ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

April 17th, 11:10 am

ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ಶ್ರೀ ಹರಿವಂಶ್ ಅವರಿಗೆ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಜ್ಯಸಭೆ ಉಪಸಭಾಪತಿಯಾಗಿ ಸತತ 3ನೇ ಬಾರಿಗೆ ಆಯ್ಕೆಯಾಗಿರುವುದು, ಈ ಸದನವು ನಿಮ್ಮ ಮೇಲೆ ಹೊಂದಿರುವ ಆಳವಾದ ನಂಬಿಕೆಗೆ ಸಾಕ್ಷಿಯಾಗಿದೆ. ಹಿಂದಿನ ಅವಧಿಯಲ್ಲಿ ನಿಮ್ಮ ಅನುಭವ ಮತ್ತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ನಿಮ್ಮ ಪ್ರಯತ್ನಗಳಿಂದ ಪಡೆದ ಪ್ರಯೋಜನಕ್ಕೆ ಸದನವು ಪರಿಣಾಮಕಾರಿಯಾಗಿ ತನ್ನ ಅನುಮೋದನೆಯ ಮುದ್ರೆ ಹೊತ್ತಿದೆ. ಇದು ಅನುಭವಕ್ಕೆ ಸಂದ ಗೌರವ, ಸ್ವಾಭಾವಿಕ ಕಾರ್ಯ ಶೈಲಿಗೆ ಸಂದ ಗೌರವ ಮತ್ತು ಆ ಸ್ವಾಭಾವಿಕ ಕಾರ್ಯ ಶೈಲಿಯ ಸ್ವೀಕಾರವೂ ಆಗಿದೆ. ಹರಿವಂಶ್ ಜಿ ಅವರ ನಾಯಕತ್ವದಲ್ಲಿ ಸದನದ ಶಕ್ತಿ ಹೆಚ್ಚು ಪರಿಣಾಮಕಾರಿಯಾಗುವುದನ್ನು ನಾವೆಲ್ಲರೂ ನೋಡಿದ್ದೇವೆ. ಅವರು ಸದನದ ಕಲಾಪಗಳನ್ನು ಕೇವಲ ನಡೆಸುವುದಿಲ್ಲ ಎಂದು ನಾನು ಹೇಳಬಲ್ಲೆ; ಅವರು ತಮ್ಮ ಹಿಂದಿನ ಜೀವನದ ಅನುಭವಗಳನ್ನು ಸದನವನ್ನು ಉತ್ಕೃಷ್ಟಗೊಳಿಸಲು ಅತ್ಯಂತ ನಿಖರವಾದ ರೀತಿಯಲ್ಲಿ ಬಳಸಿಕೊಳ್ಳುತ್ತಾರೆ. ಅವರ ಅನುಭವವು ಸದನದ ಸಂಪೂರ್ಣ ಕಲಾಪಗಳು, ನಡವಳಿಕೆ ಮತ್ತು ವಾತಾವರಣವನ್ನು ಹೆಚ್ಚು ಪ್ರಬುದ್ಧಗೊಳಿಸುತ್ತದೆ. ಉಪಸಭಾಪತಿಯ ಹೊಸ ಅವಧಿಯು ಅದೇ ಮನೋಭಾವ, ಸಮತೋಲನ ಮತ್ತು ಸಮರ್ಪಣೆಯೊಂದಿಗೆ ಮುಂದುವರಿಯುತ್ತದೆ. ನಮ್ಮ ಎಲ್ಲಾ ಪ್ರಯತ್ನಗಳ ಮೂಲಕ ಸದನದ ಘನತೆ ಹೊಸ ಎತ್ತರವನ್ನು ತಲುಪುತ್ತದೆ ಎಂಬ ವಿಶ್ವಾಸ ನನಗಿದೆ.

ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 17th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಐತಿಹಾಸಿಕ ಸತತ ಮೂರನೇ ಅವಧಿಗೆ ರಾಜ್ಯಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಶ್ರೀ ಹರಿವಂಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಐತಿಹಾಸಿಕ ಸಾಧನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಅವರು, ಇದು ಶ್ರೀ ಹರಿವಂಶ್ ಅವರ ಮೇಲಿನ ಸದನದ ಆಳವಾದ ನಂಬಿಕೆ ಮತ್ತು ಸಂಸ್ಥೆಗೆ ಅವರು ತಂದಿರುವ ಅಮೂಲ್ಯ ಅನುಭವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. “ಸತತ ಮೂರನೇ ಅವಧಿಗೆ ಆಯ್ಕೆಯಾಗಿರುವುದು ಅವರ ಅನುಭವ, ಎಲ್ಲರನ್ನೂ ಒಳಗೊಳ್ಳುವ ವಿಧಾನ ಮತ್ತು ಅವರ ಘನತೆಯ ಕಾರ್ಯ ಶೈಲಿಗೆ ಸದನದಿಂದ ಅನುಮೋದನೆಯ ಮುದ್ರೆಯಾಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

April 16th, 03:30 pm

ಈ ಮಹತ್ವದ ಮಸೂದೆ(ವಿಧೇಯಕ) ಕುರಿತು ಚರ್ಚೆ ಇಂದು ಬೆಳಗ್ಗೆ ಆರಂಭವಾಯಿತು. ಇಲ್ಲಿರುವ ಅನೇಕ ಸಹೋದ್ಯೋಗಿಗಳು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ, ಅವರು ಖಂಡಿತವಾಗಿಯೂ ಸದನಕ್ಕೆ ವಾಸ್ತವ ಮತ್ತು ವಾದಗಳನ್ನು ಒದಗಿಸುತ್ತಾರೆ. ಆದ್ದರಿಂದ, ನಾನು ಆ ವಿಷಯಗಳ ಚರ್ಚೆಗೆ ಹೋಗಲು ಬಯಸುವುದಿಲ್ಲ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು

April 16th, 03:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಮುಖ ಮಸೂದೆಯ ಮೇಲಿನ ಚರ್ಚೆಯು ಬೆಳಿಗ್ಗೆಯೇ ಪ್ರಾರಂಭವಾಗಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಅನೇಕ ಸಹೋದ್ಯೋಗಿಗಳು ವಾಸ್ತವ ಮತ್ತು ತರ್ಕಬದ್ಧ ಅಂಶಗಳೊಂದಿಗೆ ಪ್ರಮುಖ ವಿಷಯಗಳನ್ನು ಪರಿಣಾಮಕಾರಿಯಾಗಿ ಮಂಡಿಸಿದ್ದಾರೆ ಎಂದು ಹೇಳಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 13th, 11:15 am

ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.

‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.

The days of TMC’s hooliganism are coming to an end: PM Modi in Kolkata, West Bengal

March 14th, 03:30 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

PM Modi’s fiery speech electrifies the crowd in Kolkata

March 14th, 03:00 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ

December 14th, 05:50 pm

ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು

December 14th, 05:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.

The bond between India & Guyana is of soil, of sweat, of hard work: PM Modi

November 21st, 08:00 pm

Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.

ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 21st, 07:50 pm

ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್‌ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.