಪಿಕೆಎಫ್ ಸ್ಮಾರಕಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಿ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಶ್ರೀಲಂಕಾದ ಶಾಂತಿ, ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಸೇವೆಯಲ್ಲಿ ತಮ್ಮ ಪ್ರಾಣ ಅರ್ಪಿಸಿದ ಭಾರತೀಯ ಶಾಂತಿಪಾಲನಾ ಪಡೆಯ ವೀರ ಯೋಧರನ್ನು ಅವರು ಶ್ಲಾಘಿಸಿದರು.

PM Modi arrives in Sri Lanka

April 04th, 10:06 pm

Prime Minister Narendra Modi arrived in Colombo, Sri Lanka. During his visit, the PM will take part in various programmes. He will meet President Anura Kumara Dissanayake.

ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ

April 02nd, 02:00 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.

ಪಾಲಿ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವ ಭಾರತ ಸರ್ಕಾರದ ನಿರ್ಧಾರವು ಭಗವಾನ್ ಬುದ್ಧನ ಚಿಂತನೆಗಳನ್ನು ಪಾಲಿಸುವವರಲ್ಲಿ ಸಂತೋಷದ ಮನೋಭಾವವನ್ನು ಹುಟ್ಟುಹಾಕಿದೆ: ಪ್ರಧಾನಮಂತ್ರಿ

October 24th, 10:43 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪಾಲಿ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡುವ ಭಾರತ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದರು. ಭಗವಾನ್ ಬುದ್ಧನ ಚಿಂತನೆಗಳನ್ನು ನಂಬುವವರಲ್ಲಿ ಇದು ಸಂತೋಷದ ಮನೋಭಾವವನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು. ಕೊಲಂಬೋದಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಆಯೋಜಿಸಿದ್ದ 'ಪಾಲಿ ಒಂದು ಶಾಸ್ತ್ರೀಯ ಭಾಷೆ' ಕುರಿತಾದ ಚರ್ಚೆಯಲ್ಲಿ ಭಾಗವಹಿಸಿದ ವಿವಿಧ ರಾಷ್ಟ್ರಗಳ ವಿದ್ವಾಂಸರು ಮತ್ತು ಸನ್ಯಾಸಿಗಳಿಗೆ ಶ್ರೀ ಮೋದಿಯವರು ಧನ್ಯವಾದ ಅರ್ಪಿಸಿದರು.

ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ಸಣ್ಣ ಹಡಗು(ದೋಣಿ) ಸೇವೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 14th, 08:15 am

ಈ ಮಹತ್ವದ ಸುಸಂದರ್ಭದಲ್ಲಿ ನಿಮ್ಮೊಂದಿಗೆ ಸೇರಿರುವುದು ನನ್ನ ಸೌಭಾಗ್ಯ. ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ನಾವು ಹೊಸ ಅಧ್ಯಾಯ ಪ್ರಾರಂಭಿಸುತ್ತಿದ್ದೇವೆ. ನಾಗಪಟ್ಟಣಂ ಮತ್ತು ಕಂಕಸಂತುರೈ ನಡುವೆ ಕಡವು ಅಥವಾ ಸಣ್ಣ ಹಡಗು ಅಥವಾ ದೋಣಿಯ ಸೇವಾರಂಭವು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.

ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ

October 14th, 08:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಸಂದೇಶದ ಮೂಲಕ ಭಾರತದ ನಾಗಪಟ್ಟಿಣಂ ಮತ್ತು ಶ್ರೀಲಂಕಾದ ಕಂಕಸಂತುರೈ ನಡುವಿನ ದೋಣಿ ಸೇವೆಗಳಿಗೆ ಚಾಲನೆ ನೀಡಿದರು.

ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ - ಪ್ರಧಾನ ಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ

October 19th, 10:35 am

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ರಾಜ್ಯಕ್ಕೆ ಅ.20ರಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ 11.30ಗೆ ಅವರು ಮಹಾಪರಿನಿರ್ವಾಣ ದೇವಸ್ಥಾನದಲ್ಲಿ ಅಭಿಧಮ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಇತರ ಕಾರ್ಯಕ್ರಮಗಳ ಉದ್ಘಾಟನೆಗೆ ಸಂಬಂಧಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

"ಭೂಕುಸಿತ ಮತ್ತು ಪ್ರವಾಹದಿಂದ ಶ್ರೀಲಂಕಾದಲ್ಲಿ ಸಂಭವಿಸಿರುವ ಆಸ್ತಿ ಹಾಗೂ ಪ್ರಾಣ ಹಾನಿಗೆ ಪ್ರಧಾನಿ ಸಂತಾಪ "

May 27th, 12:59 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದಲ್ಲಿ ಭೂಕುಸಿತ ಮತ್ತು ಪ್ರವಾಹದಿಂದ ಉಂಟಾಗಿರುವ ಆಸ್ತಿ ಮತ್ತು ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ. “ಶ್ರೀಲಂಕಾದಲ್ಲಿನ ಭೂಕುಸಿತ ಮತ್ತು ಪ್ರವಾಹದಿಂದ ಆದ ಆಸ್ತಿ ಮತ್ತು ಜೀವ ಹಾನಿಗೆ ಭಾರತ ಸಂತಾಪ ಸೂಚಿಸುತ್ತದೆ. ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಶ್ರೀಲಂಕಾದಲ್ಲಿ ಭೂಕುಸಿತ ಮತ್ತು ಪ್ರವಾಹದಿಂದ ಉಂಟಾಗಿರುವ ಆಸ್ತಿ ಮತ್ತು ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ. “ಶ್ರೀಲಂಕಾದಲ್ಲಿನ ಭೂಕುಸಿತ ಮತ್ತು ಪ್ರವಾಹದಿಂದ ಆದ ಆಸ್ತಿ ಮತ್ತು ಜೀವ ಹಾನಿಗೆ ಭಾರತ ಸಂತಾಪ ಸೂಚಿಸುತ್ತದೆ.

ಅಂತರರಾಷ್ಟ್ರೀಯ ವೀಸಾಕ್ ದಿನಾಚರಣೆಯಲ್ಲಿ ಪ್ರಧಾನಿಯವರ ಪಾಲ್ಗೊಳ್ಳುವಿಕೆಯನ್ನು ಶ್ರೀಲಂಕಾದ ಮುಖಂಡರನ್ನು ಮೋದಿ ಶ್ಲಾಘಿಸಿದ್ದಾರೆ

May 12th, 12:25 pm

ಇಂಟರ್ನ್ಯಾಷನಲ್ ವೆಸಕ್ ದಿನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾಲ್ಗೊಳ್ಳುವಿಕೆಯನ್ನುಶ್ರೀಲಂಕಾದ ಮುಖಂಡರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು ಮತ್ತು ಶ್ರೀಲಂಕಾದಲ್ಲಿ ಆಚರಣೆಯಲ್ಲಿ ಸೇರಿದಕ್ಕೆ ಪ್ರಧಾನಿ ಮೋದಿ ಅವರ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಅವರು ಭಗವಾನ್ ಬುದ್ಧನ ಶ್ರೀಮಂತ ಬೋಧನೆಗಳ ಬಗ್ಗೆ ಮಾತನಾಡಿದರು .

ಪ್ರಧಾನಿ ಅಂತರರಾಷ್ಟ್ರೀಯ ವೆಸಕ್ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು

May 12th, 10:20 am

ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಂತಾರಾಷ್ಟ್ರೀಯ ವೆಸಕ್ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಬುದ್ಧನ ಬೋಧನೆಗಳು ಆಡಳಿತ, ಸಂಸ್ಕೃತಿ ಮತ್ತು ತತ್ವಶಾಸ್ತ್ರದಲ್ಲಿ ಹೇಗೆ ಆಳವಾದವು ಎಂಬುದನ್ನು ತೋರಿಸಿದೆ ಎಂದು ಹೇಳಿದರು . ನಮ್ಮ ಪ್ರದೇಶವು ಜಗತ್ತಿಗೆ ಬುದ್ಧನ ಅಮೂಲ್ಯ ಕೊಡುಗೆ ಮತ್ತು ಅವರ ಬೋಧನೆಗಳಿಂದ ಆಶೀರ್ವದಿಸಿದೆ ಎಂದು ಪ್ರಧಾನಿ ಹೇಳಿದರು .

