ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 01st, 12:00 pm

ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!

ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 01st, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.

ಚೆನ್ನೈಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ/ ಹಸ್ತಾಂತರ/ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

February 14th, 11:31 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ತಮಿಳುನಾಡಿನಲ್ಲಿ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ

February 14th, 11:30 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ ಈ ಯೋಜನೆಗಳು ನಾವಿನ್ಯತೆ ಮತ್ತು ಸ್ಥಳೀಯ ಅಭಿವೃದ್ಧಿಯ ಸಂಕೇತ. ಇವುಗಳಿಂದ ತಮಿಳುನಾಡು ಮತ್ತಷ್ಟು ಪ್ರಗತಿಯಾಗಲಿದೆ” 630 ಕಿಲೋಮೀಟರ್ ಅನಿಕಟ್ ಕಾಲುವೆ ವ್ಯವಸ್ಥೆಯ ಆಧುನೀಕರಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ್ದು, ಇದರಿಂದ ತಂಜಾವೂರು ಮತ್ತು ಪುದುಕೊಟ್ಟಾಯ್ ಭಾಗಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ದೊರೆಯಲಿದೆ. ಮುಂಬರುವ ದಿನಗಳಲ್ಲಿ ಇದರ ಪರಿಣಾಮ ಅತ್ಯಂತ ದೊಡ್ಡದಾಗಿರಲಿದೆ. ಇದರಿಂದ 2.27 ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯವನ್ನು ವಿಸ್ತರಿಸಲಿದೆ ಎಂದು ಹೇಳಿದರು.

ಫೆಬ್ರವರಿ 14, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 12th, 06:10 pm

2021ರ ಫೆಬ್ರವರಿ 14ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11.15ರ ಸುಮಾರಿಗೆ ಪ್ರಧಾನಮಂತ್ರಿಯವರು ಚೆನ್ನೈನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆಯನ್ನು ಮಾಡಲಿದ್ದಾರೆ ಮತ್ತು ಅರ್ಜುನ್ ಪ್ರಮುಖ ಯುದ್ಧ ಟ್ಯಾಂಕ್ (ಎಂ.ಕೆ. -1ಎ) ಅನ್ನು ಸೇನಾಪಡೆಗೆ ಹಸ್ತಾಂತರಿಸಲಿದ್ದಾರೆ. ಮಧ್ಯಾಹ್ನ 3.30ರವೇಳೆಗೆ ಪ್ರಧಾನಮಂತ್ರಿಯವರು, ಕೊಚ್ಚಿಯಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಕೆಲವು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ಈ ರಾಜ್ಯಗಳ ಪ್ರಗತಿಯ ಪಥಕ್ಕೆ ಮಹತ್ವದ ವೇಗ ನೀಡಲಿವೆ ಮತ್ತು ಸಂಪೂರ್ಣ ಅಭಿವೃದ್ಧಿಯ ಸಾಮರ್ಥ್ಯಕ್ಕೆ ವೇಗ ನೀಡಲು ನೆರವಾಗಲಿವೆ.