ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ

ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ

April 29th, 11:01 am

ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು

April 29th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್‌ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಏಪ್ರಿಲ್‌ 29ರಂದು ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಏಪ್ರಿಲ್‌ 29ರಂದು ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

April 28th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬೆಳಗ್ಗೆ 11ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.