ಗುಜರಾತ್ ನ ವಡಿನಾರ್ ನಲ್ಲಿ ಹಡಗು ದುರಸ್ತಿ ಸೌಲಭ್ಯ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ
May 05th, 06:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ರಾಷ್ಟ್ರೀಯ ಹಡಗು ದುರಸ್ತಿ ಪರಿಸರ ವ್ಯವಸ್ಥೆಯ ಪ್ರಮುಖ ವಿಸ್ತರಣೆಯ ಭಾಗವಾಗಿ ಗುಜರಾತ್ ನ ವಡಿನಾರ್ ನಲ್ಲಿ ಅತ್ಯಾಧುನಿಕ ಹಡಗು ದುರಸ್ತಿ ಸೌಲಭ್ಯದ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ದೀನ್ ದಯಾಳ್ ಬಂದರು ಪ್ರಾಧಿಕಾರ (ಡಿಪಿಎ) ಮತ್ತು ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (ಸಿ ಎಸ್ ಎಲ್) ಜಂಟಿಯಾಗಿ ಅನುಷ್ಠಾನಗೊಳಿಸಲಿದ್ದು, ಒಟ್ಟು 1,570 ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು.