2025ರ ಜೂನ್ 24ರಂದು ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ನಡುವಿನ ಸಂಭಾಷಣೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
June 23rd, 05:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜೂನ್ 24ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ಸನ್ನಡತೆಯ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ನಡುವಿನ ಐತಿಹಾಸಿಕ ಸಂಭಾಷಣೆಯ ಶತಮಾನೋತ್ಸವ ಆಚರಣೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಚಿಲಿ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಅನುವಾದ
April 01st, 12:31 pm
ಇದು ಅಧ್ಯಕ್ಷ ಬೋರಿಕ್ ಅವರ ಮೊದಲ ಭಾರತ ಭೇಟಿಯಾಗಿದೆ. ಭಾರತದ ಬಗ್ಗೆ ಅವರ ಬಲವಾದ ಸ್ನೇಹ ಪ್ರಜ್ಞೆ ಮತ್ತು ನಮ್ಮ ಸಂಬಂಧಗಳನ್ನು ಬಲಪಡಿಸುವ ಅವರ ಬದ್ಧತೆ ನಿಜವಾಗಿಯೂ ಅದ್ಭುತವಾಗಿದೆ. ಇದಕ್ಕಾಗಿ, ನಾನು ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಅವರನ್ನು ಮತ್ತು ಅವರ ಗೌರವಾನ್ವಿತ ನಿಯೋಗವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ಪಾಡ್ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.The World This Week on India
December 24th, 11:59 am
India’s footprint on the global stage this week has been marked by a blend of diplomatic engagements, economic aspirations, cultural richness, and strategic initiatives.The World This Week on India
December 17th, 04:23 pm
In a week filled with notable achievements and international recognition, India has once again captured the world’s attention for its advancements in various sectors ranging from health innovations and space exploration to climate action and cultural influence on the global stage.