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರನ್ನು ಭೇಟಿಯಾದರು

May 11th, 10:30 pm

ಪ್ರಧಾನಿ ನರೇಂದ್ರ ಮೋದಿ ಇಂದು ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರನ್ನು ಭೇಟಿಯಾಗಿದ್ದಾರೆ. ನಾಯಕರು ಭಾರತ-ಶ್ರೀಲಂಕಾದ ಸಂಬಂಧಗಳನ್ನು ವಿಸ್ತರಿಸುವ ಬಗ್ಗೆ ವ್ಯಾಪಕ ಮಾತುಕತೆ ನಡೆಸಿದರು.

ಕೊಲಂಬೋಗೆ ಆಗಮಿಸಿದ ಪ್ರಧಾನಿ, ಸೀಮಾ ಮಾಲಕ ದೇವಾಲಯಕ್ಕೆ ಭೇಟಿ

May 11th, 07:11 pm

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ , ಕೊಲಂಬೋದಲ್ಲಿನ ಭವ್ಯವಾದ ಸೀಮಾ ಮಲಾಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ . ಪ್ರಧಾನಮಂತ್ರಿಯವರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಶ್ರೀಲಂಕಾದ ಪ್ರಧಾನಮಂತ್ರಿ ರಣಲ್ ವಿಕ್ರಮಸಿಂಘೆ ಅವರು ಮೋದಿ ಅವರ ಜೊತೆಗೂಡಿದರು.

ಪ್ರಧಾನಿ ಮೋದಿ ಶ್ರೀಲಂಕಾದಲ್ಲಿ ಅದ್ದೂರಿ ಸ್ವಾಗತವನ್ನು ಸ್ವೀಕರಿಸಿದರು

May 11th, 07:05 pm

ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ, ಕೊಲಂಬೋಗೆ ಆಗಮಿಸಿದರು. ಶ್ರೀಲಂಕಾ ಪ್ರಧಾನ ಮಂತ್ರಿ, ಶ್ರೀ ರಣಲ್ ವಿಕ್ರಮಸಿಂಘೆ ಮತ್ತು ಇತರ ಹಲವು ಗಣ್ಯರು ಅವರು ವಿಮಾನ ನಿಲ್ದಾಣದಲ್ಲಿ ಉತ್ಸಾಹದಿಂದ ಪ್ರಧಾನಿಯವರನ್ನು ಸ್ವಾಗತಿಸಿದರು .

ಪ್ರಧಾನಮಂತ್ರಿಯವರ ಮುಂಬರುವ ಶ್ರೀಲಂಕಾ ಪ್ರವಾಸ

May 11th, 11:06 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮೇ 11 ಮತ್ತು 12 ರಂದು ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ. ಅವರ ಫೇಸ್ಬುಕ್ ಖಾತೆಯ ಒಂದು ಪೋಸ್ಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದರು: ನಾನು ಇಂದು ಎರಡು ದಿನಗಳ ಭೇಟಿಗಾಗಿ ಶ್ರೀಲಂಕಾಗೆ ಮೇ 11 ರಂದು ಆಗಮಿಸಲಿದ್ದೇನೆ , ಇದು ಎರಡು ವರ್ಷಗಳಲ್ಲಿ ನನ್ನ ಎರಡನೇ ದ್ವಿಪಕ್ಷೀಯ ಭೇಟಿಯಾಗಲಿದೆ, ಇದು ನಮ್ಮ ಬಲವಾದ ಸಂಬಂಧದ ಸಂಕೇತವಾಗಿದೆ.