Participants of Viksit Vibrant Village Programme share their experiences with PM Modi

July 26th, 10:27 pm

PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharat

ಶ್ರೀಮತಿ ಭಾವನಾಬೆನ್ ಪಟೇಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

June 22nd, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಶ್ರೀ ಪ್ರಭುಲ್‌ಭಾಯ್ ಪಟೇಲ್ ಅವರ ಪತ್ನಿ ಶ್ರೀಮತಿ ಭಾವನಾಬೆನ್ ಪಟೇಲ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ

June 04th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯವರಿಂದ ಪ್ರಧಾನಮಂತ್ರಿಗಳ ಭೇಟಿ

May 24th, 08:47 pm

ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾದ ಶ್ರೀ ಪ್ರಫುಲ್ ಕೆ ಪಟೇಲ್ ಅವರು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ

March 07th, 03:00 pm

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು

March 07th, 02:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.

ಮಾರ್ಚ್ 7-8 ರಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಗುಜರಾತ್ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ ನೀಡಲಿದ್ದಾರೆ

March 07th, 07:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾರ್ಚ್ 7 - 8 ರಂದು ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶ ಮತ್ತು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಮಾರ್ಚ್ 7 ರಂದು ಸಿಲ್ವಾಸ್ಸಾಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ನಮೋ ಆಸ್ಪತ್ರೆಯನ್ನು (I ಹಂತ) ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:45 ರ ಸುಮಾರಿಗೆ, ಅವರು ಸಿಲ್ವಾಸ್ಸಾದಲ್ಲಿ 2580 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕೇಂದ್ರಾಡಳಿತ ಪ್ರದೇಶಕ್ಕಾಗಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಅವರು ಸೂರತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5 ಗಂಟೆಗೆ ಅವರು ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 8 ರಂದು, ಪ್ರಧಾನ ಮಂತ್ರಿ ನವಸಾರಿಗೆ ಪ್ರಯಾಣಿಸಲಿದ್ದಾರೆ ಮತ್ತು ಸುಮಾರು 11:30ಕ್ಕೆ, ಅವರು ಲಕ್ಷಪತಿ ದೀದಿಗಳೊಂದಿಗೆ ಸಂವಾದ ನಡೆಸಲಿದ್ದಾರೆ, ನಂತರ ವಿವಿಧ ಯೋಜನೆಗಳ ಉದ್ಘಾಟನೆಯನ್ನು ಒಳಗೊಂಡ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 42ನೇ ಪ್ರಗತಿ ಸಂವಾದ ಸಭೆ

June 28th, 07:49 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28ರಂದು ಬೆಳಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ ಆಧರಿತ ಬಹುಮಾದರಿ ವೇದಿಕೆಯಾದ 42ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

April 25th, 11:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ದಮನ್ ನಲ್ಲಿ ನಮೋ ಪಥ, ದೇವ್ಕಾ ಕಡಲತೀರವನ್ನು ದೇಶಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರೊಂದಿಗೆ ಛಾಯಾಚಿತ್ರಕ್ಕೆ ಪೋಸ್ ನೀಡಿದರು. ಅವರು ನಯಾ ಭಾರತ್ ಸೆಲ್ಫಿ ಪಾಯಿಂಟ್ ಗೂ ಭೇಟಿ ನೀಡಿದರು.

Balanced development of every region is a huge priority: PM Modi

April 25th, 04:50 pm

PM Modi laid the foundation stone and dedicated to the nation various development projects worth more than Rs 4850 crores at Silvassa, Dadra, and Nagar Haveli today. The projects included the dedication of NAMO Medical Education & Research Institute in Silvassa, and the laying of the foundation stone of 96 projects

ಸಿಲ್ವಾಸ್ಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿ

April 25th, 04:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇವುಗಳಲ್ಲಿ ಸಿಲ್ವಾಸ್ಸಾದಲ್ಲಿ ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಲೋಕಾರ್ಪಣೆ ಮತ್ತು ಸರ್ಕಾರಿ ಶಾಲೆಗಳು, ದಮನ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ವಿವಿಧ ರಸ್ತೆಗಳ ಸುಂದರೀಕರಣ, ಬಲಪಡಿಸುವಿಕೆ ಮತ್ತು ಅಗಲೀಕರಣ, ಮೀನು ಮಾರುಕಟ್ಟೆ, ಶಾಪಿಂಗ್‌ ಕಾಂಪ್ಲೆಕ್ಸ್‌ ಮತ್ತು ಈ ಪ್ರದೇಶದಲ್ಲಿ ನೀರಿನ ಸರಬರಾಜು ಯೋಜನೆಯ ವರ್ಧನಯಂತಹ 96 ಯೋಜನೆಗಳ ಸಮರ್ಪಣೆ ಮತ್ತು ಶಂಕುಸ್ಥಾಪನೆಗಳು ಸೇರಿವೆ. ಪ್ರಧಾನಮಂತ್ರಿಯವರು ದಿಯು ಮತ್ತು ಸಿಲ್ವಾಸ್ಸಾದ ಪಿಎಂಎವೈ ನಗರ ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು.

ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಏಪ್ರಿಲ್ 24 ಮತ್ತು 15ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ

April 21st, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಏಪ್ರಿಲ್ 24 ಮತ್ತು 25ರಂದು ಮಧ್ಯಪ್ರದೇಶ, ಕೇರಳ, ದಾದ್ರಾ ಮತ್ತು ನಗರ್ ಹವೇಲಿ ಹಾಗೂ ಡಮನ್ ಮತ್ತು ಡಿಯುಗೆ ಭೇಟಿ ನೀಡಲಿದ್ದಾರೆ.

ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ಮಂದಿಗೆ ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲಿಷ್ ಭಾಷಾಂತರ

November 22nd, 10:31 am

ನಿಮ್ಮೆಲ್ಲರಿಗೂ ಅಭಿನಂದನೆಗಳು. ಇಂದು, ದೇಶದ 45 ನಗರಗಳಲ್ಲಿ 71,000 ಕ್ಕೂ ಹೆಚ್ಚು ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇಂದು ಸಾವಿರಾರು ಮನೆಗಳಲ್ಲಿ ಸಮೃದ್ಧಿಯ ಹೊಸ ಯುಗವು ಪ್ರಾರಂಭವಾಗಿದೆ. ಕಳೆದ ತಿಂಗಳು, ಧಂತೇರಸ್ ದಿನದಂದು, ಕೇಂದ್ರ ಸರ್ಕಾರವು 75,000 ಯುವಕ / ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿತ್ತು. ಇಂದಿನ 'ರೋಜ್ಗಾರ್ ಮೇಳ'ವು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಮಿಷನ್ ಮೋಡ್ ನಲ್ಲಿ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ

November 22nd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಡಿ ಹೊಸದಾಗಿ ಸೇರ್ಪಡೆಯಾದವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಪಾಲ್ಗೊಳ್ಳುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವಲ್ಲಿ ರೋಜ್ಗಾರ್ ಮೇಳವು ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಈ ಹಿಂದೆ ಅಕ್ಟೋಬರ್ ನಲ್ಲಿ, ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡವರಿಗೆ 75,000 ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿತ್ತು.

ಗೋವಾದ ಪಣಜಿಯಲ್ಲಿ ಜರುಗಿದ ಹರ್ ಘರ್ ಜಲ ಉತ್ಸವದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಕನ್ನಡ ಅವತರಣಿಕೆ

August 19th, 04:51 pm

ನಮಸ್ಕಾರ್, ಗೋವಾದ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಗೋವಾ ಸರ್ಕಾರದ ಇತರ ಸಚಿವರು, ಗಣ್ಯರು, ಘನತೆವೆತ್ತವರು, ಮಹಿಳೆಯರು ಮತ್ತು ಸಜ್ಜನ ಬಾಂಧವರೇ, ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನವಾಗಿದೆ. ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತ ಹರಡಿರುವ ಶ್ರೀ ಕೃಷ್ಣನ ಭಕ್ತರಿಗೆ ಅನೇಕ ಅಭಿನಂದನೆಗಳು. ಜೈ ಶ್ರೀ ಕೃಷ್ಣ!

ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು

August 19th, 12:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಮಾತನಾಡಿದರು. ಪಣಜಿ ಗೋವಾದಲ್ಲಿ ಹರ್ ಘರ್ ಜಲ ಉತ್ಸವ ನಡೆದಿದೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು ಶ್ರೀ ಕೃಷ್ಣ ಭಕ್ತರಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.