ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

December 16th, 12:24 pm

ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.

ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ

December 16th, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.

Cabinet approves 4-lane road project in Bihar worth Rs.3,822.31 crore

September 24th, 03:07 pm

The Cabinet Committee on Economic Affairs, chaired by PM Modi, has approved the 4-lane Sahebganj-Areraj-Bettiah road project in Bihar at Rs. 3,822.31 crore. The project will improve access to key heritage and Buddhist sites, strengthening the Buddhist circuit and tourism in Bihar. It will also improve employment opportunities, boosting regional growth.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

August 17th, 12:45 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು

August 17th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್‌ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ಪ್ರಧಾನಮಂತ್ರಿ ಅವರಿಂದ ಕರ್ತವ್ಯ ಭವನ ರಾಷ್ಟ್ರಕ್ಕೆ ಸಮರ್ಪಣೆ

August 06th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ತವ್ಯ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಸಾರ್ವಜನಿಕ ಸೇವೆಗೆ ಇರುವ ಅಚಲ ಬದ್ಧತೆ ಮತ್ತು ನಿರಂತರ ಪ್ರಯತ್ನದ ಸಂಕೇತ ಎಂದು ಬಣ್ಣಿಸಿದರು.